‘ಸಚಿವ ಈಶ್ವರಪ್ಪ ಆಸ್ತಿ ಮುಟ್ಟುಗೋಲು ಹಾಕಿಕೊಂಡು ನಷ್ಟ ಭರಿಸಬೇಕು’

Eshwarappa-and-Congress-President-Sundaresh

SHIVAMOGGA LIVE NEWS | 28 ಫೆಬ್ರವರಿ 2022 ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಮೆರವಣಿಗೆಯ ನೇತೃತ್ವ ವಹಿಸಿದ್ದ ಸಚಿವ ಕೆ.ಎಸ್ ಈಶ್ವರಪ್ಪ, ಬಿ.ವೈ. ರಾಘವೇಂದ್ರ, ಚನ್ನಬಸಪ್ಪ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್  ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು, ಸಚಿವ ಈಶ್ವರಪ್ಪ ಅವರನ್ನು ಎ1 ಆರೋಪಿ ಮಾಡಬೇಕು. ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡು, ಗಲಭೆಯಿಂದ ನಷ್ಟ ಅನುಭವಿಸಿದವರಿಗೆ ಪರಿಹಾರ ನೀಡಬೇಕು. ಒಂದು ವೇಳೆ ಸಚಿವ ಈಶ್ವರಪ್ಪ … Read more

ಭಾನುವಾರವು ಖರೀದಿ ಜೋರು, ನಗರದಲ್ಲಿ ಜನ ಸಂಚಾರ ಸಹಜ ಸ್ಥಿತಿಗೆ, ಹೇಗಿದೆ ಇವತ್ತಿನ ಪರಿಸ್ಥಿತಿ?

Shimoga-City-Normalcy-After-144-Section

ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಫೆಬ್ರವರಿ 2022 ನಿಷೇಧಾಜ್ಞೆ ಸಡಿಲಗೊಂಡ ಹಿನ್ನೆಲೆ ಎರಡನೆ ದಿನವು ಶಿವಮೊಗ್ಗ ನಗರದಲ್ಲಿ ಜನ ಜೀವನ ಸಹಜ ಸ್ಥಿತಿಗೆ ಮರಳಿದೆ. ಅಗತ್ಯ ವಸ್ತುಗಳ ಖರೀದಿಗೆ ಬಿರುಸುಗೊಂಡಿದೆ. ಬೆಳಗ್ಗೆ 6 ಗಂಟೆಯಿಂದ ನಿಷೇಧಾಜ್ಞೆಗೆ ರಿಲೀಫ್ ನೀಡಲಾಗಿದೆ. ಹೂವು, ಹಣ್ಣು, ತರಕಾರಿ, ದಿನಸಿ ಖರೀದಿ ಮಾಡುತ್ತಿದ್ದಾರೆ. ಭಾನುವಾರ ಆಗಿರುವುದರಿಂದ ಮೀನು, ಮಾಂಸ ಖರೀದಿ ಕೂಡ ಜೋರಿದೆ. ಸಂಜೆ 4 ಗಂಟೆಗೆ ಪುನಃ ನಿಷೇಧಾಜ್ಞೆ ಜಾರಿಗೊಳ್ಳಲಿದೆ. ಆದ್ದರಿಂದ ಮೀನು, ಮಾಂಸ ಖರೀದಿಗೆ ಬೆಳಗ್ಗೆಯಿಂದಲೆ ಜನ … Read more

ಶಿವಮೊಗ್ಗದಲ್ಲಿ ರಸ್ತೆಗಿಳಿದ ಸಿಟಿ ಬಸ್, ನಿಟ್ಟುಸಿರು ಬಿಟ್ಟ ಖಾಸಗಿ ಬಸ್ ಮಾಲೀಕರು

KSRTC-Bus-After-Curfew-In-Shimoga-city

ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಫೆಬ್ರವರಿ 2022 ಕರ್ಫ್ಯೂ ಸಡಿಲಗೊಳಿಸಿದ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಹಳಿಗೆ ಬಂದಿದೆ. ನಗರ ಸಾರಿಗೆ ಬಸ್ಸುಗಳು ಸಂಚಾರ ಆರಂಭಿಸಿವೆ. KSRTC ಮತ್ತು ಖಾಸಗಿ ಬಸ್ಸುಗಳಲ್ಲಿ ಹೆಚ್ಚು ಪ್ರಯಾಣಿಕರು ಕಾಣಿಸುತ್ತಿದ್ದಾರೆ. ಸೋಮವಾರದಿಂದ ಶಿವಮೊಗ್ಗ ನಗರ ಸಾರಿಗೆ ಬಸ್ಸುಗಳು ಸಂಚಾರ ನಿಲ್ಲಿಸಿದ್ದವು. ಇವತ್ತು ಬೆಳಗ್ಗೆಯಿಂದ ಬಸ್ ಸಂಚಾರ ಪುನಾರಂಭವಾಗಿದೆ. ನಗರದ ವಿವಿಧೆಡೆ ಬಸ್ಸುಗಳು ಸಂಚರಿಸಿದವರು. ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗಾಂಧಿ ಬಜಾರ್ ಸೇರಿದಂತೆ ವಿವಿಧ ಮಾರುಕಟ್ಟೆಗೆ … Read more

ಫೇಸ್’ಬುಕ್ಕಲ್ಲಿ ಬಿಸಿ ಬಿಸಿ ಚರ್ಚೆ, ‘ಹರ್ಷ ಕುಟುಂಬದವರಿಗೆ ಎಂಎಲ್ಎ ಟಿಕೆಟ್’ಗೆ ಆಗ್ರಹ

Bajarangadal Worker Harsha Murdered

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಅವರ ತಾಯಿಗೆ ಶಿವಮೊಗ್ಗ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಶುರುವಾಗಿದೆ. ಫೇಸ್ ಬುಕ್’ನಲ್ಲಿ ಇದರ ಕುರಿತು ಅಭಿಪ್ರಾಯ ಸಂಗ್ರಹ ಕೂಡ ನಡೆಯುತ್ತಿದೆ. ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಹರ್ಷ ಪ್ರಾಣ ಕಳೆದುಕೊಂಡಿದ್ದಾರೆ. ಹಿಂದುತ್ವಕ್ಕಾಗಿ ಹೋರಾಟ ನಡೆಸಿದವರನ್ನು ಚುನಾವಣೆಗೆ ನಿಲ್ಲಿಸಬೇಕು. ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದಿಂದ ಹರ್ಷ ಅವರ ತಾಯಿ ಪದ್ಮಾ ಅವರಿಗೆ ಟಿಕೆಟ್ ನೀಡಬೇಕು … Read more

ಹರ್ಷ ಹತ್ಯೆ ಕೇಸ್, ಭದ್ರಾವತಿಯ ಒಬ್ಬ ಸೇರಿ ಇಬ್ಬರು ಅರೆಸ್ಟ್

Bajarangadal Worker Harsha Murdered

ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಹತ್ಯೆ ಪ್ರಕರಣ ಸಂಬಂಧ ಇನ್ನು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಭದ್ರಾವತಿ ಹೊಸಮನೆ ಬಡಾವಣೆಯ ಅಬ್ದುಲ್ ರೋಶನ್ (24), ಶಿವಮೊಗ್ಗದ ವಾದಿ-ಎ-ಹುದಾ ನಿವಾಸಿ ಜಾಫರ್ ಸಾದಿಕ್ ಅಲಿಯಾಸ್ ಬದ್ರುದಿನ್ (55) ಎಂಬುವವರನ್ನು ಬಂಧಿಸಲಾಗಿದೆ. ಇನ್ನು, ಪ್ರಕರಣ ಸಂಬಂಧ ಎರಡು ಕಾರು, 1 ದ್ವಿಚಕ್ರ ವಾಹನ ವಾಹನವನ್ನು ವಶಕ್ಕೆ ಪಡೆಯಲಾಗಿದೆ. … Read more

ಗಾಂಧಿ ಬಜಾರ್ ವಹಿವಾಟು ಸ್ಥಗಿತ, ಇದರ ಪರಿಣಾಮವೇನು? ಇಲ್ಲಿದೆ ಟಾಪ್ 5 ಪಾಯಿಂಟ್

Police Van Entering Gandhi Bazaar

ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ, ನಂತರದ ಉದ್ವಿಗ್ನ ಪರಿಸ್ಥಿತಿ ಶಿವಮೊಗ್ಗ ನಗರವನ್ನು ಸ್ಥಬ್ಧಗೊಳಿಸಿದೆ. ಗಾಂಧಿ ಬಜಾರ್ ವರ್ತಕರ ಪಾಲಿಗಂತೂ ಈ ಘಟನೆ ಗಾಯದ ಮೇಲೆ ಬರೆ ಎಳದಿದೆ. ವ್ಯಾಪಾರ, ವ್ಯವಹಾರ ಕುದುರುವ ಹೊತ್ತಿಗೆ ವಾರಗಟ್ಟಲೆ ಅಂಗಡಿ ಬಂದ್ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮ ವಹಿವಾಟು ಪುನಃ ಹಳಿಗೆ ಬರಲು ಇನ್ನು ಒಂದು ವರ್ಷ ಕಾಯಬೇಕಾದ ದುಸ್ಥಿತಿ ವ್ಯಾಪಾರಿಗಳಿಗೆ ಎದುರಾಗಿದೆ. ವಾರಗಟ್ಟಲೆ ಗಾಂಧಿ ಬಜಾರ್ ಬಂದ್ ಆಗುವುದರಿಂದ … Read more

‘ಪೊಲೀಸ್ ಇಲಾಖೆ ಮೆರವಣಿಗೆ ಬೇಡ ಅಂದಿದ್ದರು, ಕಲ್ಲು ತೂರಾಟದಿಂದ ಜಿಲ್ಲೆಗೆ ಕೆಟ್ಟ ಹೆಸರು’

b y raghavendra about press meet

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಮೃತದೇಹದ ಮೆರವಣಿಗೆ ವೇಳೆ ಗಲಾಟೆಗೆ ನಾವು ಕಾರಣರಲ್ಲ. ಅಂದು ಸೆಕ್ಷನ್ 144 ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ ಅವರು, ಯಾರೂ ಸಹ ಜನರ ಭಾವನೆಗಳ ಜೊತೆ ಚೆಲ್ಲಾಟ ಆಡುವುದಕ್ಕೆ ಬರಲ್ಲ. ತುಂಬಾ ಸೂಕ್ಷ್ಮವಾಗಿ ಎಲ್ಲ ಅಂಶವನ್ನು ತೆಗೆದುಕೊಂಡು ಹೋಗಬೇಕಿತ್ತು. ಈ ಸಂದರ್ಭದಲ್ಲಿ ಜನರ ಆಕ್ರೋಶ ತಡೆಯಲು ಆಗಲಿಲ್ಲ ಎಂದರು. ಹರ್ಷನ … Read more

‘ಹತ್ಯೆಗೂ ಮೊದಲು ಹರ್ಷಾಗೆ ವಿಡಿಯೋ ಕಾಲ್’, ಕೊನೆ ಕ್ಷಣವನ್ನು ವಿವರಿಸಿದ ಸ್ನೇಹಿತ

Bajarangadal Worker Harsha Murdered

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೂ ಮುನ್ನ ನಡೆದ ಕೆಲವು ಬೆಳವಣಿಗೆ ಕುರಿತು ಆತನ ಸ್ನೇಹಿತ ನವೀನ್ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ನವೀನ್ ಮಹತ್ವದ ವಿಚಾರಗಳನ್ನು ತಿಳಿಸಿದ್ದಾರೆ. ನವೀನ ಹೇಳಿದ ಸಂಗತಿಗಳೇನು? “ಭಾನುವಾರ ಸಂಜೆ ಹರ್ಷನಿಗೆ ವಿಡಿಯೋ ಕಾಲ್ ಬಂದಿತ್ತು. ಇಬ್ಬರು ಯುವತಿಯವರು ವಿಡಿಯೋ ಕಾಲ್ ಮಾಡಿದ್ದರು. ಆ ಯುವತಿಯರು ‘ನಾವು ನಿಮ್ಮ ಸ್ನೇಹಿತೆಯರು’ ಎಂದು ಹೇಳಿದ್ದಾರೆ. ‘ನನಗೆ ನಿಮ್ಮ ಪರಿಚಯವಿಲ್ಲ’ ಎಂದು ಹರ್ಷ … Read more

BREAKING NEWS | ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್, ಮತ್ತಿಬ್ಬರು ಅರೆಸ್ಟ್

Bajarangadal Worker Harsha Murdered

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈತನಕ ಎಂಟು ಆರೋಪಿಗಳನ್ನು ಬಂಧಿತರಾಗಿದ್ದಾರೆ. ಇವತ್ತು ಇಲಿಯಾಸ್ ನಗರದ ಫರಾಜ್ ಪಾಷಾ (24) ಮತ್ತು ವಾದಿ-ಎ-ಹುದಾ ಬಡಾವಣೆಯ ನಿವಾಸಿಗಳು ಅಬ್ದುಲ್ ಖಾದರ್ ಜಿಲಾನ್ (25) ಎಂಬುವವರನ್ನು ಬಂಧಿಸಲಾಗಿದೆ. ಕಳೆದ ಭಾನುವಾರ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾಗಿತ್ತು. ಇದನ್ನೂ ಓದಿ | ಹರ್ಷ ಹತ್ಯೆ ಕೇಸ್, ಬಂಧಿತರ … Read more

ಪೊಲೀಸರ ಎದುರಲ್ಲೇ ಮಾರಕಾಸ್ತ್ರ ಪ್ರದರ್ಶನ, ವಿಡಿಯೋಗಳು ವೈರಲ್

Lethal-Weapons-during-Clash-in-Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ, ನಂತರದ ಗಲಭೆ ಸಂದರ್ಭ ಕೆಲವು ಯುವಕರು ಪೊಲೀಸರ ಎದುರಲ್ಲೆ ಮಾರಕಾಸ್ತ್ರ ಪ್ರದರ್ಶಿಸಿದ್ದಾರೆ. ಇದರ ವಿಡಿಯೋಗಳು ಈಗ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ. ಹರ್ಷ ಹತ್ಯೆ ಪ್ರಕರಣದ ಬಳಿಕ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಸೋಮವಾರ ಬೆಳಗ್ಗೆ ಹರ್ಷ ಅಂತಿಮ ಯಾತ್ರೆ ನಡೆಯಿತು. ಈ ಸಂದರ್ಭ ಹಲವು ಕಡೆ ಕಲ್ಲು ತೂರಟವಾಗಿತ್ತು. ಇದೆ ವೇಳೆ ವಿವಿಧೆಡೆ ದುಷ್ಕರ್ಮಿಗಳು ಲಾಂಗು, ಮಚ್ಚು, ದೊಣ್ಣೆಗಳನ್ನು … Read more