BSNL ವಿರುದ್ಧ ಗ್ರಾಮಸ್ಥರ ಸಿಟ್ಟು, ಅಧಿಕಾರಿಗಳಿಗೆ ಒಂದು ವಾರ ಗಡುವು

Aramanekoppa-Villagers-Protest-against-BSNL

SHIVAMOGGA LIVE NEWS | 7 ಮಾರ್ಚ್ 2022 ಬಿಎಸ್ಎನ್ಎಲ್ ಅಸಮರ್ಪಕ ಸಂಪರ್ಕದ ವಿರುದ್ಧ ಹೊಸನಗರ ತಾಲೂಕು ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತಿಮನೆ ದೂರವಾಣಿ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅಧಿಕಾರಿಗಳಿಗೆ ಒಂದು ವಾರದ ಗಡುವು ಕೂಡ ನೀಡಿದ್ದಾರೆ. ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವೇನು? ♦ ಮತ್ತಿಮನೆ ಕೇಂದ್ರದ ವ್ಯಾಪ್ತಿಯಲ್ಲಿ ಮತ್ತಿಮನೆ, ಸಮಗೋಡು, ಅರಮನೆಕೊಪ್ಪ, ಕಿರುಗುಳಿಗೆ, ಹಲಸಿನಕಟ್ಟೆ, ಓತನಾಡಿ, ತರುವೆ, ಕುಂದಗಲ್ಲು ಸೇರಿದಂತೆ ಹಲವು ಗ್ರಾಮಗಳು ಬರಲಿವೆ. ಇಲ್ಲಿ 250ಕ್ಕೂ ಹೆಚ್ಚು ಸ್ಥಿರ ದೂರವಾಣಿ … Read more

ಅರಸಾಳು ಪಂಚಾಯಿತಿ ವ್ಯಾಪ್ತಿಯಲ್ಲಿ ಕೆರೆ ಜಾಗ ಕಬಳಿಕೆ, ಹೋರಾಟಗಾರರಿಂದ ಪರಿಶೀಲನೆ

Lake-Survey-at-Arasalu-Village

SHIVAMOGGA LIVE NEWS | 6 ಮಾರ್ಚ್ 2022 ಕೆರೆ ಒಂದನ್ನು ಒತ್ತುವರಿ ಮಾಡಿ ಆ ಜಾಗದಲ್ಲಿ ಬೆಳೆ ಬೆಳೆಯುತ್ತಿರುವ ಆರೋಪದ ಹಿನ್ನೆಲೆ, ಇವತ್ತು ಪರಿಸರ ಪ್ರಿಯರ ತಂಡ ಪರಿಶೀಲನೆ ನಡೆಸಿತು. ಒತ್ತುವರಿ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡು ನೂರಾರು ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಪರಿಸರ ಪ್ರಿಯರು ಆಗ್ರಹಿಸಿದ್ದಾರೆ. ಹೊಸನಗರ ತಾಲೂಕು ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಗುಡ್ಡದ ತೋಟ ಎಂಬಲ್ಲಿ ಕೆರೆ ಒತ್ತುವರಿ ಆಗಿರುವ ಆರೋಪವಿದೆ. ಈ … Read more

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್, ಪಿಎಸ್ಐ ವಿರುದ್ಧ ವಿಚಾರಣೆ

IPS office Lakshmi Prasad

SHIVAMOGGA LIVE NEWS | 6 ಮಾರ್ಚ್ 2022 ವ್ಯಕ್ತಿಯೊಬ್ಬರ ಮೇಲೆ ಪಿಎಸ್ಐ ಮತ್ತು ಕಾನ್ಸ್ ಟೇಬಲ್ ಒಬ್ಬರು ಲಾಠಿಯಿಂದ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ತನಿಖೆಗೆ ಆದೇಶಿಸಿದ್ದಾರೆ. ವಿಡಿಯೋ ವೈರಲ್ ಆದ ಬೆನ್ನಿಗೆ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ‘ಸಾಮಾಜಿಕ ಜಾಲ ತಾಣದಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್ಐ ಅವರು ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿರುತ್ತಾರೆ ಎಂದು ವಿಡಿಯೋ ವೈರಲ್ … Read more

ಹೊಸನಗರದಲ್ಲಿ ತಂದೆಯಿಂದಲೇ ಮಗನಿಗೆ ಚಾಕು ಇರಿತ

Hosanagara Police Station 1

ಶಿವಮೊಗ್ಗದ ಲೈವ್.ಕಾಂ | HOSANAGARA NEWS | 10 ಫೆಬ್ರವರಿ 2022 ಸಾರ್ವಜನಿಕ ಸ್ಥಳದಲ್ಲಿ ತಂದೆಯೇ ಮಗನಿಗೆ ಚಾಕುವಿನಿಂದ ಇರಿದ್ದಿದ್ದಾರೆ. ಕೌಟುಂಬಿಕ ಕಲಹವೆ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ತೀರ್ಥೇಶ್ (33) ಗಾಯಗೊಂಡಿರುವವರು. ತಂದೆ ರಾಜಪ್ಪಗೌಡ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಹೊಸನಗರದ ಗೊರಗೋಡು ಗ್ರಾಮದಲ್ಲಿ ತೀರ್ಥೇಶ್ ಅವರು ಕೆಲಸದ ನಿಮಿತ್ತ ಹೊಸನಗರಕ್ಕೆ ಬಂದಿದ್ದರು. ಇಲ್ಲಿನ ಹೊಟೇಲ್ ಒಂದರಲ್ಲಿ ತೀರ್ಥಶ್ ಊಟ ಮಾಡುತ್ತಿದ್ದಾಗ ತಂದೆ ರಾಜಪ್ಪಗೌಡ ಬಂದು ಗಲಾಟೆ ಮಾಡಿದ್ದಾರೆ. ತಮ್ಮ ಜೇಬಿನಲ್ಲಿ ಇಟ್ಟುಕೊಂಡು ಬಂದಿದ್ದ ಚಾಕು … Read more

ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಬಾವಿಗೆ ಹಾರಿದ ತಾಯಿ

crime name image

ಶಿವಮೊಗ್ಗದ ಲೈವ್.ಕಾಂ | RIPPONPETE NEWS | 4 ಫೆಬ್ರವರಿ 2022 ನಾಲ್ಕು ವರ್ಷದ ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡ ಮತ್ತು ಆತನ ಮನೆಯವರ ಕಿರುಕುಳವೆ ಘಟನೆ ಕಾರಣ ಎಂದು ಮಹಿಳೆಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಹೊಸನಗರ ತಾಲೂಕು ಬಿದರಹಳ್ಳಿಯ ಚಿಟ್ಟೆಗದ್ದೆಯ ವಿದ್ಯಾ (32), ಮಗಳು ತನ್ವಿ (4) ಮೃತರು. ಮನೆ ಬಳಿಯ ಬಾವಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಬೆಳಗಿನ ಜಾವ ಬಾವಿಗೆ ಹಾರಿದ್ದಾರೆ ಗುರುವಾರ ಬೆಳಗಿನ ಜಾವ ವಿದ್ಯಾ, … Read more

ಧರ್ಮಸ್ಥಳದಲ್ಲಿ ಆಣೆ ಮಾಡಲು ದಿನಾಂಕ ನಿಗದಿಪಡಿಸಿದ ಶಾಸಕ ಹಾಲಪ್ಪ

MLA-Haratalu-Halappa

ಶಿವಮೊಗ್ಗದ ಲೈವ್.ಕಾಂ | SAGARA NEWS | 3 ಫೆಬ್ರವರಿ 2022 ಸಾಗರ ಶಾಸಕ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನಡುವಿನ ರಾಜಕೀಯ ಜಿದ್ದಾಜಿದ್ದಿ ಈಗ ಆಣೆ ಪ್ರಮಾಣ ಹಂತಕ್ಕೆ ತಲುಪಿದೆ. ಇದಕ್ಕೆ ದಿನಾಂಕವೂ ನಿಗದಿಯಾಗಿದೆ. ಏನಿದು ಆಣೆ ಪ್ರಮಾಣ? ಮರಳು ಸಾಗಣೆ ವಿಚಾರವಾಗಿ ಮುಂಚಿನಿಂದಲೂ ಹಾಲಿ ಮತ್ತು ಮಾಜಿ ಶಾಸಕರು, ಬೆಂಬಲಿಗರ ಮಧ್ಯೆ ವಾಗ್ವಾದ ನಡೆಯುತ್ತಿದೆ. ಈಗ ಇದು ಆಣೆ ಪ್ರಮಾಣದವರೆಗೆ ಬಂದು ನಿಂತಿದೆ. ಮರಳು ಸಾಗಣೆದಾರರಿಂದ ಶಾಸಕ ಹರತಾಳು ಹಾಲಪ್ಪ … Read more

ಕ್ಲೀನರ್ ಆಗಿದ್ದವರು 50 ಬಸ್ಸುಗಳ ಒಡೆಯರಾದರು, ಪ್ರಕಾಶ್ ಟ್ರಾವೆಲ್ಸ್ ಮಾಲೀಕರ ಬಗ್ಗೆ ಇಲ್ಲಿದೆ ಪ್ರಮುಖ 8 ವಿಚಾರ

240122 Prakash Travels Owner Prakash

ಶಿವಮೊಗ್ಗದ ಲೈವ್.ಕಾಂ | SAGARA NEWS | 24 ಜನವರಿ 2022 ಬಸ್ ಕ್ಲೀನರ್ ಆಗಿದ್ದ ಸಾಮಾನ್ಯ ವ್ಯಕ್ತಿ, ಮಲೆನಾಡು ಭಾಗದ ಸಾರಿಗೆ ಉದ್ಯಮವನ್ನು ‘ಪ್ರಕಾಶ’ಮಾನಗೊಳಿಸಿದ್ದಾರೆ. ನೂರಾರು ಮಂದಿಗೆ ನೌಕರಿ ಕೊಟ್ಟಿದ್ದಾರೆ. ಹಲವರ ಬದುಕಿಗೆ ಆಸರೆಯಾಗಿದ್ದಾರೆ. ಸಾರಿಗೆ ಕ್ಷೇತ್ರದಲ್ಲಿ ದೊಡ್ಡ ಹೆಸರಾಗಿದ್ದ ವ್ಯಕ್ತಿಯ ಬದುಕು ದುರಂತ ಅಂತ್ಯ ಕಂಡಿದೆ. ಇದಕ್ಕೆ ಇಡೀ ಮಲೆನಾಡು ಮರುಗಿದೆ. ಪ್ರಕಾಶ್ ಟ್ರಾವೆಲ್ಸ್ ಸಂಸ್ಥೆಯ ಮಾಲೀಕ ಪ್ರಕಾಶ್ ಇನ್ನಿಲ್ಲ. ಆದರೆ ಅವರ ಬಗ್ಗೆ ತಿಳಿಯಬೇಕಿರುವ ಸಂಗತಿ ಹಲವು. ಪ್ರಕಾಶ್ ಅವರ ಕುರಿತು ಟಾಪ್ … Read more

ಪ್ರಕಾಶ್ ಟ್ರಾವೆಲ್ಸ್ ಮಾಲೀಕ ನಾಪತ್ತೆ ಕೇಸ್, ಎರಡು ದಿನ ಏನೆಲ್ಲ ಬೆಳೆವಣಿಗೆಯಾಯ್ತು? ಇಲ್ಲಿದೆ ಸಂಪೂರ್ಣ ಅಪ್ ಡೇಟ್

230122 Search Operation at Pataguppa Bridge New

ಶಿವಮೊಗ್ಗದ ಲೈವ್.ಕಾಂ | SAGARA / HOSANAGARA NEWS | 24 ಜನವರಿ 2022 ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರು ಮೃತಪಟ್ಟಿದ್ದಾರೆ. ಪಟಗುಪ್ಪ ಸೇತುವೆ ಸಮೀಪ ಹೊಳೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ಮಧ್ಯೆ ಅವರ ಸಾವಿನ ಕುರಿತು ಕುಟುಂಬದವರು, ಆಪ್ತರು, ಸಂಸ್ಥೆಯ ಕಾರ್ಮಿಕರು ಹಲವು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕಾಶ್ ಅವರು ನಾಪತ್ತೆಯಾದ ಬಳಿಕ ಪ್ರಮುಖ ವಿದ್ಯಮಾನ ನಡೆದವು. ಅವುಗಳ ಸಂಕ್ಷಿಪ್ತ ವಿವರ ಇಲ್ಲಿದೆ. ♦ ರಾತ್ರಿ ಇಡೀ … Read more

BREAKING NEWS | ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಶವವಾಗಿ ಪತ್ತೆ

230122 Prakash Travels Owner Missing from Pataguppe Bridge

ಶಿವಮೊಗ್ಗದ ಲೈವ್.ಕಾಂ | HOSANAGARA NEWS | 24 ಜನವರಿ 2022 ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರು ಶವವಾಗಿ ಪತ್ತೆಯಾಗಿದ್ದಾರೆ. ಪಟಗುಪ್ಪ ಸೇತುವೆಯಿಂದ ಸ್ವಲ್ಪ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಪಟಗುಪ್ಪ ಸೇತುವೆ ಬಳಿ ಇವತ್ತು ಬೆಳಗ್ಗೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಕೂಡಲೆ ಮೃತದೇಹವನ್ನು ದಡಕ್ಕೆ ತರಲಾಗಿದೆ. ಪ್ರಕಾಶ್ ಅವರು ಶುಕ್ರವಾರ ರಾತ್ರಿ ನಾಪತ್ತೆಯಾಗಿದ್ದರು. ಅವರಿಗಾಗಿ ಕುಟುಂಬದವರು ಎಲ್ಲೆಡೆ ಹುಡುಕಿದ್ದರು. ಶನಿವಾರ ಬೆಳೆಗ್ಗೆ ಹೊಸನಗರದ ಪಟಗುಪ್ಪ ಸೇತುವೆ … Read more

ಪಟಗುಪ್ಪೆ ಸೇತುವೆ ಬಳಿ ಪ್ರಕಾಶ್ ಟ್ರಾವೆಲ್ಸ್ ಮಾಲೀಕರ ಶೋಧ ಕಾರ್ಯ ಪುನಾರಂಭ

230122 Search Operation at Pataguppa Bridge New

ಶಿವಮೊಗ್ಗದ ಲೈವ್.ಕಾಂ | HOSANAGARA NEWS | 23 ಜನವರಿ 2022 ಪಟಗುಪ್ಪೆ ಸೇತುವೆ ಬಳಿ ನಾಪತ್ತೆ ಆಗಿರುವ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರ ಶೋಧ ಕಾರ್ಯ ಎರಡನೆ ದಿನಕ್ಕೆ ಕಾಲಿಟ್ಟಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಕಾಶ್ ಅವರ ಕಾರು ಪತ್ತೆಯಾದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಶರಾವತಿ ಹಿನ್ನೀರು ಭಾಗದಲ್ಲಿ ಬೆಳಗ್ಗೆಯಿಂದ ಶೋಧ ನಡೆಸಲಾಗುತ್ತಿದೆ. ಒಂದು ಸುತ್ತು ಮುಕ್ತಾಯ ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆ ಒಂದು ಸುತ್ತು ಪರಿಶೀಲನೆ ನಡೆಸಿದರು. ಶರಾವತಿ ಹಿನ್ನೀರು ಭಾಗದಲ್ಲಿ … Read more