ರಾತ್ರೋರಾತ್ರಿ ಅಡಿಕೆ ಮರದಿಂದಲೇ ಕ್ವಿಂಟಾಲ್‌ಗಟ್ಟಲೆ ಅಡಿಕೆ ಕಳವು

Areca-Farm-Adike-tota-in-Shimoga

ಆನಂದಪುರಂ: ಸಮೀಪದ ಗೌತಮಪುರದ ನಿವೃತ್ತ ಶಿಕ್ಷಕ ಮಂಜಪ್ಪ ಎಂಬುವವರ ಅಡಿಕೆ ತೋಟದಲ್ಲಿ ಮರದಿಂದ ಗೊನೆಗಳ ಕಳವು ಮಾಡಲಾಗಿದೆ. ಕೊಯ್ಲಿನ ಹಂತದಲ್ಲಿದ್ದ ಐದು ಕ್ವಿಂಟಾಲ್‌ನಷ್ಟು ಅಡಿಕೆ ಕಳುವಾಗಿದೆ ಎಂದು ತೋಟದ ಮಾಲೀಕ ಮಂಜಪ್ಪ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿನಿಮಾ ನಿರ್ಮಾಣಕ್ಕೆ ಕಂಠೀರವ ಸ್ಟುಡಿಯೊ, ಏನಂದ್ರು ಅಧ್ಯಕ್ಷರು?

ಬೆಂಕಿ ಅನಾಹುತ, ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲು

House-incident-at-anandapura-in-Sagara-taluk

ಆನಂದಪುರಂ: ಸಮೀಪದ ನ್ಯಾವಟ್ಟಿ ಗ್ರಾಮದ ಜಯಮ್ಮ ಎಂಬುವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಭಾಗಶಃ ಸುಟ್ಟು ಹೋದ ಘಟನೆ ನಡೆದಿದೆ. ಮನೆಯ (House) ಒಲೆಗೆ ಹಾಕಿದ್ದ ಬೆಂಕಿ ತಗುಲಿ ಈ ಘಟನೆ ನಡೆದಿದ್ದು ಸುಮಾರು ₹2 ಲಕ್ಷಕ್ಕು ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಶಾಸಕರ ಆಪ್ತ ಸಹಾಯಕ ಶ್ರೀನಿವಾಸ್ ಎಂ.ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಉಮೇಶ್, ರಮಾನಂದ್, ರಹಮತುಲ್ಲಾ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಠಾಣೆ ಮೆಟ್ಟಿಲೇರಿತು ₹150 ಗಲಾಟೆ

ಆನಂದಪುರ ಬಳಿ ಕೆರೆಗೆ ಹಾರಿ ವೃದ್ಧ ಆತ್ಮಹತ್ಯೆ

281123-Anandapura-Police-Station-Board.webp

ಆನಂದಪುರಂ: ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಂಗಳವಾಡಿ ಗ್ರಾಮದ ನಾರಾಯಣಪ್ಪ (73) ಗಿಳಾಲ ಗುಂಡಿ ಗ್ರಾಮದ ಅಮ್ಮನ ಕೆರೆಗೆ (Lake) ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 2 ವರ್ಷದ ಹಿಂದೆ ಪತ್ನಿ ನಿಧನರಾದ ನಂತರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇವರಿಗೆ ಪುತ್ರ, ಪುತ್ರಿ ಇದ್ದಾರೆ. ಆನಂದಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಅಂಗನವಾಡಿಯಲ್ಲಿ ಎರಡು ಟ್ರೇ ಮೊಟ್ಟೆ ಬೆಯಿಸಿಕೊಂಡು ಪಾನಗೋಷ್ಠಿ ಮಾಡಿದ ಕುಡುಕರು

ಸಾಲ ಬಾಧೆ, ಸಾಗರದಲ್ಲಿ ವಿಷ ಸೇವಿಸಿದ್ದ ರೈತ, ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೊನೆಯುಸಿರು

111025-Gamappa-channasheetikoppa.webp

ಸಾಗರ: ತಾಲೂಕಿನ ಆನಂದಪುರ ಸಮೀಪದ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು (Farmer) ಸಾಲದ ಸಂಕಷ್ಟದಿಂದಾಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಮಪ್ಪ (56) ಎಂದು ಗುರುತಿಸಲಾಗಿದೆ. ಗಾಮಪ್ಪ, ಅಕ್ಟೋಬರ್ 9 ರಂದು ಸಂಜೆ ವಿಷ ಸೇವಿಸಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರೈತ ಗಾಮಪ್ಪ ಅವರು ಬ್ಯಾಂಕ್‌ಗಳು ಮತ್ತು ಖಾಸಗಿಯಾಗಿ ಕೈ ಸಾಲ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ … Read more

ಆನಂದಪುರ ಠಾಣೆ ಪೊಲೀಸರ ಕಾರ್ಯಾಚರಣೆ, ಗೋವು ಸಾಗಣೆ ಮಾಡುತ್ತಿದ್ದ ಶಿಕಾರಿಪುರದ ಇಬ್ಬರ ಬಂಧನ

281123-Anandapura-Police-Station-Board.webp

ತ್ಯಾಗರ್ತಿ: ಜಾನುವಾರು (Cow) ಅಕ್ರಮ ಸಾಗಣೆ ಮಾಡುತ್ತಿದ್ದ ವಾಹನವನ್ನು ಗ್ರಾಮಸ್ಥರ ಸಹಕಾರದೊಂದಿಗೆ ಆನಂದಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ ತಾಲೂಕಿನ ತ್ಯಾಗರ್ತಿ ಮಾರಿಕಾಂಬಾ ವೃತ್ತದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಪರವಾನಗಿ ಇಲ್ಲದೆ 2 ಎಮ್ಮೆ, 1 ಕೋಣ, 2 ಹೋರಿಗಳನ್ನು ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ತುಂಬಿ ಸಾಗಿಸುತ್ತಿದ್ದರು. ಶಿಕಾರಿಪುರ ತಾಲೂಕು ಬಿಳಕಿ ಗ್ರಾಮದ ಮೆಹಬೂಬ್ ಬಾಷಾ ಹಾಗೂ ಮಕ್ಬೂಲ್ ಸಾಬ್ ಎಂಬುವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಇದನ್ನೂ ಓದಿ » ಅಡಿಕೆ ಬೆಳೆಯಲ್ಲಿ ಅಂತರ, ಮಿಶ್ರ ಬೆಳೆ … Read more

ಗಣಪತಿ ಹಬ್ಬಕ್ಕೆ ತವರಿಗೆ ಬಂದ ನವ ವಿವಾಹಿತೆ ಮನೆಯ ಜಗುಲಿಯಲ್ಲಿ ನೇಣಿಗೆ ಶರಣು

Married woman Ranjitha-anandapura-case -

ಸಾಗರ: ಗಣಪತಿ ಹಬ್ಬಕ್ಕೆ ತವರಿಗೆ ಬಂದಿದ್ದ ಗೃಹಿಣಿ (new married) ಮನೆಯ ಜಗುಲಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ರಂಜಿತಾ (28) ನೇಣಿಗೆ ಶರಣಾದವರು. ಸೆ.1ರಂದು ರಂಜಿತಾ ಅವರ ತಾಯಿ ಅಡುಗೆ ಕೆಲಸಕ್ಕೆ ತೆರಳಿದ್ದರು. ಗಣಪತಿ ನೋಡಿಕೊಂಡು ಸಹೋದರ ಮನೆಗೆ ಮರಳಿದಾಗ ಬಾಗಿಲು ಹಾಕಿತ್ತು. ಹಿಂದಿನ ಬಾಗಿಲಿನಿಂದ ಮನೆಯೊಳಗೆ ಹೋದಾಗ ಜಗುಲಿಯಲ್ಲಿ ರಂಜಿತಾ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. 9 ವರ್ಷದ ಹಿಂದೆ ಆನಂದಪುರದ ಮುರುಘಾಮಠ ನಿವಾಸಿಯೊಬ್ಬರ … Read more

ಆನಂದಪುರ ಬಳಿ KSRTC ಬಸ್‌, ಲಾರಿ ಮುಖಾಮುಖಿ ಡಿಕ್ಕಿ, ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್

KSRTC-bus-and-Truck-mishap-near-anandapura-in-sagara.

ಸಾಗರ: ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು (Head on) ಹಲವರು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಶಾಲಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದಿದ್ದಾರೆ.‌ ಇದನ್ನೂ ಓದಿ » ಹುಲಿಕಲ್‌, ಮಾಸ್ತಿಕಟ್ಟೆಯಲ್ಲಿ ಮಳೆಯೋ ಮಳೆ, ಹೊಸನಗರ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ? ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಬಳಿ ಬೆಳಗ್ಗೆ ಘಟನೆ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ಸು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತಿತ್ತು. ಟ್ರಕ್‌ ಆನಂದಪುರದಿಂದ ಸಾಗರ ಕಡೆಗೆ ಹೋಗುತಿತ್ತು. ಅಪಘಾತದಲ್ಲಿ ಹಲವರಿಗೆ ಗಾಯವಾಗಿದೆ. ಕೂಡಲೆ ಅವರನ್ನು ಆನಂದಪುರದ ಸರ್ಕಾರಿ … Read more

ಆನಂದಪುರ ಹೋಬಳಿ, ಗದ್ದೆಯಲ್ಲಿ ನಾಟಿ ಮಾಡುವಾಗ ರೈತ ಸಾವು

180725 Farmer slipped at farm near anandapura in sagara

ಸಾಗರ: ಆನಂದಪುರ ಹೋಬಳಿಯ ಕಣ್ಣೂರು ಗ್ರಾಮದಲ್ಲಿ ಗದ್ದೆಯಲ್ಲಿ ನಾಟಿ ಮಾಡುವಾಗ ಕುಸಿದು ಬಿದ್ದು ರೈತರೊಬ್ಬರು (Farmer) ಮೃತಪಟ್ಟಿದ್ದಾರೆ. ಕಣ್ಣೂರು ಗ್ರಾಮದ ಸತ್ಯನಾರಾಯಣ ಕೈಸೋಡಿ (50) ಮೃತರು. ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಸತ್ಯನಾರಾಯಣ ಅವರು ನಾಟಿ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸತ್ಯನಾರಾಯಣ ಅವರು ಹೃಯದಾಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ ಕೂಡಲೇ ಅವರನ್ನು ಸಮೀಪದ … Read more

ತೀವ್ರ ಅನಾರೋಗ್ಯ, ಆನಂದಪುರ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

ill-health-sslc-student-breathed-last.

ತ್ಯಾಗರ್ತಿ: ಆನಂದಪುರದ ಕೆಪಿಎಸ್ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ (Student) ಐಶ್ವರ್ಯ (15) ಅನಾರೋಗ್ಯದ ಕಾರಣ ಕೊನೆಯುಸಿರೆಳೆದಿದ್ದಾಳೆ. ಇದನ್ನೂ ಓದಿ » ಅಡಿಕೆ ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ವ್ಯಕ್ತಿ ಸಾವು ಕಳೆದ 20 ದಿನಗಳಿಂದ ಐಶ್ವರ್ಯ ಅನಾರೋಗ್ಯದಿಂದ ಬಳಲತ್ತಿದ್ದಳು. ಎರಡು ದಿನದ ಹಿಂದೆ ಆಕೆಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೊನೆಯುಸಿರೆಳೆದಿದ್ದಾಳೆ. ಐಶ್ವರ್ಯ ಮಲಂದೂರು ಗ್ರಾಮದ ಬಡ ಕುಟುಂಬದ ಹಿನ್ನೆಲೆಯ ಹುಡುಗಿ. ಬಾಲಕಿ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾಳೆ.

ಖಾಸಗಿ ಬಸ್‌, ಕಾರು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು

Prakash-Bus-and-Car-mishap-at-anandapura

ಸಾಗರ: ಖಾಸಗಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು (Mishap) ಇಬ್ಬರು ಗಾಯಗೊಂಡಿದ್ದಾರೆ. ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಇದನ್ನೂ ಓದಿ » ಮೂರು ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಹೋರಾಟ, ಸರ್ಕಾರಕ್ಕೆ ಒಕ್ಕೂಟದ ಎಚ್ಚರಿಕೆ ಕೆರೆ ಏರಿ ಮೇಲೆ ಅಪಘಾತ ಸಂಭವಿಸಿದ್ದು ಕಾರಿನ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶರತ್‌ ಮತ್ತು ಭರತ್‌ ಎಂಬುವವರಿಗೆ ಗಾಯವಾಗಿದೆ. ಬಸ್ಸಿನ ಮುಂಭಾಗಕ್ಕು ಹಾನಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಕೆರೆಯ ತಡೆಗೋಡೆ ಮೇಲೆ ನಿಂತಿದೆ. ಬಸ್ಸು ರಸ್ತೆಯ ಬದಿಗೆ ಸರಿದಿದೆ. … Read more