ತೀರ್ಥಹಳ್ಳಿಯ ಕೋಣಂದೂರು ಬಳಿ ಸೇತುವೆ ಪಕ್ಕದ ಮಣ್ಣು ಕುಸಿತ, ಅಧಿಕಾರಿಗಳು ದೌಡು

070820 Bridge Near Konanduru Problem Due To Rain 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 7 ಆಗಸ್ಟ್ 2020 ಭಾರಿ ಮಳೆಗೆ ತೀರ್ಥಹಳ್ಳಿ ತಾಲೂಕಿನ ಸೇತುವೆಯೊಂದರ ಪಕ್ಕದಲ್ಲಿ ಮಣ್ಣು ಕುಸಿದಿದೆ. ಭಾರಿ ವಾಹನ ಸಂಚಾರವನ್ನು ಇಲ್ಲಿ ನಿರ್ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ದತ್ತರಾಜಪುರ – ಕುಕ್ಕೆ ಮಾರ್ಗದ ರಸ್ತೆಯಲ್ಲಿ ಈ ಸೇತುವೆ ಇದೆ. ಇದರ ಪಕ್ಕದಲ್ಲಿ ಮಣ್ಣು ಕುಸಿದಿದೆ. ವಿಚಾರ ತಿಳಿಯುತ್ತಿದ್ದಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೇತುವೆ ದುರಸ್ಥಿ ಕಾರ್ಯ ಕುರಿತು ಅಧಿಕಾರಿಗಳು ಚರ್ಚೆ ನಡೆಸಿದರು. … Read more