ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಜೋರು, ಹೊಸನಗರದಲ್ಲಿ ಅತ್ಯಧಿಕ, ತೀರ್ಥಹಳ್ಳಿ, ಸಾಗರದಲ್ಲೂ ವರ್ಷಧಾರೆ ಅಬ್ಬರ

170621 Rain At Agumbe Thirthahalli 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಜೋರಾಗಿದೆ. ಹೊಸನಗರ ತಾಲೂಕಿನಲ್ಲಿ ದಾಖಲೆ ಪ್ರಮಾಣದ ಮಳೆ ಸುರಿಯುತ್ತಿದೆ. ಇದರಿಂದಾಗಿ ಜಿಲ್ಲೆಯ ಹಳ್ಳ ಕೊಳ್ಳಗಳಿಗೆ ನೀರಿನ ಹರಿವು ಹೆಚ್ಚಳವಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸರಾಸರಿ 59.31 ಮಿ.ಮೀ ಮಳೆಯಾಗಿದೆ. ಈ ತಿಂಗಳಲ್ಲಿ ಇದು ಅತ್ಯಧಿಕ ಪ್ರಮಾಣದ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 18 ಮಿ.ಮೀ, ಭದ್ರಾವತಿಯಲ್ಲಿ 48.20 ಮಿ.ಮೀ, ತೀರ್ಥಹಳ್ಳಿ 79.60 ಮಿ.ಮೀ, ಸಾಗರದಲ್ಲಿ 70.80 ಮಿ.ಮೀ, … Read more

ಅಪ್ಪ, ಅಮ್ಮ, ಅಣ್ಣನ ಎದುರಲ್ಲೇ ನೀರಿನಲ್ಲಿ ಮುಳುಗಿ ಬಾಲಕ ಸಾವು

Drowned-Reference-Image-

ಶಿವಮೊಗ್ಗ ಲೈವ್.ಕಾಂ | RIPPONPETE NEWS | 2 ಜುಲೈ 2021 ಪೋಷಕರ ಎದುರಲ್ಲೆ ಮಗ ಹೊಳೆ ಪಾಲಾದ ಕರುಣಾಜನಕ ಘಟನೆ ರಿಪ್ಪನ್‍ಪೇಟೆ ಸಮೀಪ ವರದಿಯಾಗಿದೆ. ಹೊಸನಗರ ತಾಲೂಕು ಮುತ್ತಲ ಹೊಳೆಯಲ್ಲಿ ಘಟನೆ ಸಂಭವಿಸಿದೆ. ಸಿದ್ದೇಶ್ ಅಲಿಯಾಸ್ ಸಚಿನ್ (14) ನೀರಿನಲ್ಲಿ ಮುಳುಗಿದ ಬಾಲಕ. ತಂದೆ, ತಾಯಿ, ಸಹೋದರನ ಕಣ್ಣೆದುರಲ್ಲೇ ಈತ ನೀರಿನಲ್ಲಿ ಮುಳುಗಿದ್ದಾನೆ. ಬಟ್ಟೆ ಒಗೆಯಲು ಹೋಗಿದ್ದರು ಜಾಗದ್ದೆಯ ಶೇಷಗಿರಿ, ಮಧುಮತಿ ಅವರು ಇಬ್ಬರು ಮಕ್ಕಳನ್ನು ಕರೆದುಕೊಂಡು ಮುತ್ತಲ ಹೊಳೆಯಲ್ಲಿ ಬಟ್ಟೆ ಒಗೆಯಲು ತೆರಳಿದ್ದರು. ಈ … Read more

ರಸ್ತೆಯಲ್ಲಿ ಕಾಣಿಸಿಕೊಂಡ ಕಾಳಿಂಗ ಸರ್ಪ ರಕ್ಷಣೆ ಮಾಡಿದ ಪ್ರೌಢಶಾಲೆ ಶಿಕ್ಷಕ

280621 King Cobra Caught at Horgulige hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 28 JUNE 2021 ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಕಾಳಿಂಗ ಸರ್ಪವನ್ನು ಪ್ರೌಢಶಾಲೆ ಶಿಕ್ಷಕರೊಬ್ಬರು ರಕ್ಷಣೆ ಮಾಡಿದ್ದಾರೆ. ಹೊಸನಗರ ತಾಲೂಕು ಹಾರೋಗೊಳಿಗೆ ಗ್ರಾಮದಲ್ಲಿ ರಸ್ತೆಯಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ವಿಚಾರ ತಿಳಿದ ಸ್ನೇಕ್ ಮಾರುತಿ ಅವರು ಕಾಳಿಂಗ ಸರ್ಪವನ್ನು ಹಿಡಿದು, ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಪ್ರೌಢಶಾಲೆ ಶಿಕ್ಷಕರಾಗಿರುವ ಮಾರುತಿ ಅವರು ಸುತ್ತಮುತ್ತಲು ಹಾವುಗಳ ರಕ್ಷಣೆ ಮಾಡುತ್ತಿದ್ದಾರೆ. ಇದೆ ಕಾರಣಕ್ಕೆ ಜನರು ಇವರನ್ನು ಸ್ನೇಕ್ ಮಾರುತಿ ಎಂದು ಕರೆಯುತ್ತಾರೆ. (ಶಿವಮೊಗ್ಗ ಲೈವ್.ಕಾಂ ನಮ್ಮೂರ … Read more

ಮುಸುಕಿನ ಜೋಳದ ಹೊಲದಲ್ಲಿ 210 ಕೆ.ಜಿ.ಗಾಂಜಾ ಗಿಡ, ಆರೋಪಿಗೆ ಜೈಲು, ದಂಡ

Shivamogga-Court-General-Image

ಶಿವಮೊಗ್ಗ ಲೈವ್.ಕಾಂ | HOSANAGARA / SHIMOGA NEWS | 26 JUNE 2021 ಮುಸುಕಿನ ಜೋಳದ ಗಿಡಗಳ ನಡುವೆ ಗಾಂಜಾ ಬೆಳೆದ ಆರೋಪಿಗೆ ಶಿವಮೊಗ್ಗದ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ ಇನ್ನೊಂದು ವರ್ಷ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗಲಿದೆ ಎಂದು ತೀರ್ಪು ನೀಡಲಾಗಿದೆ. ಹೊಲದಲ್ಲಿ 210 ಕೆ.ಜಿ.ಗಾಂಜಾ ಹೊಸನಗರ ತಾಲೂಕು ನೆವಟೂರು ಗ್ರಾಮದ ಮಂಜುನಾಥಾಚಾರಿ (63) ಎಂಬುವವರ ಹೊಲದಲ್ಲಿ ಗಾಂಜಾ ಬೆಳೆದ ಖಚಿತ ಮಾಹಿತಿ ಮೇರೆಗೆ ಸಿಇಎನ್ ಠಾಣೆ … Read more

ಮದುವೆಯಾಗಿ ಏಳು ತಿಂಗಳಲ್ಲಿ ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ

HOSANAGARA-TALUK-NEWS-1.jpg

ಶಿವಮೊಗ್ಗ ಲೈವ್.ಕಾಂ | HOSANAGARA NEWS | 26 JUNE 2021 ಫೇಸ್‍ಬುಕ್‍ನಲ್ಲಿ ಪರಿಚಯವಾದ ಯುವಕನನ್ನು ಪ್ರೀತಿಸಿ ಮದುವೆಯಾದ ಯುವತಿಯೊಬ್ಬಳು ಏಳು ತಿಂಗಳಲ್ಲೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಹೊಸನಗರ ತಾಲೂಕು ಕರಿಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಿಗ್ಗೇರಿ ಉಮೇಶ್ ಪತ್ನಿ ಸೌಂದರ್ಯ (21) ಮೃತಳು. ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸೌಂದರ್ಯಾಳ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಫೇಸ್‍ಬುಕ್‍ನಿಂದ ಪರಿಚಯ, ಪ್ರೇಮ, ಮದುವೆ … Read more

ವಿದ್ಯಾರ್ಥಿಗಳಿಗೆ ವಿತರಿಸಲು ಶಾಲೆಯಲ್ಲಿ ಇರಿಸಿದ್ದ ಯುನಿಫಾರಂ ಬಟ್ಟೆಗೆ ಬೆಂಕಿ

210621 Fire at Maruthipura High School in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 JUNE 2021 ವಿದ್ಯಾರ್ಥಿಗಳಿಗೆ ವಿತರಿಸಲು ಇರಿಸಿದ್ದ ಯುನಿಫಾರಂ ಬಟ್ಟೆಗಳು ಬೆಂಕಿಗೆ ಆಹುತಿಯಾಗಿದೆ. ಶಾಲೆಯ ಕೊಠಡಿಯಲ್ಲಿ ಈ ಸಮವಸ್ತ್ರಗಳನ್ನು ಇರಿಸಲಾಗಿತ್ತು. ಹೊಸನಗರ ತಾಲೂಕು ಮಾರುತಿಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ಮುಖ್ಯೋಪಾಧ್ಯಾಯರು ಶಾಲೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸುಮಾರು 300 ವಿದ್ಯಾರ್ಥಿಗಳಿಗೆ ವಿತರಿಸಲು ಬಟ್ಟೆಯನ್ನು ಇರಿಸಲಾಗಿತ್ತು. ಬೆಂಕಿ ಹೊತ್ತಿದ್ದರಿಂದ ಬಟ್ಟೆ ಸಂಪೂರ್ಣವಾಗಿ ಸುಟ್ಟು ಹೋಗಿದೆ ಎಂದು ಶಾಲೆಯ ಆಡಳಿತ ಮಂಡಳಿ ಆರೋಪಿಸಿದ್ದಾರೆ. … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಶೇ.20ರಷ್ಟು ಮಳೆ ಹೆಚ್ಚಳ, 163 ಗ್ರಾಮ, 18 ಮುಖ್ಯ ರಸ್ತೆಯಲ್ಲಿ ಅತಿವೃಷ್ಟಿ ಸಂಭವ

rain in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 JUNE 2021 ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಉಂಟಾಗಬಹುದಾದ ಅನಾಹುತಗಳನ್ನು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಮುಂಗಾರು ಮಳೆ ಹಿನ್ನೆಲೆ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ ಕುರಿತು ಮುಖ್ಯಮಂತ್ರಿ ಅವರ ವಿಡಿಯೋ ಕಾನ್ಫರೆನ್ಸ್‍ನಲ್ಲಿ  ಭಾಗವಹಿಸಿದ ಜಿಲ್ಲಾಧಿಕಾರಿ ಅವರು, ಜಿಲ್ಲೆಯಲ್ಲಿ ಅತಿವೃಷ್ಟಿ ಎದುರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ಶೇ.20ರಷ್ಟು ಹೆಚ್ಚು ಮಳೆ ಜಿಲ್ಲೆಯಲ್ಲಿ ಕಳೆದ … Read more

ಹೊಸನಗರದಲ್ಲಿ ಮುಂದುವರೆದ ಮಳೆ ಅಬ್ಬರ, ಮಾಣಿ ಡ್ಯಾಂ ಒಳ ಹರಿವು ಭಾರಿ ಹೆಚ್ಚಳ

Maani-Dam-Hosanagara

ಶಿವಮೊಗ್ಗ ಲೈವ್.ಕಾಂ | HOSANAGARA NEWS | 18 JUNE 2021 ಹೊಸನಗರ ತಾಲೂಕಿನಾದ್ಯಂತ ಮಳೆ ಅಬ್ಬರ ಮುಂದುವರೆದಿದೆ. ಕಳೆದ 24 ಗಂಟೆ ಅವಧಿಯಲ್ಲಿ ತಾಲೂಕಿನಲ್ಲಿ 292.4 ಮಿ.ಮೀ ಮಳೆಯಾಗಿದೆ. ತಾಲೂಕಿನ ಮಾಣಿ ವ್ಯಾಪ್ತಿಯಲ್ಲಿ 166 ಮಿ.ಮೀ, ಯಡೂರಿನಲ್ಲಿ 203 ಮಿ.ಮೀ, ಹುಲಿಕಲ್‍ನಲ್ಲಿ 176 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 178 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 104 ಮಿ.ಮೀ, ಸಾವೇಹಕ್ಲು ವ್ಯಾಪ್ತಿಯಲ್ಲಿ 82 ಮಿ.ಮೀ ಮಳೆಯಾಗುತ್ತಿದೆ. ಭಾರಿ ಮಳೆಯಿಂದ ಮಾಣಿ ಡ್ಯಾಂಗೆ 9495 ಕ್ಯೂಸೆಕ್ ಒಳ ಹರಿವು ಇದೆ. ಪಿಕ್‍ … Read more

ಕಾಡು ಪ್ರಾಣಿಗಳ ಭಯ, ಮಳೆ, ಗಾಳಿಯ ರಭಸ, ಆನ್ ಲೈನ್ ಕ್ಲಾಸ್​​​ಗಾಗಿ ದಿನ ಪ್ರಾಣ ಪಣಕ್ಕಿಡಬೇಕು ಮಕ್ಕಳು

170621 Online Class Sagara Tumari 1

ಶಿವಮೊಗ್ಗ ಲೈವ್.ಕಾಂ | SAGARA / THIRTHAHALLI / HOSNAGARA NEWS | 17 JUNE 2021 ಆನ್‍ಲೈನ್‍ ಕ್ಲಾಸ್‍ನಲ್ಲಿ ಪಾಲ್ಗೊಳ್ಳಲು ಇಲ್ಲಿಯ ಮಕ್ಕಳು ಪ್ರತಿದಿನ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಕ್ಲಾಸ್‍ಗಾಗಿ ಈ ವಿದ್ಯಾರ್ಥಿಗಳು ನಿತ್ಯ ಟ್ರೆಕಿಂಗ್‍ ಮಾಡಬೇಕಿದೆ. ಕಾಡು ಪ್ರಾಣಿಗಳ ಭಯ, ಮಳೆ, ಗಾಳಿ ಜೊತೆಯು ಸೆಣೆಸಬೇಕಿದೆ. ಇದು ಶರಾವತಿ ಹಿನ್ನೀರಿನ ತುಮರಿ, ಬ್ಯಾಕೋಡು ಸೇರಿದಂತೆ ಸುತ್ತಮುತ್ತಲ ಗ್ರಾಮದ ವಿದ್ಯಾರ್ಥಿಗಳ ನಿತ್ಯದ ಕಷ್ಟ.  ಆನ್‍ಲೈನ್ ಕ್ಲಾಸ್‍ಗಾಗಿ ದಿನ ಹರಸಾಹಸ ಮಾಡಬೇಕಿದೆ. ಇಷ್ಟೆಲ್ಲ ಕಷ್ಟಪಟ್ಟರು ಸಿಗುವುದು 2ಜಿ … Read more

ಹೊಸನಗರದಲ್ಲಿ ವಾಡಿಕೆಗಿಂತಲೂ ಭಾರಿ ಮಳೆ, ಕಳೆದ 24 ಗಂಟೆಯಲ್ಲಿ ಎಷ್ಟು ಮಳೆ ಸುರಿದಿದೆ?

rain in shimoga

ಶಿವಮೊಗ್ಗ ಲೈವ್.ಕಾಂ | HOSANAGARA NEWS | 16 JUNE 2021 ಹೊಸನಗರ ತಾಲೂಕಿನಲ್ಲಿ ಮಳೆ ಅಬ್ಬರ ಜೋರಾಗಿದೆ. ಕ್ಷಣಹೊತ್ತು ಬಿಡುವು ಕೊಡದೆ ಮುಂಗಾರು ಆರ್ಭಟಿಸುತ್ತಿದೆ. ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸನಗರ ತಾಲೂಕಿನಾದ್ಯಂತ 320.8 ಮಿ.ಮೀ ಮಳೆಯಾಗಿದೆ. ಜೂನ್ ತಿಂಗಳ ವಾಡಿಕೆ ಮಳೆ 680.10 ಮಿ.ಮೀ. ಆದರೆ ತಿಂಗಳ ಮೊದಲರ್ಧದಲ್ಲೇ ತಾಲೂಕಿನಲ್ಲಿ ವಾಡಿಕೆಗಿಂತಲೂ ಹೆಚ್ಚು ಮಳೆ ಸುರಿದಿದೆ. ಈವರೆಗೂ 1036.7 ಮಿ.ಮೀ ಮಳೆಯಾಗಿದೆ. ಮಾಣಿ ವ್ಯಾಪ್ತಿಯಲ್ಲಿ 106 ಮಿ.ಮೀ, ಯಡೂರಿನಲ್ಲಿ 125 … Read more