ಭತ್ತ, ಹೆಚ್ಚು ನೀರು ಬೇಡುವ ಬೆಳೆ ಬೆಳೆಯದಂತೆ ರೈತರಿಗೆ ಸೂಚನೆ, ಕಾರಣವೇನು?

Bhadra-Dam-General-Image

SHIVAMOGGA LIVE NEWS | 9 SEPTEMBER 2023 SHIMOGA : ಭದ್ರಾ ಅಚ್ಚುಕಟ್ಟು (Bhadra Dam) ವ್ಯಾಪ್ತಿಯಲ್ಲಿ ಭತ್ತ ಮತ್ತು ಅಧಿಕ ನೀರು ಬೇಡುವ ಯಾವ ಬೆಳೆಯನ್ನೂ ಬೆಳೆಯಬಾರದು ಎಂದು ನೀರಾವರಿ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಬೇಸಿಗೆಯಲ್ಲಿ ಕುಡಿಯುವುದಕ್ಕೆ, ತೋಟಗಾರಿಕೆ ಹಾಗೂ ಇತರೆ ಬೆಳೆಗಳಿಗೆ ನೀರು ಸಂಗ್ರಹಿಸಿಡಬೇಕಿದೆ. ಆದ್ದರಿಂದ ಭತ್ತ ಹಾಗೂ ಇತರೆ ಬೆಳೆಗಳನ್ನು ಬೆಳೆಯದಂತೆ ಸೂಚಿಸಲಾಗಿದೆ‌. ಇದನ್ನೂ ಓದಿ – BREAKING NEWS – ಭದ್ರಾ … Read more

ರೈಲ್ವೆ ನಿಲ್ದಾಣಕ್ಕೆ ಆರ್‌ಎಂಎಲ್‌ ಹೆಸರಿಡುವಂತೆ ಆಗ್ರಹ, ಡಿಸಿಗೆ ಮನವಿ

090923 Kalluru Megharaj memorandum about sagara railway station

SHIVAMOGGA LIVE NEWS | 9 SEPTEMBER 2023 SHIMOGA : ಸಾಗರದ ಜಂಬಗಾರು ರೈಲು ನಿಲ್ದಾಣಕ್ಕೆ ರಾಮಮನೋಹರ ಲೋಹಿಯಾ ಅವರ ಹೆಸರು ನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಆಗ್ರಹಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬಂಧನಕ್ಕೆ ಒಳಗಾಗಿದ್ದರು ರಾಮಮನೋಹರ ಲೋಹಿಯಾ ಅವರು 1951ರ ಜೂನ್ 13ರಂದು ಜಂಬಗಾರು ರೈಲು ನಿಲ್ದಾಣದಲ್ಲಿ ‘ಉಳುವವನೇ ಹೊಲದೊಡೆಯ’ ಕಾಗೋಡು ಸತ್ಯಾಗ್ರಹದಲ್ಲಿ ಭಾಗವಹಿಸಿ ಬಂಧನಕ್ಕೆ ಒಳಗಾಗಿದ್ದರು. ಈ ಹೋರಾಟಕ್ಕೆ 2024ರ ಜೂ.13ಕ್ಕೆ … Read more

ಗಾಂಧಿ ಬಜಾರ್‌ ಚಿನ್ನದ ಅಂಗಡಿಯಲ್ಲಿ ನಕಲಿ ಬಂಗಾರ ಇಟ್ಟು ಅಸಲಿ ಆಭರಣ ಕದ್ದವನು ಅರೆಸ್ಟ್‌, ಮಹಿಳೆಗೆ ಶೋಧ

090923 One Arrest by Doddapete Police in Ornament theft at Gandhi Bazaar

SHIVAMOGGA LIVE NEWS | 9 SEPTEMBER 2023 SHIMOGA : ಚಿನ್ನದ ಅಂಗಡಿಯಲ್ಲಿ ನಕಲಿ ಬಂಗಾರ (Fake Gold) ಇಟ್ಟು ಅಸಲಿ ಬಂಗಾರ ಕಳವು ಮಾಡಿದ್ದ ಆರೋಪಿಯನ್ನು ದೊಡ್ಡಪೇಟೆ ಪೊಲೀಸರು ವರ್ಷದ ಬಳಿಕ ಬಂಧಿಸಿದ್ದಾರೆ. ಮತ್ತೊಬ್ಬ ಅರೋಪಿ ತಲೆಮರೆಸಿಕೊಂಡಿದ್ದಾಳೆ. ಕೊಪ್ಪಳದ ಮೆಹಬೂಬ್ (25) ಬಂಧಿತ ಆರೋಪಿ, ಕಳೆದ ವರ್ಷ ಗಾಂಧಿಬಜಾರ್‌ನ ಬಸವೇಶ್ವರ ದೇವಸ್ಥಾನದ ಬಳಿಯಿರುವ ಬಂಗಾರದ ಅಂಗಡಿಗೆ ಬುರ್ಖಾ ಧರಿಸಿದ್ದ ಮಹಿಳೆ ಜತೆ ಬಂದು 11,500 ರೂ. ಮೌಲ್ಯದ ಚಿನ್ನಾಭರಣ ಖರೀದಿಸಿ ಹೋಗಿದ್ದ. ಮತ್ತೊಮ್ಮೆ ಬಂದ … Read more

ಭದ್ರಾ ನಾಲೆ ದಂಡೆ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಕರಕುಚ್ಚಿಯ ಇಬ್ಬರು ಅರೆಸ್ಟ್‌

090923 dogs at hunasodu village in Shimoga taluk

SHIVAMOGGA LIVE NEWS | 9 SEPTEMBER 2023 SHIMOGA : ನಾಟಿ ಕೋಳಿಗಳ ಮೇಲೆ ಬೀದಿ ನಾಯಿಗಳು (Stray Dogs) ದಾಳಿ ಮಾಡಿದ್ದು 12 ಕೋಳಿಗಳನ್ನು ಅರ್ಧಂಬರ್ಧ ತಿಂದು ಬಿಟ್ಟಿವೆ. ಈ ಸಂಬಂಧ ಅಬ್ಬಲಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗೆ ದೂರು ನೀಡಲಾಗಿದೆ. ಶಿವಮೊಗ್ಗ ತಾಲೂಕು ಹುಣಸೋಡು ಗ್ರಾಮದ ನಿಂಗಮ್ಮ ಎಂಬುವವರು 30 ನಾಟಿ ಕೋಳಿಗಳನ್ನು ಸಾಕಿದ್ದರು. ಎಂದಿನಂತೆ ಮನೆ ಹಿತ್ತಲಿನಲ್ಲಿ ಮೇಯಲು ಬಿಟ್ಟಿದ್ದು ಶುಕ್ರವಾರ ಮಧ್ಯಾಹ್ನ ನಾಯಿಗಳ ದಾಳಿ ಮಾಡಿ ನಾಟಿ ಕೋಳಿಗಳನ್ನು … Read more