ಆಗುಂಬೆ ಸಮೀಪ ಕಾಂತಾರಾ ಸಿನಿಮಾ ಕಲಾವಿದನಿಗೆ ಹೃದಯಾಘಾತ, ಸಾವು
ತೀರ್ಥಹಳ್ಳಿ: ಕಾಂತಾರಾ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಸಹ ಕಲಾವಿದ (Artist) ವಿಜು ವಾಡಾನಪ್ಪಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆಗುಂಬೆ ಭಾಗದಲ್ಲಿ ಚಿತ್ರೀಕರಣದಲ್ಲಿ ವಿಜು ಪಾಲ್ಗೊಂಡಿದ್ದರು. ಆಗುಂಬೆಯ ಗೆಸ್ಟ್ ಹೌಸ್ ಒಂದರಲ್ಲಿ ಕಲಾವಿದರು ತಂಗಿದ್ದರು. ಕಳೆದ ರಾತ್ರಿ ವಿಜು ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೆ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ಕರೆದೊಯ್ಯಲಾಗುತಿತ್ತು. ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ. ಕೆಲವು ದಿನದಿಂದ ಈ ಭಾಗದಲ್ಲಿ ಕಾಂತಾರಾ ಚಾಪ್ಟರ್ 1 ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. … Read more