ಭದ್ರಾವತಿಯಲ್ಲಿ ಬಿಸಿ ಊಟದ ಸಿಬ್ಬಂದಿ ಶಾಲೆಗೆ ಬಂದಾಗ ಕಾದಿತ್ತು ಆಘಾತ

BHADRAVATHI-NEWS-UPDATE

ಭದ್ರಾವತಿ: ಸರ್ಕಾರಿ ಶಾಲೆಯ ಕೊಠಡಿಯ ಬೀಗ ಮುರಿದು 32 ಇಂಚಿನ ಸ್ಯಾಮ್‌ಸಂಗ್‌ ಟಿವಿ ಕಳ್ಳತನ ಮಾಡಲಾಗಿದೆ. ಭದ್ರಾವತಿಯ ಭದ್ರಾ ಕಾಲೋನಿಯ ಸರ್ಕಾರಿ ಶಾಲೆಯಲ್ಲಿ ಘಟನೆ ಸಂಭವಿಸಿದೆ. ಊಟದ ಹಾಲ್‌ನ ಬೀಗ ಮುರಿದ ಕಳ್ಳರು ಒಳಗಿದ್ದ ಟಿವಿಯನ್ನು ಕದ್ದೊಯ್ದಿದ್ದಾರೆ. ಅಡುಗೆ ಸಹಾಯಕಿ ಶಾಲೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಶಿಕ್ಷಕಿ ಉಮಾ ಅವರು ದೂರು ನೀಡಿದ್ದಾರೆ. ಹೊಸಮನೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಶಿವಮೊಗ್ಗದ ಫೋಟೊಗ್ರಾಫರ್‌ … Read more

ಶಾಲೆ, ಕಾಲೇಜು ರಜೆ ವಿಚಾರ, ಸಿಎಂ ಕಚೇರಿಯಿಂದ ಸ್ಪಷ್ಟನೆ

VIDHANA-SOUDHA-GENERAL-IMAGE.jpg

ಬೆಂಗಳೂರು: ವೃಕ್ಷಮಾತೆ ನಾಡೋಜ ಸಾಲುಮರದ ತಿಮ್ಮಕ್ಕ ನಿಧನದ ಹಿನ್ನೆಲೆ ಶನಿವಾರ ಸರ್ಕಾರಿ ರಜೆ ನೀಡಲಾಗಿದೆ ಎಂಬ ನಕಲಿ ಆದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಲ್ಲೇಖವಾಗಿದ್ದ ಪರಿಣಾಮ ಗೊಂದಲ ಉಂಟಾಗಿತ್ತು. ಕೊನೆಗೆ ಮುಖ್ಯಮಂತ್ರಿಯವರ ಕಚೇರಿ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದು ಸ್ಪಷ್ಟಪಡಿಸಿದೆ. ಶನಿವಾರ ಎಂದಿನಂತೆ ಶಾಲಾ, ಕಾಲೇಜು ಮತ್ತು ಸರ್ಕಾರಿ ಕಚೇರಿಗಳು ಕೆಲಸ ಕಾರ್ಯ ನಿರ್ವಹಿಸಲಿವೆ ಎಂದು ಸಿಎಂ ಕಚೇರಿ ತಿಳಿಸಿದೆ. ಇದನ್ನೂ … Read more