BREAKING NEWS | ಶಿವಮೊಗ್ಗ ನಗರದ ಶಾಲೆ, ಕಾಲೇಜಿಗೆ ಮತ್ತೊಂದು ದಿನ ರಜೆ

breaking news graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಮತ್ತು ಆನಂತರ ಪ್ರಕ್ಷುಬ್ದ ವಾತಾವರಣದ ಹಿನ್ನೆಲೆ, ಶಿವಮೊಗ್ಗ ನಗರದ ಶಾಲೆ, ಕಾಲೇಜಿಗೆ ಮತ್ತೊಂದು ದಿನ ರಜೆ ಘೋಷಣೆ ಮಾಡಲಾಗಿದೆ. ಫೆ.22ರಂದು ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ | ಹರ್ಷ ಹತ್ಯೆ ಪ್ರಕರಣ, ಮೂವರ ಬಂಧನ, ವಿಚಾರಣೆ ಚುರುಕು

ಶಿವಮೊಗ್ಗ ನಗರಕ್ಕೆ RAF ಪಡೆ, ಎಲ್ಲೆಲ್ಲೂ ಬಂದೋಬಸ್ತ್

Shimoga city RAF unit visit shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ರಾಪಿಡ್ ಆಕ್ಷನ್ ಫೋರ್ಸ್ ಕೂಡ ನಗರಕ್ಕೆ ಆಗಮಿಸಿದೆ. ಶಿವಮೊಗ್ಗ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನಗರಕ್ಕೆ ಈಗಾಗಲೇ ರಾಪಿಡ್ ಆಕ್ಷನ್ ಫೋರ್ಸ್ (RAF) ತುಕಡಿ ಆಗಮಿಸಿದೆ. ಪ್ರಮುಖ ಸ್ಥಳದಲ್ಲಿ RAF ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ | ಶಿವಮೊಗ್ಗದಲ್ಲಿ ರಾತ್ರಿ ಬೈಕ್ … Read more

‘ಕೊಲೆ ಆರೋಪಿಗಳ ಸುಳಿವು ಪತ್ತೆ, ಸದ್ಯದಲ್ಲೇ ಅರೆಸ್ಟ್’

Aaraga Jnanendra going in car

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಕಳೆದ ರಾತ್ರಿ ನಡೆದ ಹರ್ಷ ಹತ್ಯೆ ಪ್ರಕರಣ ಸಂಬಂಧ ಸುಳಿವು ಸಿಕ್ಕಿದೆ. ಸದ್ಯದಲ್ಲೆ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ನಡು ಬೀದಿಯಲ್ಲಿ ಒಬ್ಬನ ಕೊಲೆ ಮಾಡಿರುವುದು ನೋವಿನ ಸಂಗತಿ. ಹತ್ಯೆ ಮಾಡಿದವರು ಯಾರು ಅನ್ನುವುದರ ಕುರಿತು ಸುಳಿವು ಸಿಕ್ಕಿದೆ. ಪೊಲೀಸರು ಸದ್ಯದಲ್ಲೇ ಆರೋಪಿಗಳನ್ನು ಬಂಧಿಸಲಿದ್ದಾರೆ ಎಂದು ತಿಳಿಸಿದರು. ಪ್ರಕರಣ … Read more

ಗೃಹ ಸಚಿವರ ತವರು ಕ್ಷೇತ್ರದಲ್ಲೇ ಹಿಂದೂ ಪರ ಸಂಘಟನೆಗಳಿಂದ ಪೊಲೀಸರ ವಿರುದ್ಧ ಆಕ್ರೋಶ, ರಸ್ತೆ ತಡೆ, ಯಾರೆಲ್ಲ ಏನೇನು ಹೇಳಿದರು?

021221 Thithahalli Bajaranagadal Protest over cow theft

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 2 ಡಿಸೆಂಬರ್ 2021 ಗೋವು ಕಳ್ಳರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತೀರ್ಥಹಳ್ಳಿಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ತೀರ್ಥಹಳ್ಳಿ ತಾಲೂಕು ಕಚೇರಿಯ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಪೊಲೀಸರು ಕಟ್ಟುನಿಟ್ಟು ಕ್ರಮ ಕೈಗೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಗಮಿಸಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರಿಗೂ ದೂರು ತಿಳಿಸಿದರು. ಗೃಹ ಸಚಿವರ ತವರಲ್ಲೇ … Read more

ಕ್ರೈಸ್ತ ಪ್ರಾರ್ಥನಾ ಮಂದಿರದಿಂದ ಶಬ್ದ ಮಾಲಿನ್ಯ, ಪೊಲೀಸ್ ಠಾಣೆ ಮಟ್ಟಿಲೇರಿದ ಪ್ರಕರಣ

221121 Sagara Complaint Against Christain church

ಶಿವಮೊಗ್ಗ ಲೈವ್.ಕಾಂ | SAGARA NEWS | 22 ನವೆಂಬರ್ 2021 ಕ್ರೈಸ್ತ ಪ್ರಾರ್ಥನಾ ಮಂದಿರವೊಂದರಿಂದ ಶಬ್ದ ಮಾಲಿನ್ಯ ಉಂಟಾಗುತ್ತಿದೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಮತ್ತು ಶಾಂತಿನಗರದ ನಿವಾಸಿಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ವರದಹಳ್ಳಿ ರಸ್ತೆಯಲ್ಲಿರುವ ಕ್ರೈಸ್ತ ಪ್ರಾರ್ಥನಾ ಮಂದಿರದಲ್ಲಿ ಪ್ರಾರ್ಥನೆ ವೇಳೆ ಜೋರಾಗಿ ಧ್ವನಿವರ್ಧಕ ಬಳಕೆ ಮಾಡುತ್ತಿದ್ದಾರೆ. ಈ ಶಬ್ದದಿಂದ ನೆರಹೊರೆಯವರಿಗೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಲಾಗಿದೆ. ಹೃದಯ ಸಮಸ್ಯೆಯಿಂದ ಬಳಲುತ್ತಿರುವವರು, ವೃದ್ಧರು, ಮಕ್ಕಳು ಹೆಚ್ಚಿದ್ದಾರೆ. … Read more

ಸಾಗರ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬೇಳೂರಿಗೆ ಪಕ್ಷದಿಂದ ಬಿಗ್ ರಿಲೀಫ್

181121 Sagara Ashok Belur In Bajarangadal Programme Controversy

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ನವೆಂಬರ್ 2021 ಸಾಗರ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬೇಳೂರು ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ. ಭಜರಂಗದಳ ಸಂಘಟನೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಆರೋಪದ ಹಿನ್ನೆಲೆ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಅವರ ಸೂಚನೆ ಹಿನ್ನೆಲೆಯಲ್ಲಿ ಅಶೋಕ್ ಬೇಳೂರು ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಟಿ.ಎಸ್.ಪ್ರದೀಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಶೋಕ್ ಬೇಳೂರು ಅವರು ಸಾಗರ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. … Read more

ಭಜರಂಗದಳ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ, ಸ್ಥಾನದಿಂದ ಅಮಾನತು ಮಾಡಿದ ಪಕ್ಷ, ಮುಜುಗರ ತಪ್ಪಿಸಲು ಯತ್ನ

181121 Sagara Ashok Belur In Bajarangadal Programme Controversy

ಶಿವಮೊಗ್ಗ ಲೈವ್.ಕಾಂ | SAGARA NEWS | 18 ನವೆಂಬರ್ 2021 ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಆರೋಪದ ಹಿನ್ನೆಲೆ ಯುವ ಕಾಂಗ್ರೆಸ್ ಸಾಗರ ಬ್ಲಾಕ್ ಅಧ್ಯಕ್ಷರನ್ನು ಸ್ಥಾನದಿಂದ ಅಮಾನತು ಮಾಡಲಾಗಿದೆ. ಈ ಸಂಬಂಧ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಪ್ರದೀಪ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬೇಳೂರು ಆವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಮಾಡುತ್ತಿದ್ದಾರೆ. ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ … Read more

ಸಿಆರ್​ಪಿಎಫ್​ ಮಹಿಳಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕೋಟೆ ಠಾಣೆಗೆ ದೂರು

Kote Police Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 APRIL 2021 ಕ್ರೈಸ್ತ ಧರ್ಮದ ಪರವಾಗಿ ಪ್ರಚಾರ ನಡೆಸಿದ ಸಿಆರ್‍ಪಿಎಫ್ ಮಹಿಳಾ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಸುರೇಶ್ ಬಾಬು ಶಿವಮೊಗ್ಗದ ಕೋಟೆ ಠಾಣೆಗೆ ದೂರು ನೀಡಿದ್ದಾರೆ. ಮಸ್ಕಿ ವಿಧಾನಸಭೆ ಚುನಾವಣೆಯ ಬಂದೋಬಸ್ತ್‍ಗೆ ಸಿಆರ್‍ಪಿಎಫ್‍ನ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾರು ತಪಾಸಣೆ ನೆಪದಲ್ಲಿ ಸಿಆರ್‍ಪಿಎಫ್‍ ಮಹಿಳಾ ಸಿಬ್ಬಂದಿಯೊಬ್ಬರು ಕ್ರೈಸ್ತ ಧರ್ಮದ ಪರವಾಗಿ ಪ್ರಚಾರ ಮಾಡಿದ್ದಾರೆ ಎಂದು ಮಾಜಿ ಶಾಸಕ … Read more

ಭದ್ರಾವತಿ ರಂಗಪ್ಪ ಸರ್ಕಲ್‌ನಲ್ಲಿ ಸಿ.ಎಂ.ಇಬ್ರಾಹಿಂ ಫೋಟೊಗೆ ಚಪ್ಪಲಿ ಹಾರ, ಬೆಂಕಿ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 MARCH 2021 ಶ್ರೀರಾಮನ ಬಗ್ಗೆ ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ಅವಹೇಳನಕಾರಿ ಹೇಳಿ ನೀಡಿರುವುದನ್ನು ಭಜರಂಗದಳ ಕಾರ್ಯಕರ್ತರು ಖಂಡಿಸಿದ್ದಾರೆ. ಭದ್ರಾವತಿಯಲ್ಲಿ ಸಿ.ಎಂ.ಇಬ್ರಾಹಿಂ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭದ್ರಾವತಿಯ ರಂಗಪ್ಪ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆಸಿದ ಭಜರಂಗದಳ ಕಾರ್ಯಕರ್ತರು, ಸಿ.ಎಂ.ಇಬ್ರಾಹಿಂ ವಿರುದ್ಧ ಘೋಷಣೆ ಕೂಗಿದರು. ಇತ್ತೀಚೆಗೆ ಸಿ.ಎಂ.ಇಬ್ರಾಹಿಂ ಅವರು ಜೈ ಸಿಡಿ ರಾಮ್ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದು ಅಸಂಖ್ಯಾತ ಹಿಂದೂಗಳ ಮನಸಿಗೆ ನೋವುಂಟು ಮಾಡಿದೆ. ಸಿ.ಎಂ. … Read more

ಶಿವಮೊಗ್ಗ ಸಿಟಿಯಲ್ಲಿ ಮೂರನೇ ಬಾರಿ ನಿಷೇಧಾಜ್ಞೆ ವಿಸ್ತರಣೆ, ಯಾವ ದಿನಾಂಕದವರೆಗೆ ನಿಷೇಧಾಜ್ಞೆ ಇರಲಿದೆ?

061220 144 Section In Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 8 DECEMBER 2020 ಶಿವಮೊಗ್ಗದಲ್ಲಿ ನಿಷೇಧಾಜ್ಞೆಯನ್ನು ಮತ್ತೊಮ್ಮೆ ವಿಸ್ತರಣೆ ಮಾಡಲಾಗಿದೆ. ಈ ಬಾರಿ ಹೆಚ್ಚು ಅವಧಿಗೆ ವಿಸ್ತರಣೆ ಮಾಡಲಾಗಿದೆ. ಡಿಸೆಂಬರ್ 12ರ ಬೆಳಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ. ALSO READ | ಶಿವಮೊಗ್ಗ ಸಿಟಿಯ ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿ.9ರಂದು ನಾಲ್ಕು ಗಂಟೆ ಕರ್ಫ್ಯೂ ಸಡಿಲಿಕೆ ಮೂರನೇ ಬಾರಿ ವಿಸ್ತರಣೆ ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಮತ್ತು ಆ … Read more