ಅಬ್ಬಲಗೆರೆ ಸಮೀಪ ಕಾರು – ಬೈಕ್‌ ಡಿಕ್ಕಿ, ಕೊಮ್ಮನಾಳು ಯುವಕನಿಗೆ ಗಂಭೀರ ಗಾಯ

Bike-and-car-mishap-near-abbalagere-in-shimoga-savalanga-road.

ಶಿವಮೊಗ್ಗ: ಕಾರು (Car) – ಬೈಕ್‌ ಡಿಕ್ಕಿಯಾಗಿ ಓರ್ವ ಯುವಕ ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಅಬ್ಬಲಗೆರೆ ಸಮೀಪ ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದೆ. ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಗ್ರಾಮದ ಚಂದನ್ (26) ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ಹಾಗೂ ಕಾರು ಭಾಗಶಃ ಜಖಂಗೊಂಡಿದೆ. ಕೂಡಲೆ ಸ್ಥಳೀಯರು ಮತ್ತು ದಾರಿಯಲ್ಲಿ ಸಾಗುತ್ತಿದ್ದವರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದರು. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಅಧಿಕಾರಿ ಮನೆಯ ಕಾಂಪೌಂಡ್‌ನಲ್ಲಿ ಶ್ರೀಗಂಧದ … Read more

ಸವಳಂಗ ರಸ್ತೆಯಲ್ಲಿ ಭೀಕರ ಅಪಘಾತ, ಡಿವೈಡರ್‌ ಹಾರಿ ಬಂತು ಇನ್ನೋವಾ, ಲಾರಿಗೆ ಡಿಕ್ಕಿ

Canter-and-innova-car-mishap-near-abbalagere

ಶಿವಮೊಗ್ಗ: ಡಿವೈಡರ್‌ ಹಾರಿ ಬಂದ ಇನ್ನೋವಾ (Innova) ಕಾರು ಎದುರಿನಿಂದ ಬರುತ್ತಿದ್ದ ಕ್ಯಾಂಟರ್‌ ಲಾರಿಗೆ ಡಿಕ್ಕಿಯಾಗಿದೆ. ಭೀಕರ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಸವಳಂಗ ರಸ್ತೆಯ ಮತ್ತೋಡು ಮತ್ತು ಅಬ್ಬಲಗೆರೆಯ ಮಧ್ಯೆ ಸಂಜೆ ಘಟನೆ ಸಂಭವಿಸಿದೆ. ಶಿಕಾರಿಪುರ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಡಿವೈಡರ್‌ ಹಾರಿ ಬಂದಿದೆ. ರಸ್ತೆಯ ಮತ್ತೊಂದು ಬದಿಯಲ್ಲಿ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಕ್ಯಾಂಟರ್‌ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿ … Read more

ರಾತ್ರೋರಾತ್ರಿ ಹಾಡೋನಹಳ್ಳಿಯಲ್ಲಿ ಅಧಿಕಾರಿಗಳ ದಾಳಿ, ಅಬ್ಬಲಗೆರೆ ಬಳಿ ಟಿಪ್ಪರ್‌ ಸೀಜ್‌, ಕಾರಣವೇನು?

mines-and-geology-department-officers-raid-at-hadonahalli

SHIVAMOGGA LIVE NEWS, 5 FEBRUARY 2025 ಶಿವಮೊಗ್ಗ : ಅಕ್ರಮವಾಗಿ ಮರಳು (Sand) ಸಾಗಣೆ ಮಾಡುತ್ತಿದ್ದ ಆರೋಪದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕಳೆದ ರಾತ್ರಿ ದಿಢೀರ್‌ ದಾಳಿ ನಡೆಸಿದ್ದಾರೆ. ಈ ಸಂದರ್ಭ ಅಧಿಕಾರಿಗಳನ್ನು ಕಂಡು ಮರಳು ಸಾಗಿಸುತ್ತಿದ್ದ ಟ್ರಾಕ್ಟರ್‌ ನಿಲ್ಲಿಸದೆ ಪರಾರಿಯಾಗಿದ್ದಾನೆ. ಆದರೆ ಜೆಸಿಬಿಯೊಂದು ಸಿಕ್ಕಿಬಿದ್ದಿದೆ. ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಿಸುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಗಣಿ … Read more

ಅಬ್ಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್‌ 2 ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

Lokayuktha-Raid-General-Image

SHIVAMOGGA LIVE NEWS | 24 APRIL 2024 SHIMOGA : ಜಮೀನಿನ ಖಾತೆ ಮಾಡಿಕೊಡಲು 15 ಸಾವಿರ ರೂ. ಲಂಚ ಪಡೆಯುತ್ತಿದ್ದ ಅಬ್ಬಲಗೆರೆ ಗ್ರಾಮ ಪಂಚಾಯಿತಿಯ ಗ್ರೇಡ್‌ 2 ಕಾರ್ಯದರ್ಶಿ ಯೋಗೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಣವನ್ನು ವಶಕ್ಕೆ ಪಡೆದು ಯೋಗೇಶ್‌ನನ್ನು ಬಂಧಿಸಲಾಗಿದೆ. ಲಂಚಕ್ಕೆ ಬೇಡಿಕೆ ಇಟ್ಟಿದ್ದೇಕೆ? ನವುಲೆಯ ಯಶವಂತ ಎಂಬುವವರು ಚನ್ನಮುಂಭಾಪುರದಲ್ಲಿರುವ ಜಮೀನಿಗೆ ಖಾತೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು. ಇದಕ್ಕೆ 15 ಸಾವಿರ ರೂ. ಲಂಚದ ಹಣಕ್ಕೆ ಯೋಗೇಶ್‌ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. … Read more

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಬಂಧನಕ್ಕೆ ನ್ಯಾಯಾಲಯ ಆದೇಶ, ಕಾರಣವೇನು?

zilla-pachayath-shivamogga

SHIVAMOGGA LIVE NEWS | 7 JANUARY 2024 SHIMOGA : ವರದಿ ಸಲ್ಲಿಸಲು ವಿಳಂಬ ಮಾಡಿದ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಸಂಬಂಧ ವಿಶೇಷ ನ್ಯಾಯಾಲಯದ ರಿಜಿಸ್ಟ್ರಾರ್‌ ಜಿಲ್ಲಾ ಪೊಲೀಸ್‌ ಇಲಾಖೆಗೆ ಪತ್ರ ಕಳುಹಿಸಿದ್ದಾರೆ. ಯಾವ ವರದಿ? ಏನಿದು ಪ್ರಕರಣ? ಅಬ್ಬಲಗೆರೆ ಗ್ರಾಮದಲ್ಲಿ ಅಕ್ರಮವಾಗಿ ಕೆರೆ ಹೂಳು ತೆಗೆದು ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಿದ ಆರೋಪ ಕೇಳಿ ಬಂದಿತ್ತು. … Read more

ಅಬ್ಬಲಗೆರೆ ಸಮೀಪ ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು

ACCIDENT-NEWS-GENERAL-IMAGE.

SHIVAMOGGA LIVE NEWS | 4 NOVEMBER 2023 SHIMOGA : ಚಲಿಸುತ್ತಿದ್ದ ಬೈಕ್‌ಗೆ (BIKE) ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು ಓರ್ವ ಸವಾರನಿಗೆ ಗಾಯವಾಗಿದೆ. ಚಿಕಿತ್ಸೆ ವೆಚ್ಚ ಭರಿಸುವ ಭರವಸೆ ನೀಡಿದ್ದ ಕಾರು ಚಾಲಕ ಕೊನೆಗೆ ಮಾತು ತಪ್ಪಿದ್ದಾನೆ ಎಂದು ಆರೋಪಿಸಿ ಗಾಯಾಳು ದೂರು ನೀಡಿದ್ದಾರೆ. ಅಬ್ಬಲಗೆರೆ ಸಮೀಪದ ಕೆರೆ ಬಳಿ ಘಟನೆ ಸಂಭವಿಸಿದೆ. ಆಶ್ರಯ ಬಡಾವಣೆಯ ಮಂಜಪ್ಪ ಎಂಬುವವರು ಬೀರನಕೆರೆಯಿಂದ ಶಿವಮೊಗ್ಗ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದು ಬೈಕ್‌ ಡಿಕ್ಕಿ … Read more

ಸವಳಂಗ ರಸ್ತೆಯಲ್ಲಿ ಬೈಕುಗಳು ಮುಖಾಮುಖಿ ಡಿಕ್ಕಿ, ಗಂಭೀರ ಗಾಯ, ಎಸ್ಕಾರ್ಟ್ ಸಿಬ್ಬಂದಿ ಕರ್ತವ್ಯ ಪ್ರಜ್ಞೆ

280223 Bike Accident at Shimoga Abbalagere

SHIVAMOGGA LIVE NEWS | 28 FEBRUARY 2023 SHIMOGA : ಅಬ್ಬಲಗೆರೆ ಸಮೀಪ ಬೈಕುಗಳು ಮುಖಾಮುಖಿ ಡಿಕ್ಕಿಯಾಗಿ ಸವಾರರು ಗಂಭೀರ ಗಾಯಗೊಂಡಿದ್ದಾರೆ. ಎಸ್ಕಾರ್ಟ್ ವಾಹನದ (Police Escort) ಪೊಲೀಸ್ ಸಿಬ್ಬಂದಿಯ ಕರ್ತವ್ಯ ಪ್ರಜ್ಞೆಯಿಂದಾಗಿ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಗದೀಶ್ ನಾಯ್ಕ್ ಮತ್ತು ಮಂಜುನಾಥ್ ಗಾಯಾಳುಗಳು. ಸವಳಂಗ ರಸ್ತೆಯಲ್ಲಿ ಅಬ್ಬಲಗೆರೆ ಸಮೀಪ ಬೈಕುಗಳು ಡಿಕ್ಕಿಯಾಗಿ ಇಬ್ಬರು ಗಾಯಗೊಂಡು, ರಸ್ತೆ ಮೇಲೆ ಬಿದ್ದಿದ್ದರು. ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜಗದೀಶ್ … Read more

ನವುಲೆಯಲ್ಲಿ ಡಿವೈಡರ್ ಬಳಿ ನಿಂತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ ಬೈಕ್

crime name image

SHIMOGA | ರಸ್ತೆಯ ಒಂದು ಬದಿಯಿಂದ (DIVIDER) ಮತ್ತೊಂದು ಬದಿಗೆ ಸ್ಕೂಟಿಯಲ್ಲಿ ತೆರಳಲು ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸ್ಕೂಟಿ ಸವಾರನಿಗೆ ಗಾಯವಾಗಿದ್ದು, ವಾಹನಕ್ಕೂ ಹಾನಿಯಾಗಿದೆ. ನವುಲೆಯ ಸರ್ಜಿ ಕನ್ವೆಷನ್ ಹಾಲ್ ಮುಂಭಾಗ ಘಟನೆ ಸಂಭವಿಸಿದೆ. ಮುರುಗ್ಯಪ್ಪ ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಬ್ಬಲಗೆರೆ ಕಡೆಯಿಂದ ಸ್ಕೂಟಿಯಲ್ಲಿ ಬಂದಿದ್ದ ಮುರುಗ್ಯಪ್ಪ ಅವರು ಸರ್ಜಿ ಕನ್ವೆಷನ್ ಹಾಲ್ ಬಳಿ ವೆಲ್ಡಿಂಗ್ ಶಾಪ್ ಗೆ ತೆರಳಬೇಕಿತ್ತು. ಸ್ಕೂಟಿಯ ಇಂಡಿಕೇಟರ್ ಹಾಕಿಕೊಂಡು ಡಿವೈಡರ್ (DIVIDER) … Read more

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಇಬ್ಬರು ಸವಾರರು ಸ್ಥಳದಲ್ಲೇ ಸಾವು

Accident-at-Abbalagere-Village

ಶಿವಮೊಗ್ಗ| ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ (LORRY) ಬೈಕ್ (BIKE) ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಅಬ್ಬಲಗೆರೆ ಬಳಿ ಇಂದು ಬೆಳಗಿನ ಜಾವ ಘಟನೆ (ACCIDENT) ಸಂಭವಿಸಿದೆ. ನ್ಯಾಮತಿಯ ರಾಮಕುಮಾರ್ (22) ಮತ್ತು ಮಲ್ಲಿಕಾರ್ಜುನ (30) ಎಂಬುವವರು ಮೃತರು. ಅಬ್ಬಲಗೆರೆ (ABBALAGERE) ಬಳಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಇವರು ಸಾಗುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಮಕುಮಾರ್ ಮತ್ತು ಮಲ್ಲಿಕಾರ್ಜುನ ಅವರು ಸವಳಂಗ ರಸ್ತೆ ಮೂಲಕ ಕಾರ್ಖಾನೆಯ ಕೆಲಸಕ್ಕೆ … Read more

ಗ್ರಾಮ ಲೆಕ್ಕಾಧಿಕಾರಿಯನ್ನು ತಳ್ಳಾಡಿ, ಅವಾಚ್ಯವಾಗಿ ನಿಂದಿಸಿದ ಆರೋಪ, ಮೂವರ ವಿರುದ್ಧ ಕೇಸ್

Shimoga Map Graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಜನವರಿ 2022 ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ತೆಗೆಯುತ್ತಿರುವ ಮಾಹಿತಿ ಹಿನ್ನೆಲೆ, ಪರಿಶೀಲನೆಗೆ ತೆರಳಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ತಳ್ಳಾಡಿ, ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಬಸವನಗಂಗೂರು ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿ ಯೋಗೇಶ್ ನಾಯ್ಕ್ ಅವರು ಪರಿಶೀಲನೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಬಸವನಗಂಗೂರು ಗ್ರಾಮದ ಜಮೀನು ಒಂದರಲ್ಲಿ ಅಕ್ರಮವಾಗಿ ಮಣ್ಣು ತೆಗೆಯಲಾಗುತ್ತಿತ್ತು. ಈ ಕುರಿತು ಗ್ರಾಮ … Read more