ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

Thirthahalli-News-Update

ತೀರ್ಥಹಳ್ಳಿ: ತಾಲೂಕಿನ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ (Grama Panchayat) ಅಧ್ಯಕ್ಷ ಅಗಸಾಡಿ ಶಾಮಪ್ಪ ವಿರುದ್ದ ಸದಸ್ಯರು ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಒಟ್ಟು 10 ಸದಸ್ಯ ಬಲದ ಗ್ರಾ.ಪಂ. ಆಡಳಿತದಲ್ಲಿ 9 ಸದಸ್ಯರು ಅವಿಶ್ವಾಸ ಪತ್ರಕ್ಕೆ ಸಹಿ ಹಾಕಿದ್ದರು. ಬುಧವಾರ ಉಪವಿಭಾಗಾಧಿಕಾರಿ ಸತ್ಯನಾರಾಯಣ್‌ ಅವರು ಅವಿಶ್ವಾಸ ನಿರ್ಣಯ ಕುರಿತು ನಡೆಸಿದ ಸಭೆಗೆ 6 ಸದಸ್ಯರು ಹಾಜರಾಗಿ 4 ಸದಸ್ಯರು ಗೈರಾಗಿದ್ದರು. ನಿಯಮದಂತೆ ಅವಿಶ್ವಾಸ ನಿರ್ಣಯ ಸ್ವೀಕಾರಕ್ಕೆ 7 ಸದಸ್ಯರ ಬೆಂಬಲ ಅಗತ್ಯವಾಗಿತ್ತು. 6 ಸದಸ್ಯರು ಮಾತ್ರ ಸಭೆಗೆ … Read more

ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಾರ್ಯದರ್ಶಿ ವಶಕ್ಕೆ, ಕಾರಣವೇನು?

Lokayuktha-Raid-General-Image

ಶಿವಮೊಗ್ಗ: ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ (Trap) ಬಿದ್ದಿದ್ದಾರೆ. ಕಾರ್ಯದರ್ಶಿ ಕುಮಾರನಾಯ್ಕನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಮಧ್ಯಾಹ್ನ ಗ್ರಾಮ ಪಂಚಾಯಿತಿ ಕಚೇರಿಯ ಕಾರ್ಯದರ್ಶಿಯ ಕೊಠಡಿಯಲ್ಲಿ ಕುಮಾರನಾಯ್ಕ ₹3000 ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಲೋಕಾಯುಕ್ತ ದಾಳಿಯಾಗಿದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ ಶ್ರೀರಾಮಪುರ ಗ್ರಾಮದ ವಿನೋದ್‌ ಎಂಬುವವರ ತಾಯಿಯ ಹೆಸರಿನಲ್ಲಿದ್ದ ನಿವೇಶದನಲ್ಲಿ ಮನೆ … Read more

ಶಿಕಾರಿಪುರದಲ್ಲಿ ಬಿಜೆಪಿ, ಶಿರಾಳಕೊಪ್ಪದಲ್ಲಿ ಕಾಂಗ್ರೆಸ್‌ಗೆ ಗೆಲುವು, ಉಪ ಚುನಾವಣೆಯಲ್ಲಿ ಎಲ್ಲೆಲ್ಲಿ ಯಾರು ಗೆದ್ದಿದ್ದಾರೆ?

bye-election-for-shikaripura-purasabhe

SHIMOGA NEWS, 27 NOVEMBER 2024 ಚುನಾವಣೆ ಸುದ್ದಿ : ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಕ್ಕೆ ತೆರವಾಗಿದ್ದ ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಮುಗಿದಿದೆ. ಯಾವ್ಯಾವ ಊರಿನಲ್ಲಿ ಯಾರೆಲ್ಲ ಗೆಲುವು (Elected) ಸಾಧಿಸಿದ್ದಾರೆ? ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌. ಶಿಕಾರಿಪುರದಲ್ಲಿ ಬಿಜೆಪಿಗೆ ಗೆಲುವು ಶಿಕಾರಿಪುರ ಪುರಸಭೆಯ 10ನೇ ವಾರ್ಡ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಆರ್‌.ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. 776 ಮತಗಳ ಪೈಕಿ ರಾಘವೇಂದ್ರ 290 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ರಮೇಶ್‌ 275, ಕಾಂಗ್ರೆಸ್‌ನ ಚೋರಡಿ … Read more

ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಏಕಾಂಗಿ ಪ್ರತಿಭಟನೆ

TR-Krishnappa-protest-at-ripponpete-grama-panchayat-office

RIPPONPETE NEWS, 8 OCTOBER 2024 : ಮೂರಾಲ್ಕು ದಿನಗಳಿಂದ ಗ್ರಾಮ ಪಂಚಾಯಿತಿ (Grama Panchayat) ಸದಸ್ಯರು, ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಗ್ರಾಮದ ಕೆಲಸಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಹೋರಾಟಗಾರ ಟಿ.ಆರ್. ಕೃಷ್ಣಪ್ಪ ಗ್ರಾಮ ಪಂಚಾಯಿತಿ ಕಚೇರಿ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಮುಷ್ಕರದ ಕಾರಣಕ್ಕೆ ಗ್ರಾಮಾಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ. ಹಾಗಿದ್ದರೆ ಜನಪ್ರತಿನಿಧಿಗಳ ಅಗತ್ಯವೇನಿದೆ. ಚುನಾವಣೆಯಲ್ಲಿ ಜನರ ಎಲ್ಲ ದೂರುದುಮ್ಮಾನಗಳಿಗೂ ಪರಿಹಾರ ಕಲ್ಪಿಸುತ್ತೇವೆ ಎಂದು ಹೇಳಿ … Read more

ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದ ಗ್ರಾಮಸ್ಥರು, ಕಾರಣವೇನು?

villagers-protest-at-Agradalli-in-Bhadravathi-Taluk.webp

SHIVAMOGGA LIVE NEWS | 14 SEPTEMBER 2023 HOLEHONNURU : ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳ ಕಾರ್ಯವೈಖರಿ ಖಂಡಿಸಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ (Locked) ಪ್ರತಿಭಟನೆ ನಡೆಸಿದರು. ಇಲ್ಲಿನ ಆಗರದಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಕ್ಕೆ ಬೀಗ ಜಡಿದು ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ವತಿಯಿಂದ ಜಂಟಿ ಸರ್ವೆ ಮಾಡುವುದಾಗಿ ತಿಳಿಸಿದ್ದರು. ಆದರೆ ಈತನಕ ಯಾವುದೆ ಸರ್ವೆ ಮಾಡದೆ ಜನರಿಗೆ ಸಮಸ್ಯೆಯಾಗಿದೆ. ಇನ್ನು, ಗ್ರಾಮಸ್ಥರಿಗೆ ಮೂಲ ಸೌಕರ್ಯ ಒದಗಿಸಲು … Read more

ಚುನಾವಣೆ ಹಿಂದಿನ ದಿನ ಗ್ರಾಮ ಪಂಚಾಯಿತಿ ಸದಸ್ಯೆ ಕೊನೆಯುಸಿರು

140823 Soraba Barangi Grama panchayath memeber shashikala

SHIVAMOGGA LIVE NEWS | 14 AUGUST 2023 SORABA : ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ಮುನ್ನ ದಿನ ಗ್ರಾಮ ಪಂಚಾಯಿತಿ (grama-panchayat) ಸದಸ್ಯೆಯೊಬ್ಬರು ಮೃತಪಟ್ಟಿದ್ದಾರೆ. ಶಶಿಕಲಾ ಸಾಹುಕಾರ (47) ಮೃತ ಗ್ರಾಮ ಪಂಚಾಯಿತಿ ಸದಸ್ಯೆ. ಅಧ್ಯಕ್ಷೆ ಸ್ಥಾನಕ್ಕೆ ಸ್ಪರ್ಧಿಸಲು ಇವರಿಗೆ ಅವಕಾಶವಿತ್ತು. ಆನವಟ್ಟಿ (Anavatti) ಹೋಬಳಿ ಭಾರಂಗಿ ಗ್ರಾಮ ಪಂಚಾಯಿತಿ (grama-panchayat) ಸದಸ್ಯೆ ಶಶಿಕಲಾ ಸಾಹುಕಾರ ಅವರು ಅನಾರೋಗ್ಯದಿಂದ ಭಾನುವಾರ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ದಿನದಿಂದ ಶಶಿಕಲಾ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಅವರನ್ನು … Read more

ಶಿವಮೊಗ್ಗದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ, ತಾಲೂಕುವಾರು ಸಭೆ, ಡೇಟ್‌ ಫಿಕ್ಸ್‌

shimoga dc office

SHIVAMOGGA LIVE | 8 JUNE 2023 SHIMOGA : ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳ ಎರಡನೇ ಅವಧಿಗೆ ಮೀಸಲಾತಿ (Reservation) ನಿಗದಿಗೆ ದಿನಾಂಕ ಪ್ರಕಟಿಸಲಾಗಿದೆ. ತಾಲೂಕು ಕೇಂದ್ರಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಸಭೆ ನಿಗದಿ ಮಾಡಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಶಿವಮೊಗ್ಗ ತಾಲೂಕು ಸಭೆ : ಜೂನ್‌ 19ರಂದು ಬೆಳಗ್ಗೆ 10.30ಕ್ಕೆ ಕುವೆಂಪು ರಂಗಮಂದಿರ. ತೀರ್ಥಹಳ್ಳಿ ತಾಲೂಕು ಸಭೆ : ಜೂನ್‌ 20ರಂದು ಬೆಳಗ್ಗೆ 10.30ಕ್ಕೆ ಗೋಪಾಲಗೌಡ ರಂಗಮಂದಿರ. ಹೊಸನಗರ ತಾಲೂಕು ಸಭೆ : … Read more

ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ, ಡಿಸೆಂಬರ್ 16ರವರೆಗೆ ಕಟ್ಟುನಿಟ್ಟು ಪಾಲನೆ, ಶಿವಮೊಗ್ಗದಲ್ಲಿ ಎಷ್ಟಿದ್ದಾರೆ ಮತದಾರರು?

101121 Shimoga Vidhana Parishad Voters Meeting DC Office

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021 ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದೆ. ಅದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು, ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದರು. ಮಾದರಿ ನೀತಿ ಸಂಹಿತೆ … Read more