ದ್ವಿಚಕ್ರ ವಾಹನದಲ್ಲಿ ತೆರಳುವ ಮಹಿಳೆಯರೆ ಎಚ್ಚರ, ಶಿವಮೊಗ್ಗದ ವಿದ್ಯಾರ್ಥಿನಿಯಿಂದ ದಾಖಲಾಯ್ತು ಕೇಸ್‌

Tunga-Nagara-Police-Station-Shimoga

ಶಿವಮೊಗ್ಗ: ಬೈಕ್‌ನಲ್ಲಿ ಬಂದ ಆಗಂತುಕನೊಬ್ಬ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿ ಕೊರಳಲ್ಲಿದ್ದ ಚಿನ್ನದ ಸರ (Gold Chain) ಕಸಿದು ಆಕೆಯನ್ನು ಬೀಳಿಸಿ ಪರಾರಿಯಾಗಿದ್ದಾನೆ. ಶಿವಮೊಗ್ಗದ ಕಲ್ಲೂರು – ಅಗಸವಳ್ಳಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೋಚಿಂಗ್‌ಗೆ ತೆರಳುತ್ತಿದ್ದ ಬಿ.ಕಾಂ ವಿದ್ಯಾರ್ಥಿನಿ ಲಕ್ಷ್ಮಿ ಅವರ ಚಿನ್ನದ ಸರ ಕಳ್ಳತನವಾಗಿದೆ. ಲಕ್ಷ್ಮಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಚಿನ್ನದ ಸರ ಕಸಿದುಕೊಂಡಿದ್ದಾನೆ. ನಿಯಂತ್ರಣ ತಪ್ಪಿ ಲಕ್ಷ್ಮಿ ತಮ್ಮ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ. ₹74,000 … Read more

ಶಿವಮೊಗ್ಗದಲ್ಲಿ 3 ಕೆ.ಜಿ ಬೆಳ್ಳಿ ವಸ್ತು, ₹17 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

Police-Jeep-in-Shimoga-city

ಶಿವಮೊಗ್ಗ: ಮನೆಯೊಂದರ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ನಗರದ ದೂರವಾಣಿ ಬಡಾವಣೆಯ ಅಶ್ವಿನಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ (Theft). ಅಶ್ವಿನಿ ಕುಟುಂಬದೊಂದಿಗೆ ತಮ್ಮ ತಾಯಿ ಮನೆಗೆ ತೆರಳಿದ್ದರು. ದೀಪಾವಳಿ ಹಬ್ಬದ ಬೆಳಗ್ಗೆ ಪಕ್ಕದ ಮನೆಯವರು ಅಶ್ವಿನಿ ಅವರಿಗೆ ಕರೆ ಮಾಡಿ ‘ಮನೆ ಬಾಗಿಲು ತೆಗೆದಿದ್ದು, ಮನೆಯಲ್ಲೇ ಇದ್ದೀರʼ ಎಂದು ವಿಚಾರಿಸಿದ್ದರು. ಕೂಡಲೆ ಊರಿನಿಂದ ಮರಳಿದ್ದು, ಪರಿಶೀಲಿಸಿದಾಗ ಚಿನ್ನಾಭರಣ, ಬೆಳ್ಳಿ ವಸ್ತುಗಳು ಕಳುವಾಗಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಮನೆಯ … Read more

ರವೀಂದ್ರನಗರ, ವೆಂಕಟೇಶನಗರದಲ್ಲಿ ಮಾಂಗಲ್ಯ ಸರ ಅಪಹರಣ, ಹೇಗಾಯ್ತು ಘಟನೆ?

Shimoga-Police-Jeep

ಶಿವಮೊಗ್ಗ: ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಇಬ್ಬರು ಮಹಿಳೆಯರ ಸರಗಳ್ಳತನ (Chain snatching) ಮಾಡಿದ್ದಾರೆ. ಒಂದು ಪ್ರಕರಣದಲ್ಲಿ ಮಾಂಗಲ್ಯ ಸರದ ಸ್ವಲ್ಪ ಭಾಗ ಮಾತ್ರ ಕಳ್ಳನ ಪಾಲಾಗಿದೆ. ಎಲ್ಲೆಲ್ಲಿ ಹೇಗಾಯ್ತು ಘಟನೆ? ಪ್ರಕರಣ 1 : ರವೀಂದ್ರ ನಗರ ಸೆ.11ರಂದು ಬೆಳಗ್ಗೆ 6.50ರ ಹೊತ್ತಿಗೆ ಶಿವಮೊಗ್ಗದ ರವೀಂದ್ರನಗರದ ರೈಲ್ವೆ ಹಳಿ ಪಕ್ಕದ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಸುಶೀಲಮ್ಮ ಎಂಬುವವರ ಮಾಂಗಲ್ಯ ಸರ ಕಳ್ಳತನ ಮಾಡಲಾಗಿದೆ. ಬೈಕ್‌ನಲ್ಲಿ ಬಂದ ಸರಗಳ್ಳ ಸುಶೀಲಮ್ಮ ಅವರ ಕೊರಳಿಗೆ ಕೈ ಹಾಕಿ ಮಾಂಗಲ್ಯ ಸರ … Read more

ಬೆಳ್ಳಿ ಮತ್ತಷ್ಟು ದುಬಾರಿ, ಚಿನ್ನದ ಬೆಲೆಯು ಹೆಚ್ಚಳ, ಎಷ್ಟಾಗಿದೆ ರೇಟ್‌?

BUSINESS-NEWS.webp

ಮಾರುಕಟ್ಟೆ ಮಾಹಿತಿ: ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಬೆಳ್ಳಿ ದರವು (Silver Price) ಹೊಸ ದಾಖಲೆ ನಿರ್ಮಿಸಿದೆ. ಪ್ರತಿ ಕೆ.ಜಿ ಬೆಳ್ಳಿ 2,000 ರೂ. ಏರಿಕೆಯಾಗಿ 1.04 ಲಕ್ಷ ರೂ.ಗೆ ಮಾರಾಟವಾಗಿದೆ. ಈ ಹಿಂದೆ ಮಾರ್ಚ್ 19ರಂದು 1.03 ಲಕ್ಷ ರೂ. ಗರಿಷ್ಠ ಮಟ್ಟಕ್ಕೆ ತಲುಪಿತ್ತು. ಚಿನ್ನದ ದರದಲ್ಲಿಯೂ ಗಣನೀಯ ಏರಿಕೆ ಕಂಡುಬಂದಿದೆ. ಶುದ್ಧ ಚಿನ್ನ (ಶೇ 99.9 ಪರಿಶುದ್ಧತೆ) 10 ಗ್ರಾಂಗೆ 430 ರೂ. ಏರಿಕೆಯಾಗಿ 99,690 ರೂ.ಗೆ ತಲುಪಿದೆ. ಹಾಗೆಯೇ, ಆಭರಣ ಚಿನ್ನದ … Read more

ಮದುವೆ ಸಮಾರಂಭ ಮುಗಿಸಿ ಕಲ್ಯಾಣ ಮಂಟಪದ ರೂಮ್‌ಗೆ ಬಂದ ಕುಟುಂಬಕ್ಕೆ ಕಾದಿತ್ತು ಶಾಕ್‌, ಆಗಿದ್ದೇನು?

Crime-News-General-Image

ಶಿವಮೊಗ್ಗ: ಕಲ್ಯಾಣ ಮಂಟಪದ ಕೊಠಡಿಯಲ್ಲಿ ಇಟ್ಟಿದ್ದ ಬ್ಯಾಗ್‌ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ (gold) ಕಳ್ಳತನವಾಗಿದೆ. ನಗರದ ಮದಾರಿಪಾಳ್ಯದ ಹೆವೆನ್‌ ಪ್ಯಾಲೆಸ್‌ ಕಲ್ಯಾಣ ಮಂಟಪದಲ್ಲಿ ಘಟನೆ ಸಂಭವಿಸಿದೆ. ಅರಸೀಕೆರೆಯ ಮೆಹಬೂಬ ಪಾಷಾ ಅವರ ಕುಟುಂಬ, ಸಂಬಂಧಿಯ ಮದುವೆಗೆ ಬಂದಿದ್ದರು. ಕಲ್ಯಾಣ ಮಂಟಪದ ಕೊಠಡಿಯಲ್ಲಿ ಬ್ಯಾಗ್‌ಗಳನ್ನು ಇರಿಸಿ, ಸಭಾಂಗಣಕ್ಕೆ ತೆರಳಿದ್ದರು. ರಾತ್ರಿ ಕೊಠಡಿಗೆ ಹಿಂತಿರುಗಿದಾಗ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಬಂಗಾರದ ಮಾಂಗಲ್ಯ ಸರ, ಚಿನ್ನದ ಸರ ಮತ್ತು ಪೆಂಡೆಂಟ್‌, ಉಂಗುರಗಳು, ಮಕ್ಕಳ ಉಂಗುರಗಳು, ಕಿವಿ ಓಲೆಗಳು ಸೇರಿ … Read more

ಗೋಪಿ ಸರ್ಕಲ್‌ನಲ್ಲಿ ದಿನಸಿ ಖರೀದಿಸಿ ಮನೆಗೆ ಮರಳಿದ ದಂಪತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

Police-Jeep-at-Shimoga-General-Image

ಶಿವಮೊಗ್ಗ : ದಿನಸಿ ಖರೀದಿಸಿ ಹಿಂತಿರುಗುವಷ್ಟರಲ್ಲಿ ಮನೆಯಲ್ಲಿ (House) ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನವಾಗಿದೆ. ಸವಳಂಗ ರಸ್ತೆಯ ಜ್ಯೋತಿನಗರದ ಪ್ರಕಾಶ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಪ್ರಕಾಶ್‌ ಅವರು ತಮ್ಮ ಪತ್ನಿಯೊಂದಿಗೆ ಗೋಪಿ ಸರ್ಕಲ್‌ನಲ್ಲಿ ದಿನಸಿ ಖರೀದಿಗೆ ತೆರಳಿದ್ದರು. ಮನೆಗೆ (House) ಹಿಂತಿರುಗಿ ಬೆಡ್‌ ರೂಂಗೆ ಹೋದಾಗ ಚಿನ್ನಾಭರಣದ ಬಾಕ್ಸ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ ಬೀರುವಿನಲ್ಲಿಟ್ಟಿದ್ದ 9 ಲಕ್ಷ ರೂ. ಮೌಲ್ಯದ ವಿವಿಧ ಚಿನ್ನಾಭರಣಗಳು, 51 ಸಾವಿರ ರೂ. ನಗದು ನಾಪತ್ತೆಯಾಗಿವೆ ಎಂದು … Read more

ಗೃಹಪ್ರವೇಶಕ್ಕೆ ತೆರಳಲು ರೆಡಿಯಾಗಲು ಬೀರು ತೆಗೆದ ಗೃಹಿಣಿಗೆ ಕಾದಿತ್ತು ಆಘಾತ, ಆಗಿದ್ದೇನು?

Crime-News-General-Image

SHIVAMOGGA LIVE NEWS, 3 FEBRUARY 2025 ಶಿವಮೊಗ್ಗ : ಮನೆಯ ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ (gold) ನಾಪತ್ತೆಯಾಗಿವೆ ಎಂದು ಆರೋಪಿಸಿ ಅಶೋಕ ನಗರ ನಿವಾಸಿ ಗೀತಾ ಎಂಬುವವರು ದೂರು ನೀಡಿದ್ದಾರೆ. ಗೃಹ ಪ್ರವೇಶ ಸಮಾರಂಭಕ್ಕೆ ತೆರಳಲು ಸಿದ್ಧತೆ ಮಾಡಿಕೊಳ್ಳುವಾಗ ಕಳ್ಳತನ ಬೆಳಕಿಗೆ ಬಂದಿದೆ. ಅಶೋಕ ನಗರದ ಗೀತಾ ಎಂಬುವವರ ಮನೆ ಬೀರುವಿನಲ್ಲಿದ್ದ ಚಿನ್ನಾಭರಣಗಳ ಪೈಕಿ 10 ಗ್ರಾಂ ತೂಕದ ಜುಮುಕಿ ಮತ್ತು 10 ಗ್ರಾಂ ತೂಕದ ಬಂಗಾರದ ಮಾಟಿ ನಾಪತ್ತೆಯಾಗಿವೆ. ಕುಟುಂಬದವರನ್ನು ವಿಚಾರಿಸಿದಾಗ ಯಾರಿಗು ಇದರ ಬಗ್ಗೆ … Read more

ಚಿನ್ನದ ಗಟ್ಟಿ ಕೊಂಡೊಯ್ದ ನೌಕರ, ಮನೆ ಬಳಿ ಹೋಗಿ ಫೋನ್‌ ಮಾಡಿದ ಮಾಲೀಕನಿಗೆ ಕಾದಿತ್ತು ಆಘಾತ

crime name image

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಆಭರಣ ಮಾಡಿಕೊಡುವುದಾಗಿ ನಂಬಿಸಿ ಚಿನ್ನದ (Gold) ಗಟ್ಟಿ ಪಡೆದಿದ್ದ ವ್ಯಕ್ತಿ ನಾಪತ್ತೆಯಾಗಿದ್ದು, ಮೊಬೈಲ್‌ ಫೋನ್‌ ಸ್ವಚ್‌ ಆಫ್‌ ಆಗಿದೆ ಎಂದು ಆರೋಪಿಸಿ ಚಿನ್ನಾಭರಣ ವ್ಯಾಪಾರಿಯೊಬ್ಬರು ದೂರು ನೀಡಿದ್ದಾರೆ. ಚಿನ್ನಾಭರಣ ವ್ಯಾಪಾರಿ ದತ್ತಾತ್ರೇಯ ಎಂಬುವವರ ಬಳಿ ರಾಹುಲ್‌ ಅಲಿಯಾಸ್‌ ಚಟ್ಟು ಪರಮಾಣಿಕ್‌ ಎಂಬಾತ ಕಳೆದ ಅಕ್ಟೋಬರ್‌ನಲ್ಲಿ 22.51 ಲಕ್ಷ ರೂ. ಮೌಲ್ಯದ 280 ಗ್ರಾಂ ಚಿನ್ನದ ಗಟ್ಟಿ ಪಡೆದುಕೊಂಡಿದ್ದ. ಪಶ್ಚಿಮ ಬಂಗಾಳದ ರಾಹುಲ್‌ ಶಿವಮೊಗ್ಗದ ಧರ್ಮರಾಯನ ಕೇರಿಯಲ್ಲಿ … Read more

ಚಿನ್ನಾಭರಣ ಅಡವಿಟ್ಟು ಸಾಲ ಪಡೆದ ದಂಪತಿ ಸೇರಿ ನಾಲ್ವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

Crime-News-General-Image

SHIVAMOGGA LIVE NEWS | 9 JANUARY 2025 ಶಿವಮೊಗ್ಗ : ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್‌ (Bank) ಒಂದಕ್ಕೆ ದಂಪತಿ 1.70 ಲಕ್ಷ ರೂ. ವಂಚಿಸಿದ್ದಾರೆ. ಬ್ಯಾಂಕ್‌ನಲ್ಲಿ ಚಿನ್ನಾಭರಣ ಪರಿಶೀಲಿಸುವ ಅಪ್ರೈಸರ್‌ಗಳು ದಂಪತಿ ಜೊತೆಗೆ ಶಾಮೀಲಾಗಿರುವುದು ಬೆಳಕಿಗೆ ಬಂದಿದೆ. ಶಿವಮೊಗ್ಗದ ಶೇಷಾದ್ರಿಪುರಂನ ಬ್ಯಾಂಕ್‌ನಲ್ಲಿ ಶಾಂತಿನಗರದ ದಂಪತಿ ಚಿನ್ನಾಭರಣ ಅಡಮಾನವಿಟ್ಟಿದ್ದರು. ಬ್ಯಾಂಕ್‌ನಲ್ಲಿ ಅಡವಿಟ್ಟ ಚಿನ್ನಾಭರಣದ ಅಸಲಿಯತ್ತು ಪರಿಶೀಲಿಸುವ ಇಬ್ಬರು ಅಪ್ರೈಸರ್‌ಗಳು ಕೂಡ ದಂಪತಿ ಅಡವಿಟ್ಟ ನಕಲಿ ಬಂಗಾರವನ್ನು ಅಸಲಿ ಬಂಗಾರವೆಂದು ತಿಳಿಸಿದ್ದರು. ಅದರಂತೆ ಸಾಲ ಪಡೆದಿದ್ದರು. ಪುನರ್‌ … Read more

ಮನೆ ಬಾಗಿಲು ತೆಗೆದಿತ್ತು, ಪತ್ನಿ ಇರಬೇಕೆಂದು ಒಳ ಬಂದ ವ್ಯಕ್ತಿಗೆ ಆಘಾತ ಕಾದಿತ್ತು, ಆಗಿದ್ದೇನು?

crime name image

SHIVAMOGGA LIVE NEWS | 8 JANUARY 2024 ತೀರ್ಥಹಳ್ಳಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳ ನುಗ್ಗಿರುವ ಕಳ್ಳರು ಚಿನ್ನಾಭರಣ (Gold) ದೋಚಿ ಪರಾರಿಯಾಗಿದ್ದಾರೆ. ತೀರ್ಥಹಳ್ಳಿಯ ನೆಲ್ಲಿಕಟ್ಟೆಯ ರಾಮ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ರಾಮ ಅವರು ದೇವರ ಪೂಜೆಗೆ ಬೇರೆ ಊರಿಗೆ ತೆರಳಿದ್ದರು. ಮನೆ ಮರಳಿದಾಗ ಬಾಗಿಲು ತೆರೆದಿತ್ತು. ತಮ್ಮ ಪತ್ನಿ ಒಳಗಿರಬೇಕು ಎಂದು ಭಾವಿಸಿ ಒಳಗೆ ಬಂದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ಬೀರುವಿನಲ್ಲಿದ್ದ ಚಿನ್ನ, ಬೆಳ್ಳಿ, ನಗದು ಸೇರಿ ಒಟ್ಟು 1.40 ಲಕ್ಷ … Read more