ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳಿದ್ದ ಮಹಿಳೆ ರಾತ್ರಿ ಬ್ಯಾಗ್‌ ತೆಗೆದಾಗ ಕಾದಿತ್ತು ಶಾಕ್

KSRTC-Bus-Stand-in-Shimoga

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಸರ (Gold Chain) ಕಳ್ಳತನವಾಗಿದೆ ಎಂದು ಚಿತ್ರದುರ್ಗದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಘಟನೆ ಸಂಬಂಧ ದೂರು ನೀಡಿದ್ದಾರೆ. ಚಿತ್ರದುರ್ಗದ ಪಾರ್ವತಮ್ಮ ಮತ್ತು ಅವರ ಸೊಸೆ ಜೂನ್‌ 7ರಂದು ಶಿವಮೊಗ್ಗಕ್ಕೆ ಆಗಮಿಸಿದ್ದರು. ಇಲ್ಲಿನ ಕಾಲೇಜಿನಲ್ಲಿ ಓದುತ್ತಿರುವ ತಮ್ಮ ಪುತ್ರಿಯನ್ನು ಮಾತನಾಡಿಸಿ ಊರಿಗೆ ಹಿಂತಿರುಗುತ್ತಿದ್ದರು. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಸ್‌ ಹತ್ತಲು ಬಂದಾಗ ಪಾರ್ವತಮ್ಮ ಮತ್ತು ಅವರ ಸೊಸೆ ಶೌಚಾಲಯಕ್ಕೆ ತೆರಳಿದ್ದರು. ತಮ್ಮ ವ್ಯಾನಿಟಿ ಬ್ಯಾಗ್‌ ಅನ್ನು ಹೊರಗೆ ಇಟ್ಟು ಹೋಗಿದ್ದರು ಎಂದು … Read more

ಚಿನ್ನದ ಸರ ರಿಪೇರಿಗೆ ಬಂಗಾರದ ಅಂಗಡಿಗೆ ಬಂದ ಮಹಿಳೆ, ಪರ್ಸ್‌ ತೆಗೆದಾಗ ಕಾದಿತ್ತು ಆಘಾತ

crime name image

ಹೊಳೆಹೊನ್ನೂರು: ರಿಪೇರಿಗೆಂದು ಕೊಂಡೊಯ್ದಿದ್ದ ಚಿನ್ನದ ಸರ ಕಣ್ಮರೆಯಾಗಿದೆ. ಚಿನ್ನದ ಅಂಗಡಿ ಮುಂದೆ ಪರ್ಸ್‌ (Purse) ತೆಗೆದಾಗ ಸರ ಇಲ್ಲದಿರುವುದು ಗೊತ್ತಾಗಿದೆ. ಯಡೆಹಳ್ಳಿಯ ರಾಮಲಮ್ಮ ಎಂಬುವವರ ಎರಡು ಎಳೆಯ ಬಂಗಾರದ ಸರದಲ್ಲಿ ಒಂದು ಎಳೆ ತುಂಡಾಗಿತ್ತು. ರಿಪೇರಿಗೆಂದು ಸರವನ್ನು ಪರ್ಸ್‌ನಲ್ಲಿ ಇರಿಸಿಕೊಂಡು, ಅದನ್ನು ಬ್ಯಾಗಿನಲ್ಲಿಟ್ಟುಕೊಂಡು ಬಸ್ಸಿನಲ್ಲಿ ಹೊಳೆಹೊನ್ನೂರಿಗೆ ತೆರಳಿದ್ದರು. ಹೊಳೆಹೊನ್ನೂರಿನಲ್ಲಿ ಬಂಗಾರದ ಅಂಗಡಿ ಮುಂಭಾಗ ಪರ್ಸ್‌ ತೆಗೆದಾಗ ಚಿನ್ನದ ಸರ ನಾಪತ್ತೆಯಾಗಿತ್ತು. ಮನೆಗೆ ಹಿಂತಿರುಗಿ ಹುಡುಕಿದರು ಚಿನ್ನದ ಸರ ಸಿಗಲಿಲ್ಲ. 1 ಲಕ್ಷ ರೂ. ಮೌಲ್ಯದ 33 ಗ್ರಾಂನ … Read more

ಮದುವೆಗೆ ಹೊರಡಲು ಸಿದ್ಧವಾಗಿ ಮನೆಯಲ್ಲಿದ್ದ ಪೆಟ್ಟಿಗೆ ತೆಗೆದ ಮಹಿಳೆಗೆ ಆಘಾತ, ಆಗಿದ್ದೇನು?

Police-Jeep-at-Shimoga-General-Image

ಶಿವಮೊಗ್ಗ: ಮನೆಯ ಪೆಟ್ಟಿಗೆಯಲ್ಲಿ ಇಟ್ಟಿದ್ದ ಎರಡು ಬಂಗಾರದ ಸರಗಳು (Gold Chain) ನಾಪತ್ತೆಯಾಗಿವೆ. ರೇಚಿಕೊಪ್ಪದ ಸುರೇಶ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಸುರೇಶ್‌ ಮತ್ತು ಅವರ ಪತ್ನಿ ಏ.17ರಂದು ಮಗಳ ಮನೆಯಿಂದ ಹಿಂತಿರುಗಿದ್ದರು. ಆಗ ಅವರ ಪತ್ನಿ ಎರಡು ಚಿನ್ನದ ಸರವನ್ನು ಪೆಟ್ಟಿಗೆಯಲ್ಲಿ ಇಟ್ಟಿದ್ದರು. ಏ.24ರಂದು ಮದುವೆ ಸಮಾರಂಭಕ್ಕೆ ತೆರಳುವಾಗ ಪೆಟ್ಟಿಗೆ ತೆರೆದಿದ್ದಾರೆ. ಆಗ ಚಿನ್ನದ ಸರಗಳು ನಾಪತ್ತೆಯಾಗಿದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ.   5 ಲಕ್ಷ ರೂ. ಮೌಲ್ಯದ ಎರಡು ಚಿನ್ನದ ಸರಗಳು ನಾಪತ್ತೆಯಾಗಿವೆ ಎಂದು ಆರೋಪಿಸಿದ್ದಾರೆ. … Read more

ಲಕ್ಷ ಲಕ್ಷ ಮೌಲ್ಯದ ಮಾಂಗಲ್ಯ ಸರ ಖರೀದಿಸಿ ಮನೆಗೆ ಹೋಗಿ ನೋಡಿದಾಗ ಕಾದಿತ್ತು ಆಘಾತ, ಆಗಿದ್ದೇನು?

Crime-News-General-Image

ಶಿವಮೊಗ್ಗ : ಬಂಗಾರದ ಸರ (Gold Chain) ಖರೀದಿಸಿ ಸಿಟಿ ಬಸ್‌ನಲ್ಲಿ ಮನೆಗೆ ಮರಳುವ ಹೊತ್ತಿಗೆ ಕಳ್ಳತನವಾಗಿದೆ. ಮಹಿಳೆಯ ಬ್ಯಾಗಿನಿಂದ ಚಿನ್ನದ ಸರವನ್ನು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಖರೀದಿಸಿದ ಕೆಲವೇ ಹೊತ್ತಿಗೆ ಕಳವು ನಾಗರತ್ನಮ್ಮ ಎಂಬುವವರು ಗೋಪಿ ಸರ್ಕಲ್‌ ಸಮೀಪ ಆಭರಣ ಜ್ಯೂವೆಲರ್ಸ್‌ ಅಂಗಡಿಯಿಂದ 1.93 ಲಕ್ಷ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರ ಖರೀದಿಸಿದ್ದರು. ಅದಕ್ಕೆ 7 ಗ್ರಾಂ ತೂಕದ ತಾಳಿ, ಲಕ್ಷ್ಮಿ ಕಾಸು, ಗುಂಡುಗಳನ್ನು ಜ್ಯೂವೆಲರಿ ಅಂಗಡಿಯಲ್ಲೇ ಜೋಡಿಸಿಕೊಂಡಿದ್ದರು. ಒಟ್ಟು 2.50 ಲಕ್ಷ … Read more

ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್‌, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್‌ ದಾಖಲು

Crime-News-General-Image

SHIVAMOGGA LIVE NEWS, 20 JANUARY 2025 ಶಿವಮೊಗ್ಗ : ಹತ್ತು ದಿನದ ಅಂತರದಲ್ಲಿ ನಗರದ ಎರಡು ಕಲ್ಯಾಣ ಮಂಟಪದಲ್ಲಿ ಮಕ್ಕಳ ಕೊರಳಲಿದ್ದ ಚಿನ್ನದ ಸರ (Gold Chain) ಕಳವು ಮಾಡಲಾಗಿದೆ. ಪೋಷಕರು ಗಮನಿಸಿದಾಗ ಚಿನ್ನದ ಸರ ಇಲ್ಲದಿರುವುದು ಗೊತ್ತಾಗಿದೆ. ಈ ಸಂಬಂಧ ಪ್ರತ್ಯೇಕವಾಗಿ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಲ್ನಾಡ್‌ ಸ್ಟಾರ್ಟ್‌ಅಪ್‌ ಸಮ್ಮೇಳನಕ್ಕೆ ಚಾಲನೆ, ಕೇಂದ್ರ ಸಚಿವರು ಏನೆಲ್ಲ ಹೇಳಿದರು?

ರಾತ್ರಿ ನಡೆದು ಹೋಗುತ್ತಿದ್ದ ಮಹಿಳೆಗೆ ಕಾದಿತ್ತು ಆಘಾತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

gold-chain-theft-at-soraba-in-Shimoga-district.

SHIVAMOGGA LIVE NEWS, 6 JANUARY 2024 ಸೊರಬ : ಮಹಿಳೆಯ ಗಮನವನ್ನು ಬೇರೆಡೆ ಸೆಳೆದು ಅಂದಾಜು 25 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು  (GOLD CHAIN) ಕಿತ್ತು ದುಷ್ಕರ್ಮಿಗಳಿಬ್ಬರು ಬೈಕ್‌ನಲ್ಲಿ ಪರಾರಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀಬಾಯಿ ಸರ ಕಳೆದುಕೊಂಡವರು. ಸೊರಬ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಮರುಳುತ್ತಿದ್ದ ವೇಳೆ … Read more

ನೀರು ಕೇಳಿ ದಿಢೀರ್‌ ವೃದ್ಧೆಯ ಮನೆಯೊಳಗೆ ನುಗ್ಗಿದ ಅಪ್ರಾಪ್ತರು, 24 ಗಂಟೆಯಲ್ಲಿ ಪ್ರಕರಣ ಭೇದಿಸಿದ ಪೊಲೀಸ್

gold-chain-recovered-by-police-in-Shimoga

SHIMOGA NEWS, 18 NOVEMBER 2024 : ಕುಡಿಯಲು ನೀರು ಕೇಳಿ ಏಕಾಏಕಿ ಮನೆಯೊಳಗೆ ನುಗ್ಗಿದ ನಾಲ್ವರು ಬಾಲಕರು, ವೃದ್ಧೆಯ ಬಾಯಿ ಗಟ್ಟಿಯಾಗಿ ಹಿಡಿದು ಚಿನ್ನದ ಸರ (Gold Chain) ಕಸಿದುಕೊಂಡು ಪರಾರಿಯಾಗಿದ್ದಾರೆ. ಘಟನೆ ನಡೆದು 24 ಗಂಟೆಯೊಳೆಗೆ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.   ವಿನೋಬನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಸಂಬಂಧ 77 ವರ್ಷದ ವೃದ್ಧೆ ನೀಡಿದ್ದ ದೂರಿನ ಆಧಾರದಲ್ಲಿ … Read more

ಬಸ್‌ ಹತ್ತಿ ತಾಯಿಯತ್ತ ತಿರುಗಿದ ಮಗಳಿಗೆ ಕಾದಿತ್ತು ಶಾಕ್

ksrtc-bus-stand-shimoga-shivamogga

SHIMOGA REPORT, 30 OCTOBER 2024 : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರ (Gold) ಕಳ್ಳತನ ಮಾಡಲಾಗಿದೆ. ಬಸ್‌ ಹತ್ತಿ ಸೀಟಿನಲ್ಲಿ ಕುಳಿತಾಗ ಚಿನ್ನದ ಸರ ಕಳುವಾಗಿರುವುದು ಗೊತ್ತಾಗಿದೆ. ನೂಕುನುಗ್ಗಲಲ್ಲಿ ಬಸ್‌ ಹತ್ತಿದ್ದರು ಧಾರವಾಡದ ಮೆಹಬೂಬಿ ಮತ್ತು ಅವರ ತಾಯಿ, ಜಾವಗಲ್‌ನ ದರ್ಗಾದಿಂದ ತಮ್ಮೂರಿಗೆ ಮರಳುತ್ತಿದ್ದರು. ಶಿವಮೊಗ್ಗ ನಿಲ್ದಾಣಕ್ಕೆ ಆಗಮಿಸಿದ್ದ ಇಬ್ಬರು, ನೂಕುನುಗ್ಗಲಿನಲ್ಲಿ ಹರಿಹರದ ಬಸ್‌ ಹತ್ತಿದ್ದರು. ಸೀಟಿನಲ್ಲಿ ಕುಳಿತಾಗ ಮೆಹಬೂಬಿ, ಪಕ್ಕದಲ್ಲಿ ಕುಳಿತಿದ್ದ ತಮ್ಮ ತಾಯಿಯ ಕಡೆಗೆ ನೋಡಿದಾಗ ಕೊರಳಲಿದ್ದ ಬಂಗಾರದ … Read more