ಈಶ್ವರಪ್ಪ ರಾಜೀನಾಮೆ, ಬಿಜೆಪಿಯ ತ್ರಿಮೂರ್ತಿಗಳ ಸಕ್ರಿಯ ರಾಜಕಾರಣದ ಯುಗಾಂತ್ಯವಾ?
SHIVAMOGGA LIVE NEWS | SHIMOGA | 16 ಏಪ್ರಿಲ್ 2022 ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿಯ ತ್ರಿಮೂರ್ತಿಗಳ ಸಕ್ರಿಯ ರಾಜಕಾರಣದ ಯುಗಾಂತ್ಯವಾಗುತ್ತಾ ಎಂಬ ಪ್ರಶ್ನೆ ಮುನ್ನಲೆಗೆ ಬಂದಿದೆ. ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ಮತ್ತು ಡಿ.ಹೆಚ್.ಶಂಕರಮೂರ್ತಿ ಅವರು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ತ್ರಿಮೂರ್ತಿಗಳು. ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಮಾರ್ಗಸೂಚಿ ರೂಪಿಸಿದ ನಾಯಕರು ಈಗ ಮಾರ್ಗದರ್ಶಿ ಮಂಡಳಿ ಸೇರುವಂತಾಗಿದೆ. ಮಲೆನಾಡು ಭಾಗದ ರಾಜಕಾರಣದ ಮತ್ತೊಂದು ಅಧ್ಯಾಯ ಮುಗಿದಂತಾಯಿತಾ ಎಂದು ಬಿಜೆಪಿ ಕಾರ್ಯಕರ್ತರು ಯೋಚಿಸುವಂತಾಗಿದೆ. … Read more