ಶಿವಮೊಗ್ಗ ಲೋಕಸಭೆಗೆ ಕಾಂಗ್ರೆಸ್‌ನಿಂದ ‘ಅಚ್ಚರಿ ಅಭ್ಯರ್ಥಿ’, ಈ ಇಬ್ಬರ ಪೈಕಿ ಕಣಕ್ಕಿಳಿಯೋದು ಯಾರು?

Congress-Party-Flag

SHIVAMOGGA LIVE NEWS | 27 FEBRUARY 2024 SHIMOGA : ಲೋಕಸಭೆ ಚುನಾವಣೆಯ ಕಾವು ಏರುತ್ತಿದೆ. ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಕಣಕ್ಕಿಳಿಯುವುದು ನಿಶ್ಚಿತ. ಈ ಹಿನ್ನೆಲೆ ಪ್ರಚಾರ ಕಾರ್ಯವು ಆರಂಭವಾಗಿದೆ. ಇತ್ತ ಕಾಂಗ್ರೆಸ್‌ ಪಕ್ಷದಲ್ಲಿ ಅಭ್ಯರ್ಥಿ ಇನ್ನು ನಿಗದಿಯಾಗಿಲ್ಲ. ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂದು ಕುತೂಹಲ ಮೂಡಿಸಲಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷದಲ್ಲಿ ಸೊರಬ ಮತ್ತು ಭದ್ರಾವತಿ ಹೊರತು ಉಳಿದೆಲ್ಲೆಡೆ ಒಬ್ಬರಿಗಿಂತಲು ಹೆಚ್ಚು ಆಕಾಂಕ್ಷಿಗಳಿದ್ದರು. ಆದರೆ ಒಂದೇ ವರ್ಷದಲ್ಲಿ ಕಾಂಗ್ರೆಸ್‌ನಲ್ಲಿ ಪರಿಸ್ಥಿತಿ ಬದಲಾಗಿದೆ. ಲೋಕಸಭೆ ಚುನಾವಣೆಗೆ … Read more

ಶಿವಮೊಗ್ಗಕ್ಕೆ ಬರ್ತಿದ್ದಾರೆ ಡಿ.ಕೆ.ಶಿವಕುಮಾರ್‌, ಸಮಾವೇಶದಲ್ಲಿ ಭಾಗಿಯಾಗ್ತಾರೆ 50 ಸಾವಿರ ಜನ, ಏನಿದು ಸಮಾವೇಶ?

HS-Sundaresh-and-M-Srikanth-Press-meet.

SHIVAMOGGA LIVE NEWS | 22 FEBRUARY 2024 SHIMOGA : ನಗರದ ಅಲ್ಲಮಪ್ರಭು ವೈದಾನದಲ್ಲಿ ಫೆ.24ರಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗಿದೆ. 50 ಸಾವಿರಕ್ಕೂ ಹೆಚ್ಚು ಜನರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್‌, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಗ್ಯಾರಂಟಿ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗಿತ್ತು. ಈಗ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಅದೇ ಸ್ಥಳದಲ್ಲಿ ಆಯೋಜಿಸಲಾಗುತ್ತಿದೆ. ಉಪ … Read more

ಶಿವಮೊಗ್ಗದಿಂದ ಮಂಗಳೂರಿಗೆ ನಾಳೆ 8 ಸಾವಿರ ಮಂದಿ, ಗ್ಯಾರಂಟಿ ಯೋಜನೆ ಕುರಿತು ಮಹತ್ವದ ಚರ್ಚೆ

HS-Sundaresh-Congress-President

SHIVAMOGGA LIVE NEWS | 16 FEBRUARY 2024 SHIMOGA : ಮಂಗಳೂರಿನಲ್ಲಿ ಫೆ.17ರಂದು ರಾಜ್ಯಮಟ್ಟದ ಬೂತ್ ಅಧ್ಯಕ್ಷರು, ಪದಾಧಿಕಾರಿಗಳ ಸಮಾವೇಶ ಆಯೋಜಿಸಲಾಗಿದೆ. ಜಿಲ್ಲೆಯಿಂದ 8 ಸಾವಿರ ಮಂದಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಸ್ತುವಾರಿ ವೇಣುಗೋಪಾಲ್, ರಣದೀಪ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪಿದೆಯೆ ಎಂದು ಖಚಿತಪಡಿಸಿಕೊಳ್ಳುವ ಕುರಿತು ತಿಳಿವಳಿಕೆ ಮೂಡಿಸಲಾಗುತ್ತದೆ … Read more

ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ, ವಿನೋಬನಗರದಲ್ಲಿ ಪ್ರತಿಭಟನಾಕಾರರ ಬಂಧನ

Youth-Congress-protest-in-front-of-BY-Raghavendra-house

SHIVAMOGGA LIVE NEWS | 7 FEBRUARY 2024 SHIMOGA : ತೆರಿಗೆ ಹಂಚಿಕೆ, ಬರ ಪರಿಹಾರ ವಿತರಣೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ಯುವ ಕಾಂಗ್ರೆಸ್‌ ಕಾರ್ಯಕರ್ತರು, ವಿನೋಬನಗರದಲ್ಲಿರುವ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ರಾಜ್ಯ ಸರ್ಕಾರದ ದೆಹಲಿ ಚಲೋ ಬೆಂಬಲಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ವಿನೋಬನಗರ ಪೊಲೀಸ್‌ ಚೌಕಿ ಸಮೀಪ ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. … Read more

ಶಿವಮೊಗ್ಗದಲ್ಲಿ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ, ಹಲವರು ಪೊಲೀಸ್ ವಶಕ್ಕೆ

070224 NSUI workers protest in front if vijayendra house Shimoga 1

SHIVAMOGGA LIVE NEWS | 7 FEBRUARY 2024 SHIMOGA | ತೆರಿಗೆ ಹಂಚಿಕೆ, ಬರ ಪರಿಹಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಿತು. ಬೈಪಾಸ್ ರಸ್ತೆಯಲ್ಲಿರುವ ವಿಜಯೇಂದ್ರ ನಿವಾಸಕ್ಕೆ ಎನ್‌ಎಸ್‌ಯುಐ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು‌‌. ಸಂಸದರಿಗೆ ದಮ್ಮು, ತಾಖತ್ತು ಇದ್ದರೆ ಇದಕ್ಕೂ ಮೊದಲು ಬೈಪಾಸ್ ರಸ್ತೆಯಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನಾ ಸಭೆ ನಡೆಸಿದರು. ಈ ವೇಳೆ … Read more

‘ಕೆಲವು ಉದ್ಯಮಿಗಳಿಗೆ ಗುತ್ತಿಗೆ ನೀಡಲು ಪ್ರವಾಸೋದ್ಯಮಕ್ಕೆ ಒತ್ತು’, ಸುಂದರೇಶ್ ಆಕ್ರೋಶ

H-S-Sundaresh-Congress-President-Shimoga.

SHIVAMOGGA LIVE NEWS | 2 FEBRUARY 2024 SHIMOGA : ಕೇಂದ್ರ ಸರ್ಕಾರದ್ದು ಕಾಟಾಚಾರದ, ನಿರಾಶಾದಾಯಕ ಬಜೆಟ್. ಇದರಿಂದ ಸಾರ್ವಜನಿಕರಿಗೆ ಯಾವುದೆ ಪ್ರಯೋಜನೆ ಆಗಿಲ್ಲ. ಕೆಲವು ಉದ್ಯಮಿಗಳಿಗೆ ಗುತ್ತಿಗೆ ನೀಡಲು ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗಿದೆ ಎಂದು ಶಿವಮೊಗ್ಗ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್‌.ಸುಂದರೇಶ್ ಆರೋಪಿಸಿದರು‌. ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಸುಂದರೇಶ್, ಕೇಂದ್ರ ಸರ್ಕಾರದ ಈತನಕದ ಬಜೆಟ್‌ನಿಂದ ಜಿಲ್ಲೆಯ ಕೈಗಾರಿಕೆಗಳಿಗೆ ಅನುಕೂಲ ಆಗಿಲ್ಲ. ವಸತಿ ಯೋಜನೆಗಳಾಗಿಲ್ಲ, ಗ್ರಾಮೀಣ ರಸ್ತೆಗಳು ನಿರ್ಮಾಣವಾಗಿಲ್ಲ ಎಂದು ಟೀಕಿಸಿದರು. ಮಹಿಳೆಯರು, ಯುವಕರಿಗೆ ಒತ್ತು ನೀಡಲಾಗಿದೆ ಎಂದು … Read more

ಶಿವಮೊಗ್ಗದಲ್ಲಿ ಅಸ್ಸಾಂ ಮುಖ್ಯಮಂತ್ರಿ ಭಾವಚಿತ್ರಕ್ಕೆ ಬೆಂಕಿ, ರಾಜೀನಾಮೆಗೆ ಪಟ್ಟು, ಕಾರಣವೇನು?

Congress-Protest-against-Assam-Chief-Minister

SHIVAMOGGA LIVE NEWS | 23 JANUARY 2024 SHIMOGA : ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೊ ನ್ಯಾಯ ಯಾತ್ರೆಗೆ ತಡೆಯೊಡ್ಡಿದ ಅಸ್ಸಾಂ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾಸ್‌ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್‌ ಕಚೇರಿಯಿಂದ ಮಹಾವೀರ ವೃತ್ತದವರೆಗೆ ಕಾಂಗ್ರೆಸ್‌ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಮುಖಂಡರು ಅಸ್ಸಾಂ ಸರ್ಕಾರ, ಸಿಎಂ ಹಿಮಂತ್‌ ಬಿಸ್ವಾಸ್‌ ವಿರುದ್ಧ … Read more

ಶಿವಮೊಗ್ಗ ಕಾಂಗ್ರೆಸ್‌ ಕಾರ್ಯಕರ್ತರಿಗೆ ಗುಡ್‌ ನ್ಯೂಸ್‌, ಇನ್ನು ಹತ್ತು ದಿನದಲ್ಲಿ ಪಟ್ಟಿ ರಿಲೀಸ್‌ಗೆ ಎಐಸಿಸಿ ಉಸ್ತುವಾರಿ ಸೂಚನೆ

AICC-Mayur-Jain-and-madhu-Bangarappa-in-Shimoga-congress-office

SHIVAMOGGA LIVE NEWS | 22 JANUARY 2024 SHIMOGA : ಇನ್ನು ಹತ್ತು ದಿನದಲ್ಲಿ ವಿವಿಧ ಸಮಿತಿಗಳಿಗೆ ನೇಮಕ‌ ನಡೆಯಲಿದೆ. ಅಧಿಕಾರ ವಿಕೇಂದ್ರಿಕರಣ ಮಾಡದೆ ಇರುವುದೆ ಬಿಜೆಪಿ ಸೋಲಿಗೆ ಕಾರಣ. ಈ ತಪ್ಪನ್ನು ಕಾಂಗ್ರೆಸ್ ಮಾಡಲ್ಲ ಎಂದು ಎಐಸಿಸಿ ಉಸ್ತುವಾರಿ ಮಯೂರ್‌ ಜೈನ್‌ ತಿಳಿಸಿದರು. ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಯೂರ್ ಜೈನ್‌, ಲೋಕಸಭೆ ಚುನಾವಣೆ ಕುರಿತು ಪ್ರಮುಖ ಮಾಹಿತಿ ತಿಳಿಸಿದರು. ಮಯೂರ್‌ ಜೈನ್ ಹೇಳಿದ 3 ಪ್ರಮುಖಾಂಶ ಇನ್ನು ಹತ್ತು ದಿನದಲ್ಲಿ … Read more

ನಿಗಮ, ಮಂಡಳಿ ನೇಮಕಾತಿ, ಶಿವಮೊಗ್ಗದಲ್ಲಿ ಪಟ್ಟಿ ರಿಲೀಸ್‌ಗು ಮೊದಲೇ ಐವರಿಗೆ ಅಭಿನಂದನೆ

Congress-Party-Flag

SHIVAMOGGA LIVE NEWS | 18 JANUARY 2024 SHIMOGA : ರಾಜ್ಯ ಸರ್ಕಾರ ಯಾವುದೆ ಕ್ಷಣದಲ್ಲಿ ನಿಗಮ, ಮಂಡಳ ನೇಮಕಾತಿ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಈ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳಿಕೆ ನೀಡಿದ್ದಾರೆ. ಇದರ ಬೆನ್ನಿಗೆ ಶಿವಮೊಗ್ಗ ಜಿಲ್ಲೆಯ ಐವರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ಪಕ್ಕಾ ಆಗಿದೆ ಎಂದು ಅಭಿನಂದನೆ ಸಲ್ಲಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲು ಇವರ ಫೋಟೊಗಳು ಹರಿದಾಡುತ್ತಿವೆ. ಕುತೂಹಲ ಮೂಡಿಸಿದ್ದ ನೇಮಕಾತಿ ಸಚಿವ ಸ್ಥಾನ ವಂಚಿತ ಶಾಸಕರು, ಪ್ರಮುಖ … Read more

ಶಿವಮೊಗ್ಗದ ಸರ್ಕಲ್‌‌ನಲ್ಲಿ ಸಂಸದನ ಪ್ರತಿಕೃತಿಗೆ ಬೆಂಕಿ, ಗಡಿಪಾರಿಗೆ ಆಗ್ರಹ

160124 Congress Protest against anath Kumar hegde in Shimoga

SHIVAMOGGA LIVE NEWS | 16 JANUARY 2024 SHIMOGA : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ ಕುಮಾರ್ ಹೆಗಡೆ ಏಕವಚನ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು‌. ಜಿಲ್ಲಾಧ್ಯಕ್ಷ ಹೆಚ್.ಎಸ್‌.ಸುಂದರೇಶ್ ನೇತೃತ್ವದಲ್ಲಿ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಅನಂತ ಕುಮಾರ್ ಹೆಗಡೆ ವಿರುದ್ಧ ಘೋಷಣೆ ಕೂಗಿದರು. ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಿನಿಸ್ಟರ್‌ … Read more