ಸಾರ್ವಜನಿಕರೆ ಎಚ್ಚರ, ಹೊಸನಗರದಲ್ಲಿ ಮೆಸ್ಕಾಂ ಅಲರ್ಟ್ ಪ್ರಕಟ, ಏನಿದು?
ಹೊಸನಗರ: ತಾಲೂಕಿನ ಹರಿದ್ರಾವತಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ 33/11 ಕೆ.ವಿ ಉಪವಿದ್ಯುತ್ ವಿತರಣಾ ಕೇಂದ್ರ ಶೀಘ್ರದಲ್ಲಿಯೇ ಕಾರ್ಯಾರಂಭಗೊಳ್ಳಲಿದೆ (high alert). ಇದರ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ 33 ಕೆವಿ ಟವರ್ಗಳು, 11 ಕೆವಿ ವಿದ್ಯುತ್ ಕಂಬಗಳನ್ನು ಸಾರ್ವಜನಿಕರು ಮುಟ್ಟುವುದಾಗಲಿ, ಸಾಕುಪ್ರಾಣಿಗಳನ್ನು ಕಟ್ಟುವುದಾಗಲಿ ಅಥವಾ ಇವುಗಳ ಸಮೀಪ ಇನ್ಯಾವುದೇ ಅನಧಿಕೃತ ಚಟುವಟಿಕೆ ಮಾಡುವಂತಿಲ್ಲ ಎಂದು ಸಾರ್ವಜನಿಕರ ಹಿತದೃಷ್ಟಿಯಿಂದ ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ – ಏಲಕ್ಕಿ ಬಾಳೆಹಣ್ಣು ಕಳ್ಳತನ, ದಾಖಲಾಯ್ತು ಪ್ರಕರಣ, ಎಲ್ಲಿ? ಆಗಿದ್ದೇನು?