ಹಳೆ ಶಿವಮೊಗ್ಗಕ್ಕೆ ನುಗ್ಗಿತು ತುಂಗಾ ನದಿ ನೀರು, ಎಲ್ಲೆಲ್ಲಿ ಹಾನಿಯಾಗಿದೆ?

240721 Rajiv Gandhi Badavane Drowned in Rain Water 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಹಳೆ ಶಿವಮೊಗ್ಗ ಭಾಗ ಮತ್ತೆ ಜಲಾವೃತವಾಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿಯಿಂದ ನೀರು ಬಡಾವಣೆಗಳಿಗೆ ನುಗ್ಗಿದೆ. ರಸ್ತೆಗಳು ಜಲಾವೃತವಾಗಿವೆ. ಮನೆಗಳಿಗೆ ನೀರು ನುಗ್ಗಿದೆ. ಎಲ್ಲೆಲ್ಲಿ ನೀರು ನುಗ್ಗಿದೆ? ತುಂಗಾ ನದಿ ತೀರದಲ್ಲಿರುವ ಕುಂಬಾರ ಬೀದಿ, ಸೀಗೆಹಟ್ಟಿ, ಕೆ.ಆರ್‍.ಪುರಂ ರಸ್ತೆಯ ಸ್ವಲ್ಪ ಭಾಗ, ವಿದ್ಯಾನಗರ, ಜಗದಂಬ ಬೀದಿ, ಕಂಟ್ರಿ ಕ್ಲಬ್‍, ರಾಜೀವ್ ಗಾಂಧಿ ಬಡಾವಣೆ, ಆರ್‍.ಟಿ.ಲೇಔಟ್, ಚಿಕ್ಕಲ್‍ನ ಶಾಂತಮ್ಮ ಲೇಔಟ್‍ ಮತ್ತು ಸುತ್ತಮುತ್ತಲ … Read more

ಗಾಜನೂರು ಬಳಿ ರಸ್ತೆಗೆ ಬಂತು ತುಂಗಾ ನದಿ ನೀರು, ತೋಟ, ಗದ್ದೆಗಳು ಜಲಾವೃತ

230721 Gajanur Water On Road 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021 ಗಾಜನೂರು ಸಮೀಪ ತುಂಗಾ ನದಿ ನೀರು ರಸ್ತೆಗೆ ನುಗ್ಗಿದೆ. ಇದರಿಂದ ರಸ್ತೆ ಸಂಚಾರ ಕೆಲಕಾಲ ವ್ಯತ್ಯಯವಾಗಿತ್ತು. ದ್ವಿಚಕ್ರ ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಕಷ್ಟಪಡಬೇಕಾಯಿತು. ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಜಲಾಶಯದ ಸಮೀಪದಲ್ಲೇ ಹೊಳೆಯಿಂದ ನೀರು ರಸ್ತೆಗೆ ಬಂದಿದೆ. ಇಲ್ಲಿನ ತೋಟ, ಗದ್ದೆಗೆ ನೀರು ನುಗ್ಗಿದೆ. ಹಾಗಾಗಿ ಸುತ್ತಮುತ್ತಲ ರೈತರು ಬೆಳೆ ನಷ್ಟದ ಭೀತಿಯಲ್ಲಿದ್ದಾರೆ. ಇನ್ನು, ಗಾಜನೂರು ಕಡೆಯಿಂದ … Read more

ಮುಳುಗಿತು ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ

230721 Shimoga Korpalaya Mantapa Drowned 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021 ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರಗೆ ಬಿಡುತ್ತಿರುವುದರಿಂದ ಶಿವಮೊಗ್ಗದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಮುಳುಗಿದೆ. ಎರಡು ದಿನದಿಂದ ಭಾರಿ ಮಳೆಯಾಗುತ್ತಿದ್ದಂತೆ ತುಂಗಾ ಜಲಾಶಯದ ಒಳ, ಹೊರ ಹರಿವು ಹೆಚ್ಚಳವಾಗುತ್ತಿದೆ. ರಾತ್ರಿಯಿಂದ ಭಾರಿ ಪ್ರಮಾಣದ ನೀರನ್ನು ಹೊರಗೆ ಬಿಡುತ್ತಿರುವುದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಹಾಗಾಗಿ ಕೋರ್ಪಲಯ್ಯ ಛತ್ರ ಮಂಟಪ ಮುಳುಗಡೆಯಾಗಿದೆ. ಮಂಟಪ ಮುಳುಗಡೆಯಾಗಿರುವ ವಿಚಾರ ತಿಳಿಯುತ್ತಿದ್ದಂತೆ ಹಲವರು … Read more

ಗಂಟೆ ಗಂಟೆಗೂ ಹೆಚ್ಚಾಗ್ತಿದೆ ಗಾಜನೂರು ತುಂಗಾ ಜಲಾಶಯದ ಹೊರ ಹರಿವು

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021 ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯದಿಂದ ಗಂಟೆ ಗಂಟೆಗೂ ಹೆಚ್ಚು ನೀರನ್ನು ಹೊರಗೆ ಬಿಡಲಾಗುತ್ತಿದೆ. ರಾತ್ರಿ 10 ಗಂಟೆಯಿಂದ ತುಂಗಾ ಡ್ಯಾಂನಿಂದ 56,500 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಆದರೆ ಮಳೆ ಹೆಚ್ಚಳವಾದ ಹಿನ್ನೆಲೆ ಹೊರ ಹರಿವು ಪ್ರಮಾಣ ಏರಿಕೆಯಾಗಲಿದೆ. ರಾತ್ರಿ 12 ಗಂಟೆಗೆ 61,500 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊಳೆಗೆ ಬಿಡಲು ತೀರ್ಮಾನಿಸಲಾಗಿದೆ. ಇವತ್ತು ಬೆಳಗ್ಗೆಯಿಂದ 41 ಸಾವಿರ ಕ್ಯೂಸೆಕ್‍ ಹೊರಹರಿವು … Read more

ಮಳೆ ಕಡಿಮೆಯಾದಂತೆ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆ, ಯಾವ್ಯಾವ ಡ್ಯಾಂನಲ್ಲಿ ಎಷ್ಟಿದೆ?

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021 ಜಿಲ್ಲೆಯಾದ್ಯಂತ ಮಳೆ ಪ್ರಮಾಣ ತಗ್ಗುತ್ತಿದ್ದಂತೆ ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ತುಂಗಾ ಜಲಾಶಯದ ಹೊರ ಹರಿವು ಕೂಡ ಕಡಿಮೆಯಾಗಿದೆ. ಲಿಂಗನಮಕ್ಕಿ ಜಲಾಶಯದ ಒಳ ಹರಿವು 34,905 ಕ್ಯೂಸೆಕ್‍ಗೆ ಇಳಿಕೆಯಾಗಿದೆ. ಹಾಗಾಗಿ ಜಲಾಶಯದ ನೀರಿನ ಮಟ್ಟ 1789.55 ಅಡಿಗಳಷ್ಟಿದೆ. ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಾದ್ಯಂತ ತಗ್ಗಿದ ಮಳೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಇನ್ನು, ಭದ್ರಾ ಜಲಾಶಯಕ್ಕೂ ಒಳ ಹರಿವು ಕಡಿಮೆಯಾಗಿದೆ. ಜಲಾಶಯಕ್ಕೆ … Read more

ತುಂಗಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳ, ಹೊರ ಹರಿವು ಮತ್ತಷ್ಟು ಏರಿಕೆ ಸಂಭವ, ಭದ್ರಾ ಡ್ಯಾಂ ನೀರಿನ ಮಟ್ಟ ಈಗೆಷ್ಟಿದೆ?

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 JUNE 2021 ಭಾರಿ ಮಳೆ ಹಿನ್ನೆಲೆ ತುಂಗಾ ಮತ್ತು ಭದ್ರಾ ಜಲಾಶಯದ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ತುಂಗಾ ಜಲಾಶಯದ ಒಳ ಹಾಗೂ ಹೊರ ಹರಿವು ಗಂಟೆಗಂಟೆಗೂ ಹೆಚ್ಚಳವಾಗುತ್ತಿದೆ. ಇವತ್ತು ಬೆಳಗ್ಗೆ 8 ಗಂಟೆಯಿಂದ ತುಂಗಾ ಡ್ಯಾಂನಿಂದ  21,500 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇವತ್ತು ಒಳಹರಿವು ಹೆಚ್ಚಳವಾಗುವ ನಿರೀಕ್ಷೆ ಇದೆ. ಹಾಗಾಗಿ ಯಾವುದೆ ಸಂದರ್ಭ ಜಲಾಶಯದಿಂದ 30 ಸಾವಿರ ಕ್ಯೂಸೆಕ್ ನೀರು ಹೊಳೆಗೆ ಹರಿಸುವ ಸಾಧ್ಯತೆ ಇದೆ. … Read more

BREAKING NEWS | ಗಾಜನೂರಿನ ತುಂಗಾ ಜಲಾಶಯದಿಂದ ನೀರು ಹೊರಕ್ಕೆ, ಎಷ್ಟು ನೀರು ಹೊರಬಿಡಲಾಗುತ್ತಿದೆ?

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜೂನ್ 2021 ಹಿನ್ನೀರು ಭಾಗದಲ್ಲಿ ಜೋರು ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯದ ಕ್ರಸ್ಟ್  ಗೇಟುಗಳನ್ನು ತೆಗೆದು ನೀರು ಹೊರಗೆ ಬಿಡಲಾಗಿದೆ. ಇವತ್ತು ಜಲಾಶಯದ 22 ಗೇಟುಗಳ ಪೈಕಿ 21 ಗೇಟುಗಳನ್ನು ಮೇಲೆತ್ತಲಾಗಿದೆ. ವಿದ್ಯುತ್ ಉತ್ಪಾದನೆ ಮತ್ತು ಜಲಾಶಯದಿಂದ ನೇರವಾಗಿ ನದಿಗೆ ಒಟ್ಟು 7300 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಮೊದಲ ಮೂರು ಗೇಟುಗಳಲ್ಲಿ ಒಂದು ಅಡಿಯಷ್ಟು ಮೇಲೆತ್ತಲಾಗಿದೆ. ಉಳಿದ 18 ಗೇಟುಗಳನ್ನು ಒಂದು ಇಂಚ್‍ನಷ್ಟು ಮೇಲೆತ್ತಲಾಗಿದೆ. ತುಂಗಾ ಜಲಾಶಯಕ್ಕೆ … Read more

ಸೆಲ್ಫಿ ಗಂಡಾಂತರ, ತುಂಗಾ ಡ್ಯಾಂನಲ್ಲಿ ಕಾಲು ಜಾರಿ ನದಿಗೆ ಬಿದ್ದ ಯುವಕ, ಪತ್ತೆಯಾಯ್ತು ಮೃತದೇಹ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 12 JANUARY 2021 ಗಾಜನೂರಿನ ತುಂಗಾ ಜಲಾಶಯದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ಕಾಲು ಜಾರಿ ಬಿದ್ದು, ಯುವಕನೊಬ್ಬ ನೀರುಪಾಲಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ವಿನಾಯಕ (22), ಮೃತ ದುರ್ದೈವಿ. ಇವತ್ತು ಕುಟುಂಬದವರ ಜೊತೆಗೆ ವಿನಾಯಕ ಗಾಜನೂರಿಗೆ ಆಗಮಿಸಿದ್ದ. ಈ ವೇಳೆ ಸೆಲ್ಫಿ ಕ್ಲಿಕ್ ಮಾಡಿಕೊಳ್ಳುತ್ತಿದ್ದಾಗ, ಕಾಲು ಜಾರಿ ಹೊಳೆಗೆ ಬಿದ್ದಿದ್ದಾನೆ. … Read more

ಗಾಜನೂರು ಸಮೀಪ ಅಬಕಾರಿ ಇಲಾಖೆ ದಾಳಿ, ಜಮೀನಿನಲ್ಲಿ ಬೆಳೆದಿದ್ದ 75 ಸಾವಿರ ಮೌಲ್ಯದ ಗಾಂಜಾ ಗಿಡ ವಶಕ್ಕೆ

250920 Ganja Raid by Excise Department 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020 ಮಾರಾಟದ ಉದ್ದೇಶದಿಂದ ಜಮೀನಿನಲ್ಲಿ ಬೆಳೆದ ಗಾಂಜಾ ಗಿಡಗಳನ್ನು ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಗಾಜನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಲಮನೆ ಗ್ರಾಮದಲ್ಲಿ ದಾಳಿ ನಡೆಸಲಾಯಿತು. ಮೂಡಲಮನೆ ಟಿ.ಆರ್.ಮಂಜುನಾಥ್ ಎಂಬಾತ ಇಲ್ಲಿನ ಸರ್ವೆ ನಂಬರ್ 27ರಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಹನ್ನೊಂದು ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 75 ಸಾವಿರ ರೂ. ಎಂದು … Read more

ಗಾಜನೂರು ತುಂಗಾ ಡ್ಯಾಂನಿಂದ ಯಾವುದೇ ಕ್ಷಣದಲ್ಲಿ ನೀರು ಹೊರಕ್ಕೆ, ನದಿ ಪಾತ್ರದಲ್ಲಿರುವವರಿಗೆ ಎಚ್ಚರಿಕೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜೂನ್ 2020 ತುಂಗಾ ಡ್ಯಾಂ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮುಂಗಾರು ಮಳೆ ಆಗುತ್ತಿದ್ದು, ಡ್ಯಾಂನ ಒಳಹರಿವು ಹೆಚ್ಚಾಗುತ್ತಿದೆ. ಹಾಗಾಗಿ ಯಾವುದೇ ಸಂದರ್ಭದಲ್ಲಿ ಹೆಚ್ಚುವರಿ ನೀರನ್ನು ಡ್ಯಾಂ ಗೇಟುಗಳಿಂದ ತುಂಗಾ ನದಿಗೆ ಬಿಡಬಹುದಾಗಿದೆ ಎಂದು ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ. ತುಂಗಾ ನದಿ ಪಾತ್ರದ ಪ್ರದೇಶದಲ್ಲಿ ವಾಸಿಸುತ್ತಿರುವ ಗ್ರಾಮಸ್ಥರು ಹಾಗೂ ಸಾರ್ವಜನಿಕರು ನದಿ ಪಾತ್ರದಲ್ಲಿ ಯಾವುದೇ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಇನ್ನು, ನದಿ ದಂಡೆಯಿಂದ ಎತ್ತರದ ಪ್ರದೇಶಕ್ಕೆ ಸುರಕ್ಷತಾ ದೃಷ್ಠಿಯಿಂದ … Read more