ಹೊಸಮನೆ ಯುವಕನ ಮೇಲೆ ದುರ್ಗಿಗುಡಿಯಲ್ಲಿ ಹಲ್ಲೆ, ಕಿಡ್ನಾಪ್ ಮಾಡಿ ಆಗುಂಬೆಯಲ್ಲಿ ಕೂಡಿ ಹಾಕಿ ಜೀವಬೆದರಿಕೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಅಕ್ಟೋಬರ್ 2021 ಶಿವಮೊಗ್ಗದ ಹೊಸಮನೆ ನಿವಾಸಿಯೊಬ್ಬರನ್ನು ಕಿಡ್ನಾಪ್ ಮಾಡಿ ಆಗುಂಬೆಯ ಗೆಸ್ಟ್ ಹೌಸ್ ಒಂದರಲ್ಲಿ ಕೂಡಿ ಹಾಕಿ, ಹಣಕ್ಕೆ ಬೇಡಿಕೆ ಇಡಲಾಗಿದೆ. ಈ ವೇಳೆ ಚಿನ್ನದ ಚೈನ್, ಉಂಗುರ, ಮೊಬೈಲ್, ಇಯರ್ ಫೋನ್’ಗಳನ್ನು ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದ ಹೊಸಮನೆ ಬಡಾವಣೆ ನಿವಾಸಿ ರಘು (33) ಎಂಬುವವರನ್ನು ಕಿಡ್ನಾಪ್ ಮಾಡಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು ಆವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. … Read more