‘ಸೀಟ್ ಖಾಲಿ ಇಲ್ಲ, ಆದರೂ ಕಾಂಗ್ರೆಸ್’ನವರು ಟವಲ್ ಹಾಕಿಕೊಂಡು ಕುಳಿತಿದ್ದಾರೆ’
ಶಿವಮೊಗ್ಗ ಲೈವ್.ಕಾಂ | 20 ಮೇ 2019 ಮುಖ್ಯಮಂತ್ರಿ ಸೀಟು ಖಾಲಿ ಇಲ್ಲದಿದ್ದರೂ ಎಲ್ಲ ಕಾಂಗ್ರೆಸಿಗರು ಟವಲ್ ಹಾಕಿಕೊಂಡು ಕುಳಿತಿದ್ದಾರೆ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರೇವಣ್ಣ ಸೇರಿದಂತೆ ಎಲ್ಲ ಕಾಂಗ್ರೆಸಿಗರ ಹೆಸರು ಪ್ರಸ್ತಾಪವಾಗಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಹೆಸರಿಗಷ್ಟೇ ಮೈತ್ರಿ ಸರ್ಕಾರವಿದೆ. ಆದರೆ ಪರಸ್ಪರ ಒಬ್ಬರ ವಿರುದ್ಧ ಮತ್ತೊಬ್ಬರು ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭ ಸೀಟು ಹಂಚಿಕೆ ವಿಚಾರವಾಗಿ ಮೈತ್ರಿಯಲ್ಲಿ ಜಗಳವಾಗಿತ್ತು. ನಂತರ ಮೈತ್ರಿಯಾದರೂ, ಪರಸ್ಪರ ಬೆಂಬಲ ಕೊಡುತ್ತಿಲ್ಲ … Read more