ಶಿಕಾರಿಪುರದ ಬಿಜೆಪಿ ಮುಖಂಡರು ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ, ಯಾರೆಲ್ಲ ಸೇರ್ಪಡೆಯಾದರು?
ಶಿವಮೊಗ್ಗ: ಶಿಕಾರಿಪುರದ ಬಿಜೆಪಿ ಮುಖಂಡ ಹಾಗೂ ಉದ್ಯಮಿ ಎನ್.ವಿ.ಈರೇಶ್ ತಮ್ಮ ಬೆಂಬಲಿಗರ ಜೊತೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ (Congress) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಎನ್.ವಿ. ಈರೇಶ್ ಜತೆಗೆ ಬಳ್ಳಿಗಾವಿ ಶಿವಕುಮಾರ್, ಹಾಲೇಶಪ್ಪ, ತಾಳಗುಂದ ರಾಜಪ್ಪ ಸೇರಿದಂತೆ ಪ್ರಮುಖರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿಕಾರಿಪುರದ ಪುಷ್ಪಾ ಶಿವಕುಮಾರ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್ ಪಕ್ಷದ ಧ್ವಜ ನೀಡುವ ಮೂಲಕ ಸ್ವಾಗತಿಸಿದರು. ಶಿಕಾರಿಪುರ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಬೇಕು. ಅದಕ್ಕಾಗಿ ಈಗಿನಿಂದಲೆ ಪಕ್ಷದ … Read more