ಶಿವಮೊಗ್ಗಕ್ಕೆ ನಾಳೆ ರಾಹುಲ್‌ ಗಾಂಧಿ, ಬೆಂಗಾವಲು ಪಡೆಯಿಂದ ಇವತ್ತು ಡಮ್ಮಿ ಕಾನ್ವಾಯ್‌, ಹೇಗಿದೆ ಭದ್ರತೆ?

Rahul-Gandhi-dummy-convoy-in-shimoga-city.

SHIVAMOGGA LIVE NEWS | 1 MAY 2024 ELECTION NEWS : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗುರುವಾರ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆ ಇವತ್ತು ಪೊಲೀಸರು ಭದ್ರತೆ ಪರಿಶೀಲಿಸಿದರು. ರಾಹುಲ್‌ ಗಾಂಧಿ ಅವರಿಗೆ ಜೆಡ್‌ ಸೆಕ್ಯೂರಿಟಿ ಇದೆ. ಆದ್ದರಿಂದ ಕಾರ್ಯಕ್ರಮ ನಡೆಯುವ ವೇದಿಕೆ ಸುತ್ತಮುತ್ತ ರಾಹುಲ್‌ ಗಾಂಧಿ ಅವರ ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದರು. ಇನ್ನು, ವಿಮಾನ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಅವರು … Read more

ಮಧು, ಕುಮಾರ್‌ ಮಧ್ಯೆ ‘ರೀಚಾರ್ಜ್‌’ ಕದನ, ನಾಯಿ ಪಾಡಾಗಲಿದೆ ಅಂತಾ ಬೇಳೂರು ಎಚ್ಚರ

Madhu-kumar-bangarappa-and-Beluru-gopalakrishna

SHIVAMOGGA LIVE NEWS | 1 MAY 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಕಣದಲ್ಲಿ ಬಂಗಾರಪ್ಪ ಪುತ್ರರ ಮಧ್ಯೆ ಮಾತಿಗೆ ಮಾತು, ಏಟಿಗೆ ಎದಿರೇಟು ಶುರುವಾಗಿದೆ. ಮಧು ಬಂಗಾರಪ್ಪ ರೀಚಾರ್ಜ್‌ ಹೇಳಿಕೆಗೆ ಕುಮಾರ್‌ ಬಂಗಾರಪ್ಪ ತಿರುಗೇಟು ಕೊಟ್ಟಿದ್ದಾರೆ. ಇದರ ಮಧ್ಯೆ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಕುಮಾರ್‌ ಬಂಗಾರಪ್ಪಗೆ ಮಾತಿನೇಟು ನೀಡಿದ್ದಾರೆ. ಮಧು ಬಂಗಾರಪ್ಪ ರೀಚಾರ್ಜ್‌ ಹೇಳಿಕೆ ಫ್ರೀಡಂ ಪಾರ್ಕ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಧು ಬಂಗಾರಪ್ಪ, ಕೊಚ್ಚೆ ಮೇಲೆ ಕಲ್ಲು ಹಾಕಬಾರದು. … Read more

ಶಿರಾಳಕೊಪ್ಪದಲ್ಲಿ ಈಶ್ವರಪ್ಪ ಸಭೆಗೆ ಅಡ್ಡಿ, ನಡುರಸ್ತೆಯಲ್ಲಿ ನಿಂತು ಭಾಷಣ, ಆಗಿದ್ದೇನು?

Eshwarappa-shiralakoppa-meeting-distrubed

SHIVAMOGGA LIVE NEWS | 1 MAY 2024 ELECTION NEWS : ಅನುಮತಿ ಇದ್ದರೂ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಸಭೆ ನಡೆಸಲು ಅಡ್ಡಿ ಉಂಟು ಮಾಡಲಾಗಿದೆ. ಏಕಾಏಕಿ ವೇದಿಕೆ ತೆರವು ಮಾಡಲಾಗಿದೆ. ಇದರಿಂದ ಕೆಂಡಾಮಂಡಲರಾದ ಈಶ್ವರಪ್ಪ, ನಡು ರಸ್ತೆಯಲ್ಲೇ ನಿಂತು ಆಕ್ರೋಶ ವ್ಯಕ್ತಪಡಿಸಿದರು. ಶಿರಾಳಕೊಪ್ಪದ ಸೊರಬ ರಸ್ತೆಯ ಮೈಲಾರ ಲಿಂಗೇಶ್ವರ ದೇವಸ್ಥಾನದ ಬಳಿ ಇವತ್ತು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಸಭೆ ಆಯೋಜಿಸಲಾಗಿತ್ತು. ಚುನಾವಣ ಆಯೋಗದಿಂದ ಅನುಮತಿಯನ್ನು ಪಡೆಯಲಾಗಿತ್ತು. ಆದರೂ ಕೆಲವರು ವೇದಿಕೆ ಮತ್ತು … Read more

ಎಂಪಿಎಂ ನೆಡುತೋಪಿನಲ್ಲಿ ಶಬ್ದ, ದೌಡಾಯಿಸಿದ ಅರಣ್ಯ ಅಧಿಕಾರಿಗಳು, 14 ಮಹಿಳೆಯರ ವಿರುದ್ಧ ಕೇಸ್

Holehonnuru-Police-Station-Bhadravathi-jpg

SHIVAMOGGA LIVE NEWS | 1 MAY 2024 BHADRAVATHI : ದಾನವಾಡಿಯಲ್ಲಿ ಎಂಪಿಎಂಗೆ ಗುತ್ತಿಗೆ ನೀಡಿರುವ ನೀಲಗಿರಿ ನೆಡುತೋಪಿನಲ್ಲಿ ಮರ ಕಡಿದ ಆರೋಪದ ಹಿನ್ನೆಲೆ 14 ಮಹಿಳೆಯರ ವಿರುದ್ಧ ಭದ್ರಾವತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಏ.26ರಂದು ಮರ ಕಡಿಯುತ್ತಿರುವ ಶಬ್ದ ಕೇಳಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಹೋದಾಗ ಮಹಿಳೆಯರು ಅಕ್ರಮವಾಗಿ ಮರ ಕಡಿಯುತ್ತಿರುವುದು ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.   ಮಹಿಳೆಯರು ಮರ ಕಡಿತಲೆ ಮಾಡಿದ್ದರಿಂದ ಸರ್ಕಾರಕ್ಕೆ 50 ಸಾವಿರ ರೂ. ನಷ್ಟವಾಗಿದೆ … Read more

ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಷ್ಟೊತ್ತಿಗೆ ಬರ್ತಾರೆ? ಎಲ್ಲಿಗೆಲ್ಲ ಭೇಟಿ ನೀಡ್ತಾರೆ?

220424 Chief Minister Siddaramaiah visit to Shimoga airport

SHIVAMOGGA LIVE NEWS | 1 MAY 2024 ELECTION NEWS : ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರ ಪ್ರಚಾರಕ್ಕೆ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಪ್ರಜಾಧ್ವನಿ ಸಮಾವೇಶ ಆಯೋಜಿಸಲಾಗಿದೆ. ಮೇ.2ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಡೆಯಲಿದ್ದು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿ ನೀಡಿಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯಿಂದ ವಿಶೇಷ ವಿಮಾನದಲ್ಲಿ ಹೊರಟು ಬೆಳಗ್ಗೆ 11ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದ್ದಾರೆ. … Read more

ಶಿವಮೊಗ್ಗದಲ್ಲಿ ಪರೀಕ್ಷಾ ಕೊಠಡಿಯಿಂದ ಹೊರ ಬಂದು ಬ್ಯಾಗ್‌ಗೆ ಕೈ ಹಾಕಿದ ವಿದ್ಯಾರ್ಥಿನಿಗೆ ಕಾದಿತ್ತು ಆಘಾತ

Doddapete-Police-Station.

SHIVAMOGGA LIVE NEWS | 1 MAY 2024 SHIMOGA : ಸಿಇಟಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯ ಚಿನ್ನ ಸರ ಕಳ್ಳತನವಾಗಿದೆ. ಕಸ್ತೂರ ಬಾ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ಶಿಕಾರಿಪುರ ತಾಲೂಕು ತಾಳಗುಂದದ ಸಿಂಚನಾ ಬ್ಯಾಗಿನಲ್ಲಿಟ್ಟಿದ್ದ ಚಿನ್ನದ ಸರ ನಾಪತ್ತೆಯಾಗಿದೆ. ಅಂದಾಜು 44 ಸಾವಿರ ರೂ. ಮೌಲ್ಯದ  10 ಗ್ರಾಂ ತೂಕದ ಸರ ಕಳುವಾಗಿದೆ ಎಂದು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏ.18 ಮತ್ತು 19ರಂದು ಶಿವಮೊಗ್ಗದ ಪರೀಕ್ಷಾ ಕೇಂದ್ರದಲ್ಲಿ ಸಿಂಚನಾ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದಳು. … Read more

ತ್ಯಾಗರ್ತಿಯಲ್ಲಿ ನಟ ದುನಿಯಾ ವಿಜಯ್‌, ಶಿವರಾಜ್‌ ಕುಮಾರ್‌ ಅಬ್ಬರದ ಪ್ರಚಾರ, ಏನೇನು ಹೇಳಿದರು?

duniya-vijay-and-shivaraj-kumar-in-tyagrthi-sagara.

SHIVAMOGGA LIVE NEWS | 1 MAY 2024 SAGARA : ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಗೀತಾ ಶಿವರಾಜ್‌ ಕುಮಾರ್‌ ಅವರ ಗೆಲುವು ಕ್ಷೇತ್ರದ ಮತದಾರರ ಸ್ವಾಭಿಮಾನದ ಪ್ರಶ್ನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಗ್ರಾಮದಲ್ಲಿ ಅನ್ಯ ಪಕ್ಷಗಳಿಗೆ ಬೆಂಬಲಿಸುವ ಯುವಕ- ಯುವತಿಯರು ಇರಬಹುದು. ನಮಗೆ ನಿಮ್ಮ ಪಕ್ಷದ … Read more

ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 1 MAY 2024 SHIMOGA : ನಗರದ ಮೀನು ಮಾರುಕಟ್ಟೆ ಬಳಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ನಡೆಯಲಿದೆ. ಮೇ 2 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ. ಭರಮಪ್ಪನಗರ, ಎಂ.ಕೆ.ಕೆ ರಸ್ತೆ, ನಾಗಪ್ಪಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ … Read more

ನಾಳೆ ಶಿವಮೊಗ್ಗಕ್ಕೆ ರಾಹುಲ್‌ ಗಾಂಧಿ, ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ ಸಿನಿಮಾ ಸ್ಟಾರ್‌ಗಳು, ಎಲ್ಲಿ ನಡೆಯುತ್ತೆ ಪ್ರೊಗ್ರಾಂ?

Madhu-Bangarappa-visits-Freedom-park-in-Shimoga.

SHIVAMOGGA LIVE NEWS | 1 MAY 2024 ELECTION NEWS : ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರವಾಗಿ ಪ್ರಚಾರಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಏ.2ರಂದು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಆಗಮಿಸುವ ರಾಹುಲ್‌ ಗಾಂಧಿ, ಅಲ್ಲಮಪ್ರಭು ಮೈದಾನದಲ್ಲಿ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಈ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಸಿದ್ಧತೆ ಪರಿಶೀಲಿಸಿದರು. ಸಿಎಂ, ಡಿಸಿಎಂ ಕೂಡ ಭಾಗಿ ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, … Read more

ಮೇ 7ರಂದು ಕಾರ್ಖಾನೆ, ಅಂಗಡಿಗಳು ಸೇರಿ ಎಲ್ಲ ಸಂಸ್ಥೆಗಳಿಗೂ ರಜೆ, ಆದೇಶ ಉಲ್ಲಂಘಿಸಿದರೆ ಕ್ರಮ

himoga-DC-office-and-Police-jeep-in-front-of-office

SHIVAMOGGA LIVE NEWS | 1 MAY 2024 ELECTION NEWS : ಶಿವಮೊಗ್ಗ ಲೋಕಸಭೆಗೆ ಮೇ 7ರಂದು ಮತದಾನದ ನಡೆಯಲಿದೆ. ಆದ್ದರಿಂದ ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆ, ಅಂಗಡಿ, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ. ಎಲ್ಲಾ ಮಾಲೀಕರು, ನಿಯೋಜಕರು ಕಾರ್ಮಿಕರಿಗೆ ಮತದಾನದಲ್ಲಿ ಪಾಲ್ಗೊಳ್ಳಲು ವೇತನ ಸಹಿತ ರಜೆ ನೀಡಬೇಕು. ಆದೇಶ ಉಲ್ಲಂಘಿಸಿದ ಸಂಸ್ಥೆ ಹಾಗೂ ನಿಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾರ್ಮಿಕ … Read more