‘ಶಿವಮೊಗ್ಗ ನಗರದಲ್ಲಿ ಆಗಿರುವ ನಷ್ಟಕ್ಕೆ ಸಚಿವ ಈಶ್ವರಪ್ಪ ಹೊಣೆ’
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಹರ್ಷ ಹತ್ಯೆ ಪ್ರಕರಣ ಮತ್ತು ಆ ಬಳಿಕ ನಡೆದ ಅಹಿತಕರ ಘಟನೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೊಣೆ ಹೊರಬೇಕು. ನಗರದಲ್ಲಿ ಆಗಿರುವ ನಷ್ಟವನ್ನು ಅವರೆ ಭರಿಸಬೇಕು ಎಂದು ಕೆಪಿಸಿಸಿ ವಕ್ತಾರ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನಕುಮಾರ್ ಅವರು, ಜಿಲ್ಲೆಯ ಶಾಂತಿ ಸುವ್ಯವಸ್ಥೆ ಜೊತೆ ಸಚಿವ ಈಶ್ವರಪ್ಪ ಅವರು ಆಟವಾಡುತ್ತಿದ್ದಾರೆ. ಅವರನ್ನು ಶಾಸಕ ಸ್ಥಾನದಿಂದಲೆ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ ಈಶ್ವರಪ್ಪ ಅವರ ನಡೆ ಖಂಡನೀಯ. ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆಸಿದವರು … Read more