ಕಾಡು ಹಂದಿ ಬೇಟೆಯಾಡಿ ಮಾಂಸ ಹಂಚಿಕೊಳ್ಳುವಾಗ ಅರಣ್ಯಾಧಿಕಾರಿಗಳು ದಾಳಿ
ಸಾಗರ : ಕಾಡು ಹಂದಿ ಬೇಟೆಯಾಡಿ (Hunters) ಮಾಂಸ ಹಂಚಿಕೊಳ್ಳುತ್ತಿದ್ದ ಮೂವರ ವಿರುದ್ಧ ಅರಣ್ಯ ಇಲಾಖೆ ಸಿಬ್ಬಂದಿ ಪ್ರಕರಣ ದಾಖಲಿಸಿದ್ದಾರೆ. ತಾಲ್ಲೂಕಿನ ಬಾಳೆಗುಂಡಿ ಗ್ರಾಮದಲ್ಲಿ ಬೇಟೆಯಾಡಿದ್ದ ಕಾಡು ಹಂದಿ ಮಾಂಸವನ್ನು ಗ್ರಾಮದ ಕೆರೆ ದಂಡೆಯ ಮೇಲೆ ಹಂಚಿಕೊಳ್ಳುತ್ತಿದ್ದಾಗ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದು ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳನ್ನು ಪ್ರಭಾಕರ್, ಗಣಪತಿ, ಅಣ್ಣಪ್ಪ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ದೊರಕಿದ ನಾಲ್ಕೂವರೆ ಕೆ.ಜಿ. ಕಾಡು ಹಂದಿ ಮಾಂಸ ವಶಪಡಿಸಿಕೊಳ್ಳಲಾಗಿದೆ. ಉಪ ವಲಯ ಅರಣ್ಯಾಧಿಕಾರಿ ಕಿರಣ್, ವಲಯ … Read more