ಭದ್ರಾವತಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ

Suragitopu-Incident-Commotion.

ಭದ್ರಾವತಿ: ನಗರಸಭೆ ವ್ಯಾಪ್ತಿಯ ಸುರಗಿತೋಪಿನಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ (Commotion) ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ.  ಈ ಸಂಬಂಧ ಎರಡೂ ಗುಂಪುಗಳ ವಿರುದ್ಧ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ಆಗಿದ್ದೇನು? ಸುರಗಿತೋಪು 4ನೇ ತಿರುವಿನಲ್ಲಿ ಅನ್ನಪೂರ್ಣೇಶ್ವರಿ ಯುವಕರ ಸೇವಾ ಸಮಿತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಬುಧವಾರ ನಡೆಯುತ್ತಿತ್ತು. ರಾತ್ರಿ 10.30ರ ಸಮಯದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. … Read more