ಪಾನಿಪೂರಿ ತಿಂದ ಹಲವರು ಅಸ್ವಸ್ಥ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮನೆಗೆ, ದೂರು ನೀಡಲು ಹಿಂದೇಟು

Bhadravathi News Graphics

ಶಿವಮೊಗ್ಗ ಲೈವ್.ಕಾಂ | BHADRAVATHI / SHIMOGA NEWS | 27 ನವೆಂಬರ್ 2021 ಪಾನಿಪೂರಿ ಸೇವಿಸಿ ಮಕ್ಕಳು ಸೇರಿ ಹಲವರು ಅಸ್ವಸ್ಥರಾಗಿದ್ದಾರೆ. ಸ್ಥಳೀಯ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ. ಭದ್ರಾವತಿಯ ಅಪ್ಪರ್ ಹುತ್ತಾದಲ್ಲಿ ಘಟನೆ ಸಂಭವಿಸಿದೆ. ನಿತ್ಯ ಗಾಡಿಯಲ್ಲಿ ವ್ಯಕ್ತಿಯೊಬ್ಬ ಮನೆ ಬಳಿಗೆ ಪಾನಿಪೂರಿ ಮಾರಾಟ ಮಾಡಿಕೊಂಡು ಬರುತ್ತದ್ದ. ಆತನ ಬಳಿ ಮಕ್ಕಳು, ಮಹಿಳೆಯರು ಸೇರಿ ಹಲವರು ಆತನಿಂದ ಪಾನಿಪೂರಿ ಖರೀದಿಸಿ ಸೇವಿಸಿದ್ದಾರೆ. ಶುಕ್ರವಾರ ಘಟನೆ ಸಂಭವಿಸಿದೆ. ದೂರು ನೀಡಲು … Read more

‘ಶಿವಮೊಗ್ಗದಲ್ಲಿ ಗೂಂಡಾಗಳಿಗೆ ಭಯವಿಲ್ಲ, ಏನ್ ಮಾಡ್ತಿದೆ ಪೊಲೀಸ್ ಇಲಾಖೆ?’

171121 Eshwarappa Visit Mc Gann Hospital to meet Paurakarmika

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ನವೆಂಬರ್ 2021 ಕಸ ಸಂಗ್ರಹಕ್ಕೆ ಹೋದಾಗ ಹಲ್ಲೆಗೊಳಗಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೌರ ಕಾರ್ಮಿಕರನ್ನು ಸಚಿವ ಕೆ.ಎಸ್.ಈಶ್ವರಪ್ಪ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಈಶ್ವರಪ್ಪ ಅವರು ಪೌರ ಕಾರ್ಮಿಕ ದೇವರಾಜ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಅಲ್ಲದೆ ಘಟನೆ ಕುರಿತು ಮಾಹಿತಿ ಪಡೆದು, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು. ‘ಏನ್ ಮಾಡ್ತಿದೆ ಪೊಲೀಸ್ ಇಲಾಖೆ?’ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ … Read more

ಪ್ರಸಾದ ಸೇವಿಸಿದ ಹಲವರು ಅಸ್ವಸ್ಥ, ಸಾಗರ ಆಸ್ಪತ್ರೆಗೆ ದಾಖಲು

141121 Sagara People Admitted to Hopital

ಶಿವಮೊಗ್ಗ ಲೈವ್.ಕಾಂ | SAGARA NEWS | 14 ನವೆಂಬರ್ 2021 ಸಾಗರ ನಗರದ ದೇವಸ್ಥಾನ ಒಂದರಲ್ಲಿ ಪ್ರಸಾದ ಸೇವಿಸಿದ ಭಕ್ತರು ಅಸ್ವಸ್ಥರಾಗಿದ್ದಾರೆ. ಎಲ್ಲರನ್ನು ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿನೋಬನಗರದ ದೇವಸ್ಥಾನದ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸೇವಿಸಿದ ಸುಮಾರು 20 ಮಂದಿ ಅಸ್ವಸ್ಥಗೊಂಡಿದ್ದಾರೆ. ಶಾಸಕ ಹಾಲಪ್ಪ ಭೇಟಿ ಅಸ್ವಸ್ಥರಾದವರನ್ನು ಕೂಡಲೆ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ವಿಚಾರ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ ಅವರು ಆಸ್ಪತ್ರೆಗೆ … Read more

150ಕ್ಕೂ ಹೆಚ್ಚು ಜನರು ದಿಢೀರ್ ಅಸ್ವಸ್ಥ, ಹೊಟ್ಟೆ ನೋವು, ವಾಂತಿ, ಭೇದಿಯಿಂದ ಹಲವರು ಆಸ್ಪತ್ರೆಗೆ

Sagara Government Hospital

ಶಿವಮೊಗ್ಗ ಲೈವ್.ಕಾಂ | SAGARA NEWS | 13 ನವೆಂಬರ್ 2021 ಜೋಗ, ಕಾರ್ಗಲ್, ಲಿಂಗನಮಕ್ಕಿ ಸುತ್ತಮುತ್ತ 150ಕ್ಕೂ ಹೆಚ್ಚು ಮಂದಿ ದಿಢೀರ್ ಅಸ್ವಸ್ಥಗೊಂಡಿದ್ದಾರೆ. ಎಲ್ಲರಲ್ಲೂ ವಾಂತಿ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜನರು ದಿಢೀರ್ ಅಸ್ವಸ್ಥಗೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಆಹಾರ ಅಥವಾ ನೀರಿನಲ್ಲಿ ಸಮಸ್ಯೆ ಉಂಟಾಗಿ ಈ ರೀತಿಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಏನಿದು ಪ್ರಕರಣ? ಶುಕ್ರವಾರ ಬೆಳಗ್ಗೆಯಿಂದಲೇ ಜನರು ದಿಢೀರ್ ಅಸ್ವಸ್ಥಗೊಂಡ ಕಾರ್ಗಲ್ ಆಸ್ಪತ್ರೆಗೆ … Read more

ಮದುವೆ ಮನೆಯಲ್ಲಿ ಊಟ ಮಾಡಿದವರು ಅಸ್ವಸ್ಥ ಪ್ರಕರಣ, ಇಲ್ಲಿದೆ ಈವರೆಗಿನ 5 ಬೆಳವಣಿಗೆ

121121 Holalur Marriage Function Problem People Admitted

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021 ಶಿವಮೊಗ್ಗ ತಾಲೂಕು ಆಲದಹಳ್ಳಿಯ ಮದುವೆ ಸಮಾರಂಭದಲ್ಲಿ ಊಟ ಮಾಡಿ ಅಸ್ವಸ್ಥರಾದವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ ಸಮಾರಂಭದಲ್ಲಿ ಊಟ ಮಾಡಿದ ಮತ್ತಷ್ಟು ಮಂದಿಯ ಸ್ಕ್ರೀನಿಂಗ್ ಪ್ರಕ್ರಿಯೆ ಆರಂಭವಾಗಿದೆ. ಈವರೆಗೂ ಏನೆಲ್ಲ ಬೆಳವಣಿಗೆಯಾಗಿದೆ? ಮದುವೆ ಸಮಾರಂಭದಲ್ಲಿ ರಾತ್ರಿ ಊಟ ಮಾಡಿದ್ದ ಸುಮಾರು 50 ಜನರಲ್ಲಿ ಇವತ್ತು ವಾಂತಿ, ಭೇದಿ ಕಾಣಿಸಿಕೊಂಡಿದೆ. ಹೊಳಲೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. 26 ಮಂದಿ … Read more

BREAKING NEWS | ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡ್’ನಲ್ಲಿ ಬೆಂಕಿ

071121 mc GANN hospital fire in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021 ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ಹೆರಿಗೆ ಮತ್ತು ಮಕ್ಕಳ ವಾರ್ಡ್’ನಲ್ಲಿ ಪುನಃ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ. ಹೆರಿಗ ಮತ್ತು ಸ್ತ್ರೀರೋಗ ತುರ್ತು ಚಿಕಿತ್ಸಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಿಢೀರ್ ಬೆಂಕಿಯಿಂದಾಗಿ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ. ಕಟ್ಟಡದಲ್ಲಿ ವಿದ್ಯುತ್ ಇಲ್ಲದೆ ಕತ್ತಲು ಆವರಿಸಿದೆ. ಆಸ್ಪತ್ರೆಗೆ ದಾಖಲಾಗಿದ್ದವರನ್ನು ಹೊರಗೆ ಕರೆತರಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಆಸ್ಪತ್ರೆಯಲ್ಲಿದ್ದವರನ್ನು ಹೊರಗೆ ಕರೆತರುತ್ತಿದ್ದಾರೆ. ಹೆಚ್ಚಿನ ಮಾಹಿತಿ … Read more

ಶಿವಮೊಗ್ಗದ ಕೋಟೆ ದೇಗುಲ ಸೇರಿದಂತೆ ವಿವಿಧೆಡೆ ಗೋ ಪೂಜೆ

051121 Gho Pooje at Shimoga Kote Temple

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ನವೆಂಬರ್ 2021 ದೀಪಾವಳಿ ಹಬ್ಬದ ಅಂಗವಾಗಿ ಶಿವಮೊಗ್ಗ ನಗರದ ವಿವಿಧೆಡೆ ಗೋಪೂಜೆ ನಡೆಸಲಾಗುತ್ತಿದೆ. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಗೋಪೂಜೆ ಆಯೋಜಿಸಲಾಗಿದೆ. ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲದಲ್ಲಿ ಗೋಪೂಜೆ ನೆರವೇರಿಸಲಾಯಿತು. ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಅವರು ಗೋ ಪೂಜೆ ಮಾಡಿದರು. ವಿವಿಧ ಸಂಘಟಗಳ ಪ್ರಮುಖರು ಈ ಸಂದರ್ಭ ಹಾಜರಿದ್ದರು. ಇನ್ನು, ಗಾಂಧಿ ಬಜಾರ್’ನ ಬಸವೇಶ್ವರ ದೇವಸ್ಥಾನ, ಸೀಗೆಹಟ್ಟಿಯ ಜಾನಕೀರಾಮ ಮಂದಿರದಲ್ಲೂ ಗೋ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾಗೆ ಒಬ್ಬರು ಸಾವು

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021 ಕರೋನಾ ಸಾವಿನ ಕೇಕೆ ಮುಂದುವರೆದಿದೆ. ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, ಕೋವಿಡ್’ಗೆ ಮತ್ತೊಬ್ಬಸೋಂಕಿತ ಬಲಿಯಾಗಿದ್ದಾರೆ. ಸೋಂಕಿತರೊಬ್ಬರು ಇವತ್ತು ಚಿಕಿತ್ಸೆ ಫಲಕಾರಿಯಾಗದೆ ಕರೋನಾಗೆ ಬಲಿಯಾಗಿದ್ದಾರೆ. ಇದರಿಂದ ಈವರೆಗೂ ಜಿಲ್ಲೆಯಲ್ಲಿ ಕೋವಿಡ್’ಗೆ ಮೃತರಾದವರ ಸಂಖ್ಯೆ 1067ಕ್ಕೆ ಏರಿಕೆಯಾಗಿದೆ. ಇವತ್ತು 32 ಮಂದಿಗೆ ಕರೋನ ಸೋಂಕು ತಗುಲಿದೆ. ಇದರಿಂದ ಶಿವಮೊಗ್ಗದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 148ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 42 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ … Read more

ಗೃಹ ಸಚಿವರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ, ಫೋಟೊ, ವಿಡಿಯೋ ವೈರಲ್

200921 Araga Jnanendra Grand Son Admitted to Govt Hospital

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 20 ಸೆಪ್ಟೆಂಬರ್ 2021 ಅರೋಗ್ಯ ಸಮಸ್ಯೆ ಹಿನ್ನೆಲೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮೊಮ್ಮಗನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗೂ ಖಾಸಗಿ ಆಸ್ಪತ್ರೆಗೆ ದೌಡಾಯಿಸುವ ರಾಜಕಾರಣಿಗಳ ಮಧ್ಯೆ ಆರಗ ಜ್ಞಾನೇಂದ್ರ ಅವರ ಕುಟುಂಬದ ನಿರ್ಧಾರ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ಗಳಿಸಿದೆ. ಆರಗ ಜ್ಞಾನೇಂದ್ರ ಅವರ ಮೊಮ್ಮಗ ಒಂಭತ್ತು ತಿಂಗಳ ಆರ್ಯವರ್ಥನಿಗೆ ಕೆಮ್ಮು, ಜ್ವರ ಕಾಣಿಸಿಕೊಂಡಿತ್ತು. ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಕರೆತಂದು ಪರೀಕ್ಷಿಸಿ, … Read more

ರಿಪ್ಪನ್’ಪೇಟೆಯಲ್ಲಿ ಭೀಕರ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ, ಕಾರು ಚಾಲಕ ಎಸ್ಕೇಪ್

050921 Car Bike Accident at Ripponpete

ಶಿವಮೊಗ್ಗ ಲೈವ್.ಕಾಂ |RIPPONPETE NEWS | 5 ಸೆಪ್ಟೆಂಬರ್ 2021 ಕಾರು ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ರಿಪ್ಪನ್’ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂಟಪದ ಬಳಿ ರಾತ್ರಿ ಘಟನೆ ಸಂಭವಿಸಿದೆ. ರಿಪ್ಪನ್’ಪೇಟೆಯ ಮುಸ್ತಫಾ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಗಾಯ್ತು ಅಪಘಾತ? ಮುಸ್ತಫಾ ಅವರು ಗರ್ತಿಕೆರೆಯಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದಾರೆ. ರಾತ್ರಿ ಅಂಗಡಿಯಿಂದ ಮನೆಗೆ ಮರಳುತ್ತಿದ್ದಾಗ ಘಟನೆ … Read more