ಬಸ್, ಬೈಕ್ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ಸಾವು

Sagara-Kugve-Bus-and-Bike-collision

SHIVAMOGGA LIVE NEWS | 17 ಮಾರ್ಚ್ 2022 ಬೈಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಯುವಕ ಮೃತಪಟ್ಟಿದ್ದಾರೆ. ಸಾಗರ ಸಮೀಪದ ಅಂಬಾಪುರ ಕುಗ್ವೆ ತಿರುವಿನಲ್ಲಿ ಘಟನೆ ಸಂಭವಿಸಿದೆ. ತಲವಾಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಡುವಾಣಿಯ ಅನಿಲ್ (30) ಮೃತಪಟ್ಟಿದ್ದಾರೆ. ಅನಿಲ್ ಅವರು ತೆರಳುತ್ತಿದ್ದ ಬೈಕ್ ಮತ್ತು ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಗಂಭೀರ ಗಾಯಗೊಂಡಿದ್ದ ಅನಿಲ್ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆತರಲಾಗಿತ್ತು. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ … Read more

ಇತಿಹಾಸ ಪ್ರಸಿದ್ಧ ಮಾರಿಕಾಂಬಾ ಜಾತ್ರೆಗೆ ವೈಭವದ ತೆರೆ

Marikamba-Jathre-in-Thirthahalli

SHIVAMOGGA LIVE NEWS | 17 ಮಾರ್ಚ್ 2022 ಇತಿಹಾಸ ಪ್ರಸಿದ್ಧ ತೀರ್ಥಹಳ್ಳಿಯ ಮಾರಿಕಾಂಬಾ ಜಾತ್ರೆ ವಿಜೃಂಭಣೆಯಿಂದ ತೆರೆ ಕಂಡಿತು. ಪಟ್ಟಣದಲ್ಲಿ ಮಾರಿ ಗೊಂಬೆ ಮೆರವಣಿಗೆ ನಡೆಸಲಾಯಿತು. ಮಾರಿಗೊಂಬೆಯ ವಿಸರ್ಜನೆ ಮಾರಿಕಾಂಬಾ ದೇವಸ್ಥಾನದಲ್ಲಿ ಮಾರಿ ಗೊಂಬೆಗೆ ಬೆಳಗ್ಗೆ ಪೂಜೆ ಸಲ್ಲಿಸಲಾಯಿತು. ಸಂಜೆ ರಾಜಬೀದಿ ಉತ್ಸವ ನಡೆಯಿತು. ಮಾರಿಕಾಂಬಾ ದೇವಸ್ಥಾನದಿಂದ ಆರಂಭವಾದ ಮಾರಿ ಗೊಂಬೆ ಮೆರವಣಿಗೆ ಆಜಾದ್ ರಸ್ತೆ ಮಾರ್ಗದಲ್ಲಿ ಸಾಗಿತು. ಮಾರಿ ಗೊಂಬೆ ಯನ್ನು ಕುಶಾವತಿಯ ತುಂಗಾನದಿಯಲ್ಲಿ ಭಕ್ತರ ಸಮ್ಮುಖ ವಿಸರ್ಜನೆ ಮಾಡಲಾಯಿತು. ವಿವಿಧ ವೇಷ ಭೂಷಣದೊಂದಿಗೆ ವಿವಿಧ … Read more

ಶಿವಮೊಗ್ಗ ವಿಮಾನ ನಿಲ್ದಾಣ ಹೆಸರು ಸಂಬಂಧ ಭದ್ರಾವತಿ ತಹಶೀಲ್ದಾರ್ ಮೂಲಕ ಸಿಎಂಗೆ ಮನವಿ

Veerashaiva-Maha-Sabha-at-Bhadravathi-about-Airport-Name

SHIVAMOGGA LIVE NEWS | 17 ಮಾರ್ಚ್ 2022 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ವೀರಶೈವ-ಲಿಂಗಾಯಿತ ಸಮುದಾಯದ ಮುಖಂಡರು ಮನವಿ ಸಲ್ಲಿಸಿದ್ದಾರೆ. ಭದ್ರಾವತಿ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಗ್ರೇಡ್-2 ರಂಗಮ್ಮ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ದಕ್ಷ ಆಡಳಿತ ನೀಡಿದ್ದಾರೆ. ಅಭಿವೃದ್ಧಿಯ ಹರಿಕಾರರಾಗಿ ಸಾಮಾಜಿಕ ನ್ಯಾಯ ನೀಡಿದ್ದಾರೆ. ಅವರ ಶ್ರಮದ ಫಲವಾಗಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಅವರ ಕೀರ್ತಿ … Read more

ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಪುನಾರಂಭ, ಈಗ ಹೇಗಿದೆ ರಸ್ತೆ?

Agumbe-Ghat-Road

SHIVAMOGGA LIVE NEWS | 17 ಮಾರ್ಚ್ 2022 ಮರು ಡಾಂಬರೀಕರಣದ ಬಳಿಕ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಪುನಾರಂಭವಾಗಿದೆ. ಬುಧವಾರದಿಂದ ಘಾಟಿಯಲ್ಲಿ ವಾಹನಗಳು ಎಂದಿನಂತೆ ಸಂಚರಿಸುತ್ತಿವೆ. ಮರು ಡಾಂಬರೀಕರಣ ಹಿನ್ನೆಲೆ ಮಾರ್ಚ್ 5 ರಿಂದ ಮಾರ್ಚ್ 15ರವರೆಗೆ ಘಾಟಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. 18 ಕಿ.ಮೀ ರಸ್ತೆಗೆ 5.34 ಕೋಟಿ ರೂ. ವೆಚ್ಚದಲ್ಲಿ ಮರು ಡಾಂಬರೀಕರಣ ನಡೆಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಶೃಂಗೇರಿ ಉಪ ವಿಭಾಗದ ತಾಂತ್ರಿಕ ವಿಭಾಗದ ಮುಖ್ಯ ನಿರ್ವಹಣೆ ಅಡಿ ತೀರ್ಥಹಳ್ಳಿಯ ನ್ಯಾಷನಲ್ ನಿರ್ಮಾಣ … Read more

ಇವತ್ತಿನ ಅಡಕೆ ಧಾರಣೆ | 16 ಮಾರ್ಚ್ 2022

Areca Price in Shimoga APMC

SHIVAMOGGA LIVE NEWS | 16 ಮಾರ್ಚ್ 2022 ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆ ಶಿವಮೊಗ್ಗ ಮಾರುಕಟ್ಟೆ ಗೊರಬಲು 15209 34099 ಬೆಟ್ಟೆ 47219 49155 ರಾಶಿ 43009 45891 ಸರಕು 53440 75696 ಶಿರಸಿ ಮಾರುಕಟ್ಟೆ ಚಾಲಿ 35099 39818 ಬೆಟ್ಟೆ 36519 43899 ಬಿಳೆ ಗೋಟು 21899 32213 ರಾಶಿ 45318 47266 ಸಿದ್ಧಾಪುರ ಮಾರುಕಟ್ಟೆ ಕೆಂಪುಗೋಟು 26099 30889 ಕೋಕ 20199 29989 ತಟ್ಟಿಬೆಟ್ಟೆ 30069 38509 ಬಿಳೆ … Read more

JOB NEWS | ಪ್ರತಿಷ್ಠಿತ ಶಾಲೆಯಲ್ಲಿ ಪ್ರಾಂಶುಪಾಲರು, ಶಿಕ್ಷಕರು ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

jobs news shivamogga live

SHIVAMOGGA LIVE NEWS | 16 ಮಾರ್ಚ್ 2022 ಶಿವಮೊಗ್ಗದ ಮಂದಾರ ಜ್ಞಾನದಾಯಿನಿ ಶಾಲೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಬಹುದಾಗಿದೆ. ಪ್ರಾಂಶುಪಾಲರು, ಶಿಕ್ಷಕರು, ಕಚೇರಿ ಸಿಬ್ಬಂದಿ, ಅಟೆಂಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 24ರಂದು ಬೆಳಗ್ಗೆ 11 ಗಂಟೆಗೆ ಗೋಪಾಳದ ಗೋಪಶೆಟ್ಟಿಕೊಪ್ಪದ ಕ್ಯಾಂಪಸ್’ನಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತರು info@mjsc.edu.in ಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ಸಂಪೂರ್ಣ ವಿವರ ಕೆಳಗಿದೆ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ https://mjsc.edu.in/teaching-staff-recruitment/ ಇದನ್ನೂ ಓದಿ | ಇವತ್ತಿನ ಎಲ್ಲಾ … Read more

ತೀರ್ಪು ಬಂದರೂ ಶಿವಮೊಗ್ಗದಲ್ಲಿ ಕೆಲವು ವಿದ್ಯಾರ್ಥಿನಿಯರಿಂದ ಹಿಜಾಬ್’ಗೆ ಪಟ್ಟು

Hijab-Controversy-Continues-in-Shimoga-College.

SHIVAMOGGA LIVE NEWS | 16 ಮಾರ್ಚ್ 2022 ಹೈಕೋರ್ಟ್ ತೀರ್ಪು ಹಿನ್ನೆಲೆ ಹಿಜಾಬ್ ಧರಿಸಿ ಬಂದವರಿಗೆ ಶಾಲೆ, ಕಾಲೇಜುಗಳ ತರಗತಿ ಪ್ರವೇಶವನ್ನು ನಿರಾಕರಿಸಲಾಯಿತು. ಬಹುತೇಕ ಕಡೆ ವಿದ್ಯಾರ್ಥಿನಿಯರು ತೀರ್ಪಿಗೆ ಮನ್ನಣೆ ನೀಡಿದರು. ನಗರದ ಒಂದು ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಮಾತ್ರ ಹಿಜಾಬ್ ಧರಿಸಲು ಅವಕಾಶ ಕೊಡಬೇಕು ಎಂದು ಹಠ ಹಿಡಿದರು. ಕಾಲೇಜು ಬಳಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ತರಗತಿಗೆ ತೆರಳಿದ ವಿದ್ಯಾರ್ಥಿನಿಯರು ಹೈಕೋರ್ಟ್ ತೀರ್ಪು ಬಂದ ನಂತರ ಇವತ್ತು ಶಾಲೆ, ಕಾಲೇಜುಗಳ ತರಗತಿ ಪುನಾರಂಭವಾಗಿವೆ. ಬಹುತೇಕ ಕಡೆ … Read more

ಶಿವಮೊಗ್ಗ – ಭದ್ರಾವತಿ ಮಧ್ಯೆ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗ, ಡಿಸಿ ಆದೇಶ

Bhadravathi Name Graphics

SHIVAMOGGA LIVE NEWS | 16 ಮಾರ್ಚ್ 2022 ಭದ್ರಾವತಿಯ ಕಡದಕಟ್ಟೆ ಸಮೀಪ ರೈಲ್ವೆ ಮೇಲ್ಸೇತುವೆ ಕಾಮಗಾರಿ ಹಿನ್ನೆಲೆ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ರೈಲ್ವೆ ಕ್ರಾಸಿಂಗ್ ಗೇಟ್ ನಂ.34ರಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ತ್ವರಿತಗತಿಯಿಂದ ಪೂರ್ಣಗೊಳಿಸಬೇಕಿದೆ. ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆ ಹಿನ್ನೆಲೆ ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಯಾವುದ ಪರ್ಯಾಯ ಮಾರ್ಗ? ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ಮಿನಿ … Read more

ಚಾರ್ಜ್’ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಪೋಟ, ಹಲವು ವಸ್ತುಗಳು ಭಸ್ಮ, ಹೇಗಾಯ್ತು ಘಟನೆ?

Electric-Bike-Blast-at-Nimbegondi-Village-Near-Holehonnur.

SHIVAMOGGA LIVE NEWS | 16 ಮಾರ್ಚ್ 2022 ಚಾರ್ಜ್’ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಪೋಟಗೊಂಡು ಹಲವು ವಸ್ತುಗಳು ಬೆಂಕಿಗೆ ಆಹುತಿ ಆಗಿವೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ. ಹೊಳೆಹೊನ್ನೂರು ಸಮೀಪದ ನಿಂಬೆಗುಂದಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ರಾತ್ರಿ ಚಾರ್ಜ್’ಗೆ ಹಾಕಿದ್ದಾಗ ವಾಹನ ಸ್ಪೋಟಗೊಂಡು ಅವಘಡ ಸಂಭವಿಸಿದೆ. ಹೇಗಾಯ್ತು ಘಟನೆ? ನಿಂಬೆಗುಂದಿ ಗ್ರಾಮದ ಕಾಡಪ್ಪರ ಮಲ್ಲಿಕಾರ್ಜುನ ಎಂಬುವವರಿಗೆ ಸೇರಿದ ಬೈಕ್ ಸ್ಪೋಟಗೊಂಡಿದೆ. ಮಲ್ಲಿಕಾರ್ಜುನ ಅವರ ಮಗ ಕಿರಣ್ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಕಾಡಪ್ಪರ ಮಲ್ಲಿಕಾರ್ಜುನ … Read more

BREAKING NEWS | ಟ್ಯಾಂಕರ್ ಪಲ್ಟಿ, ಪೆಟ್ರೋಲ್ ತುಂಬಿಸಿಕೊಳ್ಳಲು ನೂಕುನುಗ್ಗಲು

Petrol-Tanker-Accident-at-Javalli

SHIVAMOGGA LIVE NEWS | 16 ಮಾರ್ಚ್ 2022 ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದೆ. ಈ ಮಧ್ಯೆ ಟ್ಯಾಂಕರ್’ನಲ್ಲಿದ್ದ ಪೆಟ್ರೋಲ್ ತುಂಬಿಸಿಕೊಳ್ಳಲು ಜನರು ಮುಗಿಬಿದ್ದಿದ್ದಾರೆ. ಶಿವಮೊಗ್ಗ ತಾಲೂಕು ಜಾವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಟ್ಯಾಂಕರ್ ಶಿವಮೊಗ್ಗ ಕಡೆಯಿಂದ ಚನ್ನಗಿರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಇನ್ನು, ವಿಚಾರ ತಿಳಿಯುತ್ತಿದ್ದ ಹಾಗೆ ಜನರು ಟ್ಯಾಂಕರ್’ಗೆ ಮುಗಿಬಿದ್ದಿದ್ದಾರೆ. ಅಪಾಯವನ್ನು ಲೆಕ್ಕಿಸದೆ ಕೆಲವರು ಪೆಟ್ರೋಲ್ ತುಂಬಿಸಿಕೊಳ್ಳಲು ಮುಂದಾಗಿದ್ದಾರೆ. ಪೊಲೀಸರು ಜನರನ್ನು ನಿಯಂತ್ರಿಸಿದರು ಎಂದು ಸ್ಥಳೀಯರು ತಿಳಿಸಿದರು. ಅಗ್ನಿಶಾಮಕ ಸಿಬ್ಬಂದಿ ಭೇಟಿ … Read more