ಇವತ್ತು ಶಿವಮೊಗಕ್ಕೆ ಸಚಿವ ಈಶ್ವರಪ್ಪ, ಕರೋನದಿಂದ ಆಯನೂರು ಮಂಜುನಾಥ್ ಗುಣ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಸೆಪ್ಟಂಬರ್ 2020 ಕರೋನ ಸೋಂಕಿನಿಂದ ಗುಣಮುಖರಾಗಿ ಒಂದು ವಾರ ಕ್ವಾರಂಟೈನ್ನಲ್ಲಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಇವತ್ತು ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದಾರೆ. ಇವತ್ತು ರಾತ್ರಿ ಶಿವಮೊಗ್ಗಕ್ಕೆ ಆಗಮಿಸಲಿರುವ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಕರೋನ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದು ಗುಣವಾಗಿದ್ದಾರೆ. ಕ್ವಾರಂಟೈನ್ ಅವಧಿ ಮುಗಿಸಿ ಜಿಲ್ಲೆಗೆ ಹಿಂತಿರುಗುತ್ತಿದ್ದಾರೆ. ಸೆಪ್ಟೆಂಬರ್ 18ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. … Read more