ಸಾಗರದಲ್ಲಿ 21 ಕ್ವಿಂಟಾಲ್ ಅಡಕೆ ಕದ್ದವರ ಬಳಿ ಸಿಕ್ತು 23 ಕ್ವಿಂಟಾಲ್ ಅಡಕೆ

Sagara-Areca-Theft-Case-arrest-Sagara-Rural

SHIVAMOGGA LIVE NEWS | 10 ಮಾರ್ಚ್ 2022 ಮನೆ ಬಳಿ ಒಣಗಲು ಹಾಕಿದ್ದ ಅಡಕೆ ಕಳ್ಳತನ ಮಾಡಿದ್ದ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. 23 ಕ್ವಿಂಟಾಲ್ ಅಡಕೆಯನ್ನು ವಶಕ್ಕೆ ಪಡೆಯಲಾಗಿದೆ. ಭಟ್ಕಳದ ಹಬೀಬ್ ಖಾನ್ ಅಲಿಯಾಸ್ ಅಪ್ಪು (24), ಮಹಮ್ಮದ್ ಮರ್ದನ್ (21), ರುಮಾನ್ (20) ಎಂಬುವವರನ್ನು ಬಂಧಿಸಲಾಗಿದೆ. ಫೈರೋಜ್ ಖಾನ್ (22) ಎಂಬಾತನನ್ನು ಮಾ.4ರಂದು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಳುವಾಗಿದ್ದು 21 ಕ್ವಿಂಟಾಲ್, ಸಿಕ್ಕಿದ್ದು 23 ಕ್ವಿಂಟಾಲ್ ತಲವಾಟ ಗ್ರಾಮದಲ್ಲಿ ರೈತರೊಬ್ಬರು ಮಾರ್ಚ್ 2ರಂದು … Read more

ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್, ಪೊಲೀಸರಿಗೆ ದೂರು

Kuvempu-University-VC-Registrar-press-meet.

SHIVAMOGGA LIVE NEWS | 9 ಮಾರ್ಚ್ 2022 ಕಾಲೇಜು ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್ ಪ್ರಕಟಿಸಿದ ಪ್ರಕರಣದ ಆಂತರಿಕ ತನಿಖೆಗೆ ಕುವೆಂಪು ವಿಶ್ವವಿದ್ಯಾಲಯವು ಸಮಿತಿ ರಚನೆ ಮಾಡಿದೆ. ಈ ಮಧ್ಯೆ ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುವೆಂಪು ವಿವಿ ಕುಲಸಚಿವೆ ಜಿ.ಅನುರಾಧ ಅವರು, ಸಹ್ಯಾದ್ರಿ ಕಾಲೇಜು ಬಿಸಿಎ ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್’ನಲ್ಲಿ ವಿದ್ಯಾರ್ಥಿಯೊಬ್ಬ ಪಾಕಿಸ್ತಾನ ಧ್ವಜದ ಸ್ಟಿಕರ್ ಪೋಸ್ಟ್ ಮಾಡಿದ್ದಾನೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ದೂರು … Read more

ವರ್ಷ ಕಳೆದರೂ ಬದಲಾಗದ ನಾಮಫಲಕ, ಇರುವಕ್ಕಿಯಲ್ಲಿ ಸ್ಥಳೀಯರಿಂದ ರಸ್ತೆ ತಡೆ

Iruvakki-University-Name-Change-Protest.

SHIVAMOGGA LIVE NEWS | 9 ಮಾರ್ಚ್ 2022 ಸಾಗರದ ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ನಾಮಫಲಕ ಬದಲಾವಣೆಗೆ ಆಗ್ರಹಿಸಿ, ಸ್ಥಳೀಯರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕೆಳದಿ ಅರಸ ಶಿವಪ್ಪನಾಯಕ ಅವರ ಹೆಸರು ಇಡಲಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಈ ಹೆಸರು ಘೋಷಣೆಯಾಗಿತ್ತು. ಒಂದು ವರ್ಷ ಕಳೆದರೂ ನಾಮಫಲಕ ಅಳವಡಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇನ್ನು, ಸ್ಥಳೀಯರಿಗೆ ಉದ್ಯೋಗ ಕೊಡುವುದಾಗಿ ಯಡಿಯೂರಪ್ಪ ಅವರು ಹೇಳಿದ್ದರು. ಆದರೆ … Read more

ವಿನೋಬನಗರ 6ನೇ ಹಂತದ ಸುತ್ತಮುತ್ತ ನಾಳೆ ಬೆಳಗ್ಗೆಯಿಂದ ಕರೆಂಟ್ ಇರಲ್ಲ

power cut graphics

SHIVAMOGGA LIVE NEWS | 9 ಮಾರ್ಚ್ 2022 ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮಾರ್ಚ್ 10ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವೀರಣ್ಣ ಲೇಔಟ್, ವಿಧಾತ್ರಿ ಭವನ, ಸೋಮಿನಕೊಪ್ಪ ರಸ್ತೆ, ವಿನೋಬ ನಗರ 6ನೇ ಹಂತ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ … Read more

ಶಂಕರಮಠ ರಸ್ತೆಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದವನು ಅರೆಸ್ಟ್

Arrest News Graphics

SHIVAMOGGA LIVE NEWS | 9 ಮಾರ್ಚ್ 2022 ಕಳೆದ ರಾತ್ರಿ ಶಂಕರ ಮಠ ರಸ್ತೆಯಲ್ಲಿ ವ್ಯಕ್ತಿಗೆ ಚಾಕು ಇರಿದ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಕೋಟೆ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ದಸ್ತಗಿರ್ (34) ಎಂಬಾತನನ್ನು ಬಂಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ. ಒಂದು ಲಕ್ಷ ಸಾಲ ಬಾಪೂಜಿ ನಗರದ ಪಾಚಾ ಖಾನ್ ಎಂಬಾತನಿಗೆ ದಸ್ತಗಿರ್ ಒಂದು ಲಕ್ಷ ರೂ. ಸಾಲ ನೀಡಿದ್ದ. ಸಾಲ ಹಿಂತಿರುಗಿಸುವಂತೆ ಪದೇ ಪದೇ ಕೇಳುತ್ತಿದ್ದ. ಆದರೆ ಪಾಚಾ ಖಾನ್ ಹಣ ಕೊಟ್ಟಿರಲಿಲ್ಲ. … Read more

ಸಾಗರದ ಗಣಪತಿ ಕೆರೆಯಲ್ಲಿ ನೀರು ನಾಯಿಗಳು ಪ್ರತ್ಯಕ್ಷ, ಮೀನುಗಳು ಗುಳುಂ ಸ್ವಾಹ

Eurasian-Otter-in-Sagara-Ganapathi-lake.

SHIVAMOGGA LIVE NEWS | 9 ಮಾರ್ಚ್ 2022 ಸಾಗರದ ಗಣಪತಿ ಕೆರೆಯಲ್ಲಿ ಈ ವರ್ಷವು ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ಇವುಗಳ ಚಲನವಲನ, ಚಿನ್ನಾಟವನ್ನು ಕಣ್ತುಂಬಿಕೊಳ್ಳಲು, ಕ್ಯಾಮರಾ, ಮೊಬೈಲ್‍ನಲ್ಲಿ ಸೆರೆ ಹಿಡಿಯಲು ಹಲವರು ಕೆರೆ ಬಳಿಗೆ ಬರುತ್ತಿದ್ದಾರೆ. ಕಳೆದ ಕೆಲವು ದಿನದಿಂದ ನೀರು ನಾಯಿಗಳು ದೊಡ್ಡ ಸಂಖ್ಯೆಯಲ್ಲಿ ಗಣಪತಿ ಕೆರೆಯಲ್ಲಿ ಕಾಣಿಸಿಕೊಂಡಿವೆ. ಸುಮಾರು 50 ನೀರು ನಾಯಿಗಳು ಬಂದಿವೆ. ಶರವಾತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ ಉಪ ನದಿಗಳ ಮೂಲಕ ಸಾಗರ … Read more

ತೀರ್ಥಹಳ್ಳಿಯಲ್ಲಿ ಇಬ್ಬರು ಮಹಿಳೆಯರಿಗೆ KFD ಪಾಸಿಟಿವ್, ಕನ್ನಂಗಿ ಭಾಗದಲ್ಲಿ ಆತಂಕ

Kannangi Graphics

SHIVAMOGGA LIVE NEWS | 9 ಮಾರ್ಚ್ 2022 ತೀರ್ಥಹಳ್ಳಿ ತಾಲೂಕಿನಲ್ಲಿ KFD ಆತಂಕ ಮುಂದುವರೆದಿದೆ. ಇಬ್ಬರು ಮಹಿಳೆಯರು KFD ಸೋಂಕಿಗೆ ತುತ್ತಾಗಿದ್ದಾರೆ. ಕನ್ನಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವತ್ತಿ ಗ್ರಾಮದಲ್ಲಿ ಕಲ್ಪನಾ (40) ಮತ್ತು ದೇವಕಿ (45) ಎಂಬುವವರಿಗೆ KFD ಪಾಸಿಟಿವ್ ಬಂದಿದೆ. ಕಲ್ಪನಾ ಅವರು ದಾವಣಗೆರೆ ಜಿಲ್ಲೆಯಿಂದ ಯಡವತ್ತಿ ಗ್ರಾಮಕ್ಕೆ ಕೆಲಸಕ್ಕೆಂದು ಬಂದಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದಾರೆ. ಇನ್ನು, ದೇವಕಿ ಅವರಿಗೆ ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿರವಾಗಿದೆ. … Read more

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್‌ಗೆ ಬೆದರಿಕೆ ಕರೆ

DS-Arun-MLC-Shimoga

SHIVAMOGGA LIVE NEWS | 9 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹರ್ಷ ಹತ್ಯೆ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನಲೆಯಲ್ಲಿ ಫೆ.21ರಂದು ಡಿ.ಎಸ್.ಅರುಣ್ ಅವರಿಗೆ ಬೆದರಿಕೆ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ … Read more

BREAKING | ಶಿವಮೊಗ್ಗದಲ್ಲಿ ವ್ಯಕ್ತಿಗೆ ಚಾಕು ಇರಿತ, ಪರಿಚಿತನಿಂದ ಕೃತ್ಯ

breaking news graphics

SHIVAMOGGA LIVE | 8 ಮಾರ್ಚ್ 2022 ಕ್ಷುಲಕ ವಿಚಾರಕ್ಕೆ ಜಗಳವಾಗಿ ವ್ಯಕ್ತಿಯಿಬ್ಬರಿಗೆ ಚಾಕು ಇರಿಯಲಾಗಿದೆ. ಗಂಭೀರ ಗಾಯಗೊಂಡಿರುವ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಬಾಪೂಜಿನಗರದ ಪಾಚಾ ಖಾನ್ (40) ಚಾಕು ಇರಿತಕ್ಕೆ ಒಳಗಾದವರು. ದೇಹದ ವಿವಿಧೆಡೆ ಚಾಕು ಇರಿತದಿಂದ ಗಾಯವಾಗಿದೆ. ಶಂಕರಮಠ ರಸ್ತೆಯ ಟಾಟಾ ಶೋ ರೂಂ ಬಳಿ ಘಟನೆ ಸಂಭವಿಸಿದೆ. ಚಾಕು ಇರಿತಕ್ಕೆ ಕಾರಣವೇನು? ಪಾಚಾ ಸಾಬ್ ಮತ್ತು ಆರ್‌ಎಂಎಲ್ ನಗರದ ದಸ್ತಗೀರ್ ಮಧ್ಯೆ ಒಂದು ಲಕ್ಷ ರೂ. ಹಣಕಾಸು ವಿಚಾರವಾಗಿ ಜಗಳ … Read more

ಕಮಲಾ ನೆಹರೂ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ, ವಿದ್ಯಾರ್ಥಿನಿಯರ ಭರ್ಜರಿ ಡಾನ್ಸ್ | VIDEO

Womens-Day-in-Kamala-Nehru-College.

SHIVAMOGGA LIVE NEWS | 8 ಮಾರ್ಚ್ 2022 ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಶಿವಮೊಗ್ಗದ ಕಮಲಾ ನೆಹರೂ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿನಿಯರು ವಿವಿಧ ಸಾಂಸ್ಕೃತಿಕ ನೃತ್ಯ ಪ್ರದರ್ಶಿಸಿದರು. ವಿವಿಧ ಸಿನಿಮಾ ಹಾಡುಗಳಿಗೆ ಎಲ್ಲರೂ ಸಾಮೂಹಿಕವಾಗಿ ಡಾನ್ಸ್ ಮಾಡಿ ಸಂಭ್ರಮಿಸಿದರು. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ. | ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ ಈ ಮೇಲ್ – shivamoggalive@gmail.com WhatsApp Number – 7411700200