ಗಿಳಿಶಾಸ್ತ್ರ ಹೇಳುತ್ತಿದ್ದ ಇಬ್ಬರು ಬಂಧನ, ಎರಡು ಗಿಳಿಗಳು ವಶಕ್ಕೆ
SHIVAMOGGA LIVE NEWS | 10 JANUARY 2024 RIPPONPETE : ಗಿಳಿಶಾಸ್ತ್ರ ಹೇಳುತ್ತಿದ್ದ ಇಬ್ಬರನ್ನು ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಪಂಜರದೊಳಗಿದ್ದ ಎರಡು ಗಿಳಿಗಳನ್ನು ವಶಕ್ಕೆ ಪಡೆಯಲಾಗಿದೆ. ರಿಪ್ಪನ್ಪೇಟೆಯ ಕೆರೆಹಳ್ಳಿ ಕ್ರಾಸ್ನಲ್ಲಿ ಬೆಂಗಳೂರಿನ ಮಂಜುನಾಥ್ ಮತ್ತು ಯಲ್ಲಪ್ಪ ಎಂಬುವವರನ್ನು ಬಂಧಿಸಲಾಗಿದೆ. ಗಿಳಿಗಳನ್ನು ಬಳಸಿ ಜ್ಯೋತಿಷ್ಯ ಹೇಳುವ ನೆಪದಲ್ಲಿ ಅವುಗಳನ್ನು ಹಿಂಸಿಸಲಾಗುತ್ತಿದೆ ಎಂದು ಆರೋಪಿಸಿ ಇಬ್ಬರನ್ನು ಬಂಧಿಸಲಾಗಿದೆ. ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ರಸ್ತೆಗೆ ಹಾಲು ಚೆಲ್ಲಿ … Read more