ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು
ಭದ್ರಾವತಿ: ದರೋಡೆಗೆ ಸಂಚು ರೂಪಿಸಿ ಪೊಲೀಸರ (police) ಮೇಲೆಯೇ ಮಾರಣಾಂತಿಕ ದಾಳಿ ನಡೆಸಿದ ರೌಡಿ ಶೀಟರ್ ಡಿಚ್ಚಿ ಮುಬಾರಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶನಿವಾರ ಸಂಜೆ ನಡೆದಿದೆ. ರೌಡಿ ಡಿಚ್ಚಿ ಮುಬಾರಕ್ ಹಾಗೂ ಆತನ ಸಹಚರರು ಶಿವನಿ ಕ್ರಾಸ್ ಮತ್ತು ಗೌರಾಪುರ ಭಾಗದಲ್ಲಿ ದರೋಡೆಗೆ ಹಂಚು ಹಾಕುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಎಕ್ಸ್ಯುವಿ ಹಾಗೂ ಸ್ಕೂಟಿಗಳಲ್ಲಿ ಮಾರಕಾಸ್ತ್ರಗಳೊಂದಿಗೆ ಓಡಾಡತ್ತಿದ್ದಾರೆ ಎಂದು ಫೆಬ್ರವರಿ 7ರ ಮಧ್ಯಾಹ್ನ ಭದ್ರಾವತಿ ಡಿವೈಎಸ್ಪಿ ಪ್ರಕಾಶ್ ರಾಠೋಡ್ ಅವರಿಗೆ ಖಚಿತ ಮಾಹಿತಿ … Read more