ಬೈಕ್‌ಗೆ ಡಿಕ್ಕಿ ಹೊಡೆದು ಎಳೆದೊಯ್ದ ಖಾಸಗಿ ಬಸ್‌, ಸವಾರನ ಸ್ಥಿತಿ ಗಂಭೀರ, ಎಲ್ಲಿ? ಹೇಗಾಯ್ತು ಘಟನೆ?

Incident-Near-Kushavathi-in-Thirthahalli.

ತೀರ್ಥಹಳ್ಳಿ: ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ ಭೀಕರ ಅಪಘಾತ (Bus Rams Bike) ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದು, ತೀರ್ಥಹಳ್ಳಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ತೀರ್ಥಹಳ್ಳಿಯ ಕುಶಾವತಿಯಲ್ಲಿ ಘಟನೆ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಖಾಸಗಿ ಬಸ್ಸು ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿತ್ತು. ಕುಶಾವತಿ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಬೈಕ್‌ ಮೇಲೆ ಹತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನೂ … Read more

ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್‌ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?

Crime-News-General-Image

ಶಿವಮೊಗ್ಗ: ಪೆಸೆಟ್‌ ಕಾಲೇಜು ಬಸ್‌ (College Bus) ಅಡ್ಡಗಟ್ಟಿ ಚಾಲಕನಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆಸೆಟ್‌ (PESIT) ಕಾಲೇಜು ಬಸ್‌ ಚಾಲಕ ಹುಚ್ಚರಾಯ ಅವರು ವಿದ್ಯಾರ್ಥಿಗಳನ್ನು ಕರೆದುಕೊಂಡು ಹಿಂತಿರುಗುತ್ತಿದ್ದಾಗ ಘಟನೆ ಸಂಭವಿಸಿದೆ. ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿನೋಬನಗರ ಆಟೋ ನಿಲ್ದಾಣದ ಬಳಿ ಪೆಸೆಟ್‌ ಕಾಲೇಜು ಬಸ್‌ ಅಡ್ಡಗಟ್ಟಿ ಚಾಲಕನಿಗೆ ನಿಂದಿಸಿದ್ದಾರೆ. ಬಸ್ಸು ಉಷಾ ನರ್ಸಿಂಗ್‌ ಹೋಂ ಬಳಿ ಹೋಗುತ್ತಿದ್ದಾಗ ಬೈಕಿನಲ್ಲಿ ಮೂವರು ಪುನಃ ಅಡ್ಡಗಟ್ಟಿ ಚಾಲಕ … Read more

ಶಿವಮೊಗ್ಗದಲ್ಲಿ ಬಸ್‌ ಹತ್ತಿ ಆಧಾರ್‌ ಕಾರ್ಡ್‌ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್‌, ಆಗಿದ್ದೇನು?

KSRTC-Bus-General-Image-Shimoga-Bangalore

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ (Bus) ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್‌, ಚಿನ್ನಾಭರಣ ಕಳ್ಳತನ ಪ್ರಕರಣಗಳು ಮುಂದುವರೆದಿದೆ. ಗಾಂಧಿ ಬಜಾರ್‌ನ ಧರ್ಮರಾಯನ ಬೀದಿಯ ಗಾಯತ್ರಿ ಎಂಬುವವರ ವ್ಯಾನಿಟಿ ಬ್ಯಾಗ್‌ನಿಂದ ಚನ್ನದ ಸರ, ನಗದು ಮತ್ತು ಆಧಾರ್‌ ಕಾರ್ಡ್‌ ಕಳ್ಳತನ ಮಾಡಲಾಗಿದೆ. ಗಾಯತ್ರಿ ಅವರು ಹಿರೇಕೆರೂರಿನಲ್ಲಿರುವ ತಾಯಿ ಮನೆಗೆ ತೆರಳುತ್ತಿದ್ದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ರಶ್‌ ಇದ್ದಿದ್ದರಿಂದ ನೂಕುನುಗ್ಗಲಿನಲ್ಲೆ ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಆಧಾರ್‌ ಕಾರ್ಡ್‌ ತೋರಿಸಲು ವ್ಯಾನಿಟಿ ಬ್ಯಾಗ್‌ಗೆ ಕೈ … Read more

ಭದ್ರಾವತಿಯ ವ್ಯಕ್ತಿಗೆ ₹10 ಲಕ್ಷದ ಪರಿಹಾರ ನಿಧಿ ಚೆಕ್‌ ವಿತರಿಸಿದ KSRTC

KSRTC-issued-cheque-for-Bhadravathi-person

ಶಿವಮೊಗ್ಗ: ಬಸ್ಸಿನಿಂದ ಕೆಳಗೆ ಬಿದ್ದು ಯುವತಿ ಮೃತಪಟ್ಟಿದ್ದ ಪ್ರಕರಣ ಸಂಬಂಧ ಅವರ ಕುಟುಂದವರಿಗೆ KSRTC ವತಿಯಿಂದ ಅಪಘಾತ ಪರಿಹಾರ ನಿಧಿ ಚೆಕ್‌ ವಿತರಣೆ ಮಾಡಲಾಯಿತು. 2024ರ ಅಕ್ಟೋಬರ್ 22 ರಂದು ಶಿವಮೊಗ್ಗ – ಭದ್ರಾವತಿ ಮಾರ್ಗದಲ್ಲಿ ಪಯಣಿಸುತ್ತಿದ್ದಾಗ ಭದ್ರಾವತಿ ತಾಲೂಕು ಹಳೇ ಭಂಡಾರಹಳ್ಳಿ ವಾಸಿ ಹೇಮಾವತಿ (19) ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಸಾರಿಗೆ ನಿಗಮದ ವತಿಯಿಂದ ಹೇಮಾವತಿ ಅವರ ತಂದೆ ರಮೇಶ್‌ ಅವರಿಗೆ ಅಪಘಾತ ಪರಿಹಾರ ನಿಧಿಯ ₹10 ಲಕ್ಷದ ಚೆಕ್‌ ವಿತರಿಸಲಾಯಿತು. ಶಿವಮೊಗ್ಗ … Read more

ಶಿವಮೊಗ್ಗದಲ್ಲಿ ನವದುರ್ಗ ಬಸ್‌ ಚಾಲಕನ ಮೇಲೆ ಮನಸೋಯಿಚ್ಛೆ ಹಲ್ಲೆ

Shimoga-Private-Bus-Stand-Board

ಶಿವಮೊಗ್ಗ: ಅಡ್ಡ ನಿಲ್ಲಿಸಿದ್ದ ಕಾರು ತೆಗೆಯುವಂತೆ ಹಾರನ್‌ ಮಾಡಿದ್ದಕ್ಕೆ ನವದುರ್ಗ ಬಸ್‌ ಚಾಲಕನ (BUS DRIVER) ಮೇಲೆ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಬಸ್‌ ನಿಲ್ದಾಣದ ಸಮೀಪ ಬ್ರೈಟ್‌ ಹೊಟೇಲ್‌ ಎದುರು ಘಟನೆ ನಡೆದಿದೆ. ನವದುರ್ಗ ಬಸ್‌ ಚಾಲಕ ಬಿ.ಎಸ್.ರವಿ ಮೇಲೆ ಹಲ್ಲೆ ನಡೆಸಲಾಗಿದೆ. ಬಸ್ಸು ರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ನಿಲ್ದಾಣದಿಂದ ಹೊರ ಬಂದು ಬ್ರೈಟ್‌ ಹೊಟೇಲ್‌ ಮುಂಭಾಗ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಚಾಲಕ ರವಿ ಬಸ್‌ ನಿಲ್ಲಿಸಿದ್ದರು. ಆಗ ಬಂದ ಕಾರೊಂದು ಬಸ್ಸಿಗೆ ಅಡ್ಡಲಾಗಿ ನಿಲ್ಲಿಸಲಾಯಿತು ಎಂದು … Read more

ಸಾಗರದಲ್ಲಿ ಬಸ್‌ ಹತ್ತಿದ ದಾವಣಗೆರೆ ಮಹಿಳೆ, ಐಬಿ ಸರ್ಕಲ್‌ ಬಳಿ ಕಾದಿತ್ತು ಆಘಾತ

KSRTC-Bus-General-Image-Shimoga-Bangalore

ಸಾಗರ: KSRTC ಬಸ್‌ನಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಿಂದ ಚಿನ್ನಾಭರಣವಿದ್ದ ಪರ್ಸ್‌ ಕಳ್ಳತನ ಮಾಡಲಾಗಿದೆ. ಸಾಗರ ಬಸ್‌ ನಿಲ್ದಾಣದಲ್ಲಿ ಕಳ್ಳತನ ನಡೆದಿರುವ ಕುರಿತು ಶಂಕೆ ಇದೆ. ನಯನಾ ಎಂಬುವವರು ಸಾಗರ ಕೆಎಸ್‌ಆರ್‌ಟಿಸಿ ನಿಲ್ದಾಣದಿಂದ ದಾವಣಗೆರೆಗೆ ಬಸ್‌ ಹತ್ತಿದ್ದರು. ಐಬಿ ಸರ್ಕಲ್‌ ಬಳಿ ಬಸ್‌ ತೆರಳುತ್ತಿರುವಾಗ ಟಿಕೆಟ್‌ ಮಾಡಿಸಲು ಬ್ಯಾಗ್‌ನಲ್ಲಿದ್ದ ಪರ್ಸ್‌ ತೆಗೆಯಲು ಮುಂದಾದರು. ಆಗ ಪರ್ಸ್‌ ಇಲ್ಲದಿರುವುದು ಗೊತ್ತಾಗಿದೆ. ಪರ್ಸ್‌ನಲ್ಲಿ ₹1.73 ಲಕ್ಷದ ಚಿನ್ನಾಭರಣ ಇತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಸ್‌ ಹತ್ತುವುದಕ್ಕು ಮುನ್ನ ನಯನಾ ಅವರಿಗೆ ಕರೆ ಬಂದಿತ್ತು. … Read more

ಸ್ಪರ್ಧೆ ವೇಳೆ ಬಸ್‌ಗೆ ಡಿಕ್ಕಿಯಾಗಿ ಹೋರಿ ಸಾವು, ಹೇಗಾಯ್ತು ಘಟನೆ?

Bus-collides-with-Hori-at-Shikaripura.

ಶಿಕಾರಿಪುರ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಓಡಿಬಂದ ಹೋರಿಯೊಂದು ಚಲಿಸುತ್ತಿದ್ದ ಬಸ್‌ಗೆ (Bus) ಗುದ್ದಿ ಸ್ಥಳದಲ್ಲೇ ಸಾವನ್ನಪ್ಪಿದೆ. ಪಟ್ಟಣದ ದೊಡ್ಡಕೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಹೋರಿ ಬೆದರಿಸುವ ಹಬ್ಬದ ವೇಳೆ ಓಡಿಬಂದ ಹೋರಿಯೊಂದು ಚಲಿಸುತ್ತಿದ್ದ ಬಸ್‌ಗೆ ಗುದ್ದಿ ಸ್ಥಳದಲ್ಲೇ ಮೃತಪಟ್ಟಿದೆ. ಪಟ್ಟಣದ ವಿನಾಯಕ ನಗರದ ಹೋರಿಯೊಂದು ಅಖಾಡದಿಂದ ತಪ್ಪಿಸಿಕೊಂಡು ಬರುವಾಗ ಶಿವಮೊಗ್ಗ ರಸ್ತೆಯ ಕಾಮಧೇನು ಪೆಟ್ರೋಲ್ ಬಂಕ್ ಬಳಿ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆಯಿತು. ಹೋರಿಯನ್ನು ಕ್ರೇನ್ ಮೂಲಕ ಸಾಗಿಸಲಾಯಿತು. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more

ಶಿವಮೊಗ್ಗ ಬಸ್‌ ನಿಲ್ದಾಣದಲ್ಲಿ ನಿದ್ರೆ ಮಾಡ್ತಿದ್ದ ಮಹಿಳೆಗೆ ದೊಣ್ಣೆ ಏಟು, ಕಣ್ಣು ಬಿಟ್ಟ ಮೇಲೆ ಮತ್ತೊಂದು ಆಘಾತ

161025-shimoga-ksrtc-bus-stand-general-image.webp

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮಹಿಳೆಯರ (Woman) ವಿಶ್ರಾಂತಿ ಕೊಠಡಿಯಲ್ಲಿ ಕುಳಿತಿದ್ದ ರಾಣೇಬೆನ್ನೂರಿನ ರೇಣುಕಮ್ಮ ಎಂಬುವವರ ಮೇಲೆ ಮಹಿಳೆಯೊಬ್ಬಳು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ ರೇಣುಕಮ್ಮ ಅವರ ವ್ಯಾನಿಟಿ ಬ್ಯಾಗಿನಲ್ಲಿದ್ದ ₹1000 ನಗದು ಕಸಿದುಕೊಂಡಿದ್ದಾರೆ. ರೇಣುಕಮ್ಮ ತಮ್ಮ ಪತಿಯೊಂದಿಗೆ ಹಣಗೆರೆ ಕಟ್ಟೆಗೆ ತೆರಳಬೇಕಿತ್ತು. ರಾತ್ರಿ ರೇಣುಕಮ್ಮ ಮತ್ತು ಪತಿ ಬಸ್‌ ನಿಲ್ದಾಣದಕ್ಕೆ ಬರುವಷ್ಟರಲ್ಲಿ ಖಾಸಗಿ ಬಸ್ಸು ಹೋಗಿತ್ತು. ಹಾಗಾಗಿ ಕೆಎಸ್‌ಆರ್‌ಟಿಸಿ ನಿಲ್ದಾಣದ ಮಹಿಳೆಯರ ವಿಶ್ರಾಂತಿ ಜಾಗದಲ್ಲಿ ಕುಳಿತಿದ್ದರು. ಅಲ್ಲಿಯೆ ನಿದ್ರೆ ಮಾಡಿದ್ದ ರೇಣುಕಮ್ಮ ಅವರ ಮೇಲೆ ರಾತ್ರಿ … Read more

ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಶರಾವತಿ ಹಿನ್ನೀರಿನತ್ತ ಪಲ್ಟಿಯಾದ ಕಾರು, ವ್ಯಕ್ತಿ ಸಾವು, ಹೇಗಾಯ್ತು ಘಟನೆ?

Car-and-Bus-mishap-near-madodi-in-hosanagara-taluk

ಹೊಸನಗರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದು ಕಾರು (Car) ಹಲವು ಬಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದು ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ಹೊಸನಗರ ತಾಲೂಕು ಮಡೋಡಿ ಎಂಬಲ್ಲಿ ಘಟನೆ ಸಂಭವಿಸಿದೆ. ಬಿ.ಕೆ.ಹರಿಭಟ್‌ (76) ಮೃತರು. ಇವರು ಪತ್ನಿ ಕಮಲಾಕ್ಷಿ, ಸುಜಾತಾ ಮತ್ತು ಲೀಲಾವತಿ ಎಂಬುವವರ ಜೊತೆಗೆ ಆಲ್ಟೋ ಕಾರಿನಲ್ಲಿ ಹೊಸನಗರದ ನಿಟ್ಟೂರಿನಿಂದ ಮತ್ತಿಕೈ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದೆ. ನಿಟ್ಟೂರು – ನಾಗೋಡಿ ಸಮೀಪದ ಮಡೋಡಿ ಗ್ರಾಮದ ಬಳಿ ಹರಿಭಟ್‌ ಅವರು … Read more

ಬಸ್ಸಲ್ಲಿ ಸೀಟ್‌ ಸಿಗದಿದ್ದಕ್ಕೆ ಕೆಳಗಿಳಿದು ಮುಖ ಒರೆಸಿಕೊಂಡ ತಕ್ಷಣ ಮಹಿಳೆಗೆ ಕಾದಿತ್ತು ಶಾಕ್‌, ದಾಖಲಾಯ್ತು ಕೇಸ್‌

KSRTC-Bus-Stand-Shivamogga

ಶಿವಮೊಗ್ಗ: ಬಸ್‌ ನಿಲ್ದಾಣದಲ್ಲಿ ಕಳ್ಳರ ಹಾವಳಿ ಮತ್ತೆ ಶುರುವಾಗಿದೆ. ಬಸ್‌ ಹತ್ತಿದ್ದ ಗೃಹಿಣಿಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರ (Gold Chain) ಕಳ್ಳತನ ಮಾಡಲಾಗಿದೆ. ವೀಣಾ ಎಂಬುವವರು ತಮ್ಮೂರು ಆನವಟ್ಟಿಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಆಗಮಿಸಿದ್ದರು. ಹಾನಗಲ್‌ ಮಾರ್ಗ ಬಸ್‌ ಹತ್ತಿದ್ದರು. ಆದರೆ ರಶ್‌ ಇದ್ದಿದ್ದರಿಂದ ಸೀಟ್‌ ಸಿಗದ ಕಾರಣಕ್ಕೆ ಕೆಳಗಿಳಿದು ಮುಖ, ಕೊರಳು ಒರೆಸಿಕೊಂಡಿದ್ದರು. ಆಗ ಅವರ ಚಿನ್ನದ ಸರ ಕಳ್ಳತನವಾಗಿರುವುದು ಗೊತ್ತಾಗಿದೆ. 22 ಗ್ರಾಂ ತೂಕದ ₹1.20 ಲಕ್ಷ ಮೌಲ್ಯದ ಚಿನ್ನದ ಸರ ಕಳುವಾಗಿದೆ … Read more