ಶಿವಮೊಗ್ಗ ಸಿಟಿಯಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್ ಪೊಲೀಸ್
ಶಿವಮೊಗ್ಗ: ಭಾರಿ ವಾಹನ ಸಂಚಾರ ನಿಷೇಧವಿದ್ದರು ಶಿವಮೊಗ್ಗ ಸಿಟಿಯೊಳಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸುಗಳನ್ನು ಸಂಚಾರ ಪೊಲೀಸರು ತಡೆದಿದ್ದಾರೆ. ಈ ಸಂದರ್ಭ ಟ್ರಾಫಿಕ್ ಪೊಲೀಸರ ಜೊತೆಗೆ ಕೆಎಸ್ಆರ್ಟಿಸಿ ಬಸ್ ಸಿಬ್ಬಂದಿ, ಪ್ರಯಾಣಿಕರು ವಾಗ್ವಾದ ನಡೆಸಿದರು. ಇಂದು ಗೋಪಿ ವೃತ್ತದಲ್ಲಿ ಸಂಚಾರ ಠಾಣೆ ಪೊಲೀಸರು ಕೆಎಸ್ಆರ್ಟಿಸಿ ಬಸ್ಸುಗಳನ್ನು ತಡೆದರು. ನಗರದ ಒಳಗೆ ಭಾರಿ ವಾಹನ ಸಂಚಾರ ನಿಷೇಧವಿದ್ದರು ಬಸ್ಸುಗಳು ನಗರದ ಒಳಗೆ ಸಂಚರಿಸುತ್ತಿರುವುದೇಕೆ ಎಂದು ಪ್ರಶ್ನಿಸಿದರು. ಈ ಸಂದರ್ಭ ವಾಗ್ವಾದ ನಡೆಯಿತು. ಕೆಎಸ್ಆರ್ಟಿಸಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ … Read more