ರಾಜ್ಯ ಕ್ರಿಕೆಟ್‌ ಸಂಸ್ಥೆ ಚುನಾವಣೆ, ಡಿ.ಎಸ್‌.ಅರುಣ್‌ಗೆ ಭರ್ಜರಿ ಗೆಲುವು

DS-Arun-MLC-Shimoga

ಶಿವಮೊಗ್ಗ: ರಾಜ್ಯ ಕ್ರಿಕೆಟ್ ಸಂಸ್ಥೆ (KSCA)ಯ ಆಡಳಿತ ಮಂಡಳಿ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಶಿವಮೊಗ್ಗ ವಲಯದ ನೂತನ ಸಂಚಾಲಕರಾಗಿ ಮತ್ತು ರಾಜ್ಯ ಕ್ರಿಕೆಟ್ (Cricket) ಸಂಸ್ಥೆಯ ನಿರ್ದೇಶಕರಾಗಿ (Director) ಆಯ್ಕೆಯಾಗಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಡಿ.ಎಸ್. ಅರುಣ್ ಅವರು, ಕ್ರಿಕೆಟ್ ಅಭಿವೃದ್ಧಿ, ಪ್ರತಿಭಾನ್ವಿತ ಆಟಗಾರರನ್ನು ಗುರುತಿಸಿ ಅವರಿಗೆ ಉತ್ತಮ ತರಬೇತಿ ನೀಡುವುದು ಪ್ರಮುಖ ಗುರಿಯಾಗಿದೆ. ಇದರೊಂದಿಗೆ, ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶವಿದೆ ಎಂದು … Read more

ಬಿಹಾರ ಫಲಿತಾಂಶ, ಶಿವಮೊಗ್ಗದಲ್ಲಿ ಯಡಿಯೂರಪ್ಪ, ರಾಘವೇಂದ್ರ ಫಸ್ಟ್‌ ರಿಯಾಕ್ಷನ್‌, ಏನಂದ್ರು?

BS-Yedyurappa-and-BY-Raghavendra-spoke-to-media-about-result - ಬಿಹಾರ ಚುನಾವಣೆ ಫಲಿತಾಂಶ

ಶಿವಮೊಗ್ಗ: ಬಿಹಾರ ಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿ, ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಇತ್ತ ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರು ಫಲಿತಾಂಶ ಮತ್ತು ಗೆಲುವಿನ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪ ಏನಂದ್ರು? ವಿನೋಬನಗರದ ತಮ್ಮ ಮನೆಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ‘ಬಿಹಾರದಲ್ಲಿ ದೊಡ್ಡ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆ ಇತ್ತು. ಆದರೆ ಇಷ್ಟು ದೊಡ್ಡ ಮಟ್ಟಿಗೆ ಸ್ಥಾನಗಳನ್ನು ಗಳಿಸುತ್ತೇವೆ ಎಂದು ನಿರೀಕ್ಷಿಸಿರಲಿಲ್ಲ. ಎನ್‌ಡಿಎ … Read more

ನಾಮಪತ್ರ ಸಲ್ಲಿಕೆ ಆರಂಭ, ಡಿ.5 ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಮತದಾನ

zilla-pachayath-shivamogga

ಶಿವಮೊಗ್ಗ: ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮತಕ್ಷೇತ್ರದಿಂದ ಶಿವಮೊಗ್ಗ ಜಿಲ್ಲಾ ಯೋಜನಾ ಸಮಿತಿ ಸದಸ್ಯ ಸ್ಥಾನಗಳಿಗೆ ನಡೆಯುವ ಮತದಾನದ ದಿನಾಂಕವನ್ನು ಚುನಾವಣಾಧಿಕಾರಿ ಎನ್.ಹೇಮಂತ್‌ ಪ್ರಕಟಿಸಿದ್ದಾರೆ.  ನ.13 ರಿಂದ 24ರವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು. ನ.26 ರ ಬೆಳಿಗ್ಗೆ 11 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ನ.29 ಕೊನೆ ದಿನ. ಡಿ.5ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಜಿಲ್ಲಾ ಪಂಚಾಯಿತಿ … Read more

ಶಿವಮೊಗ್ಗ ಹಾಪ್‌ಕಾಮ್ಸ್‌ಗೆ 15 ನಿರ್ದೇಶಕರು ಅವಿರೋಧ ಆಯ್ಕೆ, ವಿಜಯ್‌ಕುಮಾರ್‌ ಹ್ಯಾಟ್ರಿಕ್‌ ಸಾಧನೆ

Shimoga-News-update

ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಕ್ಕೆ (ಹಾಪ್‌ಕಾಮ್ಸ್) ನಿರ್ದೇಶಕರಾಗಿ 15 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂತೇಕಡೂರು ವಿಜಯಕುಮಾರ್ ಸತತ ಮೂರನೇ ಬಾರಿಗೆ ಆಯ್ಕೆಯಾದರೆ, ಡಾ.ಶರತ್ ಮರಿಯಪ್ಪ ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಕಂಡರು. (Hopcoms) ಯಾರೆಲ್ಲ ಆಯ್ಕೆ ಆಗಿದ್ದಾರೆ? ಈ ಪೈಕಿ ಶಿವಮೊಗ್ಗ ತಾಲೂಕಿನಿಂದ ಆರು ಮಂದಿ ಆಯ್ಕೆಯಾಗಿದ್ದಾರೆ. ಸಂತೇಕಡೂರಿನ ಆರ್.ವಿಜಯಕುಮಾ‌ರ್ (ದನಿ), ಶಿವಮೊಗ್ಗ ತಾಲೂಕು ಕೈದೊಟ್ಟು ಕೆ.ಎಸ್.ಚಂದ್ರೇಗೌಡ, ಬಿ.ಬೀರನಹಳ್ಳಿಯ ಎಂ.ಪಿ.ದಿನೇಶ್ ಪಟೇಲ್, ಕುಂಚೇನಹಳ್ಳಿಯ ಕೆ.ಜಿ.ನಾಗೇಶ್ ನಾಯ್ಕ, ಶೆಟ್ಟಿಹಳ್ಳಿಯ ಪರಶುರಾಮಪ್ಪ, ಶಿವಮೊಗ್ಗ … Read more

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ದಿನಾಂಕ ಪ್ರಕಟ, ನೀತಿ ಸಂಹಿತೆ ಜಾರಿ

KUWJ-Election-officer-Journalist-telex-ravikumar

ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) 2025-28ನೇ ಅವಧಿಯ ಆಡಳಿತ ಮಂಡಳಿ ಚುನಾವಣೆಗೆ (Election) ಅ.13ರಂದು ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಸಂಘದ ಮುಖ್ಯ ಚುನಾವಣೆ ಅಧಿಕಾರಿ ಎನ್.ರವಿಕುಮಾರ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರವಿಕುಮಾರ್‌, ಕಾರ್ಮಿಕ ಇಲಾಖೆ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಒಂದೆ ಬಾರಿ ಚುನಾವಣೆ ನಡೆಯಲಿದೆ. ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಯು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಎಂದರು. ರವಿಕುಮಾರ್‌ ಏನೆಲ್ಲ ಹೇಳಿದರು? ಇಲ್ಲಿದೆ … Read more

ಶಿವಮೊಗ್ಗ ಹಾಪ್‌ಕಾಮ್ಸ್‌ ಆಡಳಿತ ಮಂಡಳಿಗೆ ಚುನಾವಣೆ, ದಿನಾಂಕ ಪ್ರಕಟ

Shimoga-News-update

ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ನಿಯಮಿತ (ಹಾಪ್ ಕಾಮ್ಸ್) ಇದರ 5 ವರ್ಷದ ಅವಧಿಗೆ ಆಡಳಿತ ಮಂಡಳಿಯ ಸಾಮಾನ್ಯ ಚುನಾವಣೆಯನ್ನು (Election) ಅ.26ರಂದು ಸಂಘದ ಎಪಿಎಂಸಿ ಆವರಣದ ಕಟ್ಟಡದಲ್ಲಿ ನಡೆಸಲಾಗುವುದು ಎಂದು ರಿಟರ್ನಿಂಗ್ ಅಧಿಕಾರಿ ತಿಳಿಸಿದ್ದಾರೆ. ಈ ಸಂಬಂಧ ಅ.6 ರಂದು ಚುನಾವಣೆ ವೇಳಾಪಟ್ಟಿ ಹೊರಡಿಸಲಾಗಿದೆ. ಅದನ್ನು ಸಂಘದ ಅರ್ಹ ಸದಸ್ಯರಿಗೆ ಅಂಚೆ ಮೂಲಕ ಕಳುಹಿಸಿ ಸಂಘದ ನಾವಫಲಕದಲ್ಲಿ ಪ್ರಕಟಿಸಲಾಗಿದೆ. ಅಂಚೆ ತಲುಪದ ಸಂಘದ ಅರ್ಹ ಸದಸ್ಯರ ತಿಳಿವಳಿಕೆಗಾಗಿ … Read more

ಶಿವಮೊಗ್ಗ ಹಾಪ್‌ಕಾಮ್ಸ್‌ಗೆ ನೂತನ ಅಧ್ಯಕ್ಷ, ಅವಿರೋಧ ಆಯ್ಕೆ

240425 Sante Kadur vijaykumar new president of Hopcoms

ಶಿವಮೊಗ್ಗ : ಕಾಂಗ್ರೆಸ್‌ ಮುಖಂಡ ಆರ್.ವಿಜಯಕುಮಾರ್ (ದನಿ) ಶಿವಮೊಗ್ಗ ಹಾಪ್ ಕಾಮ್ಸ್‌ನ ನೂತನ ಅಧ್ಯಕ್ಷರಾಗಿ (President) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಪ್‌ಕಾಮ್ಸ್‌ನ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿಯಾಗಿತ್ತು. ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್‌? ವಿಜಯಕುಮಾರ್ ಹೊರತಾಗಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಲಾಯಿತು. ಹಾಪ್‌ಕಾಮ್ಸ್‌ನ 16 ನಿರ್ದೇಶಕರ ಪೈಕಿ ಮೂವರು ಗೈರಾಗಿದ್ದರು. ನಿರ್ದೇಶಕರಾದ ಕೆ.ಜೆ.ನಾಗೇಶ್ ನಾಯ್ಡ್, ಡಿ.ಸಿ ನಿರಂಜನ್, … Read more

ಪುರಸಭೆಗೆ ಬಿಜೆಪಿಯ ಅಧ್ಯಕ್ಷ, ಕಾಂಗ್ರೆಸ್‌ನ ಉಪಾಧ್ಯಕ್ಷೆ, ಒಬ್ಬ ಬಿಜೆಪಿಯ ಸದಸ್ಯರಿಂದ ಕಾಂಗ್ರೆಸ್‌ ಪರ ಮತ

bjp-candidate-prabhu-mestri-wins-purasabhe-election

ಸೊರಬ : ಪುರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭು ಮೇಸ್ತ್ರಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಪಕ್ಷದ ಶ್ರೀರಂಜನಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನೊಂದೆಡೆ ಬಿಜೆಪಿ ಸದಸ್ಯರು ಅಡ್ಡಮತದಾನ (Cross Voting) ಮಾಡಿದ್ದು, ಚರ್ಚೆಗೆ ಕಾರಣವಾಗಿದೆ.  ಇದನ್ನೂ ಓದಿ » ಹಿಟ್‌ ಅಂಡ್‌ ರನ್‌ ಅಪಘಾತ, ತಕ್ಷಣ ನೆರವಿಗೆ ಧಾವಿಸಿದ ಮಿನಿಸ್ಟರ್‌ ಮಧು ಬಂಗಾರಪ್ಪ ಪುರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಅಭ್ಯರ್ಥಿಗೆ ಮೀಸಲಾಗಿತ್ತು. ಬಿಜೆಪಿ ಸದಸ್ಯ ಪ್ರಭು ಮೇಸ್ತ್ರಿ ಮಾತ್ರ ನಾಮಪತ್ರ ಸಲ್ಲಿಸಲು ಅರ್ಹವಾಗಿದ್ದರು. ಆದ್ದರಿಂದ ಪ್ರಭು ಮೇಸ್ತ್ರಿ ಮಾತ್ರ ಅವಿರೋಧವಾಗಿ … Read more

ಯುವ ಕಾಂಗ್ರೆಸ್‌ ಚುನಾವಣೆ ಫಲಿತಾಂಶ ಪ್ರಕಟ, ಯಾವ್ಯಾವ ತಾಲೂಕಿಗೆ ಯಾರೆಲ್ಲ ಆಯ್ಕೆಯಾಗಿದ್ದಾರೆ?

Youth-Congress-new-president-Harshith-Gowda.

SHIVAMOGGA LIVE NEWS, 8 FEBRUARY 2025 ಶಿವಮೊಗ್ಗ : ಯುವ ಕಾಂಗ್ರೆಸ್‌ ಪದಾಧಿಕಾರಿಗಳ ಹುದ್ದೆಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಹರ್ಷಿತ್‌ ಗೌಡ ಶಿವಮೊಗ್ಗದ ನೂತನ ಜಿಲ್ಲಾಧ್ಯಕ್ಷರಾಗಿ (President) ಆಯ್ಕೆಯಾಗಿದ್ದಾರೆ. 33 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ವಿಧಾನಸಭೆ ಕ್ಷೇತ್ರವಾರು, ಬ್ಲಾಕ್‌ ಮಟ್ಟದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಕಾರ್ಯದರ್ಶಿ ಹುದ್ದೆಗಳ ಆಯ್ಕೆಗೆ ನಡೆದ ಚುನಾವಣೆಯ ಫಲಿತಾಂಶ ಕಳೆದ ರಾತ್ರಿ ಪ್ರಕಟವಾಗಿದೆ. ವಿಧಾನಸಭೆ ಕ್ಷೇತ್ರವಾರು ಅಧ್ಯಕ್ಷರ ಆಯ್ಕೆ ವಿಧಾನಸಭೆ ಕ್ಷೇತ್ರವಾರು ಯುವ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರ … Read more

ಶಿವಮೊಗ್ಗ ಸಿಟಿ ಕೋ ಆಪರೇಟಿವ್‌ ಬ್ಯಾಂಕ್‌ ಚುನಾವಣೆ, ಇಷ್ಟೊಂದು ಅಬ್ಬರ ಏಕೆ?

-City-Co-Operative-Election-flex-in-Shimoga-city.

SHIVAMOGGA LIVE NEWS | 28 DECEMBER 2024 ಶಿವಮೊಗ್ಗ : ಸಿಟಿ (City) ಕೋ ಆಪರೇಟಿವ್‌ ಬ್ಯಾಂಕ್‌ ನಿರ್ದೇಶಕರ ಸ್ಥಾನಕ್ಕೆ ಡಿಸೆಂಬರ್‌ 29ರಂದು ಚುನಾವಣೆ ನಡೆಯಲಿದೆ. 15 ನಿರ್ದೇಶಕರ ಸ್ಥಾನಕ್ಕೆ 32 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಮತದಾರರ ಮನವೊಲಿಸಲು ಅಭ್ಯರ್ಥಿಗಳು ಕಡೆ ಕ್ಷಣದಲ್ಲಿ ನಾನಾ ಕಸರತ್ತು ನಡೆಸುತ್ತಿದ್ದಾರೆ. ಫ್ಲೆಕ್ಸುಗಳ ಅಬ್ಬರ, ಹಣ, ಗಿಫ್ಟುಗಳ ಹಂಚಿಕೆ ಆರೋಪ, ಜಾತಿ ಪ್ರಭಾವದ ಗುಸುಗುಸು ಕೂಡ ಕೇಳಿ ಬಂದಿದೆ. ಭಾನುವಾರ ನಡೆಯಲಿದೆ ಚುನಾವಣೆ ಸಿಟಿ ಕೋ ಆಪರೇಟಿವ್‌ ಬ್ಯಾಂಕ್‌ನ 15 ನಿರ್ದೇಶಕರ … Read more