ವಾರ್ಡುಗಳ ಪುನರ್ ವಿಂಗಡಣೆ, ಆಕ್ಷೇಪಣೆ, ಸಲಹೆ ಸಲ್ಲಿಸಲು ಅವಕಾಶ, ಯಾವೆಲ್ಲ ವಾರ್ಡ್ ಪುನರ್ ವಿಂಗಡಣೆಯಾಗಿದೆ?

DC Office 1

ಶಿವಮೊಗ್ಗದ ಲೈವ್.ಕಾಂ | SHIMOGA NEWS |  30 ಡಿಸೆಂಬರ್ 2021 ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳ ಪುನರ್ ವಿಂಗಡಣೆ ಮಾಡಿ, ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಈ ಸಂಬಂಧ ಆಕ್ಷೇಪಣೆಗಳು, ಸಲಹೆಗಳಿದ್ದರೆ ತಿಳಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಸೊರಬ, ಶಿರಾಳಕೊಪ್ಪ ಪುರಸಭೆ, ಹೊಳೆಹೊನ್ನೂರು, ಆನವಟ್ಟಿ ಪಟ್ಟಣ ಪಂಚಾಯಿತಿ ವಾರ್ಡುಗಳ ಪುನರ್ ವಿಂಗಡನೆ ಮಾಡಲಾಗಿದೆ. ಡಿಸೆಂಬರ್ 27ರಂದು ರಾಜ್ಯ ಪತ್ರದಲ್ಲಿ ಪುನರ್ ವಿಂಗಡಣೆಯ ಮಾಹಿತಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಪತ್ರದಲ್ಲಿ ಪ್ರಕಟಣೆಗೊಂಡ 15 ದಿನಗಳ ಒಳಗಾಗಿ ಅಕ್ಷೇಪಣೆಗಳು, … Read more

ಶಿವಮೊಗ್ಗ ಡಿಸಿ ಕಚೇರಿ ಮುಂಭಾಗ ದಿಢೀರ್ ರಸ್ತೆ ತಡೆ, ಟ್ರಾಫಿಕ್ ಜಾಮ್

131221 ABVP Protest in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಡಿಸೆಂಬರ್ 2021 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಶಿವಮೊಗ್ಗದಲ್ಲಿ ದಿಢೀರ್ ರಸ್ತೆ ನಡೆಸಿದರು. ಇದರಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸವಳಂಗ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ವಿದ್ಯಾರ್ಥಿಗಳ ಬೇಡಿಕೆ ಏನು? ಬೇಡಿಕೆ 1 – ಎಸ್.ಎಸ್.ಪಿ ಅಡಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ,  ಅಲ್ಪಸಂಖ್ಯಾತ  ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಘೋಷಣೆ ಮಾಡಿತ್ತು. ಈ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ

BH Road Shivappanayaka Statue 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮತದಾನ ಪ್ರಕ್ರಿಯೆಯನ್ನು ಸುಸೂತ್ರವಾಗಿ ನೆರವೇರಿಸಲು ಡಿಸೆಂಬರ್ 7ರ ಸಂಜೆ 4 ಗಂಟೆಯಿಂದ ಡಿಸೆಂಬರ್ 10ರ ಸಂಜೆ 4 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಅವಧಿಯಲ್ಲಿ ಕಾನೂನು ಬಾಹಿರ ಗುಂಪುಗಾರಿಕೆ ಮತ್ತು ಸಾರ್ವಜನಿಕ ಸಭೆಯನ್ನು ನಡೆಸುವುದನ್ನು ಪ್ರತಿಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮತಗಟ್ಟೆ ಬಳಿ ಗುಂಪು ಸೇರುವಂತಿಲ್ಲ ಮತಗಟ್ಟೆ ವ್ಯಾಪ್ತಿಯಲ್ಲಿ … Read more

ಆನಂದಪುರ ಸಮೀಪ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ, ಮುಂದೇನಾಯ್ತು? ಇಲ್ಲಿದೆ ಪ್ರಮುಖ 10 ಬೆಳವಣಿಗೆಯ ಮಾಹಿತಿ

231121 Protest at Yedehalli Morarji School near Anandapuram

ಶಿವಮೊಗ್ಗ ಲೈವ್.ಕಾಂ | ANANDAPURA NEWS | 24 ನವೆಂಬರ್ 2021 ಶಾಲೆ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ತನೆ ವಿರುದ್ಧ ಸಿಡಿದೆದ್ದು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದು ಸಾಗರ ತಾಲೂಕಿನಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಬಳಿಕ ಹಲವು ರಾಜಕೀಯ ತಿರುವುಗಳನ್ನು ಪಡೆದು, ಆರೋಪ, ಪ್ರತ್ಯಾರೋಪಗಳು ಕೇಳಿ ಬಂದವು. ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ನಂತರ ನಡೆದ ಹತ್ತು ಬೆಳವಣಿಗೆಯ ವಿವರ ಇಲ್ಲಿದೆ. ಬೆಳವಣಿಗೆ 1 ಸಾಗರ ತಾಲೂಕು ಇರುವಕ್ಕಿಯ ಇಂದಿರಾ ಗಾಂಧಿ ವಸತಿ ನಿಲಯದ ವಿದ್ಯಾರ್ಥಿಗಳು ಮಂಗಳವಾರ ಬೆಳಗ್ಗೆ … Read more

ಮತ್ತೆ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ, ಶಿವಮೊಗ್ಗ ಡಿಸಿ ವಾಸ್ತವ್ಯಕ್ಕೆ ಗ್ರಾಮ ಫೈನಲ್, ದಿನಾಂಕ ಫಿಕ್ಸ್

200520 Shimoga DC KB Shivakumar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021 ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಪರಿಕಲ್ಪನೆ ಪುನಾರಂಭವಾಗಿದೆ. ಈ ಭಾರಿ ಶಿವಮೊಗ್ಗ ಜಿಲ್ಲಾಧಿಕಾರಿ ಅವರು ಗಾಜನರೂ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರತಿ ತಿಂಗಳು ಮೂರನೆ ಶನಿವಾರದಂದು ಜಿಲ್ಲಾಧಿಕಾರಿ ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಅಕ್ಟೋಬರ್ 16ರಂದು ಶಿವಮೊಗ್ಗ ತಾಲೂಕಿನ ನಿಧಿಗೆ ಹೋಬಳಿಯ ಗಾಜನೂರು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಆ ದಿನ ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಗಾಜನೂರಿಗೆ ಭೇಟಿ … Read more

ವಾರ ಕಳೆದರೂ ಪತ್ತೆಯಾಗದ ಡಿಸಿ ಕಚೇರಿ ಸಿಬ್ಬಂದಿ, ಈವರೆಗೂ ಏನೆಲ್ಲ ತನಿಖೆಯಾಗಿದೆ?

290921 Giriraj FDA missing from Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021 ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ನಾಪತ್ತೆಯಾಗಿ ಒಂದು ವಾರ ಕಳದಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್ ಮೆಸೇಜ್ ಮಾಡಿ ಗಿರಿರಾಜ್ ನಾಪತ್ತೆಯಾಗಿದ್ದಾರೆ. ಈವರೆಗೂ ಗಿರಿರಾಜ್ ಸುಳಿವು ಪತ್ತೆಯಾಗಿಲ್ಲ. ಇದನ್ನು ಓದಿ | ಡಿಸಿ ಕಚೇರಿ ಸಿಬ್ಬಂದಿ ನಾಪತ್ತೆ ಕೇಸ್, ಟ್ವಿಸ್ಟ್ ಕೊಟ್ಟ ಎಟಿಎಂ, ಮೂರು ದಿಕ್ಕಲ್ಲಿ ನಡೆಯುತ್ತಿದೆ ಪೊಲೀಸರ ತನಿಖೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಅದಕ್ಕೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಕಾರಣ ಎಂದು ವಾಟ್ಸಪ್ ಮೆಸೇಜ್ ಮಾಡಿ ಗಿರಿರಾಜ್ … Read more

ಡಿಸಿ ಕಚೇರಿ ಸಿಬ್ಬಂದಿ ನಾಪತ್ತೆ ಕೇಸ್, ಟ್ವಿಸ್ಟ್ ಕೊಟ್ಟ ಎಟಿಎಂ, ಮೂರು ದಿಕ್ಕಲ್ಲಿ ನಡೆಯುತ್ತಿದೆ ಪೊಲೀಸರ ತನಿಖೆ

290921 Giriraj FDA missing from Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಸೆಪ್ಟೆಂಬರ್ 2021 ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ನಾಪತ್ತೆ ಪ್ರಕರಣದ ತನಿಖೆ ಮತ್ತಷ್ಟು ಬಿರುಸುಗೊಂಡಿದೆ. ಶಿವಮೊಗ್ಗದಿಂದ ತೆರಳುವ ಮೊದಲು ಹಣ ಡ್ರಾ ಮಾಡಿಕೊಂಡಿರುವುದು ತನಿಖೆಗೆ ಟ್ವಿಸ್ಟ್ ನೀಡಿದೆ. ಇದನ್ನು ಓದಿ | ಡಿಸಿ ಕಚೇರಿ ಸಿಬ್ಬಂದಿ ಕಣ್ಮರೆಯಾಗಿ 24 ಗಂಟೆ, ಮೊಬೈಲ್ ಸಿಗ್ನಲ್ ಕೊನೆಯಾದಾಗಿ ಸಿಕ್ಕ ಸ್ಥಳದಲ್ಲಿ ಶೋಧ, ಈವರೆಗೂ ಏನೆಲ್ಲ ಆಗಿದೆ? ಎಫ್.ಡಿ.ಎ ಗಿರಿರಾಜ್ ಪತ್ತೆಗೆ ಶಿವಮೊಗ್ಗ ಪೊಲೀಸರು ಮೂರು ದಿಕ್ಕಿನಲ್ಲಿ ತನಿಖೆ ಕೈಗೊಂಡಿದ್ದಾರೆ. ತನಿಖೆ ಕುರಿತು ಜಿಲ್ಲಾ … Read more

ಡಿಸಿ ಕಚೇರಿ ಸಿಬ್ಬಂದಿ ಕಣ್ಮರೆಯಾಗಿ 24 ಗಂಟೆ, ಮೊಬೈಲ್ ಸಿಗ್ನಲ್ ಕೊನೆಯಾದಾಗಿ ಸಿಕ್ಕ ಸ್ಥಳದಲ್ಲಿ ಶೋಧ, ಈವರೆಗೂ ಏನೆಲ್ಲ ಆಗಿದೆ?

290921 Giriraj FDA missing from Shimoga

ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 29 ಸೆಪ್ಟೆಂಬರ್ 2021 ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್ ಸಂದೇಶ ಕಳುಹಿಸಿ ಕಣ್ಮರೆಯಾಗಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಪತ್ತೆ ಕಾರ್ಯ ಮುಂದುವರೆದಿದೆ. 24 ಗಂಟೆ ಕಳೆದರೂ ಅವರ ಕುರಿತು ಸುಳಿವು ಸಿಕ್ಕಿಲ್ಲ. ಜಿಲ್ಲಾಧಿಕಾರಿ ಕಚೇರಿಯ ಎಫ್’ಡಿಎ ಗಿರಿರಾಜ್ ಕಣ್ಮರೆಯಾಗಿ ಒಂದು ದಿನವಾಗಿದೆ. ಈತನಕ ಅವರಿಗಾಗಿ ಅಧಿಕಾರಿಗಳು, ಪೊಲೀಸರು ವಿವಿಧೆಡೆ ಶೋಧ ಕಾರ್ಯ ನಡೆಸಿದ್ದಾರೆ. ಆದರೆ ಎಲ್ಲಿಯೂ ಗಿರಿರಾಜ್ ಕುರಿತು ಸುಳಿವು ಸಿಕ್ಕಿಲ್ಲ. ಈವರೆಗೂ ಏನೆಲ್ಲ ಬೆಳವಣಿಗೆಯಾಗಿದೆ? … Read more

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್ ಮೆಸೇಜ್ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ನಾಪತ್ತೆ

breaking news graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಸೆಪ್ಟೆಂಬರ್ 2021 ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್’ನಲ್ಲಿ ಮೆಸೇಜ್ ಕಳುಹಿಸಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯೊಬ್ಬರು ನಾಪತ್ತೆಯಾಗಿದ್ದಾರೆ. ಇದು ಜಿಲ್ಲಾಧಿಕಾರಿ ಕಚೇರಿ ಮತ್ತು ಕಂದಾಯ ಇಲಾಖೆ ನೌಕರರಲ್ಲಿ ಆತಂಕ ಸೃಷ್ಟಿಸಿದೆ. ಜಿಲ್ಲಾಧಿಕಾರಿ ಕಚೇರಿಯ ಸೆಕ್ಷನ್ ಒಂದರ ಪ್ರಥಮ ದರ್ಜೆ ಸಹಾಯಕ ಗಿರಿರಾಜ್ (39) ಅವರು ನಾಪತ್ತೆಯಾಗಿದ್ದಾರೆ. ಬೆಳಗ್ಗೆಯಿಂದ ಅವರ ಹುಡುಕಾಟ ನಡೆಯುತಿದೆ. ಬೆಳಗ್ಗೆ ಮನೆಯಿಂದ ಹೊರಟಿದ್ದಾರೆ ಗಿರಿರಾಜ್ ಅವರು ಬೆಳಗಿನ ಜಾವ ಮನೆಯಿಂದ ಹೊರಟಿದ್ದಾರೆ. ತಮ್ಮ ವಾಹನವನ್ನು ಕೂಡ ಕೊಂಡೊಯ್ದಿಲ್ಲ … Read more

ಚುನಾವಣೆ ದಿನಾಂಕ ಘೋಷಿಸದಿದ್ದರೆ ಉಪವಾಸ ಸತ್ಯಾಗ್ರಹ, ಮಾಜಿ ಸಚಿವರ ಎಚ್ಚರಿಕೆ

Kimmane Rathnakar

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 24 ಸೆಪ್ಟೆಂಬರ್ 2021 ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಎಚ್ಚರಿಸಿದ್ದಾರೆ. ಅಕ್ಟೋಬರ್ 1ರ ಒಳಗೆ ಚುನಾವಣೆ ದಿನಾಂಕ ಘೋಷಿಸಬೇಕು. ಒಂದು ವೇಳೆ ಜಿಲ್ಲಾಧಿಕಾರಿ ಅವರು ವಿಳಂಬ ಮಾಡಿದರೆ, ಗಾಂಧಿ ಜಯಂತಿಯಂದು ಉಪವಾಸ ಸತ್ಯಾಗ್ರಹ ಮಾಡುವುದಾಗಿ ತಿಳಿಸಿದ್ದಾರೆ. ತೀರ್ಥಹಳ್ಳಿ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿ ಅವರಿಗೆ ಮನವಿ … Read more