ಸಾವಿರ ಸಾವಿರ ಭಕ್ತರ ಸಮ್ಮುಖದಲ್ಲಿ ಹುಚ್ಚರಾಯಸ್ವಾಮಿಯ ವಿಜೃಂಭಣೆಯ ರಥೋತ್ಸವ

ಶಿಕಾರಿಪುರ : ಕ್ಷೇತ್ರ ದೇವತೆ ಹುಚ್ಚುರಾಯಸ್ವಾಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ದವನದ ಹುಣ್ಣಿಮೆಯಂದು ಸಾವಿರಾರು ಭಕ್ತರ ಜಯಘೋಷದೊಂದಿಗೆ ರಥೋತ್ಸವ (Ratotsava) ನೆರವೇರಿತು. ಶನಿವಾರ ಬೆಳಗ್ಗೆ 8.30ರ ವೃಷಭ ಲಗ್ನದಲ್ಲಿ ಶ್ರೀ ಹುಚ್ಚರಾಯಸ್ವಾಮಿಯ ರಥಾರೋಹಣ, ಫಲ ಸಮರ್ಪಣೆ, ಮಹಾಮಂಗಳಾರತಿ ನಂತರ ವಾದ್ಯಗೋಷ್ಠಿಗಳ ನಡುವೆ ರಥಬೀದಿಯಲ್ಲಿ ತೇರು (Ratotsava) ಸಂಚರಿಸಿತು. ಭಕ್ತರು ಬಾಳೆಹಣ್ಣು, ದವನದ ಸೊಪ್ಪನ್ನು ತೇರಿಗೆ ಎಸೆದರು. ಮಾರಿಕಾಂಬ ಗದ್ದುಗೆವರೆಗೆ ರಥವನ್ನು ಎಳೆಯಲಾಯಿತು. ನಂತರ ಭಕ್ತರಿಗೆ ಹಣ್ಣು ಕಾಯಿ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಯಿತು. ಗರುಡ ದರ್ಶನದಿಂದ ಹರ್ಷೋದ್ಗೋರ … Read more

ಚುನಾವಣೆ, ಪ್ರಚಾರದ ಒತ್ತಡದ ನಡುವೆ ಕುಟುಂಬ ಸಹಿತ ಜಾತ್ರೆಯಲ್ಲಿ ಭಾಗವಹಿಸಿದ ಯಡಿಯೂರಪ್ಪ, ಸೆಲ್ಫಿ ಮುಗಿಬಿದ್ದರು ಜನ

ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019 ಚುನಾವಣಾ ಪ್ರಚಾರದ ಒತ್ತಡದ ನಡುವೆಯೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿಕಾರಿಪುರದ ಶ್ರೀ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಭಾಗವಹಿಸಿದ್ದರು. ಬೆಳಗ್ಗೆ ಕುಟುಂಬ ಸಹಿತ ದೇವಸ್ಥಾನಕ್ಕೆ ಆಗಮಿಸಿದ ಯಡಿಯೂರಪ್ಪ, ದೇವರ ದರ್ಶನ ಪಡೆದರು. ಕೆಲ ಹೊತ್ತು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಯಡಿಯೂರಪ್ಪ ಜೊತೆ ಸೆಲ್ಫಿಗೆ ರಶ್ ಇನ್ನು, ಯಡಿಯೂರಪ್ಪ ಅವರು ದೇವರ ದರ್ಶನ ಪಡೆದು ದೇವಸ್ಥಾನದಿಂದ ಹಿಂತಿರುಗುತ್ತಿದ್ದಂತೆ, ಜನರು ಮುಗಿಬಿದ್ದರು. ಸೆಲ್ಫಿ ತೆಗೆಸಿಕೊಳ್ಳಲು ನಾ ಮುಂದು, ತಾ ಮುಂದು ಎಂದು ನೂಕುನುಗ್ಗಲು ಉಂಟಾಯಿತು. ಪೊಲೀಸರ … Read more