ರೈತರ ಅಭಿಪ್ರಾಯ ಮುಖ್ಯ, ಮುಕ್ತ ಸಭೆಗೆ ಆಗ್ರಹ, ಶಿವಮೊಗ್ಗದಲ್ಲಿ ರೈತರ ಪ್ರತಿಭಟನೆ

Shimoga-News-update

SHIMOGA NEWS, 27 SEPTEMBER 2024 : ಕುಲಾಂತರಿ ಬೆಳೆಗೆ ಸಂಬಂಧಿಸಿದಂತೆ ನಡೆಯುವ ರಾಷ್ಟ್ರೀಯ ನೀತಿಯ ಸಭೆಗಳನ್ನು ಮುಕ್ತವಾಗಿ ನಡೆಸಬೇಕು ಎಂದು ಆಗ್ರಹಿಸಿ ರೈತ (Farmers) ಮುಖಂಡ ಕೆ.ಟಿ.ಗಂಗಾಧರ್‌ ಅವರ ನೇತೃತ್ವದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕುಲಾಂತರ ತಳಿಗಳ ಕುರಿತು ರಾಷ್ಟ್ರೀಯ ನೀತಿ ರೂಪಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಇದಕ್ಕೂ ಮುನ್ನ ರೈತ ಪ್ರತಿನಿಧಿಗಳು, ಸಾಮಾನ್ಯ ಜನರನ್ನು ಸಂಪರ್ಕಿಸಿ, ಅವರನ್ನು ತೊಡಿಗಿಸಿಕೊಳ್ಳುವಂತೆ … Read more

ಶಿವಮೊಗ್ಗದಲ್ಲಿ ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ, ಮೆರವಣಿಗೆ, ಪ್ರತಿಭಟನೆ, ನಿರಂತರ ಧರಣಿಯ ಎಚ್ಚರಿಕೆ

210920 Farmers Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020 ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರೈತ ಸಂಘದ ವತಿಯಿಂದ ಇವತ್ತು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ರೈತ ವಿರೋಧಿ ಕಾಯ್ದೆಗಳು ಜಾರಿಯಾಗಬಾರದು ಎಂದು ರೈತರು ಆಗ್ರಹಿಸಿದರು. ಮೆರವಣಿಗೆ, ನಿರಂತರ ಧರಣಿ ಎಚ್ಚರಿಕೆ ಮಹಾವೀರ ಸರ್ಕಲ್‍ನಿಂದ ಪ್ರತಿಭಟನೆ ಆರಂಭಿಸಿದ ರೈತರು, ಸವಳಂಗ ರಸ್ತೆಯಲ್ಲಿ ಮೆರವಣಿಗೆ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾ ಸಭೆ ನಡೆಸಿದರು. ಸರ್ಕಾರ ನಿಲುವು ಬದಲಿಸದಿದ್ದರೆ ನಿರಂತರ ಧರಣಿಯ ಎಚ್ಚರಿಕೆ … Read more

ಶಿವಮೊಗ್ಗದಲ್ಲಿ ಕಪ್ಪು ಪಟ್ಟಿ ಧರಿಸಿ ರೈತರಿಂದ ಕರಾಳ ದಿನಾಚರಣೆ, ಕಾರಣವೇನು?

150820 Farmers protest on independence day 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020 ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೆಲವು ಕಾಯ್ದೆಗಳಿಗೆ ತಿದ್ದುಪಡಿ ತಂದು ರೈತ ವಿರೋಧಿಯಾಗಿ ನಡೆದುಕೊಂಡಿವೆ. ಕೂಡಲೆ ಈ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ, ರಾಜ್ಯ ರೈತರ ಸಂಘ ಮತ್ತು ಹಸಿರು ಸೇನೆ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಕರಾಳ ದಿನಾಚರಣೆ ಮಾಡಲಾಯಿತು. ಶಿವಪ್ಪನಾಯಕ ಪ್ರತಿಮೆ ಮುಂದೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡಸಿದ ರೈತರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಯಾವೆಲ್ಲ ಕಾಯ್ದೆಗಳ … Read more

ಅಂಬೇಡ್ಕರ್ ಭವನದಲ್ಲಿ ಮಲೆನಾಡ ರೈತರ ಕುರಿತು ಸಂವಾದ, ಏನೆಲ್ಲ ಚರ್ಚೆಯಾಗುತ್ತೆ?

ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018 ಶಿವಮೊಗ್ಗ | ರಾಜ್ಯ ರೈತ ಸಂಘದ ಸಂಸ್ಥಾಪಕ ಎಂ.ಡಿ.ಸುಂದರೇಶ್ ಅವರ 26ನೇ ನೆನಪಿನ ದಿನಾಚರಣೆ ಅಂಗವಾಗಿ ಡಿ.21ರಂದು ಬೆಳಗ್ಗೆ 10.30ಕ್ಕೆ, ಅಂಬೇಡ್ಕರ್ ಭವನದಲ್ಲಿ ಸಂವಾದ ಕಾರ್ಯಕ್ರಮ. ಮಲೆನಾಡ ರೈತರ ಬದುಕಿನ ಆತಂಕಗಳು ಮತ್ತು  ಅವುಗಳ ನಿವಾರಣೆ ಕುರಿತು ಚರ್ಚೆ, ವಿಷಯ ಮಂಡನೆ ಮತ್ತು ಸಂವಾದ ನಡೆಯಲಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೆ.ಟಿ.ಗಂಗಾಧರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮಾಧವ್ ಗಾಡ್ಗೀಳ್, ಕಸ್ತೂರಿ ರಂಗನ್ ವರದಿಗಳ ಕುರಿತು ತಜ್ಞರು ವಿಷಯ … Read more