ವಿದ್ಯಾನಗರದ ಮೇಲ್ಸೇತುವೆ, ಚಿತ್ರದುರ್ಗವರೆಗಿನ ಹೈವೇ, ಶಿವಮೊಗ್ಗ ಹೊಸ ಸೇತುವೆ ಕೆಲಸ ಇವತ್ತಿಂದ ಶುರು
ಶಿವಮೊಗ್ಗ ಲೈವ್.ಕಾಂ |SHIMOGA NEWS | 5 ಸೆಪ್ಟೆಂಬರ್ 2021 ಶಿವಮೊಗ್ಗದಲ್ಲಿ ಇವತ್ತು ಶಂಕುಸ್ಥಾಪನೆಯಾದ ಕಾಮಗಾರಿಗಳು ಕಾಲಮಿತಿಯೊಳಗೆ ಮತ್ತು ಗುಣಮಟ್ಟದೊಂದಿಗೆ ಪೂರ್ಣಗೊಳ್ಳಬೇಕು. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು. ಶಿವಮೊಗ್ಗದ ಅರಕೇಶ್ವರ ದೇಗುಲದ ಬಳಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವ ಸಿ.ಸಿ.ಪಾಟೀಲ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ ಅವರ ಅವಧಿಯಲ್ಲಿ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿವೆ. ಉಳಿದ ಕಾಮಗಾರಿಗಳಿಗೆ ನಮ್ಮ ಇಲಾಖೆಯಿಂದ ಸಹಕಾರ ನೀಡುತ್ತೇವೆ … Read more