BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್‌ ಆದೇಶ, ಯಾಕೆ?

Shimoga-DC-Car.

ಶಿವಮೊಗ್ಗ: ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಯ ಕಾರು (Innova Car) ಜಪ್ತಿ (seizure) ಮಾಡುವಂತೆ ನ್ಯಾಯಾಲಯ ಆದೇಶಿಸಿದೆ. ವಸತಿ ಯೋಜನೆಗಾಗಿ ಹರಮಘಟ್ಟದ ಕೃಷಿಕ ನಂದಾಯಪ್ಪ ಅವರ ಒಂದು ಎಕರೆ ಜಮೀನನ್ನು 1992ರಲ್ಲಿ ಸರ್ಕಾರ ವಶಕ್ಕೆ ಪಡೆದಿತ್ತು. ಇದಕ್ಕೆ ₹22 ಲಕ್ಷ ಪರಿಹಾರ ನೀಡವುದಾಗಿ ತಿಳಿಸಿದ್ದ ಸರ್ಕಾರ ಕೇವಲ ₹9 ಲಕ್ಷ ನೀಡಿತ್ತು. ಬಾಕಿ ಹಣಕ್ಕಾಗಿ ರೈತ ನಂದಾಯಪ್ಪ ಕಚೇರಿಗೆ ಅಲೆದಾಡಿದರು ಫಲ ಸಿಕ್ಕಿರಲಿಲ್ಲ. ಕೊನೆಗೆ ನಂದಾಯಪ್ಪ ಕೋರ್ಟ್‌ (Shiomga Court) ಮೊರೆ ಹೋಗಿದ್ದರು. … Read more

ತೀರ್ಥಹಳ್ಳಿಯ ವ್ಯಕ್ತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ₹15,000 ದಂಡ, ಕಾರಣವೇನು?

Shivamogga-Court-Balaraja-Urs-Road

ಶಿವಮೊಗ್ಗ: ಕೆಲಸಕ್ಕೆ ಹೋಗಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಪೆಟ್ರೋಲ್ (Petrol) ಹಾಕಿ ಸುಟ್ಟು ಕೊಲ್ಲಲು ಪ್ರಯತ್ನಿಸಿದ್ದ ಅಪರಾಧಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ (Jail) ಹಾಗೂ ₹15,000 ದಂಡ ವಿಧಿಸಿದೆ. ದಂಡ (Fine) ಕಟ್ಟಲು ವಿಫಲವಾದಲ್ಲಿ ಎರಡು ವರ್ಷ ಸಾದಾ ಸೆರೆವಾಸ ಶಿಕ್ಷೆ ವಿಧಿಸಲಾಗಿದೆ.  ತೀರ್ಥಹಳ್ಳಿ ತಾಲ್ಲೂಕಿನ ಮೂವಳ್ಳಿ ಗ್ರಾಮದ ಆಲ್ಬರ್ಟ್ (45) ಶಿಕ್ಷೆಗೊಳಗಾದ ವ್ಯಕ್ತಿ. ಈತ ತನ್ನ ಪತ್ನಿ ಸುಧಾ ಮೇಲೆ ಹಲ್ಲೆ ನಡೆಸಿ … Read more

ಅಗರದಹಳ್ಳಿ ಕ್ಯಾಂಪ್‌ನ ವ್ಯಕ್ತಿಗೆ 10 ವರ್ಷ ಕಠಿಣ ಜೈಲು, ₹1,00,000 ದಂಡ ವಿಧಿಸಿದ ಕೋರ್ಟ್‌

-jail-for-Agaradahalli-Chandrappa.

ಭದ್ರಾವತಿ: ಕ್ರಿಮಿನಾಶಕ ಸೇವಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು ಅದಕ್ಕೆ ಕಾರಣನಾದ ವ್ಯಕ್ತಿಗೆ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ, ₹1,00,000 ದಂಡ ವಿಧಿಸಿದೆ. ಭದ್ರಾವತಿಯಲ್ಲಿರುವ 4ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾ. ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್‌ ಅವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಭದ್ರಾವತಿ ತಾಲೂಕು ಅಗರದಹಳ್ಳಿ ಕ್ಯಾಂಪ್‌ನ ಚಂದ್ರಪ್ಪಗೆ (50) ಜೈಲು ಶಿಕ್ಷೆಯಾಗಿದೆ. ಶ್ರೀಧರ (21) 2019ರ ಜನವರಿ 12ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಏನಿದು ಪ್ರಕರಣ? ‘ಶ್ರೀಧರ್‌ಗೆ … Read more

ಭದ್ರಾವತಿಯ 30 ವರ್ಷದ ವ್ಯಕ್ತಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

Shivamogga-Court-Balaraja-Urs-Road

ಭದ್ರಾವತಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 30 ವರ್ಷದ ವ್ಯಕ್ತಿಗೆ ಎಫ್‌ಟಿಎಸ್‌ಸಿ– 1 ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. 2022ರಲ್ಲಿ ಬಾಲಕಿಯ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯದ ಕುರಿತು ಅಂದಿನ ಸಿಪಿಐ ರಾಘವೇಂದ್ರ ಕಾಂಡಿಕೆ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪ‌ ಸಾಬೀತಾದ ಕಾರಣ ನ್ಯಾ. ನಿಂಗನಗೌಡ ಪಾಟೀಲ್ ಅವರು ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹ 65,000 ದಂಡ  ವಿಧಿಸಿದ್ದಾರೆ. ನೊಂದ ಬಾಲಕಿಗೆ … Read more

ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಗೆ ಹಾಕಿದ್ದ ಪತಿಗೆ ಜೈಲು ಶಿಕ್ಷೆ

Shivamogga-Court-Balaraja-Urs-Road

ಶಿವಮೊಗ್ಗ: ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಗೆ ಹಾಕಿದ್ದಲ್ಲದೆ ಮಗುವಾದ ನಂತರವು ಆಕೆಯನ್ನು ಮನೆಗೆ ಸೇರಿಸದ ಪತಿಗೆ, ಶಿವಮೊಗ್ಗ ನ್ಯಾಯಾಲಯ ಜೈಲು (Jail) ಶಿಕ್ಷೆ, ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ 30 ದಿನ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿದ ಆದೇಶಿಸಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಏನಿದು ಪ್ರಕರಣ? ಭದ್ರಾವತಿ ಗುಂಡೇರಿ ಕ್ಯಾಂಪ್‌ನ ಹರೀಶ್‌ ಅಕ್ರಮ ಸಂಬಂಧ ಹೊಂದಿದ್ದ. ಅಲ್ಲದೆ ತನ್ನ ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಗೆ ಹಾಕಿದ್ದ. ಮಗು ಆದ … Read more

ಭದ್ರಾವತಿಯ ನಾಲ್ವರಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ, ತಲಾ ₹77,000 ದಂಡ, ಕಾರಣವೇನು?

BHADRAVATHI-NEWS-UPDATE

ಶಿವಮೊಗ್ಗ: ಆಸ್ತಿ ವಿಚಾರವಾಗಿ ತಿಮ್ಮಪ್ಪ ಎಂಬುವವರನ್ನು ಮನೆಯಿಂದ ಹೊರಗೆ ಎಳೆದು ಖಾರದ ಪುಡಿ ಎರಚಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಒಡ್ಡಿದ್ದ ಆರೋಪ ಸಾಬೀತಾಗಿದೆ. ಕೃತ್ಯ ಎಸಗಿದ ನಾಲ್ವರಿಗೆ ಭದ್ರಾವತಿಯಲ್ಲಿರುವ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ (Jail) ಪ್ರಕಟಿಸಿದೆ. ಭದ್ರಾವತಿ ತಾಲೂಕು ಆನವೇರಿಯಲ್ಲಿ ಆಸ್ತಿ ವಿಚಾರವಾಗಿ ತಿಮ್ಮಪ್ಪ ಎಂಬುವವರ ಮೇಲೆ ರಾಜಪ್ಪ, ಭರತ್‌, ರಂಗನಾಥ್‌ ಅಲಿಯಾಸ್‌ ರಂಗೇಶ್‌, ಹನುಮಂತಪ್ಪ ಎಂಬುವವರು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದರು. ಈ … Read more

ಶಿವಮೊಗ್ಗದ 21 ವರ್ಷದ ಯುವಕನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, ₹10,000 ದಂಡ

azgar-sentenced-for-7-years.

ಶಿವಮೊಗ್ಗ: 2021ರಲ್ಲಿ ನಡೆದ ಕೊಲೆ ಪ್ರಕರಣವೊಂದರ ಸಂಬಂಧ, ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಮುಖ ಆರೋಪಿಗೆ ಏಳು ವರ್ಷಗಳ (7 Years) ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹10,000 ದಂಡ ವಿಧಿಸಿ ತೀರ್ಪು ನೀಡಿದೆ. 2021ರ ಆಗಸ್ಟ್‌ 9ರಂದು ಶಿವಮೊಗ್ಗದ ಬಾಪೂಜಿನಗರದ ನಿವಾಸಿ ರಾಹಿಲ್ (21) ಎಂಬುವವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಟ್ಯಾಂಕ್‌ ಮೊಹಲ್ಲಾದ ಅಜ್ಗರ್ ಖಾನ್ (21) ಮತ್ತು ಅತೀಖ್ ಪಾಷಾ (36) ಎಂಬುವವರನ್ನು … Read more

ಭದ್ರಾವತಿಯ 8 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ

Shimoga-Central-Jail-Prison

ಭದ್ರಾವತಿ: 5 ವರ್ಷಗಳ ಹಿಂದೆ ನಗರಸಭೆ ವ್ಯಾಪ್ತಿಯ ಹೊಸಮನೆಯ ಹನುಮಂತ ನಗರದಲ್ಲಿ ನಡೆದಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ (Life Time) ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.  ರಮೇಶ ಅಲಿಯಾಸ್ ಹಂದಿ ರಮೇಶ, ವೆಂಕಟರಾಮ, ಚಂದ್ರ, ಕಾರ್ತಿಕ್, ಮಧುಸೂದನ್, ರಮೇಶ, ನಾಗರಾಜ ಹಾಗೂ ಸಿದ್ದಪ್ಪ ಶಿಕ್ಷೆಗೊಳಗಾದವರು.  ಘಟನೆಯ ಹಿನ್ನೆಲೆ ಹನುಮಂತ ನಗರದ ಶಾರುಖ್ ಖಾನ್ (26) ಮತ್ತು ಅದೇ ಪ್ರದೇಶದ ಹಂದಿ ರಮೇಶ ಹಾಗೂ ಮತ್ತಿತರರಿಗೆ ಹಣಕಾಸಿನ ವಿಚಾರಕ್ಕೆ 2020ರ ಸೆ.30ರಂದು … Read more

ಭದ್ರಾವತಿಯ 19 ವರ್ಷದ ಯುವಕನಿಗೆ 20 ವರ್ಷ ಜೈಲು, ಈತ ಮಾಡಿದ ಅಪರಾಧವೇನು?

Shivamogga-Court-Balaraja-Urs-Road

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ವಿವಾಹವಾಗಿದ್ದ 19 ವರ್ಷದ ಯುವಕನಿಗೆ (Youth) 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಏನಿದು ಪ್ರಕರಣ? 19 ವರ್ಷದ ಯುವಕನೊಬ್ಬ 2022ರಲ್ಲಿ ಭದ್ರಾವತಿ ತಾಲೂಕಿನ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಆಕೆಯನ್ನು ಮದುವೆಯಾಗಿದ್ದ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಬಾಲಕಿ ದೂರು ನೀಡಿದ್ದಳು. ತನಿಖೆ ನಡೆಸಿದ ಆಗಿನ ಇನ್ಸ್‌ಪೆಕ್ಟರ್‌ ಅಭಯ ಪ್ರಕಾಶ್‌ ಸೋಮನಾಳ್‌ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ … Read more

BREAKING NEWS – ಭದ್ರಾವತಿಯಲ್ಲಿ ಶಿಕ್ಷಕಿ ಸೇರಿ ಇಬ್ಬರಿಗೆ ಮರಣದಂಡನೆ, ಏನಿದು ಪ್ರಕರಣ?

Punishment-for-Bhadravathi-Teacher-BDVT-Court.

ಭದ್ರಾವತಿ: ಸರ್ಕಾರಿ ಶಾಲೆ ಶಿಕ್ಷಕರೊಬ್ಬರನ್ನು (Teacher) ಕ್ರೂರವಾಗಿ ಹತ್ಯೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆ ಅವರ ಪತ್ನಿ ಸೇರಿ ಇಬ್ಬರಿಗೆ ಮರಣದಂಡನೆ (Death Sentence) ವಿಧಿಸಿ ಭದ್ರಾವತಿಯ ನಾಲ್ಕನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಆದೇಶಿಸಿದೆ. ನಾಲ್ಕನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚಿಟ್ಟಿಯಾರ ಅವರು ಇಂದು ತೀರ್ಪು ಪ್ರಕಟಿಸಿದ್ದಾರೆ. ಏನಿದು ಪ್ರಕರಣ? 2016ರ ಜುಲೈ 7ರಂದು ಜನ್ನಾಪುರದಲ್ಲಿ ಶಿಕ್ಷಕ ಇಮ್ತಿಯಾಜ್‌ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಅವರ ಮೃತದೇಹವನ್ನು ನೈನಾಲ್‌ … Read more