BREAKING NEWS – ಆಯನೂರು, ಕುಂಸಿ ಸುತ್ತಮುತ್ತ ಭಾರಿ ಮಳೆ, ಸಿಡಿಲಿಗೆ 40 ಕುರಿಗಳು ಸಾವು

Sheeps-succumbed-to-lighting-during-rain-near-ayanuru

ಶಿವಮೊಗ್ಗ : ಕುಂಸಿ, ಆಯನೂರು ಸುತ್ತಮುತ್ತ ಇಂದು ಸಂಜೆ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದ ವಿವಿಧೆಡೆ ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಸಿಡಿಲು ಬಡಿದು ಸುಮಾರು 40 ಕುರಿಗಳು (Sheeps) ಸಾವನ್ನಪ್ಪಿವೆ. ಅಲ್ಲಲ್ಲಿ ರಸ್ತೆಗೆ ಅಡ್ಡಲಾಗಿ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ. ಆಯನೂರು ಸುತ್ತಮುತ್ತ ಇಂದು ಸಂಜೆ ಸುಮಾರು ಮುಕ್ಕಾಲು ಗಂಟೆಗು ಹೆಚ್ಚು ಹೊತ್ತು ಭಾರಿ ಮಳೆಯಾಗಿದೆ. ಗುಡುಗು, ಗಾಳಿ ಸಾಹಿತ ಜೋರು ಮಳೆ ಸುರಿದಿದೆ. ಸಿಡಿಲಿಗೆ ಕುರಿಗಳು ಸಾವು ಆಯನೂರು ಸಮೀಪದ ಬಾಳೆಕೊಪ್ಪ ಗ್ರಾಮದಲ್ಲಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆ, ಕೋಡೂರಿನಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ವರ್ಷಧಾರೆ, ಎಲ್ಲೆಲ್ಲಿ ಹೇಗಿದೆ ಈಗ?

Heavy-Rainfall-at-ripponpete-in-Shikaripura-taluk.

ಶಿವಮೊಗ್ಗ : ಜಿಲ್ಲೆಯಲ್ಲಿ ಇವತ್ತೂ ಮಳೆ (Rainfall) ಮುಂದುವರೆದಿದೆ. ಮಧ್ಯಾಹ್ನದ ವೇಳೆಗೆ ಶುರುವಾದ ಮಳೆ ಎಡೆಬಿಡದೆ ಸುರಿಯುತ್ತಿದೆ. ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುತ್ತಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದ ವಿವಿಧೆಡೆ ಜೋರು ಮಳೆಯಾಗುತ್ತಿದೆ (Rainfall). ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಮೋಡ ಕವಿದ ವಾತಾವರಣವಿದೆ. ವಿವಿಧೆಡೆ ತುಂತುರು ಮಳೆಯಾದ ಮಾಹಿತಿ ಇದೆ. ಮಾರುತಿಪುರ, ತಾಳಗುಂದದಲ್ಲಿ ಭಾರಿ ಮಳೆ ಹೊಸನಗರ ತಾಲೂಕು ಮಾರುತಿಪುರ, ಶಿಕಾರಿಪುರದ ತಾಳಗುಂದ, ಸಾಗರದ ಹೊಸೂರು, ಸೊರಬದ ಇಂಡುವಳ್ಳಿ, ಬಿಳುವಾಣಿ ಸುತ್ತಮುತ್ತ ಇವತ್ತು … Read more

ಶಿವಮೊಗ್ಗ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ ಘೋಷಣೆ

dc-gurudatta-hegde-IAS-Shimoga

SHIVAMOGGA LIVE NEWS, 3 DECEMBER 2024 ಶಿವಮೊಗ್ಗ : ಫೆಂಗಲ್‌ ಚಂಡಮಾರುತದ ಕಾರಣಕ್ಕೆ ಇನ್ನೆರಡು ದಿನ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಇವತ್ತು ರಜೆ (Holiday) ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲೆಯಲ್ಲಿ ಡಿ.3 ಮತ್ತು 4ರಂದು ಆರೆಂಜ್‌ ಮತ್ತು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ವಿಪತ್ತು … Read more

ಶಿವಮೊಗ್ಗ ಸಿಟಿಯಲ್ಲಿ ಮತ್ತೆ ಮನೆಗಳಿಗೆ ನುಗ್ಗಿದ ನೀರು

Rain-Effect-at-LBS-Nagara-in-Shimoga-city

SHIMOGA NEWS, 21 OCTOBER 2024 : ಕಳೆದ ರಾತ್ರಿ ಸುರಿದ ಭಾರಿ ಮಳೆಗೆ (Rain) ಎಲ್‌ಬಿಎಸ್‌ ನಗರದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಆಸ್ತಿಪಾಸ್ತಿ ತೀವ್ರ ಹಾನಿ ಉಂಟಾಗಿದೆ. ಕಳೆದ ರಾತ್ರಿ ಸುರಿದ ಮಳೆಗೆ ಎಲ್‌ಬಿಎಸ್‌ ನಗರದಲ್ಲಿ ಹಾದು ಹೋಗಿರುವ ಚಾನಲ್‌ನಿಂದ ನೀರು ಭರ್ತಿಯಾಗಿ ಹೊರಗೆ ಹರಿದಿದೆ. ಇದರಿಂದ ಈ ಭಾಗದಲ್ಲಿರುವ ಸುಮಾರು 40ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಇವತ್ತೇ ಭಾರಿ ಹಾನಿಯಾಗಿದೆ ಭಾನುವಾರದ ಮಳೆಗಿಂತಲು ಕಳೆದ ರಾತ್ರಿ ಸುರಿದ ಮಳೆಗೆ ಈ ಭಾಗದಲ್ಲಿ … Read more

ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌, ನಾಳೆಯೂ ಮುಂದುವರೆಯುತ್ತಾ ಮಳೆ?

rain-at-shankaramutt-road-in-Shimoga-city

SHIMOGA NEWS, 20 OCTOBER 2024 : ಭಾರಿ ಮಳೆ ಹಿನ್ನೆಲೆ ಹವಾಮಾನ ಇಲಾಖೆ ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌ (Orange Alert) ಪ್ರಕಟಿಸಿದೆ. ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ತೀವ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ಬಿಡುವು ನೀಡಿದ್ದ ಮಳೆ ಸಂಜೆ ವೇಳೆಗೆ ಪುನಃ ಅಬ್ಬರಿಸಿದೆ. ಇವತ್ತು ರಾತ್ರಿ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಆಕ್ಯು ವೆದರ್‌.ಕಾಂ ವರದಿ ಮಾಡಿದೆ. ಇನ್ನೊಂದೆಡೆ ದಟ್ಟ ಮೋಡ ಮತ್ತು ಗುಡುಗು ಮುಂದುವರೆದಿದ್ದು ರಾತ್ರಿ ಜೋರು … Read more

ಭಾರಿ ಮಳೆ, ಶಿವಮೊಗ್ಗ ಸಿಟಿಯಲ್ಲಿ ಎಲ್ಲೆಲ್ಲಿ ಏನೇನಾಗಿದೆ?

Heavy-rain-at-Shimoga-city-thumbnail

RAINFALL NEWS, 20 OCTOBER 2024 : ಭಾರಿ (Heavy Rain) ಮಳೆಗೆ ಶಿವಮೊಗ್ಗ ನಗರ ತತ್ತರಿಸಿದೆ. ರಾತ್ರಿ ಪೂರ್ತಿ ಅಬ್ಬರಿಸಿದ್ದ ವರುಣ ಬೆಳಗ್ಗೆ 8 ಗಂಟೆ ಹೊತ್ತಿಗೆ ಕೊಂಚ ಬಿಡುವು ನೀಡಿದ್ದ. ಈಗ ಪುನಃ ಮಳೆ ಆರಂಭವಾಗಿದೆ. ಇನ್ನು, ಗುಡುಗು ಜೋರಾಗಿದ್ದು ಇಡೀ ದಿನ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಜೋರು ಮಳೆಗೆ ನಗರದ ವಿವಿಧೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಅಲ್ಲಲ್ಲಿ ರಾಜಕಾಲುವೆ, ಚರಂಡಿಗಳು ತುಂಬಿ ರಸ್ತೆ, ಮನೆಗಳಿಗೆ ನೀರು ನುಗ್ಗಿದೆ. ಈತನಕ ಎಲ್ಲೆಲ್ಲಿ … Read more

ಶಿವಮೊಗ್ಗದಲ್ಲಿ ಮಳೆ, ರಸ್ತೆಗಳು ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Heavy-rain-at-gopalagowda-layout-c-block

RAINFALL NEWS, 20 OCTOBER 2024 : ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿಯಿಂದ ಜೋರು ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳು ಮತ್ತು ಚರಂಡಿಗಳು ಭರ್ತಿಯಾಗಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ನಗರದ ಗೋಪಾಲಗೌಡ ಬಡಾವಣೆಯ ಸಿ ಬ್ಲಾಕ್‌ನಲ್ಲಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ಇಲ್ಲಿ ರಾಜಾಕಾಲುವೆ ತುಂಬಿ ನೀರು ಹೊರಗೆ ಬಂದಿದೆ. ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಮನೆಗಳಿಗು ನೀರು ನುಗ್ಗಿದೆ. ವಾಹನಗಳು ನೀರಿನಲ್ಲಿ ಅರ್ಧ ಮುಳುಗಿವೆ. ಮನೆಯಿಂದ ನೀರು ಹೊರಗೆ ಹಾಕಲು ಜನರು ಹರಸಾಹಸ ಪಡುತ್ತಿದ್ದಾರೆ. ಇತ್ತ ಬಿ.ಹೆಚ್‌.ರಸ್ತೆಯಲ್ಲಿ … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆ ಅಬ್ಬರ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

rain-at-shankaramutt-road-in-Shimoga-city

RAINFALL NEWS, 16 OCTOBER 2024 : ಶಿವಮೊಗ್ಗ ಜಿಲ್ಲೆಯಾದ್ಯಂತ ಜೋರು ಮಳೆಯಾಗುತ್ತಿದೆ. ನಗರದಲ್ಲಿ ಸತತ ಒಂದು ಗಂಟೆಯಿಂದ ಮಳೆಯಾಗುತ್ತಿದೆ. ಇನ್ನೊಂದೆಡೆ ಅ.17ರಂದು ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ಜೋರು ಮಳೆ ಶಿವಮೊಗ್ಗ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಸಣ್ಣ ಪ್ರಮಾಣದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಕೆಲವು ಕಡೆ ಆಗಾಗ ಬಿಡುವು ನೀಡಿ, ಬಳಿಕ ಅಬ್ಬರಿಸುತ್ತಿದೆ. ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಇನ್ನು, ಸಂಜೆ ವೇಳೆಗೆ ಭದ್ರಾವತಿ ತಾಲೂಕಿನ ಹಲವು ಕಡೆ ಜೋರು ಮಳೆಯಾಗುತ್ತಿದೆ. ಈ … Read more

ಭದ್ರಾವತಿಯಲ್ಲಿ ಮುಂದುವರೆದ ಮಳೆ, ಕಾಂಪೌಂಡ್‌ ಕುಸಿತ, ಮನೆಗಳು ಜಲಾವೃತ

Rainfall-at-bhadravathi-taluk

BHADRAVATHI NEWS, 12 OCTOBER 2024 : ಭದ್ರಾವತಿ ತಾಲೂಕಿನಲ್ಲಿ ಮಳೆ ಅಬ್ಬರ (RAIN) ಮುಂದುವರೆದಿದೆ. ಮನೆಗಳಿಗೆ ನೀರು ನುಗ್ಗಿದ್ದು, ರಸ್ತೆಗಳು ಜಲಾವೃತವಾಗಿವೆ. ಅಲ್ಲಲ್ಲಿ ಗೋಡೆ ಕುಸಿತದ ವರದಿಯಾಗಿದೆ. ಮುಂದುವರೆದ ಮಳೆ ಅಬ್ಬರ ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ಸಿಂಗನಮನೆ, ಮಾವಿನಕೆರೆ, ಹಿರಿಯೂರು, ಅರಳಹಳ್ಳಿ, ಕಾಗೆಕೊಡಮಗ್ಗಿ, ತಡಸ, ಬಿಳಕಿ, ನಾಗತಿಬೆಳಗಲು, ಅರೆಬಿಳಚಿ, ಕಲ್ಲಿಹಾಳ್‌, ಎಮ್ಮೆಹಟ್ಟಿ, ಗುಡುಮಘಟ್ಟ, ಮಂಗೋಟೆ, ನಿಂಬೆಗೊಂದಿ, ದಾಸರಕಲ್ಲಹಳ್ಳಿ, ಯರೆಹಳ್ಳಿ ಸುತ್ತಮುತ್ತ ಭಾರಿ ಮಳೆಯಾಗುತ್ತಿರುವ ವರದಿಯಾಗಿದೆ. ಗೋಡೆ ಕುಸಿತ, ಮನೆಗಳಿಗೆ ನೀರು ಮಳೆ ಮುಂದುವರೆದ ಹಿನ್ನೆಲೆ … Read more

ಶಿವಮೊಗ್ಗದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ

muduvala-lake-rescue-operation

SHIMOGA NEWS, 12 OCTOBER 2024 : ಹಳ್ಳ ದಾಟುವಾಗ ಬೈಕ್‌ ಸಹಿತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕೊಚ್ಚಿ ಹೋದ ಸ್ಥಳದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿ ಮೃತದೇಹ ಸಿಕ್ಕಿದೆ (Found). ಯಡವಾಲದ ಕೊಂಡಜ್ಜಿ ಹಳ್ಳದ ಸೇತುವೆಯನ್ನು ದಾಟುವಾಗ ಚಿನ್ನಿಕಟ್ಟೆಯ ಇಕ್ಬಾಲ್‌ (40) ಎಂಬುವವರು ತಮ್ಮ ಬೈಕ್‌ ಸಹಿತ ಕೊಚ್ಚಿ ಹೋಗಿದ್ದರು. ಭಾರಿ ಮಳೆಯಿಂದಾಗಿ ಸೇತುವೆ ಮೇಲ್ಭಾಗದಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಈ ಸಂದರ್ಭ ಆಯಾತಪ್ಪಿ ಇಕ್ಬಾಲ್‌ ಕೊಚ್ಚಿ ಹೋಗಿದ್ದರು. ಅವರಿಗಾಗಿ ಶೋಧ ಕಾರ್ಯ … Read more