ಮಾಲೀಕರೆ ಹುಷಾರ್, ಶಿವಮೊಗ್ಗದಲ್ಲಿ ಗೇಟ್ ಹೊರಗೆ ನಿಲ್ಲೋ ಬೈಕ್​ಗಳೆ ಕಳ್ಳರ ಟಾರ್ಗೆಟ್, ಖದೀಮರಿಗೇಕೆ ಭಯವಿಲ್ಲ?

Shivamogga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2021 ಶಿವಮೊಗ್ಗ ನಗರದಲ್ಲಿ ಪೆಟ್ರೋಲ್ ಕಳ್ಳರ ಹಾವಳಿ ಹೆಚ್ಚುತ್ತಿದೆ. ರಾತ್ರಿ ವೇಳೆ ಬೈಕ್‍ಗಳಲ್ಲಿ ಪೆಟ್ರೋಲ್ ಪೈಪ್‍ಗಳನ್ನು ಕಟ್ ಮಾಡಿ, ಕಳುವು ಮಾಡುತ್ತಿದ್ದಾರೆ. ಖದೀಮರ ಹಾವಳಿಯಿಂದ ಬೈಕ್ ಸವಾರರು ಹೈರಾಣಾಗಿದ್ದಾರೆ. ಹೊರ ನಿಲ್ಲುವ ವಾಹನಗಳೆ ಟಾರ್ಗೆಟ್ ಮನೆಯ ಗೇಟ್‍ನಿಂದ ಹೊರಗೆ ನಿಲ್ಲಿಸಿರುವ ವಾಹನಗಳೆ ಕಳ್ಳರ ಪ್ರಮುಖ ಟಾರ್ಗೆಟ್‍. ರಾತ್ರಿ ವೇಳೆ ಕಳ್ಳರ ಗ್ಯಾಂಗ್, ಬೈಕ್‍ಗಳ ಪೆಟ್ರೋಲ್ ಟ್ಯಾಂಕ್‍ನಿಂದ ಎಂಜಿನ್‍ಗೆ ಹೋಗುವ ಪೆಟ್ರೋಲ್ ಪೂರೈಕೆ ಮಾಡುವ, ಪೈಪ್ ಕಟ್ … Read more

ಶಿವಮೊಗ್ಗ ಸಿಟಿಯಲ್ಲಿ ಎಟಿಎಂ ಮೆಷಿನ್ ಪೀಸ್ ಪೀಸ್, ಹಣ ಕಳುವು ಮಾಡಲು ಯತ್ನ

190721 ATM Theft Attempt BH Road 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜುಲೈ 2021 ಶಿವಮೊಗ್ಗದ ಎಟಿಎಂ ಕೇಂದ್ರವೊಂದರಲ್ಲಿ ಕಳ್ಳತನ ಯತ್ನವಾಗಿದೆ. ಎಟಿಎಂ ಮೆಷಿನ್ ಒಡೆದು ಹಾನಿಗೊಳಿಸಿ, ಹಣ ದೋಚಲು ಪ್ರಯತ್ನಿಸಲಾಗಿದೆ. ಇದನ್ನೂ ಓದಿ | ಸ್ಕ್ರೂಡ್ರೈವರ್, ಸ್ಪಾನರ್ ಬಳಸಿ ಭದ್ರಾವತಿಯಲ್ಲಿ ಎಟಿಎಂ ಮೆಷಿನ್ ಒಡೆಯಲು ಯತ್ನ ಇಲ್ಲಿನ ಬಿ.ಹೆಚ್‍.ರಸ್ತೆಯಲ್ಲಿ ಎಟಿಎಂ ಕೇಂದ್ರದಲ್ಲಿ ಕಳ್ಳರು ಎಟಿಎಂ ಮೆಷಿನ್ ಹಾನಿಗೊಳಿಸಿದ್ದಾರೆ. ಮೆಷಿನ್ ಒಡೆದು ಹಣ ದೋಚಲು ಪ್ರಯತ್ನಿಸಿದ್ದಾರೆ. ಕಳ್ಳರ ಕೃತ್ಯದಿಂದ ಎಟಿಎಂ ಮೆಷನ್ ಹಾನಿಗೊಳಲಾಗಿದೆ. ಹಣ ಸಿಗದೆ ಬರಿಗೈಲಿ ವಾಪಸ್ ಎಟಿಎಂ ಮೆಷಿನ್ … Read more

ಆಡಿಯೋ ವೈರಲ್ ಬೆನ್ನಿಗೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ, ಇಲ್ಲಿದೆ ಟಾಪ್ 5 ಪಾಯಿಂಟ್ಸ್

Minister KS Eshwarappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜುಲೈ 2021 ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ಲೀಕ್ ಆದ ಬೆನ್ನಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು? ಇಲ್ಲಿದೆ ಟಾಪ್ 5 ಪಾಯಿಂಟ್‍ ರಾಜಕಾರಣದಲ್ಲಿ ಅಧಿಕಾರ ಶಾಶ್ವತ ಅಲ್ಲ. ನಾನು ಮಂತ್ರಿ ಸ್ಥಾನಕ್ಕಾಗಿ ಗೂಟ ಹೊಡೆದುಕೊಂಡು ಕುಳಿತಿಲ್ಲ. ಹೋದರೆ ಒಂದು ಗೂಟ ಹೋಯ್ತು ಎಂದುಕೊಳ್ಳುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ವಿಚಾರ … Read more

ಜೋಗ ವೀಕ್ಷಣೆಗೆ ಬಂದವರಿಗೆ ಇವತ್ತು ನಿರಾಸೆ, ರಾಜ, ರಾಣಿ, ರೋರರ್, ರಾಕೆಟ್ ನಾಪತ್ತೆ

180721 Jog Falls During Mist and Rain 1

ಶಿವಮೊಗ್ಗ ಲೈವ್.ಕಾಂ | JOG NEWS | 18 ಜುಲೈ 2021 ಜೋರು ಮಳೆಯ ನಡುವೆಯು ಶಿವಮೊಗ್ಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಜೋಗ ಜಲಪಾತಕ್ಕೆ ಇವತ್ತು ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಆದರೆ ಜಲಪಾತ ಕಣ್ತುಂಬಿಕೊಳ್ಳಲು ಸಾಧ್ಯವಾಗದೆ ನಿರಾಸೆಯಿಂದ ಹಿಂತಿರುಗುವಂತಾಗಿದೆ. ಕಳೆದ ರಾತ್ರಿಯಿಂದ ಸಾಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಜೋಗ ಸುತ್ತಮುತ್ತಲು ಕೂಡ ನಿರಂತರ ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿದೆ. ಹಾಗಾಗಿ ಜಲಪಾತ ಕಣ್ತುಂಬಿಕೊಳ್ಳುವುದು ಅಸಾಧ್ಯವಾಗಿದೆ. ರಾಜ, ರಾಣಿ, ರೋರರ್, ರಾಕೆಟ್‍ ಜಲಪಾತಗಳು ಧುಮ್ಮಿಕ್ಕುವ … Read more

ಶಿವಮೊಗ್ಗ ನಗರದಲ್ಲಿ ಒಂದೇ ರಾತ್ರಿ ಒಂದೇ ಬೀದಿಯಲ್ಲಿ 30ಕ್ಕೂ ಹೆಚ್ಚು ಬೈಕ್​​ಗಳಲ್ಲಿ ಪೆಟ್ರೋಲ್ ಕಳುವು

170721 Petrol Theft at purale 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021 ಒಂದೆಡೆ ದಿನೆ ದಿನೆ ಪೆಟ್ರೋಲ್‍ ಬೆಲೆ ಏರಿಕೆಯಿಂದಾಗಿ ವಾಹನ ಸವಾರರು ಕಂಗೆಟ್ಟು ಹೋಗಿದ್ದಾರೆ. ಈ ನಡುವೆ ಪೆಟ್ರೋಲ್ ಕಳ್ಳರ ಹಾವಳಿಯು ಹೆಚ್ಚಾಗಿದೆ. ಶಿವಮೊಗ್ಗ ನಗರದಲ್ಲಿ ಒಂದೆ ರಾತ್ರಿ ಸುಮಾರು 30 ಬೈಕ್‍ಗಳಿಂದ ಪೆಟ್ರೋಲ್ ಕಳುವು ಮಾಡಲಾಗಿದೆ. ಪುರಲೆಯ ಒಕ್ಕಲಿಗರ ಬೀದಿಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಇಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗಳಿಂದ ಪೆಟ್ರೋಲ್‍ ಕಳುವು ಮಾಡಲಾಗಿದೆ. ಪೈಪ್ ಕಟ್ ಮಾಡಿದ ಖದೀಮರು ಬೈಕ್‍ಗಳ … Read more

ರಾಜ್ಯಾದ್ಯಂತ ರೈತರು ಕರೆಂಟ್ ಬಿಲ್ ಕಟ್ಟೋದಿಲ್ಲ, ಸರ್ಕಾರಕ್ಕೆ ಖಡಕ್ ಎಚ್ಚರಿಕೆ

170721 KT Gangadhar About Electricity Bill 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021 ವಿದ್ಯುತ್ ಶಕ್ತಿ ಖಾಸಗೀಕರಣ ಮಸೂದೆ ಹಿಂಪಡೆಯದಿದ್ದರೆ ರೈತರು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ರಾಜ್ಯ ರೈತ ಸಂಘದ ವರಿಷ್ಠ ಕೆ.ಟಿ.ಗಂಗಧರ್ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಟಿ.ಗಂಗಾಧರ್‍, ವಿದ್ಯುತ್ ಶಕ್ತಿ ಖಾಸಗೀಕರಣ ಮಸೂದೆ ಹಿಂಪಡೆಯಲು ಅರಿವು ಮೂಡಿಸುವ ಭಿತ್ತಿ ಪತ್ರ ಪ್ರದರ್ಶನ ಮಾಡಿ ಮಾತನಾಡಿದರು. ಜುಲೈ 21ಕ್ಕೆ ನರಗುಂದದಲ್ಲಿ ರೈತ ಬಂಡಾಯ ನಡೆದು 41 ವರ್ಷಗಳಾಗಿವೆ. ಹುತಾತ್ಮರಿಗೆ ಶ್ರದ್ದಾಂಜಲಿ ಅರ್ಪಿಸುವ ಜೊತೆಗೆ ಯಾವುದೇ ಕಾರಣಕ್ಕೂ ವಿದ್ಯುತ್ … Read more

ಜೋಕಾಲಿಯ ಸೀರೆ ಕೊರಳಿಗೆ ಸುತ್ತಿಕೊಂಡು ಉಸಿರುಗಟ್ಟಿ ಬಾಲಕ ಸಾವು

HIVAMOGGA-NEWS- map

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021 ಮಕ್ಕಳ ಆಟಕ್ಕಾಗಿ ಕಟ್ಟಿದ್ದ ಜೋಕಾಲಿಯ ಸೀರೆ ಕೊರಳಿಗೆ ಸುತ್ತಿಕೊಂಡ ಪರಿಣಾಮ ಬಾಲಕನೊಬ್ಬ ಉಸಿರುಗಟ್ಟಿ ಮೃತಪಟ್ಟಿದ್ದಾನೆ. ಕಿಶೋರ್ (13) ಮೃತ ಬಾಲಕ. ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯ ಮನೆಯೊಂದರಲ್ಲಿ ಘಟನೆ ಸಂಭವಿಸಿದೆ. ಕಿಶೋರ್, ಮೂಲತಃ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದೊಡ್ಡೇರಿ ಗ್ರಾಮದವನು. ಹಾಡೋನಹಳ್ಳಿಯ ದೊಡ್ಡಮ್ಮ ಜಯಮ್ಮ ಎಂಬುವರ ಮನೆಯಲ್ಲಿದ್ದುಕೊಂಡು ಕಿಶೋರ್‌ ವಿದ್ಯಾಭ್ಯಾಸ ಮಾಡುತ್ತಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಣ್ಣ ಮಗುವಿಗಾಗಿ ಕಟ್ಟಿದ ಸೀರೆಯಲ್ಲಿ ಜೋಕಾಲಿ … Read more

ಸಾಗರ ಪಟ್ಟಣದಲ್ಲಿ ಅಬಕಾರಿ ಅಧಿಕಾರಿಗಳ ದಿಢೀರ್ ದಾಳಿ

160721 Ganja Raid at Sagara City 1

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಜುಲೈ 2021 ಸಾಗರ ಪಟ್ಟಣದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾರಾಟಕ್ಕೆ ಇರಿಸಿದ್ದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇಲ್ಲಿನ ಅರಮನೆ ಕೆರೆ ಸುಭಾಷ್ ನಗರದ ಕಟ್ಟಡವೊಂದರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೊಹಮ್ಮದ್ ಫಾರೂಕ್ ಎಂಬಾತ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾ ಇಟ್ಟುಕೊಂಡಿರುವ ಖಚಿತ ಮಾಹಿತಿ ಲಭ್ಯವಾಗಿತ್ತು. ಶೋಧ ಕಾರ್ಯ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳಿಗೆ 1.230 ಕೆ.ಜಿ ಒಣ … Read more

ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ, ಹೆಸರು ರಿಜಿಸ್ಟರ್ ಮಾಡಿಕೊಳ್ಳಲು ಸೂಚನೆ

Covid Vaccine General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021 ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್‍ಒಯು) ಶಿವಮೊಗ್ಗದ ಪ್ರದೇಶಿಕ ಕೇಂದ್ರದಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಬೇಕಾಗಿದೆ. ಆದ್ದರಿಂದ ಲಸಿಕೆ ನೀಡಲು ನಿರ್ಧರಿಸಲಾಗಿದೆ ಎಂದು ಕೆಎಸ್‍ಓಯು ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಲಸಿಕೆ ಪಡೆಯಲು ವಿದ್ಯಾರ್ಥಿಗಳು ಶಿವಮೊಗ್ಗದ ಸಾಗರ ರಸ್ತೆಯ ಆಲ್ಕೊಳ ಸರ್ಕಲ್‍ನಲ್ಲಿರುವ ಕೆಎಸ್‍ಓಯು ಪ್ರಾದೇಶಿಕ ಕೇಂದ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-250367 … Read more

40 ಕೆಜಿ ಅಕ್ಕಿ ಪ್ಯಾಕೆಟ್​​​ನಲ್ಲಿ ಮೂರು ಕೆಜಿ ನಾಪತ್ತೆ, ನ್ಯಾಯಬೆಲೆ ಅಂಗಡಿಗೆ ಬಿತ್ತು ಬೀಗ

Bhadravathi News Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 16 ಜುಲೈ 2021 ತೂಕದಲ್ಲಿ ವಂಚನೆ ಮಾಡಿದ ಆರೋಪದ ಮೇಲೆ ನ್ಯಾಯಬೆಲೆ ಅಂಗಡಿಯೊಂದರ ಪರವಾನಗಿಯನ್ನೆ ರದ್ದುಗೊಳಿಸಲಾಗಿದೆ. ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಪಡಿತರ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕರು ಈ ಕ್ರಮ ಕೈಗೊಂಡಿದ್ದಾರೆ. ಭದ್ರಾವತಿಯ ಜಿಂಕ್‍ಲೈನ್‍ನಲ್ಲಿರುವ ಕಾಮಧೇನು ನ್ಯಾಯಬೆಲೆ ಅಂಗಡಿಯನ ಪರವಾನಗಿ ಅಮಾನತು ಮಾಡಲಾಗಿದೆ. ನಗರಸಭೆ ವ್ಯಾಪ್ತಿಯ 31ನೇ ವಾರ್ಡಿಗೆ ಸೇರಿದ ನ್ಯಾಯ ಬೆಲೆ ಅಂಗಡಿ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಮಾಪನ ಶಾಸ್ತ್ರ ನಿರೀಕ್ಷಕರ ನೇತೃತ್ವದಲ್ಲಿ ವಿಶೇಷ … Read more