ಹರ್ಷ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ., ಟಿಕೆಟ್ ವಿಚಾರದಲ್ಲಿ ಈಶ್ವರಪ್ಪ ಮಹತ್ವದ ಹೇಳಿಕೆ

BY-Raghavendra-and-Eshwarappa-in-BJP-Office

SHIVAMOGGA LIVE NEWS | 3 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಕಗ್ಗೊಲೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದುಃಖ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಯಡಿಯೂರಪ್ಪ ಅವರು ಹರ್ಷ ನಿವಾಸಕ್ಕೆ ಭೇಟಿ ನೀಡುತ್ತಾರೆ. ಈ ವೇಳೆ ತಾವು ಮತ್ತು ಯಡಿಯೂರಪ್ಪ ಅವರು ಸರಕಾರದ ಪರವಾಗಿ 25 ಲಕ್ಷ ಪರಿಹಾರ ನೀಡುತ್ತೇವೆ ಎಂದು ತಿಳಿಸಿದರು. ವಿಶ್ವನಾಥ … Read more

BREAKING NEWS | ಆಗುಂಬೆ ಘಾಟಿಯಲ್ಲಿ 10 ದಿನ ವಾಹನ ಸಂಚಾರ ನಿಷೇಧ, ಪರ್ಯಾಯ ಮಾರ್ಗ ಯಾವುದು?

Agumbe-Ghat-Road

SHIVAMOGGA LIVE NEWS | 3 ಮಾರ್ಚ್ 2022 ಆಗುಂಬೆ ಘಾಟಿಯಲ್ಲಿ ರಸ್ತೆ ದುರಸ್ಥಿ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧಗೊಳಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 5ರಿಂದ ಮಾರ್ಚ್ 15ರವರೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಲಘು ವಾಹನಗಳು ಮತ್ತು ಭಾರಿ ವಾಹನಗಳಿಗೆ ಪ್ರತ್ಯೇಕ ಮಾರ್ಗವನ್ನು ಸೂಚಿಸಲಾಗಿದೆ. ಯಾವುದು ಪರ್ಯಾಯ ಮಾರ್ಗ? ಪ್ರಸ್ತುತ ಮಾರ್ಗ : ಶಿವಮೊಗ್ಗ, ತೀರ್ಥಹಳ್ಳಿ, … Read more

ರಾಜ್ಯ ಬಜೆಟ್, ಶಿವಮೊಗ್ಗ ಜನರ ಪ್ರಮುಖ ನಿರೀಕ್ಷೆಗಳೇನು?

Shimoga-City-MRS-Drone-Shot

SHIVAMOGGA LIVE NEWS | 3 ಮಾರ್ಚ್ 2022 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್ ಮಂಡಿಸಲು ಸಿದ್ಧವಾಗುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಜನರಿಗೆ ಈ ಭಾರಿಯ ರಾಜ್ಯ ಬಜೆಟ್ ಮೇಲೆ ಭಾರಿ ನಿರೀಕ್ಷೆ ಮೂಡಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಶಿವಮೊಗ್ಗ ಜಿಲ್ಲೆಗೆ ಸಾವಿರಾರು ಕೋಟಿ ರೂ. ಅನುದಾನ ಹರಿದು ಬಂದಿತ್ತು. ಅಭಿವೃದ್ಧಿ ಕಾರ್ಯಗಳು ಕೂಡ ನಿರಂತರವಾಗಿ ನಡೆದಿವೆ.  ಆದರೂ ಜಿಲ್ಲೆಯ ಅಭಿವೃದ್ದಿ ಸಂಬಂಧ ಹಲವು ಬೇಡಿಕೆಗಳು ಹಾಗೆ ಉಳಿದುಕೊಂಡಿವೆ. ಈ ಬಜೆಟ್’ನಲ್ಲಿ ಇವುಗಳು … Read more

BREAKING | ರಾತ್ರೋರಾತ್ರಿ ಗ್ರಾಮದ ಮುಂದೆ ವಾಮಾಚಾರ, ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

vamachara-in-near-ripponpete-benavalli.

SHIVAMOGGA LIVE NEWS | 3 ಮಾರ್ಚ್ 2022 ರಾತ್ರೋರಾತ್ರಿ ಗ್ರಾಮವೊಂದರ ಮುಂದೆ ವಾಮಾಚಾರ ಮಾಡಲಾಗಿದೆ. ಊರಿನ ಸಂಪರ್ಕ ರಸ್ತೆ ಸಮೀಪ ವಾಮಾಚಾರ ಮಾಡಿರುವುದು ಕಂಡು ಬಂದಿದೆ. ಇದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಹೊಸನಗರ ತಾಲೂಕು ಬೆನವಳ್ಳಿ ಗ್ರಾಮದ ಮುಂದೆ ವಾಮಾಚಾರ ಮಾಡಿರುವುದು ಕಂಡು ಬಂದಿದೆ. ರಂಗೋಲಿ ಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ರಾತ್ರೋರಾತ್ರಿ ನಡೆದ ವಾಮಾಚಾರ ಬೆನವಳ್ಳಿ ಮತ್ತು ಕೆಂಚನಾಲ ಗ್ರಾಮಗಳ ಗಡಿಯಲ್ಲಿ ವಾಮಾಚಾರ ಮಾಡಲಾಗಿದೆ. ಬುಧವಾರ ಸಂಜೆ … Read more

ಕಾರ್ ಶೋ ರೂಂ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆ

bike theft reference image

SHIVAMOGGA LIVE NEWS | 3 ಮಾರ್ಚ್ 2022 ಕಾರ್ ಶೋ ರೂಂ ಒಂದರ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಈ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೇಜಸ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಶಂಕರಮಠ ರಸ್ತೆಯ ಕಾರ್ ಶೋ ರೂಂ ಒಂದರ ಮುಂದೆ ನಲ್ಲಿಸಿದ್ದ ಬೈಕ್ ನಿಲ್ಲಿಸಲಾಗಿತ್ತು. ಫೆ.8ರಂದು ಮಧ್ಯಾಹ್ನ ಬೈಕ್ ನಾಪತ್ತೆಯಾಗಿದೆ. ಎಲ್ಲೆಡೆ ಹುಡುಕಾಡಿದ ತೇಜಸ್, ಬೈಕ್ ಸಿಗದ ಹಿನ್ನೆಲೆ ದೂರು ದಾಖಲಿಸಿದ್ದಾರೆ. ಸ್ಪ್ಲೆಂಡರ್ ಬೈಕ್ ಕಳ್ಳತನ ಆಗಿರುವ ಕುರಿತು ದೂರು ದಾಖಲಾಗಿದೆ. ಪೊಲೀಸರು … Read more

ಮಹಾದೇವಿ ಟಾಕೀಸ್ ಎದುರು ನಡುರಾತ್ರಿ ಸೆಕ್ಯೂರಿಟಿ ಗಾರ್ಡ್ ಮೇಲೆ ದಾಳಿ

Kote Police station building

SHIVAMOGGA LIVE NEWS | 3 ಮಾರ್ಚ್ 2022 ಶಿವಮೊಗ್ಗದ ಮಹಾದೇವಿ ಟಾಕೀಸ್ ಮುಂಭಾಗ ಸೆಕ್ಯೂರಿಟಿ ಗಾರ್ಡ್ ಒಬ್ಬರ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಲಾಗಿದೆ. ಮಧ್ಯರಾತ್ರಿ ಘಟನೆ ಸಂಭವಿಸಿದೆ. ಮಣಿ (68) ಎಂಬವವರು ಹಲ್ಲೆಗೊಳಗಾದವರು. ಮಹಾದೇವಿ ಟಾಕೀಸ್ ಮುಂಭಾಗ ಖಾಸಗಿ ಶಾಲೆಗಳ ಬಸ್ ನಿಲುಗಡೆ ಸ್ಥಳವಿದೆ. ಅದರ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಏನಿದು ಘಟನೆ? ಫೆ.28ರ ನಡುರಾತ್ರಿ ಮಹಾದೇವಿ ಟಾಕೀಸ್ ಮುಂಭಾಗ ಖಾಸಗಿ ಶಾಲೆಗಳ ಬಸ್ ನಿಲುಗಡೆ ಸ್ಥಳಕ್ಕೆ ವ್ಯಕ್ತಿಯೊಬ್ಬ ಬಂದಿದ್ದಾನೆ. ತನ್ನನ್ನು … Read more

ನಟ ಪುನೀತ್ ರಾಜಕುಮಾರ್ ಅಭಿಮಾನಿಗಳಿಂದ ಸೈಕಲ್ ಜಾಥಾ, ಎಲ್ಲಿವರೆಗೆ ಜಾಥಾ ನಡೆಯುತ್ತೆ? ಕಾರಣವೇನು?

Puneeth-Rajkumar-Fans-Cycle-jaatha-to-Appu-Samadhi

SHIVAMOGGA LIVE NEWS | 3 ಮಾರ್ಚ್ 2022 ನಟ ಪುನೀತ್ ರಾಜಕುಮಾರ್ ಅವರ ಸಮಾಧಿ ದರ್ಶನಕ್ಕೆ ಇಬ್ಬರು ಅಭಿಮಾನಿಗಳು ಶಿವಮೊಗ್ಗದಿಂದ ಸೈಕಲ್ ಜಾಥಾ ಆರಂಭಿಸಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿನವರೆಗೆ ಜಾಥಾ ನಡೆಯಲಿದೆ. ಮೆಸ್ಕಾಂ ಎಂಜಿನಿಯರ್ ನಂಜುಂಡಿ ಮತ್ತು ಸ್ವರೂಪ್ ಎಂಬುವವರು ಸೈಕಲ್ ಜಾಥಾ ನಡೆಸುತ್ತಿದ್ದಾರೆ. ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಜಾಥಾ ಆರಂಭಿಸಲಾಯಿತು. ಅಪ್ಪು ಫೋಟೊ ಹೊತ್ತು ಯಾತ್ರೆ ನಂಜುಂಡಿ ಮತ್ತು ಸ್ವರೂಪ್ ಅವರು ನಟ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು. ಅಪ್ಪು ಅವರ … Read more

ಸಿಗಂದೂರು ಸಮೀಪ ರಾತ್ರಿ ಭೀಕರ ಅಪಘಾತ, ಮಹಿಳೆ ಸಾವು

Accident-Near-Sigandur-temple-bykodu

SHIVAMOGGA LIVE NEWS | 3 ಮಾರ್ಚ್ 2022 ಸಿಗಂದೂರು ಚೌಡೇಶ್ವರಿ ದೇವಿ ಸನ್ನಿಧಿಗೆ ತೆರಳುತ್ತಿದ್ದ ಭಕ್ತರಿದ್ದ ಕ್ರೂಸರ್ ಪಲ್ಟಿಯಾಗಿ ಕಂದಕ್ಕೆ ಉರುಳಿದೆ. ಮಹಿಳೆಯೊಬ್ಬರು ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ. ಬ್ಯಾಕೋಡು ಸಮೀಪ ಒಕ್ಕೋಡಿ ಬಳಿ ರಸ್ತೆ ಪಕ್ಕದ ಗುಂಡಿಗೆ ಕ್ರೂಸರ್ ಪಲ್ಟಿಯಾಗಿದೆ. ರಾತ್ರಿ 9 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಸ್ಥಳದಲ್ಲೇ ಮಹಿಳೆ ಸಾವು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ 11 ಮಂದಿ ಮುರುಡೇಶ್ವರ ಪ್ರವಾಸ ಮುಗಿಸಿ ಸಿಗಂದೂರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದರು. ಒಕ್ಕೋಡಿ ಬಳಿ ರಸ್ತ ಪಕ್ಕದ … Read more

ಮಹಿಳೆ ಜೊತೆಗಿನ ಸಲುಗೆ ತಂದ ಆಪತ್ತು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದ ವ್ಯಕ್ತಿ ಸಾವು

crime name image

SHIVAMOGGA LIVE NEWS | 2 ಮಾರ್ಚ್ 2022 ಹೊಸಮನೆ ಬಡಾವಣೆಯಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಮಹಿಳೆ ಮತ್ತು ಆಕೆಯ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಜುನಾಥ್ (46) ಹೊಸಮನೆ ಬಡಾವಣೆಯ 5ನೇ ತಿರುವಿನ ಮನೆಯೊಂದರ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಕೂಡಲೆ ಸ್ಥಳೀಯರು ಬೆಂಕಿ ನಂದಿಸಿ ಮಂಜುನಾಥ್ ಅವರ ರಕ್ಷಿಸಿದ್ದರು. ಇದನ್ನೂ ಓದಿ | ಹೊಸಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ವ್ಯಕ್ತಿ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ … Read more

ತೀರ್ಥಹಳ್ಳಿಯಲ್ಲಿ ಬೈಕ್ ಅಪಘಾತ, ಗಂಭೀರ ಗಾಯಗೊಂಡಿದ್ದ ಮಹಿಳೆ ಮಣಿಪಾಲ ಆಸ್ಪತ್ರೆಯಲ್ಲಿ ಸಾವು

crime name image

SHIVAMOGGA LIVE NEWS | 2 ಮಾರ್ಚ್ 2022 ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಆರಗದ ಹೊಂಡ ಕೆರೆಯ ಬಸ್ತಿ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ. ಅಶೋಕ್ ಮತ್ತು ಅವರ ಪತ್ನಿ ಶೃತಿ ಅವರು ಸಂಬಂಧಿಯ ಮನೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಕಾರು ಬಂದಿದ್ದು, ಅಶೋಕ ಅವರು ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದ ಗುಂಡಿಗೆ ಬಿದ್ದು ಶೃತಿ ಅವರ ತಲೆ ಭಾಗಕ್ಕೆ ಪೆಟ್ಟು ಬಿದ್ದಿದೆ. … Read more