ಸಹ್ಯಾದ್ರಿ ಕಾಲೇಜು ಮುಂದೆ ವಾಹನ ಸಂಚಾರ ನಿಷೇಧ, ವಾಹನಗಳಿಗೆ ಪರ್ಯಾಯ ಮಾರ್ಗ, ಇಲ್ಲಿದೆ ಕಾರಣ

BH-Road-in-front-of-Sahyadri-College.

SHIVAMOGGA LIVE NEWS | 11 MAY 2023 SHIMOGA : ಸಹ್ಯಾದ್ರಿ ಕಾಲೇಜಿನಲ್ಲಿ ಮೇ 13ರಂದು ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆ ಕಾಲೇಜು ಮುಂಭಾಗ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ವಾಹನಗಳಿಗೆ ಪರ್ಯಾಯ ಮಾರ್ಗ (Route Change) ಸೂಚಿಸಲಾಗಿದೆ. ಪರ್ಯಾಯ ಮಾರ್ಗ ಯಾವುದು? ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ. ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ … Read more

ಜಿಲ್ಲೆಯ ವಿವಿಧೆಡೆ ಮಳೆ, ಶಿವಮೊಗ್ಗದಲ್ಲಿ ತಂಪೆರೆಯಲಿದ್ದಾನಾ ವರುಣ?

Rain-at-Shimoga

SHIVAMOGGA LIVE NEWS | 7 APRIL 2023 SHIMOGA : ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗುತ್ತಿದೆ (RAIN). ಭಾರಿ ಬಿಸಲಿನಿಂದ ಹೈರಾಣಾಗಿದ್ದ ಜನರು ನೆಮ್ಮದಿಯ ನಿಟ್ಟುಸಿರುವು ಬಿಡುವಂತಾಗಿದೆ. ಜಿಲ್ಲೆಯ ವಿವಿಧೆಡೆ ಸಂಜೆ ವೇಳೆ ಮಳೆ ಸುರಿದಿದೆ. ಶಿವಮೊಗ್ಗ ನಗರದಲ್ಲಿ ಮೋಡ ಕವಿದಿದ್ದು, ಮಳೆ ಸುರಿಯುವ ಸಾಧ್ಯತೆ ಇದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್‌ಪೋಸ್ಟ್‌ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್

ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಕಡಿಮೆಯಾದ ಮಳೆ, ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

Rain-in-Shimoga-Students

SHIVAMOGGA LIVE NEWS | SHIMOGA | 19 ಜುಲೈ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ (RAIN) ಪ್ರಮಾಣ ಕಡಿಮೆಯಾಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ 37.20 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 2.50 ಮಿಮಿ., ಭದ್ರಾವತಿ ತಾಲೂಕಿನಲ್ಲಿ 3.30 ಮಿ.ಮಿ., ತೀರ್ಥಹಳ್ಳಿ ತಾಲೂಕಿನಲ್ಲಿ 9.90 ಮಿಮಿ., ಸಾಗರದಲ್ಲಿ 8.20 ಮಿಮಿ., ಶಿಕಾರಿಪುರದಲ್ಲಿ 2.80 ಮಿಮಿ., ಸೊರಬದಲ್ಲಿ 5.10 ಮಿಮಿ. ಹಾಗೂ ಹೊಸನಗರ ತಾಲೂಕಿನಲ್ಲಿ 5.40 ಮಿಮಿ. ಮಳೆಯಾಗಿದೆ. ಇದನ್ನೂ ಓದಿ – ವೈರಲ್ ವಿಡಿಯೋ, ಹುಲಿ ಬಂತು … Read more

ಶಿವಮೊಗ್ಗ ನ್ಯಾಯಾಲಯದ ಕೊಠಡಿಯಲ್ಲಿ ತೋಳದ ಹಾವು

Snake-caught-in-Shimoga-district-court

SHIVAMOGGA LIVE NEWS | SNAKE | 26 ಮೇ 2022 ಶಿವಮೊಗ್ಗ ನ್ಯಾಯಾಲಯದ ಕೊಠಡಿಯೊಳಗೆ ಹಾವು (SNAKE) ಕಾಣಿಸಿಕೊಂಡು ಕೆಲ ಹೊತ್ತು ಸಿಬ್ಬಂದಿ ಆತಂಕಕ್ಕೀಡಾಗಿದ್ದರು. ಉರಗ ರಕ್ಷಕ ಸ್ನೇಕ್ ಕಿರಣ್ ಅವರು ಸ್ಥಳಕ್ಕಾಗಮಿಸಿ ಹಾವನ್ನು ರಕ್ಷಣೆ ಮಾಡಿದ್ದಾರೆ. ಬೆಳಗ್ಗೆ ಸಿಬ್ಬಂದಿ ನ್ಯಾಯಾಲಯಕ್ಕೆ ಬಂದು ಕೊಠಡಿ ಬಾಗಿಲು ತೆಗೆದಾಗ ಹಾವು ಕಾಣಿಸಿಕೊಂಡಿದೆ. ಆತಂಕಗೊಂಡ ಸಿಬ್ಬಂದಿ ಕೂಡಲೆ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಅವರು ಸುಮಾರು ಒಂದೂವರೆ ಅಡಿ ಉದ್ದವಿದ್ದ ತೋಳದ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಸೈಕ್ಲೋನ್ ಮಳೆ, ಕೂಲ್ ಕೂಲ್ ವಾತಾವರಣ

Shimoga Rain General Image

SHIVAMOGGA LIVE NEWS | CYCLONE | 11 ಮೇ 2022 ಆಸಾನಿ ಚಂಡಮಾರುತದ ಪರಿಣಾಮ ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಆಗುತ್ತಿದೆ. ಇನ್ನು ಮೂರ್ನಾಲ್ಕು ದಿನ ಮಳೆ ಸುರಿಯುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಬೆಳಗ್ಗೆಯಿಂದಲೆ ಜಿಟಿಜಿಟಿ ಮಳೆ ಆರಂಭವಾಗಿದೆ. ಜಿಲ್ಲೆಯಾದ್ಯಂತ ಮಳೆ ಬೀಳುತ್ತಿದೆ. ಆಸಾನಿ ಚಂಡಮಾರುತದ ಪರಿಣಾಮ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಪ್ರದೇಶ ಮತ್ತು ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ ಆಗುವ ಸಂಭವವಿದೆ ಎಂದು ಹಮಾವಾನ ಇಲಾಖೆ … Read more

ಈಶ್ವರಪ್ಪ ರಾಜೀನಾಮೆ, ಬಿಜೆಪಿಯ ತ್ರಿಮೂರ್ತಿಗಳ ಸಕ್ರಿಯ ರಾಜಕಾರಣದ ಯುಗಾಂತ್ಯವಾ?

Eshwarappa-Yedyurappa-Shankaramurthy

SHIVAMOGGA LIVE NEWS | SHIMOGA | 16 ಏಪ್ರಿಲ್ 2022 ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿಯ ತ್ರಿಮೂರ್ತಿಗಳ ಸಕ್ರಿಯ ರಾಜಕಾರಣದ ಯುಗಾಂತ್ಯವಾಗುತ್ತಾ ಎಂಬ ಪ್ರಶ್ನೆ ಮುನ್ನಲೆಗೆ ಬಂದಿದೆ. ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ಮತ್ತು ಡಿ.ಹೆಚ್.ಶಂಕರಮೂರ್ತಿ ಅವರು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ತ್ರಿಮೂರ್ತಿಗಳು. ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಮಾರ್ಗಸೂಚಿ ರೂಪಿಸಿದ ನಾಯಕರು ಈಗ ಮಾರ್ಗದರ್ಶಿ ಮಂಡಳಿ ಸೇರುವಂತಾಗಿದೆ. ಮಲೆನಾಡು ಭಾಗದ ರಾಜಕಾರಣದ ಮತ್ತೊಂದು ಅಧ್ಯಾಯ ಮುಗಿದಂತಾಯಿತಾ ಎಂದು ಬಿಜೆಪಿ ಕಾರ್ಯಕರ್ತರು ಯೋಚಿಸುವಂತಾಗಿದೆ. … Read more

ಪೈಸೆ ಲೆಕ್ಕದಲ್ಲಿ ಮತ್ತಷ್ಟು ಏರಿತು ಪೆಟ್ರೋಲ್, ಡಿಸೇಲ್, ಇವತ್ತೆಷ್ಟು ಹೆಚ್ಚಾಗಿದೆ? ಈವರೆಗೂ ಎಷ್ಟು ಏರಿದೆ?

petrol pump

SHIVAMOGGA LIVE NEWS | 4 ಏಪ್ರಿಲ್ 2022 ಪೆಟ್ರೋಲ್, ಡಿಸೇಲ್ ದರ ಮತ್ತಷ್ಟು ಏರಿಕೆಯಾಗಿದೆ. ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್ ದರ ಹೆಚ್ಚಳವಾಗಿದೆ. ಇವತ್ತು ಪ್ರತಿ ಲೀಟರ್ ಪೆಟ್ರೋಲ್ ದರ 42 ಪೈಸೆ ಹೆಚ್ಚಳವಾಗಿದೆ. ಹಾಗಾಗಿ ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 110.86 ರೂ.ಗೆ ತಲುಪಿದೆ.   ಕಳೆದ ನವೆಂಬರ್ ತಿಂಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 115.52 ರೂ. ಗೆ ತಲುಪಿತ್ತು. ಇದು ದಾಖಲೆ ಪ್ರಮಾಣದ ಹೆಚ್ಚಳವಾಗಿತ್ತು. ನವೆಂಬರ್ 3ರಂದು ಪೆಟ್ರೋಲ್ ದರ … Read more

ಶಿವಮೊಗ್ಗದಲ್ಲಿ ಹಿಜಾಬ್’ಗಾಗಿ ಪರೀಕ್ಷೆಯನ್ನೇ ತ್ಯಜಿಸಿದ 13 ವಿದ್ಯಾರ್ಥಿನಿಯರು

Police Bus at Shimoga BH Road

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಫೆಬ್ರವರಿ 2022 ಶಿವಮೊಗ್ಗದಲ್ಲಿ ಹಿಜಾಬ್ ವಿವಾದ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆ ವಿದ್ಯಾರ್ಥಿನಿಯರು ಪರೀಕ್ಷೆ ತ್ಯಜಿಸಿ ಹೊರ ನಡೆದಿದ್ದಾರೆ. ಬಿ.ಹೆಚ್.ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜ ಪ್ರೌಢಶಾಲೆ ವಿಭಾಗದಲ್ಲಿ ಘಟನೆ ಸಂಭವಿಸಿದೆ. 13 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ಹೊರ ನಡೆದಿದ್ದಾರೆ. ಎಂದಿನಂತೆ ವಿದ್ಯಾರ್ಥಿನಿಯರು ಪರೀಕ್ಷಾ ಕೊಠಡಿಗೆ ತೆರಳಿದ್ದರು. ಆದರೆ ಹೈಕೋರ್ಟ್ ಆದೇಶದ ಹಿನ್ನೆಲೆ ಹಿಜಾಬ್ ಧರಿಸದಂತೆ ಶಿಕ್ಷಕರು ಸೂಚಿಸಿದರು. ಪರೀಕ್ಷಾ ಕೊಠಡಿಯಿಂದ ಹೊರ … Read more

ನೂತನ ಉಸ್ತುವಾರಿ ಸಚಿವರಿಂದ ಶಿವಮೊಗ್ಗದಲ್ಲಿ ಧ್ವಜಾರೋಹಣ, ಜಿಲ್ಲೆ ಅಭಿವೃದ್ಧಿ ಬಗ್ಗೆ ಹೇಳಿದ ಪ್ರಮುಖ 7 ವಿಚಾರ ಇಲ್ಲಿವೆ

260122 Republic Day Flag Hoisitng by Minister Narayana Gowda

ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಜನವರಿ 2022 ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರು ಡಿಎಆರ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಭೆಯಲ್ಲಿ ಮಾತನಾಡಿದ ಸಚಿವ ನಾರಾಯಣಗೌಡ ಅವರು ಸರ್ಕಾರದ ಯೋಜನೆಗಳು, ಜಿಲ್ಲೆಯ ಅಭಿವೃದ್ಧಿ ಕುರಿತು ಮಾತನಾಡಿದರು. ಸಚಿವರು ಹೇಳಿದ್ದೇನು? ♦ ಸ್ವಾತಂತ್ರ್ಯದ ಅಮೃತ ಮಹೋತ್ಸವಾದ ಅಂಗವಾಗಿ 14 ಅಮೃತ ಯೋಜನೆಗಳನ್ನು ಹೊಸದಾಗಿ ಘೋಷಿಸಲಾಗಿದ್ದು, ಕೃಷಿ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕ್ರೀಡೆ, ಕೈಗಾರಿಕೆ ವಲಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದು ಇದರ ಉದ್ದೇಶವಾಗಿದೆ. ♦ ಶಿವಮೊಗ್ಗ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮತದಾನ ಚುರುಕು, ಸಂಜೆಯೇ ಹೊರಬೀಳಲಿದೆ ಫಲಿತಾಂಶ

211121 KaSaPa Election in Shimoga Taluk

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ನವೆಂಬರ್ 2021 ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇವತ್ತು ಸಂಜೆ ವೇಳೆಗೆ ಕಸಾಪ ಶಿವಮೊಗ್ಗ ಘಟಕದ ನೂತನ ಸಾರಥಿ ಯಾರು ಅನ್ನುವುದು ಗೊತ್ತಾಗಲಿದೆ. ಒಂದೇ ಒಂದು ಫೋನ್ ಕರೆ ಮಾಡಿದರೆ ನಿಮ್ಮ ಮನೆಗೆ ಬರಲಿದೆ ಲ್ಯಾಬೋರೇಟರಿ. ನುರಿತ ತಜ್ಞರಿಂದ ನಡೆಯುತ್ತೆ ತಪಾಸಣೆ. ಈಗಲೆ ಕರೆ ಮಾಡಿ. ಶಿವಮೊಗ್ಗ ಜಿಲ್ಲೆಯಾದ್ಯಂತ 12 … Read more