ಸಿಎಂ ಯಡಿಯೂರಪ್ಪಗೆ ಟೈಮ್ ಕೊಡುತ್ತಿಲ್ಲ ಮೋದಿ, ಕಾರು ಬಿಟ್ಟು ಕೆಳಗಿಳಿಯುತ್ತಿಲ್ಲ ಈಶ್ವರಪ್ಪ, ಕಾಂಗ್ರೆಸ್ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 26 ಸೆಪ್ಟೆಂಬರ್ 2019 ಅತಿವೃಷ್ಟಿ ಕುರಿತು ಪರಿಶೀಲನಾ ಸಭೆ ನಡೆಸಬೇಕಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕಾರು ಬಿಟ್ಟು ಕಳೆಗಿಳಿಯುತ್ತಿಲ್ಲ. ಕಂದಾಯ ಸಚಿವರು ಚಿಕ್ಕಮಗಳೂರು ಬಿಟ್ಟು ಬೇರಾವ ಜಿಲ್ಲೆಗು ತೆರಳಿಲ್ಲ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ದಿವಾಕರ್ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ದಿವಾಕರ್, ಅತಿವೃಷ್ಟಿ ಸಂದರ್ಭವನ್ನು ನಿಭಾಯಿಸುವ ಪ್ರಮುಖ ಜವಾಬ್ದಾರಿ ಗ್ರಾಮೀಣಾಭಿವೃದ್ಧಿ ಮತ್ತು ಕಂದಾಯ ಇಲಾಖೆಗಳ ಮೇಲಿರುತ್ತದೆ. ಆದರೆ ಗ್ರಾಮೀಣಾಭಿವೃದ್ದಿ ಸಚಿವರು ಕಾರು ಬಿಟ್ಟು ಕೆಳಗಿಳಿಯುವುದಿಲ್ಲ ಅನ್ನುವುದಕ್ಕೆ ಬೆಳಗಾವಿಯಲ್ಲಿ ಆದ … Read more

‘ಸದ್ಯದಲ್ಲೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ, ಆಮೇಲೆ ನಿವಾರಣೆಯಾಗುತ್ತೆ ನಿರುದ್ಯೋಗ ಸಮಸ್ಯೆ’

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 24 ಸೆಪ್ಟೆಂಬರ್ 2019 ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಇವತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್‌ನಲ್ಲಿ ಸಂವಾದ ಏರ್ಪಡಿಸಲಾಗಿತ್ತು. ಈ ವೇಳೆ ಸಚಿವರು ಏನೆಲ್ಲ ಹೇಳಿದರು? ಇಲ್ಲಿದೆ ಡಿಟೇಲ್ಸ್ ದೊಡ್ಡ ಇಲಾಖೆ ಸಿಕ್ಕಿದೆ ಗ್ರಾಮೀಣಾಭಿವೃದ್ಧಿ ಸಚಿವಾಲಯ ಅತ್ಯಂತ ವಿಸ್ತಾರವಾದ ಇಲಾಖೆ. ಅಧಿಕಾರಿಗಳು, ಎಕ್ಸ್‌ಪರ್ಟ್‌ಗಳ ಸಭೆ ನಡೆಸಲಾಯಿತು. ಜಿಲ್ಲಾ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ, ಸ್ಥಾಯಿ ಸಮಿತಿ ಸಭೆ ನಡೆಸಲಾಯಿತು. ಬೆಳಗಾವಿ ಸುವರ್ಣ ಸೌಧದಲ್ಲು ಗ್ರಾಮೀಣಾಭಿವೃದ್ಧಿ ಇಲಾಖೆ ಕಚೇರಿ. ಆಡಳಿತಾತ್ಮಕ ಮತ್ತು ಆರ್ಥಿಕ … Read more

‘ನಾನು ಈ ಬಗ್ಗೆ ಒಂದು ಪರ್ಸೆಂಟ್ ಕೂಡ ಯೋಚನೆ ಮಾಡಿಲ್ಲ, ನನ್ನ ಅಭಿಪ್ರಾಯ ಸ್ಪಷ್ಟ’, ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಹೇಳಿಕೆ

Eshwarappa MLA 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 23 ಸೆಪ್ಟೆಂಬರ್ 2019 ರಾಣೆಬೆನ್ನೂರು ವಿಧಾನಸಭೆ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ.ಕಾಂತೇಶ್ ಸ್ಪರ್ಧಿಸಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ ಇದನ್ನು ಸಚಿವ ಕೆ.ಎಸ್.ಈಶ್ವರಪ್ಪ ತಿರಸ್ಕರಿಸಿದ್ದಾರೆ. ಪುತ್ರ ಕಾಂತೇಶ್ ಅವರನ್ನು ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಿಂದ ಕಣಕಿಳಿಸಲಾಗುತ್ತಿದೆ ಎಂದು ಸುದ್ದಿ ಹಾರಿದಾಡುತ್ತಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಶಿವಮೊಗ್ಗದಲ್ಲಿ ಉತ್ತರ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ, ಕಾಂತೇಶ್ ಅವರನ್ನು ಅಭ್ಯರ್ಥಿಯಾಗಿಸುವ ಕುರಿತು … Read more

ಶಿವಮೊಗ್ಗ ಉಸ್ತುವಾರಿ ಸಚಿವರ ಮನೆಯಲ್ಲಿ ಗಣೇಶ ಹಬ್ಬ ಜೋರು, ಕುಟುಂಬ ಸಹಿತ ಗಾಂಧಿ ಬಜಾರ್’ನಲ್ಲಿ ವಿಶೇಷ ಪೂಜೆ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 2 ಸೆಪ್ಟೆಂಬರ್ 2019 ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಯಲ್ಲಿ ಇವತ್ತು ಗಣೇಶ ಚತುರ್ಥಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಚಿವ ಈಶ್ವರಪ್ಪ ಮತ್ತು ಕಟುಂಬದವರು ಭಜನೆ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ನಗರದ ವಿವಿಧ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ ನೋಡಿ | ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ ಮೊಬೈಲ್ ನಂಬರ್ | 9964634494 ಈ ಮೇಲ್ | shivamoggalive@gmail.com

‘ಕಾಂಗ್ರೆಸ್’ನಲ್ಲಿ ಈಗ ಎರಡು ಬಣಗಳಿವೆ, ಒಂದು ಸಿದ್ದರಾಮಯ್ಯ ಬಣ, ಮತ್ತೊಂದು ಬಟ್ಟೆ ಹಾವಿನ ಬಣ’

Eshwarappa General Image 1

ಶಿವಮೊಗ್ಗ ಲೈವ್.ಕಾಂ | 11 ಮೇ 2019 ತಿರುಕ ರಾತ್ರಿ ಕನಸು ಕಾಣುತ್ತಿದ್ದ. ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ. ಪದೇ ಪದೇ ಮುಖ್ಯಮಂತ್ರಿ ಆಗುತ್ತೇನೆ ಅನ್ನುತ್ತಿರುವ ಸಿದ್ದರಾಮಯ್ಯ ಮತ್ತು ಅವರ ಚೇಲಾಗಳನ್ನು ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಸೃಷ್ಟಿಸುತ್ತಿದ್ದಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ತಮ್ಮಿಂದಾಗಿಯೇ ಕಾಂಗ್ರೆಸ್ ಪಕ್ಷ ಕಳೆದ ಚುನಾವಣೆಯಲ್ಲಿ ಸೋಲನುಭವಿಸಿದೆ ಎಂಬುದು ಸಿದ್ದರಾಮಯ್ಯ ಅವರಿಗೆ ಗೊತ್ತಿದೆ. ಹಾಗಿದ್ದೂ ಅವರ ಚೇಲಾಗಳು, ಸಿದ್ದರಾಮಯ್ಯ ಪುನಃ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ … Read more

‘ಭದ್ರಾವತಿ ಬಿಟ್ಟು ಉಳಿದೆಲ್ಲ ಕಡೆ ಬಿಜೆಪಿ ಶಾಸಕರೇ ಇದ್ದಾರೆ, ಹಾಗಾರೆ ಅವರೆಲ್ಲ ಗೂಂಡಾಗಳಾ?’

Thi Na Srinivas

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಭದ್ರಾವತಿ ಬಿಟ್ಟು ಉಳಿದೆಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಶಾಸಕರಿದ್ದಾರೆ. ಹಾಗಾದರೆ, ಅವರೆಲ್ಲ ಗೂಂಡಾಗಳೇ ಅಂತಾ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಪ್ರಶ್ನಿಸಿದ್ದಾರೆ. ಶಿವಮೊಗ್ಗ ಗೂಂಡಾ ರಾಜ್ಯ ಅಂತಾ ಶಾಸಕ ಕೆ.ಎಸ್.ಈಶ್ವರಪ್ಪ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಶಿಕಾರಳಕೊಪ್ಪದಲ್ಲಿ ತೀ.ನಾ.ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ. ಬ್ಲಾಕ್ ಕಾಂಗ್ರೆಸ್ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಅಭಿನವ್ ಖರೆ ಅವರು ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದಾಗ ಈಶ್ವರಪ್ಪ ಅವರು ಯಾವುದೇ ಚಕಾರವೆತ್ತಲಿಲ್ಲ. ಆದರೆ ಅವರು ವರ್ಗಾವಣೆಯಾಗುತ್ತಿದ್ದಂತೆ ಶಿವಮೊಗ್ಗ ಗೂಂಡಾಗಳ … Read more

ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಚಾಟಿ ಬೀಸಿದ ಈಶ್ವರಪ್ಪ

Eshwarappa General Image 1

ಶಿವಮೊಗ್ಗ ಲೈವ್.ಕಾಂ | 24 ಡಿಸೆಂಬರ್ 2018 ಮರಳು ದಂಧೆಕೋರರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಕೂಲಿ ಕಾರ್ಮಿಕರು, ಡ್ರೈವರ್’ಗಳನ್ನು ಬಂಧಿಸಿ ಸರ್ಕಾರ ಕಣ್ಣೊರೆಸುವ ತಂತ್ರ ಮಾಡುತ್ತಿದೆ. ಸಚಿವರು, ಆಡಳಿತ ಪಕ್ಷದ ಶಾಸಕರು ಈ ದಂಧೆಯಲ್ಲಿ ತೊಡಗಿದ್ದಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಪ್ರಮಾಣಿಕವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ಬೆಂಬಲ ನೀಡುವ ಬದಲು, ದಂಧೆಕೋರರಿಗೆ ಸರ್ಕಾರ ಬೆನ್ನೆಲುಬಾಗಿದೆ. ರಾಜ್ಯದಲ್ಲಿ ಎಷ್ಟಾದರೂ ಮರಳು ಲೂಟಿ ಹೊಡೆಯಬಹುದಾಗಿದೆ. ಇದಕ್ಕೆ ಅಡ್ಡ ಬಂದವರಿಗೆ ಸಾಯಿಸುತ್ತೇವೆ ಅನ್ನುವಂತಹ … Read more