ಶಿವಮೊಗ್ಗದಿಂದ ಮಂತ್ರಾಲಯಕ್ಕೆ ಬರಿಗಾಲಲ್ಲಿ ನಡಿಗೆ ಆರಂಭಿಸಿದ ಅರ್ಚಕ

Pawan-Kumar-Bhat-padayathre-to-mantralaya.

ಶಿವಮೊಗ್ಗ: ಲೋಕಕಲ್ಯಾಣ ಮತ್ತು ನಾಡಿನ ಜನರ ಉತ್ತಮ ಆರೋಗ್ಯಕ್ಕಾಗಿ ಶಿವಮೊಗ್ಗದ ಅರ್ಚಕರೊಬ್ಬರು ಮಂತ್ರಾಲಯಕ್ಕೆ (Mantralaya) ಬರಿಗಾಲಲ್ಲಿ ನಡಿಗೆ ಆರಂಭಿಸಿದ್ದಾರೆ. ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಿಂದ ಪಾದಯಾತ್ರೆ ಶುರು ಮಾಡಿದ್ದಾರೆ. ಅರ್ಚಕ ಪವನ್‌ ಕುಮಾರ್‌ ಭಟ್‌ ಅವರು ಶಿವಮೊಗ್ಗದಿಂದ ಮಂತ್ರಾಲಯಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ. 13 ದಿನ ಹಗಲು ಮತ್ತು ರಾತ್ರಿ ನಿರಂತರವಾಗಿ ನಡೆಯಲಿದ್ದಾರೆ. ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದು ಪವನ್‌ ಕುಮಾರ್‌ ಭಟ್‌ ಅವರು ರೈಲಿನಲ್ಲಿ ಪ್ರಯಾಗ್‌ರಾಜ್‌ ತಲುಪಲಿದ್ದಾರೆ. ಇದನ್ನೂ ಓದಿ » ರವೀಂದ್ರನಗರ … Read more

ಶಿವಮೊಗ್ಗ ತಾಲೂಕಿನ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

ಶಿವಮೊಗ್ಗ: ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜು.12 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ವಿದ್ಯುತ್‌ (Power Cut) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ. ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಮಂಜಪ್ಪ ಬಸಪ್ಪ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, … Read more

ಶಿವಮೊಗ್ಗದಲ್ಲಿ ಲಾರಿ ಡಿಕ್ಕಿಯಾಗಿ ಪೊಲೀಸ್‌ ಚೌಕಿ ನಜ್ಜುಗುಜ್ಜು

Tipper-collides-with-police-chowki-at-Amir-Ahmed-Circle

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಕಳೆದ ರಾತ್ರಿ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿದ್ದ ಪೊಲೀಸ್‌ ಚೌಕಿಗೆ (Police Chowky) ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಯಾರಿಗು ಸಮಸ್ಯೆಯಾಗಿಲ್ಲ. ಸರ್ಕಲ್‌ನಲ್ಲಿ ಸ್ಮಾರ್ಟ್‌ ಸಿಟಿ ವತಿಯಿಂದ ಸ್ಥಾಪಿಸಲಾಗಿದ್ದ ಪೊಲೀಸ್‌ ಚೌಕಿಗೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪೊಲೀಸ್‌ ಚೌಕಿ ಹಾನಿಗೀಡಾಗಿದೆ. ಈ ಸಂದರ್ಭ ಚೌಕಿಯ ಒಳಗೆ ಪೊಲೀಸರು ಇರಲಿಲ್ಲ. ಹಾಗಾಗಿ ಅನಾಹುತ ತಪ್ಪಿದೆ. ನಾಲ್ಕು ದಿನದ ಹಿಂದೆ ಇದೇ ಸರ್ಕಲ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಪಲ್ಟಿಯಾಗಿತ್ತು. ಇದನ್ನೂ ಓದಿ … Read more

BREAKING NEWS – ಶಿವಮೊಗ್ಗದಲ್ಲಿ ಯುವಕನ ಕೊಲೆ, ಸ್ಥಳಕ್ಕೆ ಪೊಲೀಸರು ದೌಡು

Murder-at-Bommanakatte-E-Block-in-Shimoga.

ಶಿವಮೊಗ್ಗ: ರಾತ್ರಿ ಪಾರ್ಟಿ ವೇಳೆ ಗಲಾಟೆಯಾಗಿ ಸ್ನೇಹಿತನೆ (friends) ಯುವಕನ ಕೊಲೆ ಮಾಡಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಘಟನೆ ಸಂಭವಿಸಿದೆ. ಬೊಮ್ಮನಕಟ್ಟೆ ಎ-ಬ್ಲಾಕ್‌ ನಿವಾಸಿ ಪವನ್‌ (28) ಕೊಲೆಯಾದ ಯುವಕ. ಪವನ್‌, ಕಳೆದ ರಾತ್ರಿ ಸ್ನೇಹಿತ ಶಿವಕುಮಾರ್‌ ಮನೆಯಲ್ಲಿ ಪಾರ್ಟಿಗೆ ತೆರೆಳಿದ್ದ. ಮದ್ಯ ಸೇವಿಸಿದ ಬಳಿಕ ಸ್ನೇಹಿತರ ಮಧ್ಯೆ ಗಲಾಟೆಯಾಗಿದೆ ಎಂದು ಆರೋಪಿಸಲಾಗಿದೆ. ಗಲಾಟೆಯಲ್ಲಿ ಪವನ್‌ ಹತ್ಯೆಯಾಗಿದೆ. ಘಟನೆ ಸಂಬಂಧ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. … Read more