ಕೆಎಸ್ಆರ್ಟಿಸಿ ಅಶ್ವಮೇಧ ಬಸ್ಗೆ ಮಿನಿಸ್ಟರ್ ಚಾಲನೆ, ಯಾವ ಮಾರ್ಗ?
ಸೊರಬ : ಸಾಗರ-ಹಾನಗಲ್ ಮಾರ್ಗದ ಸರ್ಕಾರಿ ಬಸ್ (KSRTC) ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶನಿವಾರ ಚಾಲನೆ ನೀಡಿದರು. ಪಟ್ಟಣದ ಕೆಎಸ್ಆರ್ಟಿಸಿ ಘಟಕದಿಂದ ಅಶ್ವಮೇಧ ಬಸ್ ಸೌಲಭ್ಯಕ್ಕೆ ಅವರು ಹಸಿರು ನಿಶಾನೆ ತೋರಿದರು. ಈ ಬಸ್ ಸಾಗರ-ಸೊರಬ- ಜಡೆ ಮಾರ್ಗವಾಗಿ ಹಾನಗಲ್ ತಲುಪಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು. ಇದನ್ನೂ ಓದಿ » ಕಾರಿನಲ್ಲಿ ಬಂದು ಡಿವೈಡರ್ ಮೇಲಿದ್ದ ಟ್ರಾಫಿಕ್ ಪೊಲೀಸ್ ರಿಫ್ಲೆಕ್ಟರ್ ಕಟೌಟ್ ಕದ್ದೊಯ್ದ ದುಷ್ಕರ್ಮಿಗಳು