ಲೋಕಾಯುಕ್ತ ದಾಳಿ, ₹30 ಸಾವಿರ ಲಂಚದೊಂದಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸೆಕ್ಷನ್‌ ಆಫೀಸರ್‌

Lokayuktha-Raid-General-Image

ಶಿಕಾರಿಪುರ: ಗುತ್ತಿಗೆದಾರನಿಗೆ ಬಿಲ್‌ ಪಾವತಿಸಲು ಬಿಲ್‌ ಮೊತ್ತದ ಶೇ.3ರಷ್ಟು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ವಿಭಾಗದ ಸೆಕ್ಷನ್‌ ಆಫೀಸರ್‌ ಪರಶುರಾಮ್‌.ಹೆಚ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ (Raid) ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಲೋಕೋಪಯೋಗಿ ಇಲಾಖೆ ಗುತ್ತಿಗೆದಾರ ಲಿಂಗರಾಜ್‌ ಶಿವಪ್ಪ ಉಳ್ಳಾಗಡ್ಡಿ ಎಂಬುವವರು ಸೊರಬ ತಾಲೂಕಿನ ವಿವಿಧ ರಸ್ತೆ, ಶಾಲೆ ಕಾಮಗಾರಿ ನಡೆಸಿದ್ದರು. ಇದರ ಬಿಲ್‌ ಮೊತ್ತ ₹77.59 ಲಕ್ಷ ಪಾವತಿಗೆ ಬಾಕಿ ಇತ್ತು. ಬಿಲ್‌ ಪಾವತಿಗೆ ಇಂಜಿನಿಯರಿಂಗ್‌ ವಿಭಾಗದ ಸೆಕ್ಷನ್‌ ಆಫೀಸರ್‌ ಪರಶುರಾಮ್‌.ಹೆಚ್‌ … Read more

ಹೊಸನಗರದಲ್ಲಿ ಕುಸಿದ ಭೂಮಿ, ಒಂದು ಅಡಿಯಷ್ಟು ಕಳೆಗಿಳಿದ ರಸ್ತೆ

landslide-at-Hosanagara

ಹೊಸನಗರ: ಮಳೆ ಶುರುವಾದ ಬೆನ್ನಿಗೆ ಹೊಸನಗರ ಭಾಗದಲ್ಲಿ ಭಾರಿ ಭೂಕುಸಿತ (Landslide) ಉಂಟಾಗಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು 200 ಅಡಿಯಷ್ಟು ವ್ಯಾಪ್ತಿಯಲ್ಲಿ ಭೂಕುಸಿತವಾಗಿರುವ ವರದಿಯಾಗಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು ಒಂದು ಅಡಯಷ್ಟು ಭೂ ಕುಸಿತ ಉಂಟಾಗಿದೆ. ಕಳೆದ ವರ್ಷವು ಇದೇ ಜಾಗದಲ್ಲಿ ಭೂಮಿ ಕುಸಿದಿತ್ತು. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದಗಲ್‌ ಗ್ರಾಮದಲ್ಲಿ ಭೂಕುಸಿತ ಉಂಟಾಗಿದೆ. ಇದನ್ನೂ ಓದಿ » ತುಂಗಾ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಮಂಟಪ ಮುಕ್ಕಾಲು ಭಾಗ ಮುಳುಗಡೆ, ನದಿಯಲ್ಲಿ ಎಷ್ಟು ನೀರು ಹರಿಯುತ್ತಿದೆ?

ಅಡಿಕೆ ಧಾರಣೆ | 16 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 17890 29699 ಬೆಟ್ಟೆ 47410 60029 ರಾಶಿ 45499 57899 ಸರಕು 60699 81210 ಸಾಗರ ಮಾರುಕಟ್ಟೆ ಕೆಂಪುಗೋಟು 15170 30919 ಕೋಕ 6500 22066 ಚಾಲಿ 20022 38100 ಬಿಳೆ ಗೋಟು 8269 24375 ರಾಶಿ 20989 57170 ಸಿಪ್ಪೆಗೋಟು 6099 17629 ‌ಇದನ್ನೂ ಓದಿ » ತುಂಗಾ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಮಂಟಪ ಮುಕ್ಕಾಲು ಭಾಗ … Read more

ತುಂಗಾ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಮಂಟಪ ಮುಕ್ಕಾಲು ಭಾಗ ಮುಳುಗಡೆ, ನದಿಯಲ್ಲಿ ಎಷ್ಟು ನೀರು ಹರಿಯುತ್ತಿದೆ?

tunga-dam-water-release-and-mantapa-in-shimoga

ಶಿವಮೊಗ್ಗ: ತುಂಗಾ ಜಲಾಶಯದ ಒಳ ಮತ್ತು ಹೊರ ಹರಿವು (Outflow) ಹೆಚ್ಚಳವಾಗಿದೆ. ಇದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಶಿವಮೊಗ್ಗ ನಗರದ ಕೋರ್ಪಲಯ್ಯ ಛತ್ರ ಮಂಟಪ ಮುಕ್ಕಾಲು ಭಾಗ ಮುಳುಗಿದೆ. ಎಲ್ಲ ಗೇಟ್‌ ಓಪನ್ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದರಿಂದ ಜಲಾಶಯಕ್ಕೆ 31 ಸಾವಿರ ಕ್ಯೂಸೆಕ್‌ ಒಳ ಹರಿವು ಇದೆ. 27 ಸಾವಿರ ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ತುಂಗಾ ಜಲಾಶಯದ ಎಲ್ಲ ಗೇಟುಗಳನ್ನು ತೆರೆಯಲಾಗಿದೆ. ಮಂಟಪ ಮುಕ್ಕಾಲು ಮುಳುಗಡೆ ಇನ್ನು, … Read more

ಮೈದುಂಬಿದ ಜೋಗ ಜಲಪಾತ, ವೈಭವ ಕಣ್ತುಂಬಿಕೊಳ್ಳಲು ವಾರದ ದಿನವು ಪ್ರವಾಸಿಗರ ದಂಡು

tourists-visit-jog-falls.

ಸಾಗರ: ಮಲೆನಾಡು ಭಾಗದಲ್ಲಿ ಮಳೆ ಆರಂಭವಾಗುತ್ತಿದ್ದಂತೆ ಜೋಗ ಜಲಪಾತ (Jog Falls) ವೀಕ್ಷಣೆಗೆ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ. ಕಳೆದ ಎರಡು ದಿನ ರಜೆ ಇದ್ದಿದ್ದರಿಂದ ದೊಡ್ಡ ಸಂಖ್ಯೆಯ ಪ್ರವಾಸಿಗರು ಇಲ್ಲಿಗೆ ಆಗಮಿಸಿದ್ದರು. ಸೋಮವಾರವು ಟೂರಿಸ್ಟ್‌ಗಳ ಜಲಪಾತದ ವೈಭವ ಕಣ್ತುಂಬಿಕೊಳ್ಳಲು ಆಗಮಿಸಿದ್ದಾರೆ. ಮಳೆ ಶುರುವಾಗುತ್ತಿದ್ದಂತೆ ಜೋಗ ಜಲಪಾತಗೆ ಪ್ರವಾಸಿಗರು ದೊಡ್ಡ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ರಾಜ್ಯದ ನಾನಾ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯದ ಪ್ರವಾಸಿಗರು ಜಲಪಾತ ವೀಕ್ಷಿಸಲು ಬರುತ್ತಿದ್ದಾರೆ. ರಾಜ, ರಾಣಿ, ರೋರರ್‌ ಮತ್ತು ರಾಕೆಟ್‌ ಜಲಪಾತಗಳು ಮೈದುಂಬಿಕೊಂಡಿವೆ. … Read more

ಆಯನೂರು ಸಮೀಪ ಮನೆ ಗೋಡೆ ಕುಸಿದು ವೃದ್ಧೆ ಸಾವು, ಮಹಿಳೆಗೆ ಗಂಭೀರ ಗಾಯ

House-wall-collapse-at-mandagatta

ಶಿವಮೊಗ್ಗ: ಭಾರಿ ಮಳೆಗೆ ಮನೆ ಗೋಡೆ ಕುಸಿದು (collapse) ವೃದ್ಧೆ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದೆ. ಶಿವಮೊಗ್ಗ ತಾಲೂಕು ಆಯನೂರು ಸಮೀಪದ ಮಂಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡುಗಡಿ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಮನೆಯ ಗೋಡೆ ಕುಸಿದು ವೃದ್ಧೆ ಸಿದ್ದಮ್ಮ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಹೇಮಾವತಿ ಎಂಬುವವರಿಗೆ ಗಂಭೀರ ಗಾಯವಾಗಿದೆ. ಪರಶುರಾಮ, ಪಲ್ಲವಿ, ಚೇತನ್‌ ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು … Read more

ಶಿವಮೊಗ್ಗ ಸಿಟಿಯ ವಿವಿಧೆಡೆ ಜೂನ್‌ 17, 18ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಶಿವಮೊಗ್ಗ: ಉಪವಿಭಾಗ -2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜೂನ್ 17 ಮತ್ತು 18ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (Power Cut)  ಜೂನ್ 17 ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್. ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯ ನಗರ, ಕೆಎಚ್‌ಬಿ … Read more

ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳ, 24 ಗಂಟೆಯಲ್ಲಿ ನೀರಿನ ಮಟ್ಟ 2.65 ಅಡಿಯಷ್ಟು ಏರಿಕೆ

-Linganamakki-Dam-General-Image

ಸಾಗರ: ಜಲನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಳವಾಗಿರುವ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ (Dam) ಒಳ ಹರಿವು ಗಣನೀಯವಾಗಿ ಏರಿಕೆಯಾಗಿದೆ. ಇವತ್ತು 39,961 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 2.65 ಅಡಿಯಷ್ಟು ಏರಿಕೆಯಾಗಿತ್ತು. ಪ್ರಸ್ತುತ 1766.40 ಅಡಿಯಷ್ಟು ನೀರಿನ ಸಂಗ್ರಹವಿದೆ. ಇನ್ನು, ಜಲಾಶಯದ ಹೊರ ಹರಿವು 3012 ಕ್ಯೂಸೆಕ್‌ ಇದೆ. ಲಿಂಗನಮಕ್ಕಿ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ. ಸದ್ಯ 35.01 ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ. ಶೇ.23ರಷ್ಟು … Read more

ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ

Bhadra-Dam-General-Images

ಭದ್ರಾವತಿ: ಮಲೆನಾಡು ಭಾಗದಲ್ಲಿ ಮಳೆ ಜೋರಾಗುತ್ತಿದ್ದಂತೆ ಭದ್ರಾ ಜಲಾಶಯದ (Dam) ಒಳ ಹರಿವು ತುಸು ಏರಿಕೆಯಾಗಿದೆ. ಇವತ್ತು ಜಲಾಶಯಕ್ಕೆ 5417 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಭದ್ರಾ ಜಲಾಶಯದಲ್ಲಿ ಪ್ರಸ್ತುತ 144.9 ಅಡಿಯಷ್ಟು ನೀರಿನ ಸಂಗ್ರಹವಿದೆ. ಒಟ್ಟು 30.264 ಟಿಎಂಸಿ ನೀರಿದೆ. 1170 ಕ್ಯೂಸೆಕ್‌ ಹೊರಹರಿವು ಇದೆ. ಕಳೆದ ವರ್ಷ ಈ ಅವಧಿಯಲ್ಲಿ ನೀರಿನ ಮಟ್ಟ 118.11 ಅಡಿಯಷ್ಟಿತ್ತು. ಇದನ್ನೂ ಓದಿ » ಹೊಸನಗರ, ಸಾಗರದಲ್ಲಿ ಭಾರಿ ಮಳೆ, ಆಗುಂಬೆ ಭಾಗದಲ್ಲಿ ಬಿಡುವು ಕೊಡದ ವರ್ಷಧಾರೆ, ಎಲ್ಲೆಲ್ಲಿ ಜೋರು … Read more

ಹೊಸನಗರ, ಸಾಗರದಲ್ಲಿ ಭಾರಿ ಮಳೆ, ಆಗುಂಬೆ ಭಾಗದಲ್ಲಿ ಬಿಡುವು ಕೊಡದ ವರ್ಷಧಾರೆ, ಎಲ್ಲೆಲ್ಲಿ ಜೋರು ಮಳೆಯಾಗ್ತಿದೆ?

agumbe-ghat-road-during-rainy-season

ಮಳೆ ವರದಿ: ಜಿಲ್ಲೆಯಲ್ಲಿ ಮೂರು ತಾಲೂಕುಗಳಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆಯಾಗುತ್ತಿದೆ (Heavy Rainfall). ಹೊಸನಗರ, ಸಾಗರ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ. ತೀರ್ಥಹಳ್ಳಿಯಲ್ಲಿ ಜೋರು ಮಳೆಯಾಗುತ್ತಿದೆ. ಸಾಗರ ತಾಲೂಕಿನ ಕಾಂಡಿಕೆ, ಕಲ್ಮನೆ, ಕೋಳೂರು, ಭೀಮನಕೋಣೆ, ಭೀಮನೇರಿ, ಮಾಲ್ವೆ, ಕೆಳದಿ ಭಾಗದಲ್ಲಿ ವಿಪರೀತ ಮಳೆಯಾಗುತ್ತಿದೆ. ಇತ್ತ ಹೊಸನಗರ ತಾಲೂಕಿನ ಮಾರುತಿಪುರ, ಕೋಡೂರು, ಮುಂಬಾರು, ಮೇಲಿನಬೆಸಿಗೆ, ಹೊಸೂರು ಸಂಪೆಕಟ್ಟೆ ಭಾಗದಲ್ಲಿಯು ಭಾರಿ ಸುರಿಯುತ್ತಿದೆ. ತೀರ್ಥಹಳ್ಳಿ ತಾಲೂಕಿನ ದೇಮ್ಲಾಪುರ, ಆರಗ, ನೆರಟೂರು, ಹೊಸಹಳ್ಳಿ, ಅರೆಹಳ್ಳಿ, ಹೊನ್ನೇತಾಳು, ಬಿದರಗೋಡು, ಆಗುಂಬೆ ಭಾಗದಲ್ಲಿ ಜೋರು … Read more