ಆಯನೂರು ಸಮೀಪ ಅಪಘಾತ, ಒಬ್ಬ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ
SHIMOGA | ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. (AYANUR ACCIDENT) ಆಯನೂರು ಸಮೀಪದ ಕದಂಬ ಹೊಟೇಲ್ ಬಳಿ ರಾತ್ರಿ ಘಟನೆ ಸಂಭವಿಸಿದೆ. ಆಯನೂರಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಬೈಕ್ ಮತ್ತು ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದೆ. (AYANUR ACCIDENT) ಬೈಕಿನಲ್ಲಿ ಇಬ್ಬರು ಯುವಕರು ಸಂಚರಿಸುತ್ತಿದ್ದರು. ಈ ಪೈಕಿ ಓರ್ವ ಸವಾನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. … Read more