ಕರೆಂಟ್‌ ಶಾಕ್‌, ಅಡಿಕೆ ಗೊನೆಗಾರ ಸಾವು, ಹೇಗಾಯ್ತು ಘಟನೆ?

Areca-Farm-Adike-tota-in-Shimoga

ತೀರ್ಥಹಳ್ಳಿ: ಅಡಿಕೆ (Adike) ಗೊನೆ ಕೀಳುವಾಗ ದೋಟಿ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಬಸವಾನಿ‌ ಸಮೀಪದ ಲಕ್ಷ್ಮೀಪುರ ಗ್ರಾಮದಲ್ಲಿ ಶನಿವಾರ ಸಂಜೆ ಘಟನೆ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ದೋರಗಲ್ಲು ಗ್ರಾಮದ ಸತೀಶ್ (50) ಮೃತ ವ್ಯಕ್ತಿ. ಇವರು ಈ ಭಾಗದಲ್ಲಿ ಹಲವು ವರ್ಷಗಳಿಂದ ಗೊನೆಗಾರರಾಗಿ ಕೆಲಸ ಮಾಡುತ್ತಿದ್ದರು. ಲಕ್ಷ್ಮೀಪುರದ ರೈತ ಸುಂದರೇಶ್ ಅವರ ಅಡಿಕೆ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ … Read more

ಮರದ ದಿಮ್ಮಿ ಉರುಳಿ ಕಾರ್ಮಿಕನ ತಲೆಗೆ ಗಂಭೀರ ಗಾಯ, ಸಾವು

Yogendra-gowda-incident-near-devangi-in-thirthahalli.

ತೀರ್ಥಹಳ್ಳಿ: ಮರದ ದಿಮ್ಮಿಗಳನ್ನು (Timber) ಮಣ್ಣಿನ ದಿಬ್ಬದಿಂದ ಕೆಳಗೆ ಉರುಳಿಸುವಾಗ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ಸಮೀಪದ ಕೊಳವಾರ ಗ್ರಾಮದಲ್ಲಿ ಸೋಮವಾರ ಘಟನೆ ಸಂಭವಿಸಿದೆ. ಶಿವಮೊಗ್ಗ ತಾಲೂಕಿನ ಸಕ್ರೆಬೈಲು ನಿವಾಸಿ ಎಸ್.ಟಿ.ಯೋಗೇಂದ್ರ ಗೌಡ (52) ಮೃತರು. ಬಸವಾನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಾಲ್ವರು ಕಾರ್ಮಿಕರು ಅಕೇಶಿಯಾ ಮರದ ದಿಮ್ಮಿಗಳನ್ನು ದಿಬ್ಬದಿಂದ ಕೆಳಗಿಳಿಸುತ್ತಿದ್ದರು. ಈ ವೇಳೆ ಯೋಗೇಂದ್ರ ಅವರು ಕಾಲು ಜಾರಿ ಕೆಳಗೆ ಬಿದ್ದಿದ್ದು, ದಿಮ್ಮಿಯೊಂದು ಅವರ ಮೇಲೆ ಉರುಳಿ ತಲೆಗೆ ಗಂಭೀರ ಗಾಯವಾಗಿದೆ. ಸ್ಥಳದಲ್ಲಿದ್ದವರು ತಕ್ಷಣ … Read more