ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್ ಗೆ ಬಂತು ವಿಮಾನ

Flight-Model-in-Shimoga-Amir-Ahmed-Circle

SHIVAMOGGA LIVE NEWS | 25 FEBRURARY 2023 SHIMOGA : ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಬಿಜೆಪಿ ಕಾರ್ಯಕರ್ತರು ಅಮೀರ್ ಅಹಮದ್ ವೃತ್ತದಲ್ಲಿ ವಿಮಾನದ ಮಾದರಿ (Flight Model) ಇರಿಸಿದ್ದಾರೆ. ಇದನ್ನು ನೋಡಲು, ಫೋಟೋ ಕ್ಲಿಕ್ಕಿಸಿಕೊಳ್ಳಲು ಜನರು ಸರ್ಕಲ್ ಗೆ ಆಗಮಿಸುತ್ತಿದ್ದಾರೆ. ಅಮೀರ್ ಅಹಮದ್ ಸರ್ಕಲ್ ನಲ್ಲಿ ಇವತ್ತು ಏರ್ ಇಂಡಿಯಾ ವಿಮಾನದ ಮಾದರಿಯನ್ನು ಇಡಲಾಗಿದೆ. ಸರ್ಕಲ್ ನ ಮಧ್ಯದಲ್ಲಿ ವಿಮಾನ ಹಾರಲು ಸಿದ್ಧವಾಗಿರುವ ರೀತಿಯ ಮಾಡಲ್ (Flight Model) ಇರಿಸಲಾಗಿದೆ. … Read more

ಉಷಾ ನರ್ಸಿಂಗ್ ಹೋಂ ಬಳಿ ಪೊಲೀಸರ ಕಂಡು ಬೈಕ್ ಬಿಟ್ಟು ಓಡಿದ ಯುವಕರು, ಒಬ್ಬನ ಬಳಿ ಇತ್ತು ಹರಿತ ಚಾಕು

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ನವೆಂಬರ್ 2021 ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರನ್ನು ಕಂಡು ಬೈಕ್ ಬಿಟ್ಟು ಇಬ್ಬರು ಯುವಕರು ಪರಾರಿಯಾಗಿದ್ದಾರೆ. ಈ ಪೈಕಿ ಒಬ್ಬನನ್ನು ಹಿಡಿದು ಪರಿಶೀಲನೆ ನಡೆಸಿದಾಗ, ಆತನ ಬಳಿ ಹರಿತವಾದ ಚಾಕು ಪತ್ತೆಯಾಗಿದೆ. ಉಷಾ ನರ್ಸಿಂಗ್ ಹೋಂ ಸರ್ಕಲ್’ನಲ್ಲಿ ಜಯನಗರ ಠಾಣೆ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ನಂಬರ್ ಇಲ್ಲದೆ ಇರುವ ಬೈಕಿನಲ್ಲಿ ಬಂದ ಇಬ್ಬರು ಯುವಕರನ್ನು ತಡೆದು, ಪರಿಶೀಲನೆ ಆರಂಭಿಸಿದ್ದಾರೆ. ಈ ವೇಳೆ ಇಬ್ಬರು ಬೈಕ್ ಬಿಟ್ಟು … Read more

ಸಹ್ಯಾದ್ರಿ ಕಾಲೇಜಿನಲ್ಲಿ ಕುವೆಂಪು ವಿವಿ ಕುಲಪತಿಗೆ ಮುತ್ತಿಗೆ, ವಿದ್ಯಾರ್ಥಿಗಳಿಂದ ಪ್ರಶ್ನೆಗಳ ಸುರಿಮಳೆ

020921 Students Protest in Front of Vc in Sahyadri College

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021 ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ಉಳಿಸಿ ಹೋರಾಟ ದಿನೇ ದಿನೇ ಹೊಸ ರೂಪ ಪಡೆಯುತ್ತಿದೆ. ವಿದ್ಯಾರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗೆ ಮುತ್ತಿಗೆ ಹಾಕಿ, ತಮ್ಮ ಪ್ರಶ್ನೆಗಳಿಗೆ ಉತ್ತರ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಆಗಮಿಸಿದ್ದರು. ಈ ವೇಳೆ ವಿದ್ಯಾರ್ಥಿಗಳು ಕುಲಪತಿ ಅವರನ್ನು ಮುತ್ತಿಗೆ ಹಾಕಿ ಪ್ರಶ್ನಿಸಿದ್ದಾರೆ. ಸಮಜಾಯಿಷಿಗೆ ಒಪ್ಪದ ವಿದ್ಯಾರ್ಥಿಗಳು ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲಿ ಖೇಲೋ … Read more

ಗೋಪಾಳದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

310821 bike accident at Gopala draupadamma circle

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಆಗಸ್ಟ್ 2021 ಬೈಕುಗಳ ಮುಖಾಮುಖಿ ಡಿಕ್ಕಿಯಾಗಿ ಖೋ ಖೋ ಆಟಗಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕುಗಳು ಡಿಕ್ಕಿಯಾಗಿ ಸವಾರರಿಬ್ಬರು ರಸ್ತೆಗೆ ಬೀಳುವ ಧಾರುಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗದ ಖ್ಯಾತ ಖೋ ಖೋ ಆಟಗಾರ ನವೀನ್ (29) ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡಿದ್ದ ನವೀನ್ ಸಾವನ್ನಪ್ಪಿದ್ದಾರೆ. ಹೇಗಾಯ್ತು ಅಪಘಾತ? ಶಿವಮೊಗ್ಗದ ಗೋಪಾಳದ ದ್ರೌಪದಮ್ಮ ಸರ್ಕಲ್’ನಲ್ಲಿ ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ಎರಡು ಬೈಕುಗಳು ಅತಿ ವೇಗವಾಗಿ ಬಂದಿದ್ದರಿಂದ … Read more

ಶಿವಮೊಗ್ಗದಲ್ಲಿ ಆಟೋ, ಕಾರು ಅಪಘಾತ, ನಡು ರಸ್ತೆಯಲ್ಲೇ ಆಟೋ ಪಲ್ಟಿ

110519 Auto Accident at Mahaveera Circle 1

ಶಿವಮೊಗ್ಗ ಲೈವ್.ಕಾಂ | 11 ಮೇ 2019 ನಗರದ ಮಹಾವೀರ ಸರ್ಕಲ್’ನಲ್ಲಿ ಆಟೋ, ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಮತ್ತು ಆಟೋ ಚಾಲಕರಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ರಭಸಕ್ಕೆ ಆಟೋ ಪಲ್ಟಿ ಹೊಡೆದಿದ್ದು, ಮುಂಭಾಗ ನುಜ್ಜುಗುಜ್ಜಾಗಿದೆ. ಇನ್ನು, ಕಾರಿಗೂ ಹಾನಿಯಾಗಿದ್ದು, ಚಾಲಕನ ಕಡೆಯ ಬಾಗಿಲಿಗೂ ಹಾನಿಯಾಗಿದೆ. ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಿವಮೊಗ್ಗ … Read more