ಭದ್ರಾವತಿ ಯುವಕ ಈಗ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ
ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಭದ್ರಾವತಿಯ ಯುವಕ ರಾಷ್ಟ್ರೀಯ ಪಕ್ಷವೊಂದರ ಉನ್ನತ ಹುದ್ದೆಗೇರಿದ್ದಾರೆ. ಬಿ.ವಿ.ಶ್ರೀನಿವಾಸ್ ಅವರನ್ನು ರಾಷ್ಟ್ರೀಯ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈವರೆಗೂ ಹಂಗಾಮಿ ಅಧ್ಯಕ್ಷರಾಗಿದ್ದ ಶ್ರೀನಿವಾಸ್ ಅವರನ್ನು ಪೂರ್ಣಾವಧಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬಿ.ವಿ.ಶ್ರೀನಿವಾಸ್ ಅವರು ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದರು. ಜುಲೈ ತಿಂಗಳಲ್ಲಿ ಶ್ರೀನಿವಾಸ್ ಅವರಿಗೆ ಹಂಗಾಮಿ ಅಧ್ಯಕ್ಷ ಜವಾಬ್ದಾರಿ ನೀಡಲಾಗಿತ್ತು. ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು, ಉದ್ಯೋಗ ಸೃಷ್ಟಿಸದ ಕ್ರಮ ಖಂಡಿಸಿ ನಿರಂತರ ಪ್ರತಿಭಟನೆಗಳನ್ನು ನಡೆಸಿದ್ದರು. … Read more